Homeಮುಖಪುಟವಿಷಕಾರುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ಪಾರ್ಲೆ-ಜಿ ನಿರ್ಧಾರಕ್ಕೆ ನೆಟ್ಟಿಗರ ಮೆಚ್ಚುಗೆ

ವಿಷಕಾರುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ಪಾರ್ಲೆ-ಜಿ ನಿರ್ಧಾರಕ್ಕೆ ನೆಟ್ಟಿಗರ ಮೆಚ್ಚುಗೆ

ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡದಿರುವ ಪಾರ್ಲೆಜಿಯ ನಿರ್ಧಾರವನ್ನು ನಾನು ಅಭಿನಂದಿಸುತ್ತೇನೆ. ನೀವು ಜಾಹೀರಾತು ನೀಡದಿದ್ದರೂ ನಾವು ಪಾರ್ಲೆಜಿಯನ್ನು ಪ್ರೀತಿಸುತ್ತೇವೆ ಎಂದು ವಿಧುಷಿ ಕೌಶಿಕ್ ತಿಳಿಸಿದ್ದಾರೆ.

- Advertisement -
- Advertisement -

ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ ಎಂದು ಯುವ ಉದ್ಯಮಿ ರಾಜೀವ್‌ ಬಜಾಜ್ ಘೋಷಿಸಿದ ಬೆನ್ನಲ್ಲೆ, ವಿಷಕಾರುವ ಚಾನೆಲ್‌ಗಳಿಗೆ ನಾವು ಜಾಹೀರಾತು ನೀಡುವುದಿಲ್ಲ ಎಂದು ಖ್ಯಾತ ಬಿಸ್ಕೆಟ್ ಕಂಪನಿ ಪಾರ್ಲೆ-ಜಿಯ ಹಿರಿಯ ಅಧಿಕಾರಿ ಕೃಷ್ಣರಾವ್ ಬುದ್ಧ ತಿಳಿಸಿದ್ದಾರೆ.

ಟಿಆರ್‌ಪಿ ಹಗರಣದಲ್ಲಿ ಈಗಾಗಲೇ ಎರಡು ಚಾನೆಲ್‌ ನಿರ್ದೇಶಕರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ರಿಪಬ್ಲಿಕ್ ಟಿವಿಯ ಅಧಿಕಾರಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ. ಹಲವು ಚಾನೆಲ್‌ಗಳ ವಿರುದ್ಧ ಬಾಲಿವುಡ್ ಸಿನಿಮಾ ತಯಾರಕ ಕಂಪನಿಗಳು ಕೋರ್ಟ್ ಮೆಟ್ಟಿಲೇರಿವೆ. ಮಾಧ್ಯಮಗಳು ದ್ವೇಷ ಹರಡುತ್ತಿವೆ ಎಂದು ಬಹುತೇಕರು ದೂರುತ್ತಿರುವ ಸಮಯದಲ್ಲಿ ಬಜಾಜ್ ಮತ್ತು ಪಾರ್ಲೆಜಿ ಕಂಪನಿಗಳ ನಿರ್ಧಾರಗಳು ವ್ಯಕ್ತವಾಗಿವೆ.

ಮಿಂಟ್ ಪತ್ರಿಕೆಯೊಂದಿಗೆ ಮಾತನಾಡಿದ ಅವರು “ವಿಷಯುಕ್ತ ವಿಷಯಗಳನ್ನು ಪ್ರಚಾರ ಮಾಡುವ ಟಿವಿ ಚಾನೆಲ್‌ಗಳಿಗೆ ಜಾಹೀರಾತು ನಿಯಂತ್ರಿಸುವುದರ ಕುರಿತು ಯೋಚಿಸುತ್ತಿದ್ದೇವೆ. ಇತರೆ ಉದ್ಯಮಗಳು ಸಹ ಈ ರೀತಿ ಮಾಡಿದರೆ, ಅಂತಹ ಟಿವಿ ಚಾನೆಲ್‌ಗಳಿಗೆ ಇದೊಂದು ಸ್ಪಷ್ಟ ಸಂದೇಶವಾದ್ದರಿಂದ ಅವರು ಅನಿವಾರ್ಯವಾಗಿ ತಮ್ಮ ವರ್ತನೆಯನ್ನು ಬದಲಿಸಿಕೊಳ್ಳುತ್ತಾರೆ” ಎಂದಿದ್ದಾರೆ.

ಆಕ್ರಮಣಶೀಲತೆ ಮತ್ತು ವಿಷಕಾರಿ ವಿಷಯಗಳನ್ನು ಪ್ರಸಾರ ಮಾಡುವ ಕಂಪನಿಗಳಿಗೆ ಹಣ ನೀಡುವ ಕಂಪನಿ ನಮ್ಮದಲ್ಲ. ಆ ರೀತಿಯ ನಿರ್ದಿಷ್ಟ ಗುಂಪನ್ನು ಗುರಿಯಾಗಿಸಿಕೊಂಡು ಸುದ್ದಿ ಬಿತ್ತರಿಸುವ ಚಾನೆಲ್‌ಗಳು ನಮಗೆ ಬೇಡ ಎಂದಿದ್ದಾರೆ.

ಪಾರ್ಲೆ-ಜಿ ಕಂಪನಿಯ ಈ ನಿರ್ಧಾರಕ್ಕೆ ನೆಟ್ಟಿಗರು ಮೆಚ್ಚುಗೆಯ ಸುರಿಮಳೆ ಸುರಿಸಿದ್ದಾರೆ. ತಮ್ಮ ಬಾಲ್ಯದ ಅಚ್ಚುಮೆಚ್ಚಿನ ಬಿಸ್ಕೆಟ್ ಕಂಪನಿ ಸರಿಯಾದ ದಾರಿಯಲ್ಲಿದೆ, ನಾವು ನಿಮ್ಮೊಂದಿಗಿದ್ದೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡದಿರುವ ಪಾರ್ಲೆಜಿಯ ನಿರ್ಧಾರವನ್ನು ನಾನು ಅಭಿನಂದಿಸುತ್ತೇನೆ. ನೀವು ಜಾಹೀರಾತು ನೀಡದಿದ್ದರೂ ನಾವು ಪಾರ್ಲೆಜಿಯನ್ನು ಪ್ರೀತಿಸುತ್ತೇವೆ ಎಂದು ವಿಧುಷಿ ಕೌಶಿಕ್ ತಿಳಿಸಿದ್ದಾರೆ.

ಬಜಾಜ್ ಹಾಗೂ ಪಾರ್ಲೆ ಜಿ ಕೂಟಗಳು ದ್ವೇಶವನ್ನು ಹಬ್ಬಿಸುವ ಟಿವಿ ಚಾನೆಲ್ಲುಗಳಲ್ಲಿ ಇನ್ನು ಮುಂದೆ ತಮ್ಮ ಕೂಟಗಳ ಬಯಲರಿಕೆಗಳನ್ನು (ಜಾಹೀರಾತು) ಮೂಡಿಸದಿರಲು ತೀರ್ಮಾನಿಸಿವೆ. ಕಾರ್ಪೋರೇಟ್ ಹರವಿನ ಮಂದಿಯಿಂದ ಒಂದು ಒಳ್ಳೆಯ ತೀರ್ಮಾನ. ಬರಬರುತ್ತಾ ಹೆಂಡ ಕುಡಿದ ಮಂಗಗಳೇ ಆಗುತ್ತಿರುವ ಮೀಡಿಯಾಗಳನ್ನ ಸಮಾಜವು ಅಂಕೆಯಲ್ಲಿಡಬೇಕಾಗಿದೆ ಎಂದು ಚೈತನ್ಯ ಎಸ್‌ ಗೌಡ ಎಂಬುವವರು ಅಭಿಪ್ರಾಯಪಟ್ಟಿದ್ದಾರೆ.

ಗುರುವಾರ ರಾಜೀವ್ ಬಜಾಜ್ ಸಿಎನ್‌ಬಿಸಿ ಟಿವಿ18 ಜೊತೆ ನಡೆಸಿದ ಸಂಭಾಷಣೆಯಲ್ಲಿ “ನಮ್ಮ ಕಂಪನಿಯು ಮೂರು ಚಾನೆಲ್‌ಗಳನ್ನು ಕಪ್ಪು ಪಟ್ಟಿಗೆ ಸೇರಿಸಿ, ಜಾಹೀರಾತು ನಿಷೇಧಿಸಿದ್ದೇವೆ. ದ್ವೇಷದ ಮೂಲಗಳೆನ್ನುವ ಯಾವುದರೊಂದಿಗೂ ನಾವು ಸಂಬಂಧ ಹೊಂದುವುದಿಲ್ಲ..” ಎಂದು ಘೋಷಿಸಿದ್ದರು.


ಇದನ್ನೂ ಓದಿ: ವಿಷಕಾರುವ, ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ರಾಜೀವ್‌ ಬಜಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...