Homeಮುಖಪುಟರಾಷ್ಟ್ರೀಯ ವೈದ್ಯಕೀಯ ನೋಂದಣಿ | ದಾಖಲಾಗಿದ್ದು ದೇಶದಾದ್ಯಂತ ಕೇವಲ 278 ವೈದ್ಯರು; ಭಾರಿ ಅಬ್ಬರದಿಂದ ಪ್ರಾರಂಭಿಸಿದ್ದ...

ರಾಷ್ಟ್ರೀಯ ವೈದ್ಯಕೀಯ ನೋಂದಣಿ | ದಾಖಲಾಗಿದ್ದು ದೇಶದಾದ್ಯಂತ ಕೇವಲ 278 ವೈದ್ಯರು; ಭಾರಿ ಅಬ್ಬರದಿಂದ ಪ್ರಾರಂಭಿಸಿದ್ದ ಕೇಂದ್ರ ಸರ್ಕಾರ!

- Advertisement -
- Advertisement -

ಐದು ತಿಂಗಳ ಹಿಂದೆ ಆಗಿನ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಬಹಳ ಅಬ್ಬರದಿಂದ ಪ್ರಾರಂಭಿಸಿದ ರಾಷ್ಟ್ರೀಯ ವೈದ್ಯಕೀಯ ನೋಂದಣಿ(ಎನ್‌ಎಂಆರ್)ಯಲ್ಲಿ ನೋಂದಣಿಗಾಗಿ ಅರ್ಜಿ ಸಲ್ಲಿಸಿದ್ದ ಎಂಬಿಬಿಎಸ್ ವೈದ್ಯರಲ್ಲಿ ಕೇವಲ 3% ದಷ್ಟು ಜನರು ಮಾತ್ರ ಇಲ್ಲಿಯವರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಆರ್‌ಟಿಐ ಮೂಲಕ ಕೇಳಲಾಗಿದ್ದ ಪ್ರಶ್ನೆಗೆ ಸರ್ಕಾರ ಉತ್ತರಿಸಿದೆ. ಭಾರತದಲ್ಲಿ 13 ಲಕ್ಷಕ್ಕೂ ಹೆಚ್ಚು ಪರವಾನಗಿ ಪಡೆದ ಸೇವೆಯಲ್ಲಿರುವ ವೈದ್ಯರು (RMP) ಇದ್ದಾರೆ.

ಆರ್‌ಟಿಐ ಉತ್ತರದ ಪ್ರಕಾರ, ಜನವರಿ 14 ರವರೆಗೆ ಎನ್‌ಎಂಆರ್ 8,598 ಅರ್ಜಿಗಳನ್ನು ಸ್ವೀಕರಿಸಿದೆ. ಆದಾಗ್ಯೂ, ಅವುಗಳಲ್ಲಿ 8,318 ಅರ್ಜಿಗಳಿಗೆ ಅನುಮೋದನೆ ಇನ್ನೂ ಬಾಕಿ ಇದ್ದು, ಎರಡು ತಿರಸ್ಕರಿಸಲಾಗಿದೆ ಎಂದು ತಿಳಿದುಬಂದಿದೆ. ಆರ್‌ಟಿಐ ಹೋರಾಟಗಾರ ಡಾ. ಕೆ.ವಿ. ಬಾಬು ಅವರ ಪ್ರಕಾರ, ಅಲೋಪತಿ ವೈದ್ಯರ ಅರ್ಜಿಗಳಲ್ಲಿ ಕೇವಲ 3% ಮಾತ್ರ ಅನುಮೋದನೆ ಪಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಸಲ್ಲಿಸಿದ 8,598 ಅರ್ಜಿಗಳಲ್ಲಿ, 8,318 ಇನ್ನೂ ಅನುಮೋದನೆಗಾಗಿ ಕಾಯುತ್ತಿವೆ. ಆರ್‌ಟಿಐ ಉತ್ತರದ ಪ್ರಕಾರ ಎನ್‌ಎಂಸಿ ಇಲ್ಲಿಯವರೆಗೆ ಕೇವಲ 278 ಅರ್ಜಿಗಳನ್ನು ಮಾತ್ರ ಅನುಮೋದಿಸಿದೆ ಎಂದು ಸ್ಪಷ್ಟವಾಗಿ ತೋರಿಸುತ್ತದೆ” ಎಂದು ಡಾ. ಬಾಬು ಹೇಳಿದ್ದಾರೆ. ಸಚಿವ ಜೆಪಿ ನಡ್ಡ ಅವರಿಂದ ಪೋರ್ಟಲ್ ಪ್ರಾರಂಭವಾದಾಗಿನಿಂದ ಪೋರ್ಟಲ್‌ನಲ್ಲಿ ನೋಂದಾಯಿಸಲಾದ ವೈದ್ಯರ ಸಂಖ್ಯೆಯನ್ನು ತಿಳಿಯಲು ಡಿಸೆಂಬರ್ 30 ರಂದು ಅವರು ಆರ್‌ಟಿಐ ಸಲ್ಲಿಸಿದ್ದರು.

97% ಅರ್ಜಿಗಳನ್ನು ಅನುಮೋದಿಸದಿರುವ ಪರಿಣಾಮಗಳನ್ನು NMC ಅರ್ಥಮಾಡಿಕೊಳ್ಳಬೇಕು ಎಂದು ಜನವರಿ 14 ರಂದು ಉತ್ತರ ಪಡೆದ ಡಾ. ಬಾಬು ಹೇಳಿದ್ದಾರೆ. “ಇದರರ್ಥ ಸುಮಾರು ಐದು ತಿಂಗಳಲ್ಲಿ 13 ಲಕ್ಷ ಭಾರತೀಯ ವೈದ್ಯರಲ್ಲಿ 9,000 ಕ್ಕಿಂತ ಕಡಿಮೆ ಜನರು ನೋಂದಣಿಗೆ ಅರ್ಜಿ ಸಲ್ಲಿಸಿದ್ದಾರೆ. ಹೆಚ್ಚಿನ ಅರ್ಜಿಗಳನ್ನು ಅನುಮೋದಿಸದಷ್ಟೂ ಕಡಿಮೆ ಹೊಸ ಅರ್ಜಿಗಳು ಬರುತ್ತವೆ” ಎಂದು ಅವರು ಹೇಳಿದ್ದಾರೆ.

ಎನ್‌ಎಂಆರ್‌ ಅನ್ನು ಎನ್‌ಎಂಸಿ ಕಾಯ್ದೆ, 2019 ರ ಸೆಕ್ಷನ್ 31 ರ ಅಡಿಯಲ್ಲಿ ಕಡ್ಡಾಯಗೊಳಿಸಲಾಗಿದೆ. ಇದು ಎನ್‌ಎಂಸಿಯ ನೈತಿಕತೆ ಮತ್ತು ವೈದ್ಯಕೀಯ ನೋಂದಣಿ ಮಂಡಳಿ (EMRB) ಪರವಾನಗಿ ಪಡೆದ ಸೇವೆಯಲ್ಲಿರುವ ವೈದ್ಯರು ಹೊಂದಿರುವ ಹೆಸರು, ವಿಳಾಸ ಮತ್ತು ಎಲ್ಲಾ ಮಾನ್ಯತೆ ಪಡೆದ ಅರ್ಹತೆಗಳನ್ನು ಒಳಗೊಂಡಿರುವ ಎಲೆಕ್ಟ್ರಾನಿಕ್ ರೂಪದಲ್ಲಿ ರಾಷ್ಟ್ರೀಯ ನೋಂದಣಿಯನ್ನು ನಿರ್ವಹಿಸುತ್ತದೆ ಎಂದು ಹೇಳುತ್ತದೆ.

ಮೇ 10, 2023 ರ ಗೆಜೆಟ್ ಅಧಿಸೂಚನೆಯ ಪ್ರಕಾರ, ಎನ್‌ಎಂಆರ್‌ನಲ್ಲಿ ದಾಖಲಾಗುವುದು ಕಡ್ಡಾಯವಾಗಿದೆ. ಇದರ ಪ್ರಾರಂಭಿಸುವ ವೇಳೆ ಸಚಿವ ನಡ್ಡಾ, ಭಾರತದ ಅಲೋಪತಿ (MBBS) ನೋಂದಾಯಿತ ವೈದ್ಯರಿಗೆ ಸಮಗ್ರ ಮತ್ತು ಕ್ರಿಯಾತ್ಮಕ ಡೇಟಾಬೇಸ್ ಎಂದು ವಿವರಿಸಿದ್ದರು.

ವೈದ್ಯರ ಹೆಸರುಗಳು ಅಥವಾ ರಾಜ್ಯ ವೈದ್ಯಕೀಯ ಮಂಡಳಿಯ ಹೆಸರುಗಳು ಪ್ರಸ್ತುತ ದತ್ತಾಂಶಕ್ಕೆ ಹೊಂದಿಕೆಯಾಗದಿದ್ದರೆ ಆಧಾರ್ ಅನ್ನು ಅಪ್‌ಲೋಡ್ ಮಾಡಲು ಮತ್ತು ಅಫಿಡವಿಟ್ ಸಲ್ಲಿಸಲು ಕೇಳಲಾಗುತ್ತಿರುವುದರಿಂದ ನೋಂದಣಿ ವಿಳಂಬವಾಗುತ್ತಿದೆ ಎಂದು ಡಾ. ಬಾಬು ಹೇಳಿದ್ದಾರೆ.

ವೈದ್ಯರ ನೋಂದಣಿ ತುಂಬಾ ಜಟಿಲವಾದ ಹಿನ್ನಲೆ, 4 ಲಕ್ಷ ಸದಸ್ಯರನ್ನು ಹೊಂದಿರುವ ಭಾರತೀಯ ವೈದ್ಯಕೀಯ ಸಂಘವು ಕಳೆದ ಅಕ್ಟೋಬರ್‌ನಲ್ಲಿ ಎನ್‌ಎಂಸಿಯೊಂದಿಗೆ ಈ ವಿಷಯವನ್ನು ಚರ್ಚೆ ನಡೆಸಿದೆ.

ಇದನ್ನೂಓದಿ:  ವೈದ್ಯನ ವಿರುದ್ಧ ದಲಿತ ಮಹಿಳೆಯಿಂದ ಲೈಂಗಿಕ ಕಿರುಕುಳ ದೂರು; ಎಸ್‌ಪಿಯಿಂದ ವಿವರಣೆ ಕೇಳಿದ ಎನ್‌ಸಿಎಸ್‌ಸಿ

ವೈದ್ಯನ ವಿರುದ್ಧ ದಲಿತ ಮಹಿಳೆಯಿಂದ ಲೈಂಗಿಕ ಕಿರುಕುಳ ದೂರು; ಎಸ್‌ಪಿಯಿಂದ ವಿವರಣೆ ಕೇಳಿದ ಎನ್‌ಸಿಎಸ್‌ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...