Homeಮುಖಪುಟರಾಷ್ಟ್ರೀಯ ವೈದ್ಯಕೀಯ ನೋಂದಣಿ | ದಾಖಲಾಗಿದ್ದು ದೇಶದಾದ್ಯಂತ ಕೇವಲ 278 ವೈದ್ಯರು; ಭಾರಿ ಅಬ್ಬರದಿಂದ ಪ್ರಾರಂಭಿಸಿದ್ದ...

ರಾಷ್ಟ್ರೀಯ ವೈದ್ಯಕೀಯ ನೋಂದಣಿ | ದಾಖಲಾಗಿದ್ದು ದೇಶದಾದ್ಯಂತ ಕೇವಲ 278 ವೈದ್ಯರು; ಭಾರಿ ಅಬ್ಬರದಿಂದ ಪ್ರಾರಂಭಿಸಿದ್ದ ಕೇಂದ್ರ ಸರ್ಕಾರ!

- Advertisement -
- Advertisement -

ಐದು ತಿಂಗಳ ಹಿಂದೆ ಆಗಿನ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಬಹಳ ಅಬ್ಬರದಿಂದ ಪ್ರಾರಂಭಿಸಿದ ರಾಷ್ಟ್ರೀಯ ವೈದ್ಯಕೀಯ ನೋಂದಣಿ(ಎನ್‌ಎಂಆರ್)ಯಲ್ಲಿ ನೋಂದಣಿಗಾಗಿ ಅರ್ಜಿ ಸಲ್ಲಿಸಿದ್ದ ಎಂಬಿಬಿಎಸ್ ವೈದ್ಯರಲ್ಲಿ ಕೇವಲ 3% ದಷ್ಟು ಜನರು ಮಾತ್ರ ಇಲ್ಲಿಯವರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಆರ್‌ಟಿಐ ಮೂಲಕ ಕೇಳಲಾಗಿದ್ದ ಪ್ರಶ್ನೆಗೆ ಸರ್ಕಾರ ಉತ್ತರಿಸಿದೆ. ಭಾರತದಲ್ಲಿ 13 ಲಕ್ಷಕ್ಕೂ ಹೆಚ್ಚು ಪರವಾನಗಿ ಪಡೆದ ಸೇವೆಯಲ್ಲಿರುವ ವೈದ್ಯರು (RMP) ಇದ್ದಾರೆ.

ಆರ್‌ಟಿಐ ಉತ್ತರದ ಪ್ರಕಾರ, ಜನವರಿ 14 ರವರೆಗೆ ಎನ್‌ಎಂಆರ್ 8,598 ಅರ್ಜಿಗಳನ್ನು ಸ್ವೀಕರಿಸಿದೆ. ಆದಾಗ್ಯೂ, ಅವುಗಳಲ್ಲಿ 8,318 ಅರ್ಜಿಗಳಿಗೆ ಅನುಮೋದನೆ ಇನ್ನೂ ಬಾಕಿ ಇದ್ದು, ಎರಡು ತಿರಸ್ಕರಿಸಲಾಗಿದೆ ಎಂದು ತಿಳಿದುಬಂದಿದೆ. ಆರ್‌ಟಿಐ ಹೋರಾಟಗಾರ ಡಾ. ಕೆ.ವಿ. ಬಾಬು ಅವರ ಪ್ರಕಾರ, ಅಲೋಪತಿ ವೈದ್ಯರ ಅರ್ಜಿಗಳಲ್ಲಿ ಕೇವಲ 3% ಮಾತ್ರ ಅನುಮೋದನೆ ಪಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಸಲ್ಲಿಸಿದ 8,598 ಅರ್ಜಿಗಳಲ್ಲಿ, 8,318 ಇನ್ನೂ ಅನುಮೋದನೆಗಾಗಿ ಕಾಯುತ್ತಿವೆ. ಆರ್‌ಟಿಐ ಉತ್ತರದ ಪ್ರಕಾರ ಎನ್‌ಎಂಸಿ ಇಲ್ಲಿಯವರೆಗೆ ಕೇವಲ 278 ಅರ್ಜಿಗಳನ್ನು ಮಾತ್ರ ಅನುಮೋದಿಸಿದೆ ಎಂದು ಸ್ಪಷ್ಟವಾಗಿ ತೋರಿಸುತ್ತದೆ” ಎಂದು ಡಾ. ಬಾಬು ಹೇಳಿದ್ದಾರೆ. ಸಚಿವ ಜೆಪಿ ನಡ್ಡ ಅವರಿಂದ ಪೋರ್ಟಲ್ ಪ್ರಾರಂಭವಾದಾಗಿನಿಂದ ಪೋರ್ಟಲ್‌ನಲ್ಲಿ ನೋಂದಾಯಿಸಲಾದ ವೈದ್ಯರ ಸಂಖ್ಯೆಯನ್ನು ತಿಳಿಯಲು ಡಿಸೆಂಬರ್ 30 ರಂದು ಅವರು ಆರ್‌ಟಿಐ ಸಲ್ಲಿಸಿದ್ದರು.

97% ಅರ್ಜಿಗಳನ್ನು ಅನುಮೋದಿಸದಿರುವ ಪರಿಣಾಮಗಳನ್ನು NMC ಅರ್ಥಮಾಡಿಕೊಳ್ಳಬೇಕು ಎಂದು ಜನವರಿ 14 ರಂದು ಉತ್ತರ ಪಡೆದ ಡಾ. ಬಾಬು ಹೇಳಿದ್ದಾರೆ. “ಇದರರ್ಥ ಸುಮಾರು ಐದು ತಿಂಗಳಲ್ಲಿ 13 ಲಕ್ಷ ಭಾರತೀಯ ವೈದ್ಯರಲ್ಲಿ 9,000 ಕ್ಕಿಂತ ಕಡಿಮೆ ಜನರು ನೋಂದಣಿಗೆ ಅರ್ಜಿ ಸಲ್ಲಿಸಿದ್ದಾರೆ. ಹೆಚ್ಚಿನ ಅರ್ಜಿಗಳನ್ನು ಅನುಮೋದಿಸದಷ್ಟೂ ಕಡಿಮೆ ಹೊಸ ಅರ್ಜಿಗಳು ಬರುತ್ತವೆ” ಎಂದು ಅವರು ಹೇಳಿದ್ದಾರೆ.

ಎನ್‌ಎಂಆರ್‌ ಅನ್ನು ಎನ್‌ಎಂಸಿ ಕಾಯ್ದೆ, 2019 ರ ಸೆಕ್ಷನ್ 31 ರ ಅಡಿಯಲ್ಲಿ ಕಡ್ಡಾಯಗೊಳಿಸಲಾಗಿದೆ. ಇದು ಎನ್‌ಎಂಸಿಯ ನೈತಿಕತೆ ಮತ್ತು ವೈದ್ಯಕೀಯ ನೋಂದಣಿ ಮಂಡಳಿ (EMRB) ಪರವಾನಗಿ ಪಡೆದ ಸೇವೆಯಲ್ಲಿರುವ ವೈದ್ಯರು ಹೊಂದಿರುವ ಹೆಸರು, ವಿಳಾಸ ಮತ್ತು ಎಲ್ಲಾ ಮಾನ್ಯತೆ ಪಡೆದ ಅರ್ಹತೆಗಳನ್ನು ಒಳಗೊಂಡಿರುವ ಎಲೆಕ್ಟ್ರಾನಿಕ್ ರೂಪದಲ್ಲಿ ರಾಷ್ಟ್ರೀಯ ನೋಂದಣಿಯನ್ನು ನಿರ್ವಹಿಸುತ್ತದೆ ಎಂದು ಹೇಳುತ್ತದೆ.

ಮೇ 10, 2023 ರ ಗೆಜೆಟ್ ಅಧಿಸೂಚನೆಯ ಪ್ರಕಾರ, ಎನ್‌ಎಂಆರ್‌ನಲ್ಲಿ ದಾಖಲಾಗುವುದು ಕಡ್ಡಾಯವಾಗಿದೆ. ಇದರ ಪ್ರಾರಂಭಿಸುವ ವೇಳೆ ಸಚಿವ ನಡ್ಡಾ, ಭಾರತದ ಅಲೋಪತಿ (MBBS) ನೋಂದಾಯಿತ ವೈದ್ಯರಿಗೆ ಸಮಗ್ರ ಮತ್ತು ಕ್ರಿಯಾತ್ಮಕ ಡೇಟಾಬೇಸ್ ಎಂದು ವಿವರಿಸಿದ್ದರು.

ವೈದ್ಯರ ಹೆಸರುಗಳು ಅಥವಾ ರಾಜ್ಯ ವೈದ್ಯಕೀಯ ಮಂಡಳಿಯ ಹೆಸರುಗಳು ಪ್ರಸ್ತುತ ದತ್ತಾಂಶಕ್ಕೆ ಹೊಂದಿಕೆಯಾಗದಿದ್ದರೆ ಆಧಾರ್ ಅನ್ನು ಅಪ್‌ಲೋಡ್ ಮಾಡಲು ಮತ್ತು ಅಫಿಡವಿಟ್ ಸಲ್ಲಿಸಲು ಕೇಳಲಾಗುತ್ತಿರುವುದರಿಂದ ನೋಂದಣಿ ವಿಳಂಬವಾಗುತ್ತಿದೆ ಎಂದು ಡಾ. ಬಾಬು ಹೇಳಿದ್ದಾರೆ.

ವೈದ್ಯರ ನೋಂದಣಿ ತುಂಬಾ ಜಟಿಲವಾದ ಹಿನ್ನಲೆ, 4 ಲಕ್ಷ ಸದಸ್ಯರನ್ನು ಹೊಂದಿರುವ ಭಾರತೀಯ ವೈದ್ಯಕೀಯ ಸಂಘವು ಕಳೆದ ಅಕ್ಟೋಬರ್‌ನಲ್ಲಿ ಎನ್‌ಎಂಸಿಯೊಂದಿಗೆ ಈ ವಿಷಯವನ್ನು ಚರ್ಚೆ ನಡೆಸಿದೆ.

ಇದನ್ನೂಓದಿ:  ವೈದ್ಯನ ವಿರುದ್ಧ ದಲಿತ ಮಹಿಳೆಯಿಂದ ಲೈಂಗಿಕ ಕಿರುಕುಳ ದೂರು; ಎಸ್‌ಪಿಯಿಂದ ವಿವರಣೆ ಕೇಳಿದ ಎನ್‌ಸಿಎಸ್‌ಸಿ

ವೈದ್ಯನ ವಿರುದ್ಧ ದಲಿತ ಮಹಿಳೆಯಿಂದ ಲೈಂಗಿಕ ಕಿರುಕುಳ ದೂರು; ಎಸ್‌ಪಿಯಿಂದ ವಿವರಣೆ ಕೇಳಿದ ಎನ್‌ಸಿಎಸ್‌ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...