Homeಮುಖಪುಟಬಾಹ್ಯ ಏಜೆನ್ಸಿಗಳಿಗೆ ಪ್ರವೇಶವಿಲ್ಲ, ಇವಿಎಂ ಪ್ರೋಗ್ರಾಮಿಂಗ್ ಪ್ರಕ್ರಿಯೆಯು ದೃಢವಾಗಿದೆ: ಚುನಾವಣಾ ಆಯೋಗ

ಬಾಹ್ಯ ಏಜೆನ್ಸಿಗಳಿಗೆ ಪ್ರವೇಶವಿಲ್ಲ, ಇವಿಎಂ ಪ್ರೋಗ್ರಾಮಿಂಗ್ ಪ್ರಕ್ರಿಯೆಯು ದೃಢವಾಗಿದೆ: ಚುನಾವಣಾ ಆಯೋಗ

- Advertisement -
- Advertisement -

ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬಳಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಇಂಡಿಯಾ (I.N.D.I.A.) ಒಕ್ಕೂಟದ ಸದಸ್ಯರು ಆಗಸ್ಟ್‌ನಲ್ಲಿ ಚುನಾವಣಾ ಆಯೋಗಕ್ಕೆ (ಇಸಿ) ಪತ್ರ ಬರೆದಿದ್ದರು. ಇವಿಎಂಗಳ ಕುರಿತು ಪದೇಪದೆ ಕೇಳಲಾಗುವ ಪ್ರಶ್ನೆಗಳ (ಎಫ್ಎಕ್ಯೂ) ಕುರಿತ ಪುಟವನ್ನು ಇದೀಗ ಆಯೋಗ ಪರಿಷ್ಕರಿಸಿದ್ದು, ‘ಜರ್ಮನಿಯಲ್ಲಿ ನಿಷೇಧಿತ ಇವಿಎಂಗಳಿಗಿಂತ ಭಾರತೀಯ ಇವಿಎಂಗಳು ಹೇಗೆ ಭಿನ್ನವಾಗಿವೆ; ಒಂದು ವೇಳೆ ವಿವಿ ಪ್ಯಾಟ್‌ಗಳು ಪ್ರೋಗ್ರಾಮೆಬಲ್ ಮೆಮೊರಿಯನ್ನು ಹೊಂದಿದ್ದರೆ ಹಾಗೂ ಇವಿಎಂ ತಯಾರಕರು ವಿದೇಶಿ ಮೈಕ್ರೋಚಿಪ್ ತಯಾರಕರೊಂದಿಗೆ ಸಾಫ್ಟ್ವೇರ್ ಅನ್ನು ಹಂಚಿಕೊಂಡರೆ ಏನಾಗುತ್ತದೆ’ ಎಂಬ ಬಗ್ಗೆ ತನ್ನ ಉತ್ತರವನ್ನು ಮತ್ತಷ್ಟು ವಿವರಿಸಿದೆ.

ನವೀಕರಿಸಿದ ಎಫ್ಎಕ್ಯೂಗಳನ್ನು ಆಗಸ್ಟ್ 23 ರಂದು ಅಪ್ಲೋಡ್ ಮಾಡಲಾಗಿದೆ. 76 ಪ್ರಶ್ನೆಗಳನ್ನು ಒಳಗೊಂಡಿದ್ದು, ಹಿಂದಿನ ಆವೃತ್ತಿಯು 39 ಪ್ರಶ್ನೆಗಳಿಗೆ ಉತ್ತರಿಸಲಾಗಿತ್ತು.

‘ಮೈಕ್ರೋಕಂಟ್ರೋಲರ್‌ಗಳನ್ನು ಬಿಇಎಲ್/ಇಸಿಐಎಲ್ ಕಂಪನಿಗಳು ಫರ್ಮ್‌ವೇರ್ ತಂತ್ರಜ್ಞಾನದ ಮೂಲಕ, ತಮ್ಮದೆ ಜಾಗದಲ್ಲಿ ಉನ್ನತ ಮಟ್ಟದ ಭದ್ರತೆ ಮತ್ತು ಸುರಕ್ಷತೆಗಳ ಅಡಿಯಲ್ಲಿ ಪೋರ್ಟ್ ಮಾಡಲಾಗುತ್ತದೆ. ನಾಲ್ಕು ಹಂತಗಳ ಸುರಕ್ಷಿತ ಉತ್ಪಾದನಾ ಪ್ರಕ್ರಿಯೆಯಲ್ಲಿ ಮೈಕ್ರೋಕಂಟ್ರೋಲರ್ಗಳನ್ನು ‘ಎಲ್-3’ ಪ್ರದೇಶದಲ್ಲಿ ಪೋರ್ಟ್ ಮಾಡಲಾಗುತ್ತದೆ. ಅಲ್ಲಿಗೆ ಪ್ರವೇಶ ಕಾರ್ಡ್‌ಗಳನ್ನು ಹೊಂದಿರುವ, ನಿಗದಿಪಡಿಸಿದ ಎಂಜಿನಿಯರ್‌ಗಳು ಮಾತ್ರ ಬಯೋಮೆಟ್ರಿಕ್ ಸ್ಕ್ಯಾನ್‌ರ್‌ಗಳ ಮೂಲಕ ಅಧಿಕೃತ ಪ್ರವೇಶವನ್ನು ಹೊಂದಿರುತ್ತಾರೆ. ಮೈಕ್ರೊ ನಿಯಂತ್ರಕಗಳಲ್ಲಿ ಫರ್ಮ್‌ವೇರ್ ಪ್ರೋಗ್ರಾಂ ಅನ್ನು ಲೋಡ್ ಮಾಡುವಾಗ ಯಾವುದೇ ಬಾಹ್ಯ ಏಜೆನ್ಸಿ, ಸ್ಥಳೀಯ ಅಥವಾ ವಿದೇಶಿ ಏಜೆನ್ಸಿಗಳು ತೊಡಗಿಸಿಕೊಂಡಿಲ್ಲ’ ಎಂದು ಆಯೋಗ ತನ್ನ ಉತ್ತರದಲ್ಲಿ ತಿಳಿಸಿದೆ.

ವಿವಿ ಪ್ಯಾಟ್ (ಮತದಾರರು ಪರಿಶೀಲಿಸಬಹುದಾದ ಕಾಗದದ ಆಡಿಟ್ ಟ್ರಯಲ್) ನಲ್ಲಿ, ಎರಡು ರೀತಿಯ ಖಚಿತ ಪ್ರಕ್ರಿಯೆ ಹೊಂದಿವೆ ಎಂದು ಬರೆದಿರುವ ಅಯೋಗ, ಪ್ರೋಗ್ರಾಂ ಸೂಚನೆಗಳನ್ನು ಮೈಕ್ರೋಕಂಟ್ರೋಲರ್‌ಗಳಿಗೆ ಒಂದೇ ಬಾರಿ ಪ್ರೋಗ್ರಾಮ್ ಮಾಡಬಹುದಾಗಿರುತ್ತದೆ. ಇನ್ನೊಂದರಲ್ಲಿ ಚಿತ್ರಗಳನ್ನು (ಚಿಹ್ನೆಗಳು) ಸಂಗ್ರಹಿಸಲಾಗುತ್ತದೆ. ಚಿಹ್ನೆಗಳನ್ನು ಅಭ್ಯರ್ಥಿಗಳು ಅಥವಾ ಅವರ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಲೋಡ್ ಮಾಡಲಾಗುತ್ತದೆ’ ಎಂದು ವಿವರಿಸಿದೆ.

‘ಜರ್ಮನ್ ಸಾಂವಿಧಾನಿಕ ನ್ಯಾಯಾಲಯವು ನಿಷೇಧಿಸಿರುವ ಮತದಾನ ವ್ಯವಸ್ಥೆಗಳಿಗಿಂತ ಭಾರತದ ಇವಿಎಂಗಳು ಹೇಗೆ ಭಿನ್ನವಾಗಿವೆ?” ಎಂಬ ಪ್ರಶ್ನೆಗೆ, ‘ಇವಿಎಂಗಳನ್ನು ಕೇಂದ್ರ ಸರ್ಕಾರದ ಪಿಎಸ್ಯುಗಳು ಸುರಕ್ಷಿತ ಸೌಲಭ್ಯಗಳಲ್ಲಿ ತಯಾರಾಗುತ್ತಿದ್ದು, ಮೂರನೇ ವ್ಯಕ್ತಿಯ ಪರೀಕ್ಷೆಗೆ ಒಳಗಾಗುತ್ತವೆ. ಜರ್ಮನ್ಗಿಂತಲೂ ಭಾರತೀಯ ಇವಿಎಂಗಳು ದೃಢವಾಗಿರುತ್ತವೆ. ವಿಭಿನ್ನವಾದ, ಹೋಲಿಸಲಾಗದ ತಂತ್ರಜ್ಞಾನಗಳು ಮತ್ತು ಪ್ರಕ್ರಿಯೆಗಳನ್ನು ಕಾರ್ಯಗತಗೊಳಿಸುತ್ತವೆ. ದೇಶದ ಸುಪ್ರೀಂ ಕೋರ್ಟ್ ಮತ್ತು ವಿವಿಧ ಹೈಕೋರ್ಡ್‌ಗಳು ಯಂತ್ರಗಳನ್ನು ಮತ್ತೆ ಮತ್ತೆ ಪರಿಶೀಲಿಸಿವೆ. ಇಸಿಐ ಇವಿಎಂಗಳಲ್ಲಿ ತಮ್ಮ ವಿಶ್ವಾಸ ಮತ್ತು ನಂಬಿಕೆಯನ್ನು ಮರುಸ್ಥಾಪಿಸಿವೆ’ ಎಂದು ಆಯೋಗ ಹೇಳಿದೆ.

ಇವಿಎಂಗಳನ್ನು ಟ್ಯಾಂಪರಿಂಗ್ ಮಾಡುವ ಕುರಿತ ಹಲವಾರು ಪ್ರಶ್ನೆಗಳಿಗೆ ಉತ್ತರಿಸಿರುವ ಆಯೋಗ, ಸೆಲ್ಫೋನ್ ಅಥವಾ ಬ್ಲೂಟೂತ್ ಸಾಧನಗಳನ್ನು ಬಳಸಿಕೊಂಡು ಇವಿಎಂಗಳನ್ನು ಮ್ಯಾನಿಪುಲೇಟ್ ಮಾಡಬಹುದೆಂಬ ಪ್ರತಿಪಾದನೆಗೆ, ‘ಇದು ಆಧಾರರಹಿತ ಮತ್ತು ಅವೈಜ್ಞಾನಿಕವಾಗಿದೆ… ಮೈಕ್ರೋ ಕಂಟ್ರೋಲರ್‌ಗಳ ಕುರಿತು ತಾಂತ್ರಿಕ ಮಾಹಿತಿಯು ಸಾರ್ವಜನಿಕವಾಗಿ ಲಭ್ಯವಿದೆ. ಬೇಕಿದ್ದರೆ ಮೈಕ್ರೋಕಂಟ್ರೋಲರ್ ತಯಾರಕರ ವೆಬ್‌ಸೈಟ್ ಪ್ರವೇಶಿಸಿ ಪರಿಶೀಲಿಸಬಹುದು’ ಎಂದಿದೆ.

20 ಲಕ್ಷ ಇವಿಎಂಗಳು ನಾಪತ್ತೆಯಾಗಿವೆ ಎಂಬ ಮಾಧ್ಯಮ ವರದಿಗಳು ನಿಜವೇ ಎಂಬುದು ಮತ್ತೊಂದು ಪ್ರಶ್ನೆಯಾಗಿದೆ. ‘ಈ ವಿಷಯವು ನ್ಯಾಯಾಲಯದಲಲ್ಲಿದೆ. ಬಾಂಬೆ ಹೈಕೋರ್ಟಿಗೆ ಅಗತ್ಯ ಸ್ಪಷ್ಟೀಕರಣಗಳನ್ನು ಒದಗಿಸಲಾಗಿದೆ. ಪಟ್ಟಭದ್ರ ಹಿತಾಸಕ್ತಿಗಳಿಗೆ ಸತ್ಯಗಳನ್ನು ತಿರುಚುವುದು ದೊಡ್ಡ ವಿಷಯವಲ್ಲ’ ಎಂದು ಇಸಿ ಉತ್ತರಿಸಿದೆ.

ಇದನ್ನೂ ಓದಿ; ಮರಗಳ್ಳತನ ಪ್ರಕರಣ: ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...