Homeಮುಖಪುಟರಾಷ್ಟ್ರೀಯ ವೈದ್ಯಕೀಯ ನೋಂದಣಿ | ದಾಖಲಾಗಿದ್ದು ದೇಶದಾದ್ಯಂತ ಕೇವಲ 278 ವೈದ್ಯರು; ಭಾರಿ ಅಬ್ಬರದಿಂದ ಪ್ರಾರಂಭಿಸಿದ್ದ...

ರಾಷ್ಟ್ರೀಯ ವೈದ್ಯಕೀಯ ನೋಂದಣಿ | ದಾಖಲಾಗಿದ್ದು ದೇಶದಾದ್ಯಂತ ಕೇವಲ 278 ವೈದ್ಯರು; ಭಾರಿ ಅಬ್ಬರದಿಂದ ಪ್ರಾರಂಭಿಸಿದ್ದ ಕೇಂದ್ರ ಸರ್ಕಾರ!

- Advertisement -
- Advertisement -

ಐದು ತಿಂಗಳ ಹಿಂದೆ ಆಗಿನ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಬಹಳ ಅಬ್ಬರದಿಂದ ಪ್ರಾರಂಭಿಸಿದ ರಾಷ್ಟ್ರೀಯ ವೈದ್ಯಕೀಯ ನೋಂದಣಿ(ಎನ್‌ಎಂಆರ್)ಯಲ್ಲಿ ನೋಂದಣಿಗಾಗಿ ಅರ್ಜಿ ಸಲ್ಲಿಸಿದ್ದ ಎಂಬಿಬಿಎಸ್ ವೈದ್ಯರಲ್ಲಿ ಕೇವಲ 3% ದಷ್ಟು ಜನರು ಮಾತ್ರ ಇಲ್ಲಿಯವರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಆರ್‌ಟಿಐ ಮೂಲಕ ಕೇಳಲಾಗಿದ್ದ ಪ್ರಶ್ನೆಗೆ ಸರ್ಕಾರ ಉತ್ತರಿಸಿದೆ. ಭಾರತದಲ್ಲಿ 13 ಲಕ್ಷಕ್ಕೂ ಹೆಚ್ಚು ಪರವಾನಗಿ ಪಡೆದ ಸೇವೆಯಲ್ಲಿರುವ ವೈದ್ಯರು (RMP) ಇದ್ದಾರೆ.

ಆರ್‌ಟಿಐ ಉತ್ತರದ ಪ್ರಕಾರ, ಜನವರಿ 14 ರವರೆಗೆ ಎನ್‌ಎಂಆರ್ 8,598 ಅರ್ಜಿಗಳನ್ನು ಸ್ವೀಕರಿಸಿದೆ. ಆದಾಗ್ಯೂ, ಅವುಗಳಲ್ಲಿ 8,318 ಅರ್ಜಿಗಳಿಗೆ ಅನುಮೋದನೆ ಇನ್ನೂ ಬಾಕಿ ಇದ್ದು, ಎರಡು ತಿರಸ್ಕರಿಸಲಾಗಿದೆ ಎಂದು ತಿಳಿದುಬಂದಿದೆ. ಆರ್‌ಟಿಐ ಹೋರಾಟಗಾರ ಡಾ. ಕೆ.ವಿ. ಬಾಬು ಅವರ ಪ್ರಕಾರ, ಅಲೋಪತಿ ವೈದ್ಯರ ಅರ್ಜಿಗಳಲ್ಲಿ ಕೇವಲ 3% ಮಾತ್ರ ಅನುಮೋದನೆ ಪಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಸಲ್ಲಿಸಿದ 8,598 ಅರ್ಜಿಗಳಲ್ಲಿ, 8,318 ಇನ್ನೂ ಅನುಮೋದನೆಗಾಗಿ ಕಾಯುತ್ತಿವೆ. ಆರ್‌ಟಿಐ ಉತ್ತರದ ಪ್ರಕಾರ ಎನ್‌ಎಂಸಿ ಇಲ್ಲಿಯವರೆಗೆ ಕೇವಲ 278 ಅರ್ಜಿಗಳನ್ನು ಮಾತ್ರ ಅನುಮೋದಿಸಿದೆ ಎಂದು ಸ್ಪಷ್ಟವಾಗಿ ತೋರಿಸುತ್ತದೆ” ಎಂದು ಡಾ. ಬಾಬು ಹೇಳಿದ್ದಾರೆ. ಸಚಿವ ಜೆಪಿ ನಡ್ಡ ಅವರಿಂದ ಪೋರ್ಟಲ್ ಪ್ರಾರಂಭವಾದಾಗಿನಿಂದ ಪೋರ್ಟಲ್‌ನಲ್ಲಿ ನೋಂದಾಯಿಸಲಾದ ವೈದ್ಯರ ಸಂಖ್ಯೆಯನ್ನು ತಿಳಿಯಲು ಡಿಸೆಂಬರ್ 30 ರಂದು ಅವರು ಆರ್‌ಟಿಐ ಸಲ್ಲಿಸಿದ್ದರು.

97% ಅರ್ಜಿಗಳನ್ನು ಅನುಮೋದಿಸದಿರುವ ಪರಿಣಾಮಗಳನ್ನು NMC ಅರ್ಥಮಾಡಿಕೊಳ್ಳಬೇಕು ಎಂದು ಜನವರಿ 14 ರಂದು ಉತ್ತರ ಪಡೆದ ಡಾ. ಬಾಬು ಹೇಳಿದ್ದಾರೆ. “ಇದರರ್ಥ ಸುಮಾರು ಐದು ತಿಂಗಳಲ್ಲಿ 13 ಲಕ್ಷ ಭಾರತೀಯ ವೈದ್ಯರಲ್ಲಿ 9,000 ಕ್ಕಿಂತ ಕಡಿಮೆ ಜನರು ನೋಂದಣಿಗೆ ಅರ್ಜಿ ಸಲ್ಲಿಸಿದ್ದಾರೆ. ಹೆಚ್ಚಿನ ಅರ್ಜಿಗಳನ್ನು ಅನುಮೋದಿಸದಷ್ಟೂ ಕಡಿಮೆ ಹೊಸ ಅರ್ಜಿಗಳು ಬರುತ್ತವೆ” ಎಂದು ಅವರು ಹೇಳಿದ್ದಾರೆ.

ಎನ್‌ಎಂಆರ್‌ ಅನ್ನು ಎನ್‌ಎಂಸಿ ಕಾಯ್ದೆ, 2019 ರ ಸೆಕ್ಷನ್ 31 ರ ಅಡಿಯಲ್ಲಿ ಕಡ್ಡಾಯಗೊಳಿಸಲಾಗಿದೆ. ಇದು ಎನ್‌ಎಂಸಿಯ ನೈತಿಕತೆ ಮತ್ತು ವೈದ್ಯಕೀಯ ನೋಂದಣಿ ಮಂಡಳಿ (EMRB) ಪರವಾನಗಿ ಪಡೆದ ಸೇವೆಯಲ್ಲಿರುವ ವೈದ್ಯರು ಹೊಂದಿರುವ ಹೆಸರು, ವಿಳಾಸ ಮತ್ತು ಎಲ್ಲಾ ಮಾನ್ಯತೆ ಪಡೆದ ಅರ್ಹತೆಗಳನ್ನು ಒಳಗೊಂಡಿರುವ ಎಲೆಕ್ಟ್ರಾನಿಕ್ ರೂಪದಲ್ಲಿ ರಾಷ್ಟ್ರೀಯ ನೋಂದಣಿಯನ್ನು ನಿರ್ವಹಿಸುತ್ತದೆ ಎಂದು ಹೇಳುತ್ತದೆ.

ಮೇ 10, 2023 ರ ಗೆಜೆಟ್ ಅಧಿಸೂಚನೆಯ ಪ್ರಕಾರ, ಎನ್‌ಎಂಆರ್‌ನಲ್ಲಿ ದಾಖಲಾಗುವುದು ಕಡ್ಡಾಯವಾಗಿದೆ. ಇದರ ಪ್ರಾರಂಭಿಸುವ ವೇಳೆ ಸಚಿವ ನಡ್ಡಾ, ಭಾರತದ ಅಲೋಪತಿ (MBBS) ನೋಂದಾಯಿತ ವೈದ್ಯರಿಗೆ ಸಮಗ್ರ ಮತ್ತು ಕ್ರಿಯಾತ್ಮಕ ಡೇಟಾಬೇಸ್ ಎಂದು ವಿವರಿಸಿದ್ದರು.

ವೈದ್ಯರ ಹೆಸರುಗಳು ಅಥವಾ ರಾಜ್ಯ ವೈದ್ಯಕೀಯ ಮಂಡಳಿಯ ಹೆಸರುಗಳು ಪ್ರಸ್ತುತ ದತ್ತಾಂಶಕ್ಕೆ ಹೊಂದಿಕೆಯಾಗದಿದ್ದರೆ ಆಧಾರ್ ಅನ್ನು ಅಪ್‌ಲೋಡ್ ಮಾಡಲು ಮತ್ತು ಅಫಿಡವಿಟ್ ಸಲ್ಲಿಸಲು ಕೇಳಲಾಗುತ್ತಿರುವುದರಿಂದ ನೋಂದಣಿ ವಿಳಂಬವಾಗುತ್ತಿದೆ ಎಂದು ಡಾ. ಬಾಬು ಹೇಳಿದ್ದಾರೆ.

ವೈದ್ಯರ ನೋಂದಣಿ ತುಂಬಾ ಜಟಿಲವಾದ ಹಿನ್ನಲೆ, 4 ಲಕ್ಷ ಸದಸ್ಯರನ್ನು ಹೊಂದಿರುವ ಭಾರತೀಯ ವೈದ್ಯಕೀಯ ಸಂಘವು ಕಳೆದ ಅಕ್ಟೋಬರ್‌ನಲ್ಲಿ ಎನ್‌ಎಂಸಿಯೊಂದಿಗೆ ಈ ವಿಷಯವನ್ನು ಚರ್ಚೆ ನಡೆಸಿದೆ.

ಇದನ್ನೂಓದಿ:  ವೈದ್ಯನ ವಿರುದ್ಧ ದಲಿತ ಮಹಿಳೆಯಿಂದ ಲೈಂಗಿಕ ಕಿರುಕುಳ ದೂರು; ಎಸ್‌ಪಿಯಿಂದ ವಿವರಣೆ ಕೇಳಿದ ಎನ್‌ಸಿಎಸ್‌ಸಿ

ವೈದ್ಯನ ವಿರುದ್ಧ ದಲಿತ ಮಹಿಳೆಯಿಂದ ಲೈಂಗಿಕ ಕಿರುಕುಳ ದೂರು; ಎಸ್‌ಪಿಯಿಂದ ವಿವರಣೆ ಕೇಳಿದ ಎನ್‌ಸಿಎಸ್‌ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...