Homeಮುಖಪುಟಬಾಹ್ಯ ಏಜೆನ್ಸಿಗಳಿಗೆ ಪ್ರವೇಶವಿಲ್ಲ, ಇವಿಎಂ ಪ್ರೋಗ್ರಾಮಿಂಗ್ ಪ್ರಕ್ರಿಯೆಯು ದೃಢವಾಗಿದೆ: ಚುನಾವಣಾ ಆಯೋಗ

ಬಾಹ್ಯ ಏಜೆನ್ಸಿಗಳಿಗೆ ಪ್ರವೇಶವಿಲ್ಲ, ಇವಿಎಂ ಪ್ರೋಗ್ರಾಮಿಂಗ್ ಪ್ರಕ್ರಿಯೆಯು ದೃಢವಾಗಿದೆ: ಚುನಾವಣಾ ಆಯೋಗ

- Advertisement -
- Advertisement -

ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬಳಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಇಂಡಿಯಾ (I.N.D.I.A.) ಒಕ್ಕೂಟದ ಸದಸ್ಯರು ಆಗಸ್ಟ್‌ನಲ್ಲಿ ಚುನಾವಣಾ ಆಯೋಗಕ್ಕೆ (ಇಸಿ) ಪತ್ರ ಬರೆದಿದ್ದರು. ಇವಿಎಂಗಳ ಕುರಿತು ಪದೇಪದೆ ಕೇಳಲಾಗುವ ಪ್ರಶ್ನೆಗಳ (ಎಫ್ಎಕ್ಯೂ) ಕುರಿತ ಪುಟವನ್ನು ಇದೀಗ ಆಯೋಗ ಪರಿಷ್ಕರಿಸಿದ್ದು, ‘ಜರ್ಮನಿಯಲ್ಲಿ ನಿಷೇಧಿತ ಇವಿಎಂಗಳಿಗಿಂತ ಭಾರತೀಯ ಇವಿಎಂಗಳು ಹೇಗೆ ಭಿನ್ನವಾಗಿವೆ; ಒಂದು ವೇಳೆ ವಿವಿ ಪ್ಯಾಟ್‌ಗಳು ಪ್ರೋಗ್ರಾಮೆಬಲ್ ಮೆಮೊರಿಯನ್ನು ಹೊಂದಿದ್ದರೆ ಹಾಗೂ ಇವಿಎಂ ತಯಾರಕರು ವಿದೇಶಿ ಮೈಕ್ರೋಚಿಪ್ ತಯಾರಕರೊಂದಿಗೆ ಸಾಫ್ಟ್ವೇರ್ ಅನ್ನು ಹಂಚಿಕೊಂಡರೆ ಏನಾಗುತ್ತದೆ’ ಎಂಬ ಬಗ್ಗೆ ತನ್ನ ಉತ್ತರವನ್ನು ಮತ್ತಷ್ಟು ವಿವರಿಸಿದೆ.

ನವೀಕರಿಸಿದ ಎಫ್ಎಕ್ಯೂಗಳನ್ನು ಆಗಸ್ಟ್ 23 ರಂದು ಅಪ್ಲೋಡ್ ಮಾಡಲಾಗಿದೆ. 76 ಪ್ರಶ್ನೆಗಳನ್ನು ಒಳಗೊಂಡಿದ್ದು, ಹಿಂದಿನ ಆವೃತ್ತಿಯು 39 ಪ್ರಶ್ನೆಗಳಿಗೆ ಉತ್ತರಿಸಲಾಗಿತ್ತು.

‘ಮೈಕ್ರೋಕಂಟ್ರೋಲರ್‌ಗಳನ್ನು ಬಿಇಎಲ್/ಇಸಿಐಎಲ್ ಕಂಪನಿಗಳು ಫರ್ಮ್‌ವೇರ್ ತಂತ್ರಜ್ಞಾನದ ಮೂಲಕ, ತಮ್ಮದೆ ಜಾಗದಲ್ಲಿ ಉನ್ನತ ಮಟ್ಟದ ಭದ್ರತೆ ಮತ್ತು ಸುರಕ್ಷತೆಗಳ ಅಡಿಯಲ್ಲಿ ಪೋರ್ಟ್ ಮಾಡಲಾಗುತ್ತದೆ. ನಾಲ್ಕು ಹಂತಗಳ ಸುರಕ್ಷಿತ ಉತ್ಪಾದನಾ ಪ್ರಕ್ರಿಯೆಯಲ್ಲಿ ಮೈಕ್ರೋಕಂಟ್ರೋಲರ್ಗಳನ್ನು ‘ಎಲ್-3’ ಪ್ರದೇಶದಲ್ಲಿ ಪೋರ್ಟ್ ಮಾಡಲಾಗುತ್ತದೆ. ಅಲ್ಲಿಗೆ ಪ್ರವೇಶ ಕಾರ್ಡ್‌ಗಳನ್ನು ಹೊಂದಿರುವ, ನಿಗದಿಪಡಿಸಿದ ಎಂಜಿನಿಯರ್‌ಗಳು ಮಾತ್ರ ಬಯೋಮೆಟ್ರಿಕ್ ಸ್ಕ್ಯಾನ್‌ರ್‌ಗಳ ಮೂಲಕ ಅಧಿಕೃತ ಪ್ರವೇಶವನ್ನು ಹೊಂದಿರುತ್ತಾರೆ. ಮೈಕ್ರೊ ನಿಯಂತ್ರಕಗಳಲ್ಲಿ ಫರ್ಮ್‌ವೇರ್ ಪ್ರೋಗ್ರಾಂ ಅನ್ನು ಲೋಡ್ ಮಾಡುವಾಗ ಯಾವುದೇ ಬಾಹ್ಯ ಏಜೆನ್ಸಿ, ಸ್ಥಳೀಯ ಅಥವಾ ವಿದೇಶಿ ಏಜೆನ್ಸಿಗಳು ತೊಡಗಿಸಿಕೊಂಡಿಲ್ಲ’ ಎಂದು ಆಯೋಗ ತನ್ನ ಉತ್ತರದಲ್ಲಿ ತಿಳಿಸಿದೆ.

ವಿವಿ ಪ್ಯಾಟ್ (ಮತದಾರರು ಪರಿಶೀಲಿಸಬಹುದಾದ ಕಾಗದದ ಆಡಿಟ್ ಟ್ರಯಲ್) ನಲ್ಲಿ, ಎರಡು ರೀತಿಯ ಖಚಿತ ಪ್ರಕ್ರಿಯೆ ಹೊಂದಿವೆ ಎಂದು ಬರೆದಿರುವ ಅಯೋಗ, ಪ್ರೋಗ್ರಾಂ ಸೂಚನೆಗಳನ್ನು ಮೈಕ್ರೋಕಂಟ್ರೋಲರ್‌ಗಳಿಗೆ ಒಂದೇ ಬಾರಿ ಪ್ರೋಗ್ರಾಮ್ ಮಾಡಬಹುದಾಗಿರುತ್ತದೆ. ಇನ್ನೊಂದರಲ್ಲಿ ಚಿತ್ರಗಳನ್ನು (ಚಿಹ್ನೆಗಳು) ಸಂಗ್ರಹಿಸಲಾಗುತ್ತದೆ. ಚಿಹ್ನೆಗಳನ್ನು ಅಭ್ಯರ್ಥಿಗಳು ಅಥವಾ ಅವರ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಲೋಡ್ ಮಾಡಲಾಗುತ್ತದೆ’ ಎಂದು ವಿವರಿಸಿದೆ.

‘ಜರ್ಮನ್ ಸಾಂವಿಧಾನಿಕ ನ್ಯಾಯಾಲಯವು ನಿಷೇಧಿಸಿರುವ ಮತದಾನ ವ್ಯವಸ್ಥೆಗಳಿಗಿಂತ ಭಾರತದ ಇವಿಎಂಗಳು ಹೇಗೆ ಭಿನ್ನವಾಗಿವೆ?” ಎಂಬ ಪ್ರಶ್ನೆಗೆ, ‘ಇವಿಎಂಗಳನ್ನು ಕೇಂದ್ರ ಸರ್ಕಾರದ ಪಿಎಸ್ಯುಗಳು ಸುರಕ್ಷಿತ ಸೌಲಭ್ಯಗಳಲ್ಲಿ ತಯಾರಾಗುತ್ತಿದ್ದು, ಮೂರನೇ ವ್ಯಕ್ತಿಯ ಪರೀಕ್ಷೆಗೆ ಒಳಗಾಗುತ್ತವೆ. ಜರ್ಮನ್ಗಿಂತಲೂ ಭಾರತೀಯ ಇವಿಎಂಗಳು ದೃಢವಾಗಿರುತ್ತವೆ. ವಿಭಿನ್ನವಾದ, ಹೋಲಿಸಲಾಗದ ತಂತ್ರಜ್ಞಾನಗಳು ಮತ್ತು ಪ್ರಕ್ರಿಯೆಗಳನ್ನು ಕಾರ್ಯಗತಗೊಳಿಸುತ್ತವೆ. ದೇಶದ ಸುಪ್ರೀಂ ಕೋರ್ಟ್ ಮತ್ತು ವಿವಿಧ ಹೈಕೋರ್ಡ್‌ಗಳು ಯಂತ್ರಗಳನ್ನು ಮತ್ತೆ ಮತ್ತೆ ಪರಿಶೀಲಿಸಿವೆ. ಇಸಿಐ ಇವಿಎಂಗಳಲ್ಲಿ ತಮ್ಮ ವಿಶ್ವಾಸ ಮತ್ತು ನಂಬಿಕೆಯನ್ನು ಮರುಸ್ಥಾಪಿಸಿವೆ’ ಎಂದು ಆಯೋಗ ಹೇಳಿದೆ.

ಇವಿಎಂಗಳನ್ನು ಟ್ಯಾಂಪರಿಂಗ್ ಮಾಡುವ ಕುರಿತ ಹಲವಾರು ಪ್ರಶ್ನೆಗಳಿಗೆ ಉತ್ತರಿಸಿರುವ ಆಯೋಗ, ಸೆಲ್ಫೋನ್ ಅಥವಾ ಬ್ಲೂಟೂತ್ ಸಾಧನಗಳನ್ನು ಬಳಸಿಕೊಂಡು ಇವಿಎಂಗಳನ್ನು ಮ್ಯಾನಿಪುಲೇಟ್ ಮಾಡಬಹುದೆಂಬ ಪ್ರತಿಪಾದನೆಗೆ, ‘ಇದು ಆಧಾರರಹಿತ ಮತ್ತು ಅವೈಜ್ಞಾನಿಕವಾಗಿದೆ… ಮೈಕ್ರೋ ಕಂಟ್ರೋಲರ್‌ಗಳ ಕುರಿತು ತಾಂತ್ರಿಕ ಮಾಹಿತಿಯು ಸಾರ್ವಜನಿಕವಾಗಿ ಲಭ್ಯವಿದೆ. ಬೇಕಿದ್ದರೆ ಮೈಕ್ರೋಕಂಟ್ರೋಲರ್ ತಯಾರಕರ ವೆಬ್‌ಸೈಟ್ ಪ್ರವೇಶಿಸಿ ಪರಿಶೀಲಿಸಬಹುದು’ ಎಂದಿದೆ.

20 ಲಕ್ಷ ಇವಿಎಂಗಳು ನಾಪತ್ತೆಯಾಗಿವೆ ಎಂಬ ಮಾಧ್ಯಮ ವರದಿಗಳು ನಿಜವೇ ಎಂಬುದು ಮತ್ತೊಂದು ಪ್ರಶ್ನೆಯಾಗಿದೆ. ‘ಈ ವಿಷಯವು ನ್ಯಾಯಾಲಯದಲಲ್ಲಿದೆ. ಬಾಂಬೆ ಹೈಕೋರ್ಟಿಗೆ ಅಗತ್ಯ ಸ್ಪಷ್ಟೀಕರಣಗಳನ್ನು ಒದಗಿಸಲಾಗಿದೆ. ಪಟ್ಟಭದ್ರ ಹಿತಾಸಕ್ತಿಗಳಿಗೆ ಸತ್ಯಗಳನ್ನು ತಿರುಚುವುದು ದೊಡ್ಡ ವಿಷಯವಲ್ಲ’ ಎಂದು ಇಸಿ ಉತ್ತರಿಸಿದೆ.

ಇದನ್ನೂ ಓದಿ; ಮರಗಳ್ಳತನ ಪ್ರಕರಣ: ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...