Homeಮುಖಪುಟಬಾಹ್ಯ ಏಜೆನ್ಸಿಗಳಿಗೆ ಪ್ರವೇಶವಿಲ್ಲ, ಇವಿಎಂ ಪ್ರೋಗ್ರಾಮಿಂಗ್ ಪ್ರಕ್ರಿಯೆಯು ದೃಢವಾಗಿದೆ: ಚುನಾವಣಾ ಆಯೋಗ

ಬಾಹ್ಯ ಏಜೆನ್ಸಿಗಳಿಗೆ ಪ್ರವೇಶವಿಲ್ಲ, ಇವಿಎಂ ಪ್ರೋಗ್ರಾಮಿಂಗ್ ಪ್ರಕ್ರಿಯೆಯು ದೃಢವಾಗಿದೆ: ಚುನಾವಣಾ ಆಯೋಗ

- Advertisement -
- Advertisement -

ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬಳಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಇಂಡಿಯಾ (I.N.D.I.A.) ಒಕ್ಕೂಟದ ಸದಸ್ಯರು ಆಗಸ್ಟ್‌ನಲ್ಲಿ ಚುನಾವಣಾ ಆಯೋಗಕ್ಕೆ (ಇಸಿ) ಪತ್ರ ಬರೆದಿದ್ದರು. ಇವಿಎಂಗಳ ಕುರಿತು ಪದೇಪದೆ ಕೇಳಲಾಗುವ ಪ್ರಶ್ನೆಗಳ (ಎಫ್ಎಕ್ಯೂ) ಕುರಿತ ಪುಟವನ್ನು ಇದೀಗ ಆಯೋಗ ಪರಿಷ್ಕರಿಸಿದ್ದು, ‘ಜರ್ಮನಿಯಲ್ಲಿ ನಿಷೇಧಿತ ಇವಿಎಂಗಳಿಗಿಂತ ಭಾರತೀಯ ಇವಿಎಂಗಳು ಹೇಗೆ ಭಿನ್ನವಾಗಿವೆ; ಒಂದು ವೇಳೆ ವಿವಿ ಪ್ಯಾಟ್‌ಗಳು ಪ್ರೋಗ್ರಾಮೆಬಲ್ ಮೆಮೊರಿಯನ್ನು ಹೊಂದಿದ್ದರೆ ಹಾಗೂ ಇವಿಎಂ ತಯಾರಕರು ವಿದೇಶಿ ಮೈಕ್ರೋಚಿಪ್ ತಯಾರಕರೊಂದಿಗೆ ಸಾಫ್ಟ್ವೇರ್ ಅನ್ನು ಹಂಚಿಕೊಂಡರೆ ಏನಾಗುತ್ತದೆ’ ಎಂಬ ಬಗ್ಗೆ ತನ್ನ ಉತ್ತರವನ್ನು ಮತ್ತಷ್ಟು ವಿವರಿಸಿದೆ.

ನವೀಕರಿಸಿದ ಎಫ್ಎಕ್ಯೂಗಳನ್ನು ಆಗಸ್ಟ್ 23 ರಂದು ಅಪ್ಲೋಡ್ ಮಾಡಲಾಗಿದೆ. 76 ಪ್ರಶ್ನೆಗಳನ್ನು ಒಳಗೊಂಡಿದ್ದು, ಹಿಂದಿನ ಆವೃತ್ತಿಯು 39 ಪ್ರಶ್ನೆಗಳಿಗೆ ಉತ್ತರಿಸಲಾಗಿತ್ತು.

‘ಮೈಕ್ರೋಕಂಟ್ರೋಲರ್‌ಗಳನ್ನು ಬಿಇಎಲ್/ಇಸಿಐಎಲ್ ಕಂಪನಿಗಳು ಫರ್ಮ್‌ವೇರ್ ತಂತ್ರಜ್ಞಾನದ ಮೂಲಕ, ತಮ್ಮದೆ ಜಾಗದಲ್ಲಿ ಉನ್ನತ ಮಟ್ಟದ ಭದ್ರತೆ ಮತ್ತು ಸುರಕ್ಷತೆಗಳ ಅಡಿಯಲ್ಲಿ ಪೋರ್ಟ್ ಮಾಡಲಾಗುತ್ತದೆ. ನಾಲ್ಕು ಹಂತಗಳ ಸುರಕ್ಷಿತ ಉತ್ಪಾದನಾ ಪ್ರಕ್ರಿಯೆಯಲ್ಲಿ ಮೈಕ್ರೋಕಂಟ್ರೋಲರ್ಗಳನ್ನು ‘ಎಲ್-3’ ಪ್ರದೇಶದಲ್ಲಿ ಪೋರ್ಟ್ ಮಾಡಲಾಗುತ್ತದೆ. ಅಲ್ಲಿಗೆ ಪ್ರವೇಶ ಕಾರ್ಡ್‌ಗಳನ್ನು ಹೊಂದಿರುವ, ನಿಗದಿಪಡಿಸಿದ ಎಂಜಿನಿಯರ್‌ಗಳು ಮಾತ್ರ ಬಯೋಮೆಟ್ರಿಕ್ ಸ್ಕ್ಯಾನ್‌ರ್‌ಗಳ ಮೂಲಕ ಅಧಿಕೃತ ಪ್ರವೇಶವನ್ನು ಹೊಂದಿರುತ್ತಾರೆ. ಮೈಕ್ರೊ ನಿಯಂತ್ರಕಗಳಲ್ಲಿ ಫರ್ಮ್‌ವೇರ್ ಪ್ರೋಗ್ರಾಂ ಅನ್ನು ಲೋಡ್ ಮಾಡುವಾಗ ಯಾವುದೇ ಬಾಹ್ಯ ಏಜೆನ್ಸಿ, ಸ್ಥಳೀಯ ಅಥವಾ ವಿದೇಶಿ ಏಜೆನ್ಸಿಗಳು ತೊಡಗಿಸಿಕೊಂಡಿಲ್ಲ’ ಎಂದು ಆಯೋಗ ತನ್ನ ಉತ್ತರದಲ್ಲಿ ತಿಳಿಸಿದೆ.

ವಿವಿ ಪ್ಯಾಟ್ (ಮತದಾರರು ಪರಿಶೀಲಿಸಬಹುದಾದ ಕಾಗದದ ಆಡಿಟ್ ಟ್ರಯಲ್) ನಲ್ಲಿ, ಎರಡು ರೀತಿಯ ಖಚಿತ ಪ್ರಕ್ರಿಯೆ ಹೊಂದಿವೆ ಎಂದು ಬರೆದಿರುವ ಅಯೋಗ, ಪ್ರೋಗ್ರಾಂ ಸೂಚನೆಗಳನ್ನು ಮೈಕ್ರೋಕಂಟ್ರೋಲರ್‌ಗಳಿಗೆ ಒಂದೇ ಬಾರಿ ಪ್ರೋಗ್ರಾಮ್ ಮಾಡಬಹುದಾಗಿರುತ್ತದೆ. ಇನ್ನೊಂದರಲ್ಲಿ ಚಿತ್ರಗಳನ್ನು (ಚಿಹ್ನೆಗಳು) ಸಂಗ್ರಹಿಸಲಾಗುತ್ತದೆ. ಚಿಹ್ನೆಗಳನ್ನು ಅಭ್ಯರ್ಥಿಗಳು ಅಥವಾ ಅವರ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಲೋಡ್ ಮಾಡಲಾಗುತ್ತದೆ’ ಎಂದು ವಿವರಿಸಿದೆ.

‘ಜರ್ಮನ್ ಸಾಂವಿಧಾನಿಕ ನ್ಯಾಯಾಲಯವು ನಿಷೇಧಿಸಿರುವ ಮತದಾನ ವ್ಯವಸ್ಥೆಗಳಿಗಿಂತ ಭಾರತದ ಇವಿಎಂಗಳು ಹೇಗೆ ಭಿನ್ನವಾಗಿವೆ?” ಎಂಬ ಪ್ರಶ್ನೆಗೆ, ‘ಇವಿಎಂಗಳನ್ನು ಕೇಂದ್ರ ಸರ್ಕಾರದ ಪಿಎಸ್ಯುಗಳು ಸುರಕ್ಷಿತ ಸೌಲಭ್ಯಗಳಲ್ಲಿ ತಯಾರಾಗುತ್ತಿದ್ದು, ಮೂರನೇ ವ್ಯಕ್ತಿಯ ಪರೀಕ್ಷೆಗೆ ಒಳಗಾಗುತ್ತವೆ. ಜರ್ಮನ್ಗಿಂತಲೂ ಭಾರತೀಯ ಇವಿಎಂಗಳು ದೃಢವಾಗಿರುತ್ತವೆ. ವಿಭಿನ್ನವಾದ, ಹೋಲಿಸಲಾಗದ ತಂತ್ರಜ್ಞಾನಗಳು ಮತ್ತು ಪ್ರಕ್ರಿಯೆಗಳನ್ನು ಕಾರ್ಯಗತಗೊಳಿಸುತ್ತವೆ. ದೇಶದ ಸುಪ್ರೀಂ ಕೋರ್ಟ್ ಮತ್ತು ವಿವಿಧ ಹೈಕೋರ್ಡ್‌ಗಳು ಯಂತ್ರಗಳನ್ನು ಮತ್ತೆ ಮತ್ತೆ ಪರಿಶೀಲಿಸಿವೆ. ಇಸಿಐ ಇವಿಎಂಗಳಲ್ಲಿ ತಮ್ಮ ವಿಶ್ವಾಸ ಮತ್ತು ನಂಬಿಕೆಯನ್ನು ಮರುಸ್ಥಾಪಿಸಿವೆ’ ಎಂದು ಆಯೋಗ ಹೇಳಿದೆ.

ಇವಿಎಂಗಳನ್ನು ಟ್ಯಾಂಪರಿಂಗ್ ಮಾಡುವ ಕುರಿತ ಹಲವಾರು ಪ್ರಶ್ನೆಗಳಿಗೆ ಉತ್ತರಿಸಿರುವ ಆಯೋಗ, ಸೆಲ್ಫೋನ್ ಅಥವಾ ಬ್ಲೂಟೂತ್ ಸಾಧನಗಳನ್ನು ಬಳಸಿಕೊಂಡು ಇವಿಎಂಗಳನ್ನು ಮ್ಯಾನಿಪುಲೇಟ್ ಮಾಡಬಹುದೆಂಬ ಪ್ರತಿಪಾದನೆಗೆ, ‘ಇದು ಆಧಾರರಹಿತ ಮತ್ತು ಅವೈಜ್ಞಾನಿಕವಾಗಿದೆ… ಮೈಕ್ರೋ ಕಂಟ್ರೋಲರ್‌ಗಳ ಕುರಿತು ತಾಂತ್ರಿಕ ಮಾಹಿತಿಯು ಸಾರ್ವಜನಿಕವಾಗಿ ಲಭ್ಯವಿದೆ. ಬೇಕಿದ್ದರೆ ಮೈಕ್ರೋಕಂಟ್ರೋಲರ್ ತಯಾರಕರ ವೆಬ್‌ಸೈಟ್ ಪ್ರವೇಶಿಸಿ ಪರಿಶೀಲಿಸಬಹುದು’ ಎಂದಿದೆ.

20 ಲಕ್ಷ ಇವಿಎಂಗಳು ನಾಪತ್ತೆಯಾಗಿವೆ ಎಂಬ ಮಾಧ್ಯಮ ವರದಿಗಳು ನಿಜವೇ ಎಂಬುದು ಮತ್ತೊಂದು ಪ್ರಶ್ನೆಯಾಗಿದೆ. ‘ಈ ವಿಷಯವು ನ್ಯಾಯಾಲಯದಲಲ್ಲಿದೆ. ಬಾಂಬೆ ಹೈಕೋರ್ಟಿಗೆ ಅಗತ್ಯ ಸ್ಪಷ್ಟೀಕರಣಗಳನ್ನು ಒದಗಿಸಲಾಗಿದೆ. ಪಟ್ಟಭದ್ರ ಹಿತಾಸಕ್ತಿಗಳಿಗೆ ಸತ್ಯಗಳನ್ನು ತಿರುಚುವುದು ದೊಡ್ಡ ವಿಷಯವಲ್ಲ’ ಎಂದು ಇಸಿ ಉತ್ತರಿಸಿದೆ.

ಇದನ್ನೂ ಓದಿ; ಮರಗಳ್ಳತನ ಪ್ರಕರಣ: ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...