Homeಮುಖಪುಟಬಾಹ್ಯ ಏಜೆನ್ಸಿಗಳಿಗೆ ಪ್ರವೇಶವಿಲ್ಲ, ಇವಿಎಂ ಪ್ರೋಗ್ರಾಮಿಂಗ್ ಪ್ರಕ್ರಿಯೆಯು ದೃಢವಾಗಿದೆ: ಚುನಾವಣಾ ಆಯೋಗ

ಬಾಹ್ಯ ಏಜೆನ್ಸಿಗಳಿಗೆ ಪ್ರವೇಶವಿಲ್ಲ, ಇವಿಎಂ ಪ್ರೋಗ್ರಾಮಿಂಗ್ ಪ್ರಕ್ರಿಯೆಯು ದೃಢವಾಗಿದೆ: ಚುನಾವಣಾ ಆಯೋಗ

- Advertisement -
- Advertisement -

ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬಳಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಇಂಡಿಯಾ (I.N.D.I.A.) ಒಕ್ಕೂಟದ ಸದಸ್ಯರು ಆಗಸ್ಟ್‌ನಲ್ಲಿ ಚುನಾವಣಾ ಆಯೋಗಕ್ಕೆ (ಇಸಿ) ಪತ್ರ ಬರೆದಿದ್ದರು. ಇವಿಎಂಗಳ ಕುರಿತು ಪದೇಪದೆ ಕೇಳಲಾಗುವ ಪ್ರಶ್ನೆಗಳ (ಎಫ್ಎಕ್ಯೂ) ಕುರಿತ ಪುಟವನ್ನು ಇದೀಗ ಆಯೋಗ ಪರಿಷ್ಕರಿಸಿದ್ದು, ‘ಜರ್ಮನಿಯಲ್ಲಿ ನಿಷೇಧಿತ ಇವಿಎಂಗಳಿಗಿಂತ ಭಾರತೀಯ ಇವಿಎಂಗಳು ಹೇಗೆ ಭಿನ್ನವಾಗಿವೆ; ಒಂದು ವೇಳೆ ವಿವಿ ಪ್ಯಾಟ್‌ಗಳು ಪ್ರೋಗ್ರಾಮೆಬಲ್ ಮೆಮೊರಿಯನ್ನು ಹೊಂದಿದ್ದರೆ ಹಾಗೂ ಇವಿಎಂ ತಯಾರಕರು ವಿದೇಶಿ ಮೈಕ್ರೋಚಿಪ್ ತಯಾರಕರೊಂದಿಗೆ ಸಾಫ್ಟ್ವೇರ್ ಅನ್ನು ಹಂಚಿಕೊಂಡರೆ ಏನಾಗುತ್ತದೆ’ ಎಂಬ ಬಗ್ಗೆ ತನ್ನ ಉತ್ತರವನ್ನು ಮತ್ತಷ್ಟು ವಿವರಿಸಿದೆ.

ನವೀಕರಿಸಿದ ಎಫ್ಎಕ್ಯೂಗಳನ್ನು ಆಗಸ್ಟ್ 23 ರಂದು ಅಪ್ಲೋಡ್ ಮಾಡಲಾಗಿದೆ. 76 ಪ್ರಶ್ನೆಗಳನ್ನು ಒಳಗೊಂಡಿದ್ದು, ಹಿಂದಿನ ಆವೃತ್ತಿಯು 39 ಪ್ರಶ್ನೆಗಳಿಗೆ ಉತ್ತರಿಸಲಾಗಿತ್ತು.

‘ಮೈಕ್ರೋಕಂಟ್ರೋಲರ್‌ಗಳನ್ನು ಬಿಇಎಲ್/ಇಸಿಐಎಲ್ ಕಂಪನಿಗಳು ಫರ್ಮ್‌ವೇರ್ ತಂತ್ರಜ್ಞಾನದ ಮೂಲಕ, ತಮ್ಮದೆ ಜಾಗದಲ್ಲಿ ಉನ್ನತ ಮಟ್ಟದ ಭದ್ರತೆ ಮತ್ತು ಸುರಕ್ಷತೆಗಳ ಅಡಿಯಲ್ಲಿ ಪೋರ್ಟ್ ಮಾಡಲಾಗುತ್ತದೆ. ನಾಲ್ಕು ಹಂತಗಳ ಸುರಕ್ಷಿತ ಉತ್ಪಾದನಾ ಪ್ರಕ್ರಿಯೆಯಲ್ಲಿ ಮೈಕ್ರೋಕಂಟ್ರೋಲರ್ಗಳನ್ನು ‘ಎಲ್-3’ ಪ್ರದೇಶದಲ್ಲಿ ಪೋರ್ಟ್ ಮಾಡಲಾಗುತ್ತದೆ. ಅಲ್ಲಿಗೆ ಪ್ರವೇಶ ಕಾರ್ಡ್‌ಗಳನ್ನು ಹೊಂದಿರುವ, ನಿಗದಿಪಡಿಸಿದ ಎಂಜಿನಿಯರ್‌ಗಳು ಮಾತ್ರ ಬಯೋಮೆಟ್ರಿಕ್ ಸ್ಕ್ಯಾನ್‌ರ್‌ಗಳ ಮೂಲಕ ಅಧಿಕೃತ ಪ್ರವೇಶವನ್ನು ಹೊಂದಿರುತ್ತಾರೆ. ಮೈಕ್ರೊ ನಿಯಂತ್ರಕಗಳಲ್ಲಿ ಫರ್ಮ್‌ವೇರ್ ಪ್ರೋಗ್ರಾಂ ಅನ್ನು ಲೋಡ್ ಮಾಡುವಾಗ ಯಾವುದೇ ಬಾಹ್ಯ ಏಜೆನ್ಸಿ, ಸ್ಥಳೀಯ ಅಥವಾ ವಿದೇಶಿ ಏಜೆನ್ಸಿಗಳು ತೊಡಗಿಸಿಕೊಂಡಿಲ್ಲ’ ಎಂದು ಆಯೋಗ ತನ್ನ ಉತ್ತರದಲ್ಲಿ ತಿಳಿಸಿದೆ.

ವಿವಿ ಪ್ಯಾಟ್ (ಮತದಾರರು ಪರಿಶೀಲಿಸಬಹುದಾದ ಕಾಗದದ ಆಡಿಟ್ ಟ್ರಯಲ್) ನಲ್ಲಿ, ಎರಡು ರೀತಿಯ ಖಚಿತ ಪ್ರಕ್ರಿಯೆ ಹೊಂದಿವೆ ಎಂದು ಬರೆದಿರುವ ಅಯೋಗ, ಪ್ರೋಗ್ರಾಂ ಸೂಚನೆಗಳನ್ನು ಮೈಕ್ರೋಕಂಟ್ರೋಲರ್‌ಗಳಿಗೆ ಒಂದೇ ಬಾರಿ ಪ್ರೋಗ್ರಾಮ್ ಮಾಡಬಹುದಾಗಿರುತ್ತದೆ. ಇನ್ನೊಂದರಲ್ಲಿ ಚಿತ್ರಗಳನ್ನು (ಚಿಹ್ನೆಗಳು) ಸಂಗ್ರಹಿಸಲಾಗುತ್ತದೆ. ಚಿಹ್ನೆಗಳನ್ನು ಅಭ್ಯರ್ಥಿಗಳು ಅಥವಾ ಅವರ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಲೋಡ್ ಮಾಡಲಾಗುತ್ತದೆ’ ಎಂದು ವಿವರಿಸಿದೆ.

‘ಜರ್ಮನ್ ಸಾಂವಿಧಾನಿಕ ನ್ಯಾಯಾಲಯವು ನಿಷೇಧಿಸಿರುವ ಮತದಾನ ವ್ಯವಸ್ಥೆಗಳಿಗಿಂತ ಭಾರತದ ಇವಿಎಂಗಳು ಹೇಗೆ ಭಿನ್ನವಾಗಿವೆ?” ಎಂಬ ಪ್ರಶ್ನೆಗೆ, ‘ಇವಿಎಂಗಳನ್ನು ಕೇಂದ್ರ ಸರ್ಕಾರದ ಪಿಎಸ್ಯುಗಳು ಸುರಕ್ಷಿತ ಸೌಲಭ್ಯಗಳಲ್ಲಿ ತಯಾರಾಗುತ್ತಿದ್ದು, ಮೂರನೇ ವ್ಯಕ್ತಿಯ ಪರೀಕ್ಷೆಗೆ ಒಳಗಾಗುತ್ತವೆ. ಜರ್ಮನ್ಗಿಂತಲೂ ಭಾರತೀಯ ಇವಿಎಂಗಳು ದೃಢವಾಗಿರುತ್ತವೆ. ವಿಭಿನ್ನವಾದ, ಹೋಲಿಸಲಾಗದ ತಂತ್ರಜ್ಞಾನಗಳು ಮತ್ತು ಪ್ರಕ್ರಿಯೆಗಳನ್ನು ಕಾರ್ಯಗತಗೊಳಿಸುತ್ತವೆ. ದೇಶದ ಸುಪ್ರೀಂ ಕೋರ್ಟ್ ಮತ್ತು ವಿವಿಧ ಹೈಕೋರ್ಡ್‌ಗಳು ಯಂತ್ರಗಳನ್ನು ಮತ್ತೆ ಮತ್ತೆ ಪರಿಶೀಲಿಸಿವೆ. ಇಸಿಐ ಇವಿಎಂಗಳಲ್ಲಿ ತಮ್ಮ ವಿಶ್ವಾಸ ಮತ್ತು ನಂಬಿಕೆಯನ್ನು ಮರುಸ್ಥಾಪಿಸಿವೆ’ ಎಂದು ಆಯೋಗ ಹೇಳಿದೆ.

ಇವಿಎಂಗಳನ್ನು ಟ್ಯಾಂಪರಿಂಗ್ ಮಾಡುವ ಕುರಿತ ಹಲವಾರು ಪ್ರಶ್ನೆಗಳಿಗೆ ಉತ್ತರಿಸಿರುವ ಆಯೋಗ, ಸೆಲ್ಫೋನ್ ಅಥವಾ ಬ್ಲೂಟೂತ್ ಸಾಧನಗಳನ್ನು ಬಳಸಿಕೊಂಡು ಇವಿಎಂಗಳನ್ನು ಮ್ಯಾನಿಪುಲೇಟ್ ಮಾಡಬಹುದೆಂಬ ಪ್ರತಿಪಾದನೆಗೆ, ‘ಇದು ಆಧಾರರಹಿತ ಮತ್ತು ಅವೈಜ್ಞಾನಿಕವಾಗಿದೆ… ಮೈಕ್ರೋ ಕಂಟ್ರೋಲರ್‌ಗಳ ಕುರಿತು ತಾಂತ್ರಿಕ ಮಾಹಿತಿಯು ಸಾರ್ವಜನಿಕವಾಗಿ ಲಭ್ಯವಿದೆ. ಬೇಕಿದ್ದರೆ ಮೈಕ್ರೋಕಂಟ್ರೋಲರ್ ತಯಾರಕರ ವೆಬ್‌ಸೈಟ್ ಪ್ರವೇಶಿಸಿ ಪರಿಶೀಲಿಸಬಹುದು’ ಎಂದಿದೆ.

20 ಲಕ್ಷ ಇವಿಎಂಗಳು ನಾಪತ್ತೆಯಾಗಿವೆ ಎಂಬ ಮಾಧ್ಯಮ ವರದಿಗಳು ನಿಜವೇ ಎಂಬುದು ಮತ್ತೊಂದು ಪ್ರಶ್ನೆಯಾಗಿದೆ. ‘ಈ ವಿಷಯವು ನ್ಯಾಯಾಲಯದಲಲ್ಲಿದೆ. ಬಾಂಬೆ ಹೈಕೋರ್ಟಿಗೆ ಅಗತ್ಯ ಸ್ಪಷ್ಟೀಕರಣಗಳನ್ನು ಒದಗಿಸಲಾಗಿದೆ. ಪಟ್ಟಭದ್ರ ಹಿತಾಸಕ್ತಿಗಳಿಗೆ ಸತ್ಯಗಳನ್ನು ತಿರುಚುವುದು ದೊಡ್ಡ ವಿಷಯವಲ್ಲ’ ಎಂದು ಇಸಿ ಉತ್ತರಿಸಿದೆ.

ಇದನ್ನೂ ಓದಿ; ಮರಗಳ್ಳತನ ಪ್ರಕರಣ: ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...