Homeಮುಖಪುಟರಾಷ್ಟ್ರೀಯ ವೈದ್ಯಕೀಯ ನೋಂದಣಿ | ದಾಖಲಾಗಿದ್ದು ದೇಶದಾದ್ಯಂತ ಕೇವಲ 278 ವೈದ್ಯರು; ಭಾರಿ ಅಬ್ಬರದಿಂದ ಪ್ರಾರಂಭಿಸಿದ್ದ...

ರಾಷ್ಟ್ರೀಯ ವೈದ್ಯಕೀಯ ನೋಂದಣಿ | ದಾಖಲಾಗಿದ್ದು ದೇಶದಾದ್ಯಂತ ಕೇವಲ 278 ವೈದ್ಯರು; ಭಾರಿ ಅಬ್ಬರದಿಂದ ಪ್ರಾರಂಭಿಸಿದ್ದ ಕೇಂದ್ರ ಸರ್ಕಾರ!

- Advertisement -
- Advertisement -

ಐದು ತಿಂಗಳ ಹಿಂದೆ ಆಗಿನ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಬಹಳ ಅಬ್ಬರದಿಂದ ಪ್ರಾರಂಭಿಸಿದ ರಾಷ್ಟ್ರೀಯ ವೈದ್ಯಕೀಯ ನೋಂದಣಿ(ಎನ್‌ಎಂಆರ್)ಯಲ್ಲಿ ನೋಂದಣಿಗಾಗಿ ಅರ್ಜಿ ಸಲ್ಲಿಸಿದ್ದ ಎಂಬಿಬಿಎಸ್ ವೈದ್ಯರಲ್ಲಿ ಕೇವಲ 3% ದಷ್ಟು ಜನರು ಮಾತ್ರ ಇಲ್ಲಿಯವರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಆರ್‌ಟಿಐ ಮೂಲಕ ಕೇಳಲಾಗಿದ್ದ ಪ್ರಶ್ನೆಗೆ ಸರ್ಕಾರ ಉತ್ತರಿಸಿದೆ. ಭಾರತದಲ್ಲಿ 13 ಲಕ್ಷಕ್ಕೂ ಹೆಚ್ಚು ಪರವಾನಗಿ ಪಡೆದ ಸೇವೆಯಲ್ಲಿರುವ ವೈದ್ಯರು (RMP) ಇದ್ದಾರೆ.

ಆರ್‌ಟಿಐ ಉತ್ತರದ ಪ್ರಕಾರ, ಜನವರಿ 14 ರವರೆಗೆ ಎನ್‌ಎಂಆರ್ 8,598 ಅರ್ಜಿಗಳನ್ನು ಸ್ವೀಕರಿಸಿದೆ. ಆದಾಗ್ಯೂ, ಅವುಗಳಲ್ಲಿ 8,318 ಅರ್ಜಿಗಳಿಗೆ ಅನುಮೋದನೆ ಇನ್ನೂ ಬಾಕಿ ಇದ್ದು, ಎರಡು ತಿರಸ್ಕರಿಸಲಾಗಿದೆ ಎಂದು ತಿಳಿದುಬಂದಿದೆ. ಆರ್‌ಟಿಐ ಹೋರಾಟಗಾರ ಡಾ. ಕೆ.ವಿ. ಬಾಬು ಅವರ ಪ್ರಕಾರ, ಅಲೋಪತಿ ವೈದ್ಯರ ಅರ್ಜಿಗಳಲ್ಲಿ ಕೇವಲ 3% ಮಾತ್ರ ಅನುಮೋದನೆ ಪಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಸಲ್ಲಿಸಿದ 8,598 ಅರ್ಜಿಗಳಲ್ಲಿ, 8,318 ಇನ್ನೂ ಅನುಮೋದನೆಗಾಗಿ ಕಾಯುತ್ತಿವೆ. ಆರ್‌ಟಿಐ ಉತ್ತರದ ಪ್ರಕಾರ ಎನ್‌ಎಂಸಿ ಇಲ್ಲಿಯವರೆಗೆ ಕೇವಲ 278 ಅರ್ಜಿಗಳನ್ನು ಮಾತ್ರ ಅನುಮೋದಿಸಿದೆ ಎಂದು ಸ್ಪಷ್ಟವಾಗಿ ತೋರಿಸುತ್ತದೆ” ಎಂದು ಡಾ. ಬಾಬು ಹೇಳಿದ್ದಾರೆ. ಸಚಿವ ಜೆಪಿ ನಡ್ಡ ಅವರಿಂದ ಪೋರ್ಟಲ್ ಪ್ರಾರಂಭವಾದಾಗಿನಿಂದ ಪೋರ್ಟಲ್‌ನಲ್ಲಿ ನೋಂದಾಯಿಸಲಾದ ವೈದ್ಯರ ಸಂಖ್ಯೆಯನ್ನು ತಿಳಿಯಲು ಡಿಸೆಂಬರ್ 30 ರಂದು ಅವರು ಆರ್‌ಟಿಐ ಸಲ್ಲಿಸಿದ್ದರು.

97% ಅರ್ಜಿಗಳನ್ನು ಅನುಮೋದಿಸದಿರುವ ಪರಿಣಾಮಗಳನ್ನು NMC ಅರ್ಥಮಾಡಿಕೊಳ್ಳಬೇಕು ಎಂದು ಜನವರಿ 14 ರಂದು ಉತ್ತರ ಪಡೆದ ಡಾ. ಬಾಬು ಹೇಳಿದ್ದಾರೆ. “ಇದರರ್ಥ ಸುಮಾರು ಐದು ತಿಂಗಳಲ್ಲಿ 13 ಲಕ್ಷ ಭಾರತೀಯ ವೈದ್ಯರಲ್ಲಿ 9,000 ಕ್ಕಿಂತ ಕಡಿಮೆ ಜನರು ನೋಂದಣಿಗೆ ಅರ್ಜಿ ಸಲ್ಲಿಸಿದ್ದಾರೆ. ಹೆಚ್ಚಿನ ಅರ್ಜಿಗಳನ್ನು ಅನುಮೋದಿಸದಷ್ಟೂ ಕಡಿಮೆ ಹೊಸ ಅರ್ಜಿಗಳು ಬರುತ್ತವೆ” ಎಂದು ಅವರು ಹೇಳಿದ್ದಾರೆ.

ಎನ್‌ಎಂಆರ್‌ ಅನ್ನು ಎನ್‌ಎಂಸಿ ಕಾಯ್ದೆ, 2019 ರ ಸೆಕ್ಷನ್ 31 ರ ಅಡಿಯಲ್ಲಿ ಕಡ್ಡಾಯಗೊಳಿಸಲಾಗಿದೆ. ಇದು ಎನ್‌ಎಂಸಿಯ ನೈತಿಕತೆ ಮತ್ತು ವೈದ್ಯಕೀಯ ನೋಂದಣಿ ಮಂಡಳಿ (EMRB) ಪರವಾನಗಿ ಪಡೆದ ಸೇವೆಯಲ್ಲಿರುವ ವೈದ್ಯರು ಹೊಂದಿರುವ ಹೆಸರು, ವಿಳಾಸ ಮತ್ತು ಎಲ್ಲಾ ಮಾನ್ಯತೆ ಪಡೆದ ಅರ್ಹತೆಗಳನ್ನು ಒಳಗೊಂಡಿರುವ ಎಲೆಕ್ಟ್ರಾನಿಕ್ ರೂಪದಲ್ಲಿ ರಾಷ್ಟ್ರೀಯ ನೋಂದಣಿಯನ್ನು ನಿರ್ವಹಿಸುತ್ತದೆ ಎಂದು ಹೇಳುತ್ತದೆ.

ಮೇ 10, 2023 ರ ಗೆಜೆಟ್ ಅಧಿಸೂಚನೆಯ ಪ್ರಕಾರ, ಎನ್‌ಎಂಆರ್‌ನಲ್ಲಿ ದಾಖಲಾಗುವುದು ಕಡ್ಡಾಯವಾಗಿದೆ. ಇದರ ಪ್ರಾರಂಭಿಸುವ ವೇಳೆ ಸಚಿವ ನಡ್ಡಾ, ಭಾರತದ ಅಲೋಪತಿ (MBBS) ನೋಂದಾಯಿತ ವೈದ್ಯರಿಗೆ ಸಮಗ್ರ ಮತ್ತು ಕ್ರಿಯಾತ್ಮಕ ಡೇಟಾಬೇಸ್ ಎಂದು ವಿವರಿಸಿದ್ದರು.

ವೈದ್ಯರ ಹೆಸರುಗಳು ಅಥವಾ ರಾಜ್ಯ ವೈದ್ಯಕೀಯ ಮಂಡಳಿಯ ಹೆಸರುಗಳು ಪ್ರಸ್ತುತ ದತ್ತಾಂಶಕ್ಕೆ ಹೊಂದಿಕೆಯಾಗದಿದ್ದರೆ ಆಧಾರ್ ಅನ್ನು ಅಪ್‌ಲೋಡ್ ಮಾಡಲು ಮತ್ತು ಅಫಿಡವಿಟ್ ಸಲ್ಲಿಸಲು ಕೇಳಲಾಗುತ್ತಿರುವುದರಿಂದ ನೋಂದಣಿ ವಿಳಂಬವಾಗುತ್ತಿದೆ ಎಂದು ಡಾ. ಬಾಬು ಹೇಳಿದ್ದಾರೆ.

ವೈದ್ಯರ ನೋಂದಣಿ ತುಂಬಾ ಜಟಿಲವಾದ ಹಿನ್ನಲೆ, 4 ಲಕ್ಷ ಸದಸ್ಯರನ್ನು ಹೊಂದಿರುವ ಭಾರತೀಯ ವೈದ್ಯಕೀಯ ಸಂಘವು ಕಳೆದ ಅಕ್ಟೋಬರ್‌ನಲ್ಲಿ ಎನ್‌ಎಂಸಿಯೊಂದಿಗೆ ಈ ವಿಷಯವನ್ನು ಚರ್ಚೆ ನಡೆಸಿದೆ.

ಇದನ್ನೂಓದಿ:  ವೈದ್ಯನ ವಿರುದ್ಧ ದಲಿತ ಮಹಿಳೆಯಿಂದ ಲೈಂಗಿಕ ಕಿರುಕುಳ ದೂರು; ಎಸ್‌ಪಿಯಿಂದ ವಿವರಣೆ ಕೇಳಿದ ಎನ್‌ಸಿಎಸ್‌ಸಿ

ವೈದ್ಯನ ವಿರುದ್ಧ ದಲಿತ ಮಹಿಳೆಯಿಂದ ಲೈಂಗಿಕ ಕಿರುಕುಳ ದೂರು; ಎಸ್‌ಪಿಯಿಂದ ವಿವರಣೆ ಕೇಳಿದ ಎನ್‌ಸಿಎಸ್‌ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...