Homeಮುಖಪುಟಬಾಹ್ಯ ಏಜೆನ್ಸಿಗಳಿಗೆ ಪ್ರವೇಶವಿಲ್ಲ, ಇವಿಎಂ ಪ್ರೋಗ್ರಾಮಿಂಗ್ ಪ್ರಕ್ರಿಯೆಯು ದೃಢವಾಗಿದೆ: ಚುನಾವಣಾ ಆಯೋಗ

ಬಾಹ್ಯ ಏಜೆನ್ಸಿಗಳಿಗೆ ಪ್ರವೇಶವಿಲ್ಲ, ಇವಿಎಂ ಪ್ರೋಗ್ರಾಮಿಂಗ್ ಪ್ರಕ್ರಿಯೆಯು ದೃಢವಾಗಿದೆ: ಚುನಾವಣಾ ಆಯೋಗ

- Advertisement -
- Advertisement -

ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬಳಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಇಂಡಿಯಾ (I.N.D.I.A.) ಒಕ್ಕೂಟದ ಸದಸ್ಯರು ಆಗಸ್ಟ್‌ನಲ್ಲಿ ಚುನಾವಣಾ ಆಯೋಗಕ್ಕೆ (ಇಸಿ) ಪತ್ರ ಬರೆದಿದ್ದರು. ಇವಿಎಂಗಳ ಕುರಿತು ಪದೇಪದೆ ಕೇಳಲಾಗುವ ಪ್ರಶ್ನೆಗಳ (ಎಫ್ಎಕ್ಯೂ) ಕುರಿತ ಪುಟವನ್ನು ಇದೀಗ ಆಯೋಗ ಪರಿಷ್ಕರಿಸಿದ್ದು, ‘ಜರ್ಮನಿಯಲ್ಲಿ ನಿಷೇಧಿತ ಇವಿಎಂಗಳಿಗಿಂತ ಭಾರತೀಯ ಇವಿಎಂಗಳು ಹೇಗೆ ಭಿನ್ನವಾಗಿವೆ; ಒಂದು ವೇಳೆ ವಿವಿ ಪ್ಯಾಟ್‌ಗಳು ಪ್ರೋಗ್ರಾಮೆಬಲ್ ಮೆಮೊರಿಯನ್ನು ಹೊಂದಿದ್ದರೆ ಹಾಗೂ ಇವಿಎಂ ತಯಾರಕರು ವಿದೇಶಿ ಮೈಕ್ರೋಚಿಪ್ ತಯಾರಕರೊಂದಿಗೆ ಸಾಫ್ಟ್ವೇರ್ ಅನ್ನು ಹಂಚಿಕೊಂಡರೆ ಏನಾಗುತ್ತದೆ’ ಎಂಬ ಬಗ್ಗೆ ತನ್ನ ಉತ್ತರವನ್ನು ಮತ್ತಷ್ಟು ವಿವರಿಸಿದೆ.

ನವೀಕರಿಸಿದ ಎಫ್ಎಕ್ಯೂಗಳನ್ನು ಆಗಸ್ಟ್ 23 ರಂದು ಅಪ್ಲೋಡ್ ಮಾಡಲಾಗಿದೆ. 76 ಪ್ರಶ್ನೆಗಳನ್ನು ಒಳಗೊಂಡಿದ್ದು, ಹಿಂದಿನ ಆವೃತ್ತಿಯು 39 ಪ್ರಶ್ನೆಗಳಿಗೆ ಉತ್ತರಿಸಲಾಗಿತ್ತು.

‘ಮೈಕ್ರೋಕಂಟ್ರೋಲರ್‌ಗಳನ್ನು ಬಿಇಎಲ್/ಇಸಿಐಎಲ್ ಕಂಪನಿಗಳು ಫರ್ಮ್‌ವೇರ್ ತಂತ್ರಜ್ಞಾನದ ಮೂಲಕ, ತಮ್ಮದೆ ಜಾಗದಲ್ಲಿ ಉನ್ನತ ಮಟ್ಟದ ಭದ್ರತೆ ಮತ್ತು ಸುರಕ್ಷತೆಗಳ ಅಡಿಯಲ್ಲಿ ಪೋರ್ಟ್ ಮಾಡಲಾಗುತ್ತದೆ. ನಾಲ್ಕು ಹಂತಗಳ ಸುರಕ್ಷಿತ ಉತ್ಪಾದನಾ ಪ್ರಕ್ರಿಯೆಯಲ್ಲಿ ಮೈಕ್ರೋಕಂಟ್ರೋಲರ್ಗಳನ್ನು ‘ಎಲ್-3’ ಪ್ರದೇಶದಲ್ಲಿ ಪೋರ್ಟ್ ಮಾಡಲಾಗುತ್ತದೆ. ಅಲ್ಲಿಗೆ ಪ್ರವೇಶ ಕಾರ್ಡ್‌ಗಳನ್ನು ಹೊಂದಿರುವ, ನಿಗದಿಪಡಿಸಿದ ಎಂಜಿನಿಯರ್‌ಗಳು ಮಾತ್ರ ಬಯೋಮೆಟ್ರಿಕ್ ಸ್ಕ್ಯಾನ್‌ರ್‌ಗಳ ಮೂಲಕ ಅಧಿಕೃತ ಪ್ರವೇಶವನ್ನು ಹೊಂದಿರುತ್ತಾರೆ. ಮೈಕ್ರೊ ನಿಯಂತ್ರಕಗಳಲ್ಲಿ ಫರ್ಮ್‌ವೇರ್ ಪ್ರೋಗ್ರಾಂ ಅನ್ನು ಲೋಡ್ ಮಾಡುವಾಗ ಯಾವುದೇ ಬಾಹ್ಯ ಏಜೆನ್ಸಿ, ಸ್ಥಳೀಯ ಅಥವಾ ವಿದೇಶಿ ಏಜೆನ್ಸಿಗಳು ತೊಡಗಿಸಿಕೊಂಡಿಲ್ಲ’ ಎಂದು ಆಯೋಗ ತನ್ನ ಉತ್ತರದಲ್ಲಿ ತಿಳಿಸಿದೆ.

ವಿವಿ ಪ್ಯಾಟ್ (ಮತದಾರರು ಪರಿಶೀಲಿಸಬಹುದಾದ ಕಾಗದದ ಆಡಿಟ್ ಟ್ರಯಲ್) ನಲ್ಲಿ, ಎರಡು ರೀತಿಯ ಖಚಿತ ಪ್ರಕ್ರಿಯೆ ಹೊಂದಿವೆ ಎಂದು ಬರೆದಿರುವ ಅಯೋಗ, ಪ್ರೋಗ್ರಾಂ ಸೂಚನೆಗಳನ್ನು ಮೈಕ್ರೋಕಂಟ್ರೋಲರ್‌ಗಳಿಗೆ ಒಂದೇ ಬಾರಿ ಪ್ರೋಗ್ರಾಮ್ ಮಾಡಬಹುದಾಗಿರುತ್ತದೆ. ಇನ್ನೊಂದರಲ್ಲಿ ಚಿತ್ರಗಳನ್ನು (ಚಿಹ್ನೆಗಳು) ಸಂಗ್ರಹಿಸಲಾಗುತ್ತದೆ. ಚಿಹ್ನೆಗಳನ್ನು ಅಭ್ಯರ್ಥಿಗಳು ಅಥವಾ ಅವರ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಲೋಡ್ ಮಾಡಲಾಗುತ್ತದೆ’ ಎಂದು ವಿವರಿಸಿದೆ.

‘ಜರ್ಮನ್ ಸಾಂವಿಧಾನಿಕ ನ್ಯಾಯಾಲಯವು ನಿಷೇಧಿಸಿರುವ ಮತದಾನ ವ್ಯವಸ್ಥೆಗಳಿಗಿಂತ ಭಾರತದ ಇವಿಎಂಗಳು ಹೇಗೆ ಭಿನ್ನವಾಗಿವೆ?” ಎಂಬ ಪ್ರಶ್ನೆಗೆ, ‘ಇವಿಎಂಗಳನ್ನು ಕೇಂದ್ರ ಸರ್ಕಾರದ ಪಿಎಸ್ಯುಗಳು ಸುರಕ್ಷಿತ ಸೌಲಭ್ಯಗಳಲ್ಲಿ ತಯಾರಾಗುತ್ತಿದ್ದು, ಮೂರನೇ ವ್ಯಕ್ತಿಯ ಪರೀಕ್ಷೆಗೆ ಒಳಗಾಗುತ್ತವೆ. ಜರ್ಮನ್ಗಿಂತಲೂ ಭಾರತೀಯ ಇವಿಎಂಗಳು ದೃಢವಾಗಿರುತ್ತವೆ. ವಿಭಿನ್ನವಾದ, ಹೋಲಿಸಲಾಗದ ತಂತ್ರಜ್ಞಾನಗಳು ಮತ್ತು ಪ್ರಕ್ರಿಯೆಗಳನ್ನು ಕಾರ್ಯಗತಗೊಳಿಸುತ್ತವೆ. ದೇಶದ ಸುಪ್ರೀಂ ಕೋರ್ಟ್ ಮತ್ತು ವಿವಿಧ ಹೈಕೋರ್ಡ್‌ಗಳು ಯಂತ್ರಗಳನ್ನು ಮತ್ತೆ ಮತ್ತೆ ಪರಿಶೀಲಿಸಿವೆ. ಇಸಿಐ ಇವಿಎಂಗಳಲ್ಲಿ ತಮ್ಮ ವಿಶ್ವಾಸ ಮತ್ತು ನಂಬಿಕೆಯನ್ನು ಮರುಸ್ಥಾಪಿಸಿವೆ’ ಎಂದು ಆಯೋಗ ಹೇಳಿದೆ.

ಇವಿಎಂಗಳನ್ನು ಟ್ಯಾಂಪರಿಂಗ್ ಮಾಡುವ ಕುರಿತ ಹಲವಾರು ಪ್ರಶ್ನೆಗಳಿಗೆ ಉತ್ತರಿಸಿರುವ ಆಯೋಗ, ಸೆಲ್ಫೋನ್ ಅಥವಾ ಬ್ಲೂಟೂತ್ ಸಾಧನಗಳನ್ನು ಬಳಸಿಕೊಂಡು ಇವಿಎಂಗಳನ್ನು ಮ್ಯಾನಿಪುಲೇಟ್ ಮಾಡಬಹುದೆಂಬ ಪ್ರತಿಪಾದನೆಗೆ, ‘ಇದು ಆಧಾರರಹಿತ ಮತ್ತು ಅವೈಜ್ಞಾನಿಕವಾಗಿದೆ… ಮೈಕ್ರೋ ಕಂಟ್ರೋಲರ್‌ಗಳ ಕುರಿತು ತಾಂತ್ರಿಕ ಮಾಹಿತಿಯು ಸಾರ್ವಜನಿಕವಾಗಿ ಲಭ್ಯವಿದೆ. ಬೇಕಿದ್ದರೆ ಮೈಕ್ರೋಕಂಟ್ರೋಲರ್ ತಯಾರಕರ ವೆಬ್‌ಸೈಟ್ ಪ್ರವೇಶಿಸಿ ಪರಿಶೀಲಿಸಬಹುದು’ ಎಂದಿದೆ.

20 ಲಕ್ಷ ಇವಿಎಂಗಳು ನಾಪತ್ತೆಯಾಗಿವೆ ಎಂಬ ಮಾಧ್ಯಮ ವರದಿಗಳು ನಿಜವೇ ಎಂಬುದು ಮತ್ತೊಂದು ಪ್ರಶ್ನೆಯಾಗಿದೆ. ‘ಈ ವಿಷಯವು ನ್ಯಾಯಾಲಯದಲಲ್ಲಿದೆ. ಬಾಂಬೆ ಹೈಕೋರ್ಟಿಗೆ ಅಗತ್ಯ ಸ್ಪಷ್ಟೀಕರಣಗಳನ್ನು ಒದಗಿಸಲಾಗಿದೆ. ಪಟ್ಟಭದ್ರ ಹಿತಾಸಕ್ತಿಗಳಿಗೆ ಸತ್ಯಗಳನ್ನು ತಿರುಚುವುದು ದೊಡ್ಡ ವಿಷಯವಲ್ಲ’ ಎಂದು ಇಸಿ ಉತ್ತರಿಸಿದೆ.

ಇದನ್ನೂ ಓದಿ; ಮರಗಳ್ಳತನ ಪ್ರಕರಣ: ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...