Homeಮುಖಪುಟವಿಷಕಾರುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ಪಾರ್ಲೆ-ಜಿ ನಿರ್ಧಾರಕ್ಕೆ ನೆಟ್ಟಿಗರ ಮೆಚ್ಚುಗೆ

ವಿಷಕಾರುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ಪಾರ್ಲೆ-ಜಿ ನಿರ್ಧಾರಕ್ಕೆ ನೆಟ್ಟಿಗರ ಮೆಚ್ಚುಗೆ

ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡದಿರುವ ಪಾರ್ಲೆಜಿಯ ನಿರ್ಧಾರವನ್ನು ನಾನು ಅಭಿನಂದಿಸುತ್ತೇನೆ. ನೀವು ಜಾಹೀರಾತು ನೀಡದಿದ್ದರೂ ನಾವು ಪಾರ್ಲೆಜಿಯನ್ನು ಪ್ರೀತಿಸುತ್ತೇವೆ ಎಂದು ವಿಧುಷಿ ಕೌಶಿಕ್ ತಿಳಿಸಿದ್ದಾರೆ.

- Advertisement -
- Advertisement -

ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ ಎಂದು ಯುವ ಉದ್ಯಮಿ ರಾಜೀವ್‌ ಬಜಾಜ್ ಘೋಷಿಸಿದ ಬೆನ್ನಲ್ಲೆ, ವಿಷಕಾರುವ ಚಾನೆಲ್‌ಗಳಿಗೆ ನಾವು ಜಾಹೀರಾತು ನೀಡುವುದಿಲ್ಲ ಎಂದು ಖ್ಯಾತ ಬಿಸ್ಕೆಟ್ ಕಂಪನಿ ಪಾರ್ಲೆ-ಜಿಯ ಹಿರಿಯ ಅಧಿಕಾರಿ ಕೃಷ್ಣರಾವ್ ಬುದ್ಧ ತಿಳಿಸಿದ್ದಾರೆ.

ಟಿಆರ್‌ಪಿ ಹಗರಣದಲ್ಲಿ ಈಗಾಗಲೇ ಎರಡು ಚಾನೆಲ್‌ ನಿರ್ದೇಶಕರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ರಿಪಬ್ಲಿಕ್ ಟಿವಿಯ ಅಧಿಕಾರಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ. ಹಲವು ಚಾನೆಲ್‌ಗಳ ವಿರುದ್ಧ ಬಾಲಿವುಡ್ ಸಿನಿಮಾ ತಯಾರಕ ಕಂಪನಿಗಳು ಕೋರ್ಟ್ ಮೆಟ್ಟಿಲೇರಿವೆ. ಮಾಧ್ಯಮಗಳು ದ್ವೇಷ ಹರಡುತ್ತಿವೆ ಎಂದು ಬಹುತೇಕರು ದೂರುತ್ತಿರುವ ಸಮಯದಲ್ಲಿ ಬಜಾಜ್ ಮತ್ತು ಪಾರ್ಲೆಜಿ ಕಂಪನಿಗಳ ನಿರ್ಧಾರಗಳು ವ್ಯಕ್ತವಾಗಿವೆ.

ಮಿಂಟ್ ಪತ್ರಿಕೆಯೊಂದಿಗೆ ಮಾತನಾಡಿದ ಅವರು “ವಿಷಯುಕ್ತ ವಿಷಯಗಳನ್ನು ಪ್ರಚಾರ ಮಾಡುವ ಟಿವಿ ಚಾನೆಲ್‌ಗಳಿಗೆ ಜಾಹೀರಾತು ನಿಯಂತ್ರಿಸುವುದರ ಕುರಿತು ಯೋಚಿಸುತ್ತಿದ್ದೇವೆ. ಇತರೆ ಉದ್ಯಮಗಳು ಸಹ ಈ ರೀತಿ ಮಾಡಿದರೆ, ಅಂತಹ ಟಿವಿ ಚಾನೆಲ್‌ಗಳಿಗೆ ಇದೊಂದು ಸ್ಪಷ್ಟ ಸಂದೇಶವಾದ್ದರಿಂದ ಅವರು ಅನಿವಾರ್ಯವಾಗಿ ತಮ್ಮ ವರ್ತನೆಯನ್ನು ಬದಲಿಸಿಕೊಳ್ಳುತ್ತಾರೆ” ಎಂದಿದ್ದಾರೆ.

ಆಕ್ರಮಣಶೀಲತೆ ಮತ್ತು ವಿಷಕಾರಿ ವಿಷಯಗಳನ್ನು ಪ್ರಸಾರ ಮಾಡುವ ಕಂಪನಿಗಳಿಗೆ ಹಣ ನೀಡುವ ಕಂಪನಿ ನಮ್ಮದಲ್ಲ. ಆ ರೀತಿಯ ನಿರ್ದಿಷ್ಟ ಗುಂಪನ್ನು ಗುರಿಯಾಗಿಸಿಕೊಂಡು ಸುದ್ದಿ ಬಿತ್ತರಿಸುವ ಚಾನೆಲ್‌ಗಳು ನಮಗೆ ಬೇಡ ಎಂದಿದ್ದಾರೆ.

ಪಾರ್ಲೆ-ಜಿ ಕಂಪನಿಯ ಈ ನಿರ್ಧಾರಕ್ಕೆ ನೆಟ್ಟಿಗರು ಮೆಚ್ಚುಗೆಯ ಸುರಿಮಳೆ ಸುರಿಸಿದ್ದಾರೆ. ತಮ್ಮ ಬಾಲ್ಯದ ಅಚ್ಚುಮೆಚ್ಚಿನ ಬಿಸ್ಕೆಟ್ ಕಂಪನಿ ಸರಿಯಾದ ದಾರಿಯಲ್ಲಿದೆ, ನಾವು ನಿಮ್ಮೊಂದಿಗಿದ್ದೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡದಿರುವ ಪಾರ್ಲೆಜಿಯ ನಿರ್ಧಾರವನ್ನು ನಾನು ಅಭಿನಂದಿಸುತ್ತೇನೆ. ನೀವು ಜಾಹೀರಾತು ನೀಡದಿದ್ದರೂ ನಾವು ಪಾರ್ಲೆಜಿಯನ್ನು ಪ್ರೀತಿಸುತ್ತೇವೆ ಎಂದು ವಿಧುಷಿ ಕೌಶಿಕ್ ತಿಳಿಸಿದ್ದಾರೆ.

ಬಜಾಜ್ ಹಾಗೂ ಪಾರ್ಲೆ ಜಿ ಕೂಟಗಳು ದ್ವೇಶವನ್ನು ಹಬ್ಬಿಸುವ ಟಿವಿ ಚಾನೆಲ್ಲುಗಳಲ್ಲಿ ಇನ್ನು ಮುಂದೆ ತಮ್ಮ ಕೂಟಗಳ ಬಯಲರಿಕೆಗಳನ್ನು (ಜಾಹೀರಾತು) ಮೂಡಿಸದಿರಲು ತೀರ್ಮಾನಿಸಿವೆ. ಕಾರ್ಪೋರೇಟ್ ಹರವಿನ ಮಂದಿಯಿಂದ ಒಂದು ಒಳ್ಳೆಯ ತೀರ್ಮಾನ. ಬರಬರುತ್ತಾ ಹೆಂಡ ಕುಡಿದ ಮಂಗಗಳೇ ಆಗುತ್ತಿರುವ ಮೀಡಿಯಾಗಳನ್ನ ಸಮಾಜವು ಅಂಕೆಯಲ್ಲಿಡಬೇಕಾಗಿದೆ ಎಂದು ಚೈತನ್ಯ ಎಸ್‌ ಗೌಡ ಎಂಬುವವರು ಅಭಿಪ್ರಾಯಪಟ್ಟಿದ್ದಾರೆ.

ಗುರುವಾರ ರಾಜೀವ್ ಬಜಾಜ್ ಸಿಎನ್‌ಬಿಸಿ ಟಿವಿ18 ಜೊತೆ ನಡೆಸಿದ ಸಂಭಾಷಣೆಯಲ್ಲಿ “ನಮ್ಮ ಕಂಪನಿಯು ಮೂರು ಚಾನೆಲ್‌ಗಳನ್ನು ಕಪ್ಪು ಪಟ್ಟಿಗೆ ಸೇರಿಸಿ, ಜಾಹೀರಾತು ನಿಷೇಧಿಸಿದ್ದೇವೆ. ದ್ವೇಷದ ಮೂಲಗಳೆನ್ನುವ ಯಾವುದರೊಂದಿಗೂ ನಾವು ಸಂಬಂಧ ಹೊಂದುವುದಿಲ್ಲ..” ಎಂದು ಘೋಷಿಸಿದ್ದರು.


ಇದನ್ನೂ ಓದಿ: ವಿಷಕಾರುವ, ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ರಾಜೀವ್‌ ಬಜಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....