Homeಮುಖಪುಟವಿಷಕಾರುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ಪಾರ್ಲೆ-ಜಿ ನಿರ್ಧಾರಕ್ಕೆ ನೆಟ್ಟಿಗರ ಮೆಚ್ಚುಗೆ

ವಿಷಕಾರುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ಪಾರ್ಲೆ-ಜಿ ನಿರ್ಧಾರಕ್ಕೆ ನೆಟ್ಟಿಗರ ಮೆಚ್ಚುಗೆ

ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡದಿರುವ ಪಾರ್ಲೆಜಿಯ ನಿರ್ಧಾರವನ್ನು ನಾನು ಅಭಿನಂದಿಸುತ್ತೇನೆ. ನೀವು ಜಾಹೀರಾತು ನೀಡದಿದ್ದರೂ ನಾವು ಪಾರ್ಲೆಜಿಯನ್ನು ಪ್ರೀತಿಸುತ್ತೇವೆ ಎಂದು ವಿಧುಷಿ ಕೌಶಿಕ್ ತಿಳಿಸಿದ್ದಾರೆ.

- Advertisement -
- Advertisement -

ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ ಎಂದು ಯುವ ಉದ್ಯಮಿ ರಾಜೀವ್‌ ಬಜಾಜ್ ಘೋಷಿಸಿದ ಬೆನ್ನಲ್ಲೆ, ವಿಷಕಾರುವ ಚಾನೆಲ್‌ಗಳಿಗೆ ನಾವು ಜಾಹೀರಾತು ನೀಡುವುದಿಲ್ಲ ಎಂದು ಖ್ಯಾತ ಬಿಸ್ಕೆಟ್ ಕಂಪನಿ ಪಾರ್ಲೆ-ಜಿಯ ಹಿರಿಯ ಅಧಿಕಾರಿ ಕೃಷ್ಣರಾವ್ ಬುದ್ಧ ತಿಳಿಸಿದ್ದಾರೆ.

ಟಿಆರ್‌ಪಿ ಹಗರಣದಲ್ಲಿ ಈಗಾಗಲೇ ಎರಡು ಚಾನೆಲ್‌ ನಿರ್ದೇಶಕರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ರಿಪಬ್ಲಿಕ್ ಟಿವಿಯ ಅಧಿಕಾರಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ. ಹಲವು ಚಾನೆಲ್‌ಗಳ ವಿರುದ್ಧ ಬಾಲಿವುಡ್ ಸಿನಿಮಾ ತಯಾರಕ ಕಂಪನಿಗಳು ಕೋರ್ಟ್ ಮೆಟ್ಟಿಲೇರಿವೆ. ಮಾಧ್ಯಮಗಳು ದ್ವೇಷ ಹರಡುತ್ತಿವೆ ಎಂದು ಬಹುತೇಕರು ದೂರುತ್ತಿರುವ ಸಮಯದಲ್ಲಿ ಬಜಾಜ್ ಮತ್ತು ಪಾರ್ಲೆಜಿ ಕಂಪನಿಗಳ ನಿರ್ಧಾರಗಳು ವ್ಯಕ್ತವಾಗಿವೆ.

ಮಿಂಟ್ ಪತ್ರಿಕೆಯೊಂದಿಗೆ ಮಾತನಾಡಿದ ಅವರು “ವಿಷಯುಕ್ತ ವಿಷಯಗಳನ್ನು ಪ್ರಚಾರ ಮಾಡುವ ಟಿವಿ ಚಾನೆಲ್‌ಗಳಿಗೆ ಜಾಹೀರಾತು ನಿಯಂತ್ರಿಸುವುದರ ಕುರಿತು ಯೋಚಿಸುತ್ತಿದ್ದೇವೆ. ಇತರೆ ಉದ್ಯಮಗಳು ಸಹ ಈ ರೀತಿ ಮಾಡಿದರೆ, ಅಂತಹ ಟಿವಿ ಚಾನೆಲ್‌ಗಳಿಗೆ ಇದೊಂದು ಸ್ಪಷ್ಟ ಸಂದೇಶವಾದ್ದರಿಂದ ಅವರು ಅನಿವಾರ್ಯವಾಗಿ ತಮ್ಮ ವರ್ತನೆಯನ್ನು ಬದಲಿಸಿಕೊಳ್ಳುತ್ತಾರೆ” ಎಂದಿದ್ದಾರೆ.

ಆಕ್ರಮಣಶೀಲತೆ ಮತ್ತು ವಿಷಕಾರಿ ವಿಷಯಗಳನ್ನು ಪ್ರಸಾರ ಮಾಡುವ ಕಂಪನಿಗಳಿಗೆ ಹಣ ನೀಡುವ ಕಂಪನಿ ನಮ್ಮದಲ್ಲ. ಆ ರೀತಿಯ ನಿರ್ದಿಷ್ಟ ಗುಂಪನ್ನು ಗುರಿಯಾಗಿಸಿಕೊಂಡು ಸುದ್ದಿ ಬಿತ್ತರಿಸುವ ಚಾನೆಲ್‌ಗಳು ನಮಗೆ ಬೇಡ ಎಂದಿದ್ದಾರೆ.

ಪಾರ್ಲೆ-ಜಿ ಕಂಪನಿಯ ಈ ನಿರ್ಧಾರಕ್ಕೆ ನೆಟ್ಟಿಗರು ಮೆಚ್ಚುಗೆಯ ಸುರಿಮಳೆ ಸುರಿಸಿದ್ದಾರೆ. ತಮ್ಮ ಬಾಲ್ಯದ ಅಚ್ಚುಮೆಚ್ಚಿನ ಬಿಸ್ಕೆಟ್ ಕಂಪನಿ ಸರಿಯಾದ ದಾರಿಯಲ್ಲಿದೆ, ನಾವು ನಿಮ್ಮೊಂದಿಗಿದ್ದೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡದಿರುವ ಪಾರ್ಲೆಜಿಯ ನಿರ್ಧಾರವನ್ನು ನಾನು ಅಭಿನಂದಿಸುತ್ತೇನೆ. ನೀವು ಜಾಹೀರಾತು ನೀಡದಿದ್ದರೂ ನಾವು ಪಾರ್ಲೆಜಿಯನ್ನು ಪ್ರೀತಿಸುತ್ತೇವೆ ಎಂದು ವಿಧುಷಿ ಕೌಶಿಕ್ ತಿಳಿಸಿದ್ದಾರೆ.

ಬಜಾಜ್ ಹಾಗೂ ಪಾರ್ಲೆ ಜಿ ಕೂಟಗಳು ದ್ವೇಶವನ್ನು ಹಬ್ಬಿಸುವ ಟಿವಿ ಚಾನೆಲ್ಲುಗಳಲ್ಲಿ ಇನ್ನು ಮುಂದೆ ತಮ್ಮ ಕೂಟಗಳ ಬಯಲರಿಕೆಗಳನ್ನು (ಜಾಹೀರಾತು) ಮೂಡಿಸದಿರಲು ತೀರ್ಮಾನಿಸಿವೆ. ಕಾರ್ಪೋರೇಟ್ ಹರವಿನ ಮಂದಿಯಿಂದ ಒಂದು ಒಳ್ಳೆಯ ತೀರ್ಮಾನ. ಬರಬರುತ್ತಾ ಹೆಂಡ ಕುಡಿದ ಮಂಗಗಳೇ ಆಗುತ್ತಿರುವ ಮೀಡಿಯಾಗಳನ್ನ ಸಮಾಜವು ಅಂಕೆಯಲ್ಲಿಡಬೇಕಾಗಿದೆ ಎಂದು ಚೈತನ್ಯ ಎಸ್‌ ಗೌಡ ಎಂಬುವವರು ಅಭಿಪ್ರಾಯಪಟ್ಟಿದ್ದಾರೆ.

ಗುರುವಾರ ರಾಜೀವ್ ಬಜಾಜ್ ಸಿಎನ್‌ಬಿಸಿ ಟಿವಿ18 ಜೊತೆ ನಡೆಸಿದ ಸಂಭಾಷಣೆಯಲ್ಲಿ “ನಮ್ಮ ಕಂಪನಿಯು ಮೂರು ಚಾನೆಲ್‌ಗಳನ್ನು ಕಪ್ಪು ಪಟ್ಟಿಗೆ ಸೇರಿಸಿ, ಜಾಹೀರಾತು ನಿಷೇಧಿಸಿದ್ದೇವೆ. ದ್ವೇಷದ ಮೂಲಗಳೆನ್ನುವ ಯಾವುದರೊಂದಿಗೂ ನಾವು ಸಂಬಂಧ ಹೊಂದುವುದಿಲ್ಲ..” ಎಂದು ಘೋಷಿಸಿದ್ದರು.


ಇದನ್ನೂ ಓದಿ: ವಿಷಕಾರುವ, ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ರಾಜೀವ್‌ ಬಜಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...