Homeಮುಖಪುಟರಾಷ್ಟ್ರೀಯ ವೈದ್ಯಕೀಯ ನೋಂದಣಿ | ದಾಖಲಾಗಿದ್ದು ದೇಶದಾದ್ಯಂತ ಕೇವಲ 278 ವೈದ್ಯರು; ಭಾರಿ ಅಬ್ಬರದಿಂದ ಪ್ರಾರಂಭಿಸಿದ್ದ...

ರಾಷ್ಟ್ರೀಯ ವೈದ್ಯಕೀಯ ನೋಂದಣಿ | ದಾಖಲಾಗಿದ್ದು ದೇಶದಾದ್ಯಂತ ಕೇವಲ 278 ವೈದ್ಯರು; ಭಾರಿ ಅಬ್ಬರದಿಂದ ಪ್ರಾರಂಭಿಸಿದ್ದ ಕೇಂದ್ರ ಸರ್ಕಾರ!

- Advertisement -
- Advertisement -

ಐದು ತಿಂಗಳ ಹಿಂದೆ ಆಗಿನ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಬಹಳ ಅಬ್ಬರದಿಂದ ಪ್ರಾರಂಭಿಸಿದ ರಾಷ್ಟ್ರೀಯ ವೈದ್ಯಕೀಯ ನೋಂದಣಿ(ಎನ್‌ಎಂಆರ್)ಯಲ್ಲಿ ನೋಂದಣಿಗಾಗಿ ಅರ್ಜಿ ಸಲ್ಲಿಸಿದ್ದ ಎಂಬಿಬಿಎಸ್ ವೈದ್ಯರಲ್ಲಿ ಕೇವಲ 3% ದಷ್ಟು ಜನರು ಮಾತ್ರ ಇಲ್ಲಿಯವರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಆರ್‌ಟಿಐ ಮೂಲಕ ಕೇಳಲಾಗಿದ್ದ ಪ್ರಶ್ನೆಗೆ ಸರ್ಕಾರ ಉತ್ತರಿಸಿದೆ. ಭಾರತದಲ್ಲಿ 13 ಲಕ್ಷಕ್ಕೂ ಹೆಚ್ಚು ಪರವಾನಗಿ ಪಡೆದ ಸೇವೆಯಲ್ಲಿರುವ ವೈದ್ಯರು (RMP) ಇದ್ದಾರೆ.

ಆರ್‌ಟಿಐ ಉತ್ತರದ ಪ್ರಕಾರ, ಜನವರಿ 14 ರವರೆಗೆ ಎನ್‌ಎಂಆರ್ 8,598 ಅರ್ಜಿಗಳನ್ನು ಸ್ವೀಕರಿಸಿದೆ. ಆದಾಗ್ಯೂ, ಅವುಗಳಲ್ಲಿ 8,318 ಅರ್ಜಿಗಳಿಗೆ ಅನುಮೋದನೆ ಇನ್ನೂ ಬಾಕಿ ಇದ್ದು, ಎರಡು ತಿರಸ್ಕರಿಸಲಾಗಿದೆ ಎಂದು ತಿಳಿದುಬಂದಿದೆ. ಆರ್‌ಟಿಐ ಹೋರಾಟಗಾರ ಡಾ. ಕೆ.ವಿ. ಬಾಬು ಅವರ ಪ್ರಕಾರ, ಅಲೋಪತಿ ವೈದ್ಯರ ಅರ್ಜಿಗಳಲ್ಲಿ ಕೇವಲ 3% ಮಾತ್ರ ಅನುಮೋದನೆ ಪಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಸಲ್ಲಿಸಿದ 8,598 ಅರ್ಜಿಗಳಲ್ಲಿ, 8,318 ಇನ್ನೂ ಅನುಮೋದನೆಗಾಗಿ ಕಾಯುತ್ತಿವೆ. ಆರ್‌ಟಿಐ ಉತ್ತರದ ಪ್ರಕಾರ ಎನ್‌ಎಂಸಿ ಇಲ್ಲಿಯವರೆಗೆ ಕೇವಲ 278 ಅರ್ಜಿಗಳನ್ನು ಮಾತ್ರ ಅನುಮೋದಿಸಿದೆ ಎಂದು ಸ್ಪಷ್ಟವಾಗಿ ತೋರಿಸುತ್ತದೆ” ಎಂದು ಡಾ. ಬಾಬು ಹೇಳಿದ್ದಾರೆ. ಸಚಿವ ಜೆಪಿ ನಡ್ಡ ಅವರಿಂದ ಪೋರ್ಟಲ್ ಪ್ರಾರಂಭವಾದಾಗಿನಿಂದ ಪೋರ್ಟಲ್‌ನಲ್ಲಿ ನೋಂದಾಯಿಸಲಾದ ವೈದ್ಯರ ಸಂಖ್ಯೆಯನ್ನು ತಿಳಿಯಲು ಡಿಸೆಂಬರ್ 30 ರಂದು ಅವರು ಆರ್‌ಟಿಐ ಸಲ್ಲಿಸಿದ್ದರು.

97% ಅರ್ಜಿಗಳನ್ನು ಅನುಮೋದಿಸದಿರುವ ಪರಿಣಾಮಗಳನ್ನು NMC ಅರ್ಥಮಾಡಿಕೊಳ್ಳಬೇಕು ಎಂದು ಜನವರಿ 14 ರಂದು ಉತ್ತರ ಪಡೆದ ಡಾ. ಬಾಬು ಹೇಳಿದ್ದಾರೆ. “ಇದರರ್ಥ ಸುಮಾರು ಐದು ತಿಂಗಳಲ್ಲಿ 13 ಲಕ್ಷ ಭಾರತೀಯ ವೈದ್ಯರಲ್ಲಿ 9,000 ಕ್ಕಿಂತ ಕಡಿಮೆ ಜನರು ನೋಂದಣಿಗೆ ಅರ್ಜಿ ಸಲ್ಲಿಸಿದ್ದಾರೆ. ಹೆಚ್ಚಿನ ಅರ್ಜಿಗಳನ್ನು ಅನುಮೋದಿಸದಷ್ಟೂ ಕಡಿಮೆ ಹೊಸ ಅರ್ಜಿಗಳು ಬರುತ್ತವೆ” ಎಂದು ಅವರು ಹೇಳಿದ್ದಾರೆ.

ಎನ್‌ಎಂಆರ್‌ ಅನ್ನು ಎನ್‌ಎಂಸಿ ಕಾಯ್ದೆ, 2019 ರ ಸೆಕ್ಷನ್ 31 ರ ಅಡಿಯಲ್ಲಿ ಕಡ್ಡಾಯಗೊಳಿಸಲಾಗಿದೆ. ಇದು ಎನ್‌ಎಂಸಿಯ ನೈತಿಕತೆ ಮತ್ತು ವೈದ್ಯಕೀಯ ನೋಂದಣಿ ಮಂಡಳಿ (EMRB) ಪರವಾನಗಿ ಪಡೆದ ಸೇವೆಯಲ್ಲಿರುವ ವೈದ್ಯರು ಹೊಂದಿರುವ ಹೆಸರು, ವಿಳಾಸ ಮತ್ತು ಎಲ್ಲಾ ಮಾನ್ಯತೆ ಪಡೆದ ಅರ್ಹತೆಗಳನ್ನು ಒಳಗೊಂಡಿರುವ ಎಲೆಕ್ಟ್ರಾನಿಕ್ ರೂಪದಲ್ಲಿ ರಾಷ್ಟ್ರೀಯ ನೋಂದಣಿಯನ್ನು ನಿರ್ವಹಿಸುತ್ತದೆ ಎಂದು ಹೇಳುತ್ತದೆ.

ಮೇ 10, 2023 ರ ಗೆಜೆಟ್ ಅಧಿಸೂಚನೆಯ ಪ್ರಕಾರ, ಎನ್‌ಎಂಆರ್‌ನಲ್ಲಿ ದಾಖಲಾಗುವುದು ಕಡ್ಡಾಯವಾಗಿದೆ. ಇದರ ಪ್ರಾರಂಭಿಸುವ ವೇಳೆ ಸಚಿವ ನಡ್ಡಾ, ಭಾರತದ ಅಲೋಪತಿ (MBBS) ನೋಂದಾಯಿತ ವೈದ್ಯರಿಗೆ ಸಮಗ್ರ ಮತ್ತು ಕ್ರಿಯಾತ್ಮಕ ಡೇಟಾಬೇಸ್ ಎಂದು ವಿವರಿಸಿದ್ದರು.

ವೈದ್ಯರ ಹೆಸರುಗಳು ಅಥವಾ ರಾಜ್ಯ ವೈದ್ಯಕೀಯ ಮಂಡಳಿಯ ಹೆಸರುಗಳು ಪ್ರಸ್ತುತ ದತ್ತಾಂಶಕ್ಕೆ ಹೊಂದಿಕೆಯಾಗದಿದ್ದರೆ ಆಧಾರ್ ಅನ್ನು ಅಪ್‌ಲೋಡ್ ಮಾಡಲು ಮತ್ತು ಅಫಿಡವಿಟ್ ಸಲ್ಲಿಸಲು ಕೇಳಲಾಗುತ್ತಿರುವುದರಿಂದ ನೋಂದಣಿ ವಿಳಂಬವಾಗುತ್ತಿದೆ ಎಂದು ಡಾ. ಬಾಬು ಹೇಳಿದ್ದಾರೆ.

ವೈದ್ಯರ ನೋಂದಣಿ ತುಂಬಾ ಜಟಿಲವಾದ ಹಿನ್ನಲೆ, 4 ಲಕ್ಷ ಸದಸ್ಯರನ್ನು ಹೊಂದಿರುವ ಭಾರತೀಯ ವೈದ್ಯಕೀಯ ಸಂಘವು ಕಳೆದ ಅಕ್ಟೋಬರ್‌ನಲ್ಲಿ ಎನ್‌ಎಂಸಿಯೊಂದಿಗೆ ಈ ವಿಷಯವನ್ನು ಚರ್ಚೆ ನಡೆಸಿದೆ.

ಇದನ್ನೂಓದಿ:  ವೈದ್ಯನ ವಿರುದ್ಧ ದಲಿತ ಮಹಿಳೆಯಿಂದ ಲೈಂಗಿಕ ಕಿರುಕುಳ ದೂರು; ಎಸ್‌ಪಿಯಿಂದ ವಿವರಣೆ ಕೇಳಿದ ಎನ್‌ಸಿಎಸ್‌ಸಿ

ವೈದ್ಯನ ವಿರುದ್ಧ ದಲಿತ ಮಹಿಳೆಯಿಂದ ಲೈಂಗಿಕ ಕಿರುಕುಳ ದೂರು; ಎಸ್‌ಪಿಯಿಂದ ವಿವರಣೆ ಕೇಳಿದ ಎನ್‌ಸಿಎಸ್‌ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...