Homeಮುಖಪುಟಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು & ರಾಜಕಾರಣಿಗಳ ವಿರುದ್ಧ ಕ್ರಮ ಸಾಧ್ಯವಿಲ್ಲ: ಟ್ವಿಟರ್

ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು & ರಾಜಕಾರಣಿಗಳ ವಿರುದ್ಧ ಕ್ರಮ ಸಾಧ್ಯವಿಲ್ಲ: ಟ್ವಿಟರ್

- Advertisement -
- Advertisement -

ಮಾಧ್ಯಮ, ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು ಮತ್ತು ರಾಜಕಾರಣಿಗಳ ವಿರುದ್ದ ಯಾವುದೇ ಕ್ರಮಕೈಗೊಳ್ಳುವುದಿಲ್ಲ ಎಂದು ಟ್ವಿಟರ್‌ ಹೇಳಿದೆ. ಅವರ ವಿರುದ್ದ ಕ್ರಮ ಕೈಗೊಂಡರೆ ಭಾರತೀಯ ಕಾನೂನಿನಡಿಯಲ್ಲಿ ಇರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು  ಉಲ್ಲಂಘಿಸಿದಂತಾಗುತ್ತದೆ ಎಂದು ಅದು ಹೇಳಿದೆ.

ರೈತರ ಪ್ರತಿಭಟನೆ ಮತ್ತು ಪ್ರಚೋದನಕಾರಿ ವಿಷಯಗಳ ಬಗ್ಗೆ ತಪ್ಪು ಮಾಹಿತಿ ಹರಡಿದ್ದಾರೆ ಎಂಬ ಆರೋಪದ ಮೇಲೆ 1,178 ಖಾತೆಗಳನ್ನು ನಿರ್ಬಂಧಿಸುವಂತೆ ಕೇಂದ್ರ ಸರ್ಕಾರ ನೀಡಿದ್ದ ಆದೇಶವನ್ನು ಟ್ವಿಟರ್ ಭಾಗಶಃ ಪಾಲಿಸಿದೆ. ಅದು ಬುಧವಾರ (ಇಂದು) 500 ಖಾತೆಗಳನ್ನು ತಡೆಹಿಡಿದಿದ್ದು, ಈ ತಡೆಯು ಕೇವಲ ಭಾರತದೊಳಗೆ ಮಾತ್ರ ಎಂದು ಹೇಳಿದೆ.

ಇದನ್ನೂ ಓದಿ: ಅಫ್ಘಾನಿಸ್ಥಾನದಲ್ಲಿ ನಿರ್ದೋಷಿ ನಾಗರಿಕರು, ಪತ್ರಕರ್ತರನ್ನು ಗುರಿಯಾಗಿಸಲಾಗುತ್ತಿದೆ: ಪ್ರಧಾನಿ ಕಳವಳ

ಜಗತ್ತಿನಾದ್ಯಂತ ಮುಕ್ತ ಇಂಟರ್ನೆಟ್ ಮತ್ತು ಮುಕ್ತ ಅಭಿವ್ಯಕ್ತಿಗೆ ಬೆಂಬಲ ನೀಡುವ ಮೌಲ್ಯಗಳು ಹೆಚ್ಚು ಅಪಾಯದಲ್ಲಿದೆ ಎಂದು ಟ್ವಿಟರ್‌ ಹೇಳಿದೆ. ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ನಡೆದ ಅಹಿತಕರ ಘಟನೆಯ ನಂತರ, “ಭಾರತದಲ್ಲಿ ‌‌‌ನಮ್ಮ ತತ್ವಗಳನ್ನು ರಕ್ಷಿಸುವ ಹಾಗೂ ನಿಯಮಗಳನ್ನು ಜಾರಿಗೊಳಿಸುವ ಪೂರ್ವಭಾವಿ ಪ್ರಯತ್ನವಾಗಿ ಸಣ್ಣ ಅಪ್‌ಡೇಟ್‌ ಒಂದನ್ನು ಹಂಚಿಕೊಳ್ಳಲು ಬಯಸಿದ್ದೇವೆ” ಎಂದು ಟ್ವಿಟರ್ ಹೇಳಿದೆ.

ಪಾಕಿಸ್ತಾನ ಮತ್ತು ಖಲಿಸ್ತಾನಿಗಳಿಗೆ ಸಂಬಂಧಿಸಿದ 1,178 ಹ್ಯಾಂಡಲ್‌ಗಳು ನವೆಂಬರ್‌ನಿಂದ ದೆಹಲಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯ ಬಗ್ಗೆ ತಪ್ಪು ಮಾಹಿತಿ ಹರಡುತ್ತಿದೆ ಎಂದು ಆರೋಪಿಸಿ ಅವುಗಳನ್ನು ತೆಗೆದುಹಾಕುವಂತೆ ಕೇಂದ್ರ ಸರ್ಕಾರವು ಟ್ವಿಟರ್‌ಗೆ ಸೂಚಿಸಿತ್ತು. ಈ ಬಗ್ಗೆ ತಾನು ಕೈಗೊಳ್ಳುವ ಕ್ರಮಗಳ ಬಗ್ಗೆ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಟ್ವಿಟರ್‌‌ ತಿಳಿಸಿದೆ.

ತಡೆಹಿಡಿಯುವಂತೆ ಆದೇಶಿಸಲಾದ ಭಾಗಶಃ ಖಾತೆಗಳನ್ನು ಭಾರತದೊಳಗೆ ಮಾತ್ರ ತಡೆಹಿಡಿದಿದ್ದೇವೆ. ಈ ಖಾತೆಗಳು ಭಾರತದ ಹೊರಗೆ ಲಭ್ಯವಾಗುತ್ತವೆ ಎಂದು ಹೇಳಿರುವ ಟ್ವಿಟರ್, “ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವ ನಮ್ಮ ತತ್ವಗಳಿಗೆ ಅನುಗುಣವಾಗಿ, ನಮಗೆ ನಿರ್ದೇಶಿಸಲಾದ ಕ್ರಮಗಳು ಭಾರತೀಯ ಕಾನೂನಿಗೆ ಅನುಗುಣವಾಗಿರುತ್ತವೆ ಎಂದು ನಾವು ನಂಬುವುದಿಲ್ಲ, ಆದ್ದರಿಂದ ಸುದ್ದಿ ಮಾಧ್ಯಮ ಘಟಕವನ್ನು ಒಳಗೊಂಡಂತೆ, ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು ಮತ್ತು ರಾಜಕಾರಣಿಗಳು ಖಾತೆಗಳ ಮೇಲೆ ನಾವು ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗೆ ಮಾಡಿದರೆ, ಭಾರತೀಯ ಕಾನೂನಿನಡಿಯಲ್ಲಿ ಅವರ ಮುಕ್ತ ಅಭಿವ್ಯಕ್ತಿಯ ಹಕ್ಕನ್ನು ಉಲ್ಲಂಘಿಸಿದಂತಾಗುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: ಮೋದಿ-ಆದಿತ್ಯನಾಥ್ ವಿರುದ್ದ ಟೀಕೆ: 293 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...