Homeಮುಖಪುಟರಾಷ್ಟ್ರೀಯ ವೈದ್ಯಕೀಯ ನೋಂದಣಿ | ದಾಖಲಾಗಿದ್ದು ದೇಶದಾದ್ಯಂತ ಕೇವಲ 278 ವೈದ್ಯರು; ಭಾರಿ ಅಬ್ಬರದಿಂದ ಪ್ರಾರಂಭಿಸಿದ್ದ...

ರಾಷ್ಟ್ರೀಯ ವೈದ್ಯಕೀಯ ನೋಂದಣಿ | ದಾಖಲಾಗಿದ್ದು ದೇಶದಾದ್ಯಂತ ಕೇವಲ 278 ವೈದ್ಯರು; ಭಾರಿ ಅಬ್ಬರದಿಂದ ಪ್ರಾರಂಭಿಸಿದ್ದ ಕೇಂದ್ರ ಸರ್ಕಾರ!

- Advertisement -
- Advertisement -

ಐದು ತಿಂಗಳ ಹಿಂದೆ ಆಗಿನ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಬಹಳ ಅಬ್ಬರದಿಂದ ಪ್ರಾರಂಭಿಸಿದ ರಾಷ್ಟ್ರೀಯ ವೈದ್ಯಕೀಯ ನೋಂದಣಿ(ಎನ್‌ಎಂಆರ್)ಯಲ್ಲಿ ನೋಂದಣಿಗಾಗಿ ಅರ್ಜಿ ಸಲ್ಲಿಸಿದ್ದ ಎಂಬಿಬಿಎಸ್ ವೈದ್ಯರಲ್ಲಿ ಕೇವಲ 3% ದಷ್ಟು ಜನರು ಮಾತ್ರ ಇಲ್ಲಿಯವರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಆರ್‌ಟಿಐ ಮೂಲಕ ಕೇಳಲಾಗಿದ್ದ ಪ್ರಶ್ನೆಗೆ ಸರ್ಕಾರ ಉತ್ತರಿಸಿದೆ. ಭಾರತದಲ್ಲಿ 13 ಲಕ್ಷಕ್ಕೂ ಹೆಚ್ಚು ಪರವಾನಗಿ ಪಡೆದ ಸೇವೆಯಲ್ಲಿರುವ ವೈದ್ಯರು (RMP) ಇದ್ದಾರೆ.

ಆರ್‌ಟಿಐ ಉತ್ತರದ ಪ್ರಕಾರ, ಜನವರಿ 14 ರವರೆಗೆ ಎನ್‌ಎಂಆರ್ 8,598 ಅರ್ಜಿಗಳನ್ನು ಸ್ವೀಕರಿಸಿದೆ. ಆದಾಗ್ಯೂ, ಅವುಗಳಲ್ಲಿ 8,318 ಅರ್ಜಿಗಳಿಗೆ ಅನುಮೋದನೆ ಇನ್ನೂ ಬಾಕಿ ಇದ್ದು, ಎರಡು ತಿರಸ್ಕರಿಸಲಾಗಿದೆ ಎಂದು ತಿಳಿದುಬಂದಿದೆ. ಆರ್‌ಟಿಐ ಹೋರಾಟಗಾರ ಡಾ. ಕೆ.ವಿ. ಬಾಬು ಅವರ ಪ್ರಕಾರ, ಅಲೋಪತಿ ವೈದ್ಯರ ಅರ್ಜಿಗಳಲ್ಲಿ ಕೇವಲ 3% ಮಾತ್ರ ಅನುಮೋದನೆ ಪಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಸಲ್ಲಿಸಿದ 8,598 ಅರ್ಜಿಗಳಲ್ಲಿ, 8,318 ಇನ್ನೂ ಅನುಮೋದನೆಗಾಗಿ ಕಾಯುತ್ತಿವೆ. ಆರ್‌ಟಿಐ ಉತ್ತರದ ಪ್ರಕಾರ ಎನ್‌ಎಂಸಿ ಇಲ್ಲಿಯವರೆಗೆ ಕೇವಲ 278 ಅರ್ಜಿಗಳನ್ನು ಮಾತ್ರ ಅನುಮೋದಿಸಿದೆ ಎಂದು ಸ್ಪಷ್ಟವಾಗಿ ತೋರಿಸುತ್ತದೆ” ಎಂದು ಡಾ. ಬಾಬು ಹೇಳಿದ್ದಾರೆ. ಸಚಿವ ಜೆಪಿ ನಡ್ಡ ಅವರಿಂದ ಪೋರ್ಟಲ್ ಪ್ರಾರಂಭವಾದಾಗಿನಿಂದ ಪೋರ್ಟಲ್‌ನಲ್ಲಿ ನೋಂದಾಯಿಸಲಾದ ವೈದ್ಯರ ಸಂಖ್ಯೆಯನ್ನು ತಿಳಿಯಲು ಡಿಸೆಂಬರ್ 30 ರಂದು ಅವರು ಆರ್‌ಟಿಐ ಸಲ್ಲಿಸಿದ್ದರು.

97% ಅರ್ಜಿಗಳನ್ನು ಅನುಮೋದಿಸದಿರುವ ಪರಿಣಾಮಗಳನ್ನು NMC ಅರ್ಥಮಾಡಿಕೊಳ್ಳಬೇಕು ಎಂದು ಜನವರಿ 14 ರಂದು ಉತ್ತರ ಪಡೆದ ಡಾ. ಬಾಬು ಹೇಳಿದ್ದಾರೆ. “ಇದರರ್ಥ ಸುಮಾರು ಐದು ತಿಂಗಳಲ್ಲಿ 13 ಲಕ್ಷ ಭಾರತೀಯ ವೈದ್ಯರಲ್ಲಿ 9,000 ಕ್ಕಿಂತ ಕಡಿಮೆ ಜನರು ನೋಂದಣಿಗೆ ಅರ್ಜಿ ಸಲ್ಲಿಸಿದ್ದಾರೆ. ಹೆಚ್ಚಿನ ಅರ್ಜಿಗಳನ್ನು ಅನುಮೋದಿಸದಷ್ಟೂ ಕಡಿಮೆ ಹೊಸ ಅರ್ಜಿಗಳು ಬರುತ್ತವೆ” ಎಂದು ಅವರು ಹೇಳಿದ್ದಾರೆ.

ಎನ್‌ಎಂಆರ್‌ ಅನ್ನು ಎನ್‌ಎಂಸಿ ಕಾಯ್ದೆ, 2019 ರ ಸೆಕ್ಷನ್ 31 ರ ಅಡಿಯಲ್ಲಿ ಕಡ್ಡಾಯಗೊಳಿಸಲಾಗಿದೆ. ಇದು ಎನ್‌ಎಂಸಿಯ ನೈತಿಕತೆ ಮತ್ತು ವೈದ್ಯಕೀಯ ನೋಂದಣಿ ಮಂಡಳಿ (EMRB) ಪರವಾನಗಿ ಪಡೆದ ಸೇವೆಯಲ್ಲಿರುವ ವೈದ್ಯರು ಹೊಂದಿರುವ ಹೆಸರು, ವಿಳಾಸ ಮತ್ತು ಎಲ್ಲಾ ಮಾನ್ಯತೆ ಪಡೆದ ಅರ್ಹತೆಗಳನ್ನು ಒಳಗೊಂಡಿರುವ ಎಲೆಕ್ಟ್ರಾನಿಕ್ ರೂಪದಲ್ಲಿ ರಾಷ್ಟ್ರೀಯ ನೋಂದಣಿಯನ್ನು ನಿರ್ವಹಿಸುತ್ತದೆ ಎಂದು ಹೇಳುತ್ತದೆ.

ಮೇ 10, 2023 ರ ಗೆಜೆಟ್ ಅಧಿಸೂಚನೆಯ ಪ್ರಕಾರ, ಎನ್‌ಎಂಆರ್‌ನಲ್ಲಿ ದಾಖಲಾಗುವುದು ಕಡ್ಡಾಯವಾಗಿದೆ. ಇದರ ಪ್ರಾರಂಭಿಸುವ ವೇಳೆ ಸಚಿವ ನಡ್ಡಾ, ಭಾರತದ ಅಲೋಪತಿ (MBBS) ನೋಂದಾಯಿತ ವೈದ್ಯರಿಗೆ ಸಮಗ್ರ ಮತ್ತು ಕ್ರಿಯಾತ್ಮಕ ಡೇಟಾಬೇಸ್ ಎಂದು ವಿವರಿಸಿದ್ದರು.

ವೈದ್ಯರ ಹೆಸರುಗಳು ಅಥವಾ ರಾಜ್ಯ ವೈದ್ಯಕೀಯ ಮಂಡಳಿಯ ಹೆಸರುಗಳು ಪ್ರಸ್ತುತ ದತ್ತಾಂಶಕ್ಕೆ ಹೊಂದಿಕೆಯಾಗದಿದ್ದರೆ ಆಧಾರ್ ಅನ್ನು ಅಪ್‌ಲೋಡ್ ಮಾಡಲು ಮತ್ತು ಅಫಿಡವಿಟ್ ಸಲ್ಲಿಸಲು ಕೇಳಲಾಗುತ್ತಿರುವುದರಿಂದ ನೋಂದಣಿ ವಿಳಂಬವಾಗುತ್ತಿದೆ ಎಂದು ಡಾ. ಬಾಬು ಹೇಳಿದ್ದಾರೆ.

ವೈದ್ಯರ ನೋಂದಣಿ ತುಂಬಾ ಜಟಿಲವಾದ ಹಿನ್ನಲೆ, 4 ಲಕ್ಷ ಸದಸ್ಯರನ್ನು ಹೊಂದಿರುವ ಭಾರತೀಯ ವೈದ್ಯಕೀಯ ಸಂಘವು ಕಳೆದ ಅಕ್ಟೋಬರ್‌ನಲ್ಲಿ ಎನ್‌ಎಂಸಿಯೊಂದಿಗೆ ಈ ವಿಷಯವನ್ನು ಚರ್ಚೆ ನಡೆಸಿದೆ.

ಇದನ್ನೂಓದಿ:  ವೈದ್ಯನ ವಿರುದ್ಧ ದಲಿತ ಮಹಿಳೆಯಿಂದ ಲೈಂಗಿಕ ಕಿರುಕುಳ ದೂರು; ಎಸ್‌ಪಿಯಿಂದ ವಿವರಣೆ ಕೇಳಿದ ಎನ್‌ಸಿಎಸ್‌ಸಿ

ವೈದ್ಯನ ವಿರುದ್ಧ ದಲಿತ ಮಹಿಳೆಯಿಂದ ಲೈಂಗಿಕ ಕಿರುಕುಳ ದೂರು; ಎಸ್‌ಪಿಯಿಂದ ವಿವರಣೆ ಕೇಳಿದ ಎನ್‌ಸಿಎಸ್‌ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...