Homeಮುಖಪುಟಬಾಹ್ಯ ಏಜೆನ್ಸಿಗಳಿಗೆ ಪ್ರವೇಶವಿಲ್ಲ, ಇವಿಎಂ ಪ್ರೋಗ್ರಾಮಿಂಗ್ ಪ್ರಕ್ರಿಯೆಯು ದೃಢವಾಗಿದೆ: ಚುನಾವಣಾ ಆಯೋಗ

ಬಾಹ್ಯ ಏಜೆನ್ಸಿಗಳಿಗೆ ಪ್ರವೇಶವಿಲ್ಲ, ಇವಿಎಂ ಪ್ರೋಗ್ರಾಮಿಂಗ್ ಪ್ರಕ್ರಿಯೆಯು ದೃಢವಾಗಿದೆ: ಚುನಾವಣಾ ಆಯೋಗ

- Advertisement -
- Advertisement -

ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬಳಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಇಂಡಿಯಾ (I.N.D.I.A.) ಒಕ್ಕೂಟದ ಸದಸ್ಯರು ಆಗಸ್ಟ್‌ನಲ್ಲಿ ಚುನಾವಣಾ ಆಯೋಗಕ್ಕೆ (ಇಸಿ) ಪತ್ರ ಬರೆದಿದ್ದರು. ಇವಿಎಂಗಳ ಕುರಿತು ಪದೇಪದೆ ಕೇಳಲಾಗುವ ಪ್ರಶ್ನೆಗಳ (ಎಫ್ಎಕ್ಯೂ) ಕುರಿತ ಪುಟವನ್ನು ಇದೀಗ ಆಯೋಗ ಪರಿಷ್ಕರಿಸಿದ್ದು, ‘ಜರ್ಮನಿಯಲ್ಲಿ ನಿಷೇಧಿತ ಇವಿಎಂಗಳಿಗಿಂತ ಭಾರತೀಯ ಇವಿಎಂಗಳು ಹೇಗೆ ಭಿನ್ನವಾಗಿವೆ; ಒಂದು ವೇಳೆ ವಿವಿ ಪ್ಯಾಟ್‌ಗಳು ಪ್ರೋಗ್ರಾಮೆಬಲ್ ಮೆಮೊರಿಯನ್ನು ಹೊಂದಿದ್ದರೆ ಹಾಗೂ ಇವಿಎಂ ತಯಾರಕರು ವಿದೇಶಿ ಮೈಕ್ರೋಚಿಪ್ ತಯಾರಕರೊಂದಿಗೆ ಸಾಫ್ಟ್ವೇರ್ ಅನ್ನು ಹಂಚಿಕೊಂಡರೆ ಏನಾಗುತ್ತದೆ’ ಎಂಬ ಬಗ್ಗೆ ತನ್ನ ಉತ್ತರವನ್ನು ಮತ್ತಷ್ಟು ವಿವರಿಸಿದೆ.

ನವೀಕರಿಸಿದ ಎಫ್ಎಕ್ಯೂಗಳನ್ನು ಆಗಸ್ಟ್ 23 ರಂದು ಅಪ್ಲೋಡ್ ಮಾಡಲಾಗಿದೆ. 76 ಪ್ರಶ್ನೆಗಳನ್ನು ಒಳಗೊಂಡಿದ್ದು, ಹಿಂದಿನ ಆವೃತ್ತಿಯು 39 ಪ್ರಶ್ನೆಗಳಿಗೆ ಉತ್ತರಿಸಲಾಗಿತ್ತು.

‘ಮೈಕ್ರೋಕಂಟ್ರೋಲರ್‌ಗಳನ್ನು ಬಿಇಎಲ್/ಇಸಿಐಎಲ್ ಕಂಪನಿಗಳು ಫರ್ಮ್‌ವೇರ್ ತಂತ್ರಜ್ಞಾನದ ಮೂಲಕ, ತಮ್ಮದೆ ಜಾಗದಲ್ಲಿ ಉನ್ನತ ಮಟ್ಟದ ಭದ್ರತೆ ಮತ್ತು ಸುರಕ್ಷತೆಗಳ ಅಡಿಯಲ್ಲಿ ಪೋರ್ಟ್ ಮಾಡಲಾಗುತ್ತದೆ. ನಾಲ್ಕು ಹಂತಗಳ ಸುರಕ್ಷಿತ ಉತ್ಪಾದನಾ ಪ್ರಕ್ರಿಯೆಯಲ್ಲಿ ಮೈಕ್ರೋಕಂಟ್ರೋಲರ್ಗಳನ್ನು ‘ಎಲ್-3’ ಪ್ರದೇಶದಲ್ಲಿ ಪೋರ್ಟ್ ಮಾಡಲಾಗುತ್ತದೆ. ಅಲ್ಲಿಗೆ ಪ್ರವೇಶ ಕಾರ್ಡ್‌ಗಳನ್ನು ಹೊಂದಿರುವ, ನಿಗದಿಪಡಿಸಿದ ಎಂಜಿನಿಯರ್‌ಗಳು ಮಾತ್ರ ಬಯೋಮೆಟ್ರಿಕ್ ಸ್ಕ್ಯಾನ್‌ರ್‌ಗಳ ಮೂಲಕ ಅಧಿಕೃತ ಪ್ರವೇಶವನ್ನು ಹೊಂದಿರುತ್ತಾರೆ. ಮೈಕ್ರೊ ನಿಯಂತ್ರಕಗಳಲ್ಲಿ ಫರ್ಮ್‌ವೇರ್ ಪ್ರೋಗ್ರಾಂ ಅನ್ನು ಲೋಡ್ ಮಾಡುವಾಗ ಯಾವುದೇ ಬಾಹ್ಯ ಏಜೆನ್ಸಿ, ಸ್ಥಳೀಯ ಅಥವಾ ವಿದೇಶಿ ಏಜೆನ್ಸಿಗಳು ತೊಡಗಿಸಿಕೊಂಡಿಲ್ಲ’ ಎಂದು ಆಯೋಗ ತನ್ನ ಉತ್ತರದಲ್ಲಿ ತಿಳಿಸಿದೆ.

ವಿವಿ ಪ್ಯಾಟ್ (ಮತದಾರರು ಪರಿಶೀಲಿಸಬಹುದಾದ ಕಾಗದದ ಆಡಿಟ್ ಟ್ರಯಲ್) ನಲ್ಲಿ, ಎರಡು ರೀತಿಯ ಖಚಿತ ಪ್ರಕ್ರಿಯೆ ಹೊಂದಿವೆ ಎಂದು ಬರೆದಿರುವ ಅಯೋಗ, ಪ್ರೋಗ್ರಾಂ ಸೂಚನೆಗಳನ್ನು ಮೈಕ್ರೋಕಂಟ್ರೋಲರ್‌ಗಳಿಗೆ ಒಂದೇ ಬಾರಿ ಪ್ರೋಗ್ರಾಮ್ ಮಾಡಬಹುದಾಗಿರುತ್ತದೆ. ಇನ್ನೊಂದರಲ್ಲಿ ಚಿತ್ರಗಳನ್ನು (ಚಿಹ್ನೆಗಳು) ಸಂಗ್ರಹಿಸಲಾಗುತ್ತದೆ. ಚಿಹ್ನೆಗಳನ್ನು ಅಭ್ಯರ್ಥಿಗಳು ಅಥವಾ ಅವರ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಲೋಡ್ ಮಾಡಲಾಗುತ್ತದೆ’ ಎಂದು ವಿವರಿಸಿದೆ.

‘ಜರ್ಮನ್ ಸಾಂವಿಧಾನಿಕ ನ್ಯಾಯಾಲಯವು ನಿಷೇಧಿಸಿರುವ ಮತದಾನ ವ್ಯವಸ್ಥೆಗಳಿಗಿಂತ ಭಾರತದ ಇವಿಎಂಗಳು ಹೇಗೆ ಭಿನ್ನವಾಗಿವೆ?” ಎಂಬ ಪ್ರಶ್ನೆಗೆ, ‘ಇವಿಎಂಗಳನ್ನು ಕೇಂದ್ರ ಸರ್ಕಾರದ ಪಿಎಸ್ಯುಗಳು ಸುರಕ್ಷಿತ ಸೌಲಭ್ಯಗಳಲ್ಲಿ ತಯಾರಾಗುತ್ತಿದ್ದು, ಮೂರನೇ ವ್ಯಕ್ತಿಯ ಪರೀಕ್ಷೆಗೆ ಒಳಗಾಗುತ್ತವೆ. ಜರ್ಮನ್ಗಿಂತಲೂ ಭಾರತೀಯ ಇವಿಎಂಗಳು ದೃಢವಾಗಿರುತ್ತವೆ. ವಿಭಿನ್ನವಾದ, ಹೋಲಿಸಲಾಗದ ತಂತ್ರಜ್ಞಾನಗಳು ಮತ್ತು ಪ್ರಕ್ರಿಯೆಗಳನ್ನು ಕಾರ್ಯಗತಗೊಳಿಸುತ್ತವೆ. ದೇಶದ ಸುಪ್ರೀಂ ಕೋರ್ಟ್ ಮತ್ತು ವಿವಿಧ ಹೈಕೋರ್ಡ್‌ಗಳು ಯಂತ್ರಗಳನ್ನು ಮತ್ತೆ ಮತ್ತೆ ಪರಿಶೀಲಿಸಿವೆ. ಇಸಿಐ ಇವಿಎಂಗಳಲ್ಲಿ ತಮ್ಮ ವಿಶ್ವಾಸ ಮತ್ತು ನಂಬಿಕೆಯನ್ನು ಮರುಸ್ಥಾಪಿಸಿವೆ’ ಎಂದು ಆಯೋಗ ಹೇಳಿದೆ.

ಇವಿಎಂಗಳನ್ನು ಟ್ಯಾಂಪರಿಂಗ್ ಮಾಡುವ ಕುರಿತ ಹಲವಾರು ಪ್ರಶ್ನೆಗಳಿಗೆ ಉತ್ತರಿಸಿರುವ ಆಯೋಗ, ಸೆಲ್ಫೋನ್ ಅಥವಾ ಬ್ಲೂಟೂತ್ ಸಾಧನಗಳನ್ನು ಬಳಸಿಕೊಂಡು ಇವಿಎಂಗಳನ್ನು ಮ್ಯಾನಿಪುಲೇಟ್ ಮಾಡಬಹುದೆಂಬ ಪ್ರತಿಪಾದನೆಗೆ, ‘ಇದು ಆಧಾರರಹಿತ ಮತ್ತು ಅವೈಜ್ಞಾನಿಕವಾಗಿದೆ… ಮೈಕ್ರೋ ಕಂಟ್ರೋಲರ್‌ಗಳ ಕುರಿತು ತಾಂತ್ರಿಕ ಮಾಹಿತಿಯು ಸಾರ್ವಜನಿಕವಾಗಿ ಲಭ್ಯವಿದೆ. ಬೇಕಿದ್ದರೆ ಮೈಕ್ರೋಕಂಟ್ರೋಲರ್ ತಯಾರಕರ ವೆಬ್‌ಸೈಟ್ ಪ್ರವೇಶಿಸಿ ಪರಿಶೀಲಿಸಬಹುದು’ ಎಂದಿದೆ.

20 ಲಕ್ಷ ಇವಿಎಂಗಳು ನಾಪತ್ತೆಯಾಗಿವೆ ಎಂಬ ಮಾಧ್ಯಮ ವರದಿಗಳು ನಿಜವೇ ಎಂಬುದು ಮತ್ತೊಂದು ಪ್ರಶ್ನೆಯಾಗಿದೆ. ‘ಈ ವಿಷಯವು ನ್ಯಾಯಾಲಯದಲಲ್ಲಿದೆ. ಬಾಂಬೆ ಹೈಕೋರ್ಟಿಗೆ ಅಗತ್ಯ ಸ್ಪಷ್ಟೀಕರಣಗಳನ್ನು ಒದಗಿಸಲಾಗಿದೆ. ಪಟ್ಟಭದ್ರ ಹಿತಾಸಕ್ತಿಗಳಿಗೆ ಸತ್ಯಗಳನ್ನು ತಿರುಚುವುದು ದೊಡ್ಡ ವಿಷಯವಲ್ಲ’ ಎಂದು ಇಸಿ ಉತ್ತರಿಸಿದೆ.

ಇದನ್ನೂ ಓದಿ; ಮರಗಳ್ಳತನ ಪ್ರಕರಣ: ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...