HomeಮುಖಪುಟINDIA ಮೈತ್ರಿ ಕೂಟದಲ್ಲಿ ಬಿರುಕು: ಬಂಗಾಳದಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧೆ; ಮಮತಾ ಘೋಷಣೆ

INDIA ಮೈತ್ರಿ ಕೂಟದಲ್ಲಿ ಬಿರುಕು: ಬಂಗಾಳದಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧೆ; ಮಮತಾ ಘೋಷಣೆ

- Advertisement -
- Advertisement -

ಲೋಕಸಭೆ ಚುನಾವಣೆಯಲ್ಲಿ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಏಕಾಂಗಿಯಾಗಿ ಹೋರಾಡಲಿದೆ ಎಂದು ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಪ್ರತಿಪಕ್ಷಗಳ INDIA ಮೈತ್ರಿಕೂಟಕ್ಕೆ ಇದು ದೊಡ್ಡ ಹಿನ್ನೆಡೆಯಾಗಿದ್ದು, ಬಂಗಾಳದಲ್ಲಿ ಮೈತ್ರಿ ಬಾಗಿಲು ಮುಚ್ಚಿದೆ ಎಂದು ಹೇಳಲಾಗುತ್ತಿದೆ.

ನಾನು ಕಾಂಗ್ರೆಸ್ ಪಕ್ಷದೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ, ಬಂಗಾಳದಲ್ಲಿ ನಾವು ಏಕಾಂಗಿಯಾಗಿ ಹೋರಾಡುತ್ತೇವೆ ಎಂದು ನಾನು ಯಾವಾಗಲೂ ಹೇಳುತ್ತೇನೆ. ನಮ್ಮದು ಜಾತ್ಯತೀತ ಪಕ್ಷ ಮತ್ತು ಬಂಗಾಳದಲ್ಲಿ ನಾವು ಏಕಾಂಗಿಯಾಗಿ ಬಿಜೆಪಿಯನ್ನು ಸೋಲಿಸುತ್ತೇವೆ. ನಾನು ಅನೇಕ ಪ್ರಸ್ತಾಪಗಳನ್ನು ನೀಡಿದ್ದೇನೆ ಆದರೆ ಅವರು ಅವುಗಳನ್ನು ಮೊದಲಿನಿಂದಲೂ ತಿರಸ್ಕರಿಸಿದರು. ರಾಹುಲ್ ಗಾಂಧಿಯವರ ನ್ಯಾಯ ಯಾತ್ರೆಯು ಬಂಗಾಳದ ಮೂಲಕ ಹಾದುಹೋಗುವ ಬಗ್ಗೆ ತನಗೆ ತಿಳಿಸಲಾಗಿಲ್ಲ ಎಂದು ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ನಾನು ಇಂಡಿಯಾ ಬ್ಲಾಕ್‌ನ ಭಾಗವಾಗಿದ್ದರೂ ಸೌಜನ್ಯಕ್ಕಾಗಿ ಪಶ್ಚಿಮ ಬಂಗಾಳಕ್ಕೆ ಬರುವುದಾಗಿ ಅವರು ನನಗೆ ತಿಳಿಸಿಲ್ಲ, ಹಾಗಾಗಿ ಬಂಗಾಳದ ಮಟ್ಟಿಗೆ ನನಗೆ ಯಾವುದೇ ಸಂಬಂಧವಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಅಖಿಲ ಭಾರತ ಮಟ್ಟದಲ್ಲಿ ಏನು ಮಾಡಬೇಕೆಂದು ನಾವು ನಿರ್ಧರಿಸುತ್ತೇವೆ. ನಮ್ಮದು ಜಾತ್ಯತೀತ ಪಕ್ಷ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಬಂಗಾಳ ರಾಜ್ಯ ಘಟಕದ ಮುಖ್ಯಸ್ಥ ಅಧೀರ್ ರಂಜನ್ ಚೌದರಿ ಅವರು ಬಂಗಾಳದ ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ಮುಂದುವರಿಸಿದ ನಂತರ ತೃಣಮೂಲ ಮತ್ತು ಕಾಂಗ್ರೆಸ್‌ನಲ್ಲಿ ಬಿರುಕು ಕಾಣಿಸಿಕೊಂಡಿತ್ತು.  ಅಧೀರ್ ಚೌಧರಿ ಅವರು 2011ರ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್‌ನ ದಯೆಯಿಂದ ಅಧಿಕಾರಕ್ಕೆ ಬಂದರು. ಈ ಬಾರಿ ಮಮತಾ ಬ್ಯಾನರ್ಜಿ ಕೃಪೆಯಿಂದ ಚುನಾವಣೆ ನಡೆಯುವುದಿಲ್ಲ. ಚುನಾವಣೆಯನ್ನು ಹೇಗೆ ಎದುರಿಸಬೇಕೆಂದು ಕಾಂಗ್ರೆಸ್ ಪಕ್ಷಕ್ಕೆ ತಿಳಿದಿದೆ. ಮಮತಾ ಬ್ಯಾನರ್ಜಿ ಅವಕಾಶವಾದಿ ಎಂದು ಹೇಳಿದ್ದರು.

ಭಾರತ್‌ ಜೋಡೋ ನ್ಯಾಯ ಯಾತ್ರೆ ಹಿನ್ನೆಲೆ ಅಸ್ಸಾಂನಲ್ಲಿರುವ ರಾಹುಲ್ ಗಾಂಧಿ, ಅಧೀರ್‌ ರಂಜನ್‌ ಚೌಧರಿಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ ಡ್ಯಾಮೇಜ್‌ ಕಂಟ್ರೋಲ್‌ಗೆ ಯತ್ನಿಸಿದ್ದರು. ಟಿಎಂಸಿ ಮುಖ್ಯಸ್ಥರೊಂದಿಗೆ ಸೀಟು ಹಂಚಿಕೆ ಕುರಿತು ಮಾತುಕತೆ ನಡೆಯುತ್ತಿದೆ, ಈ ಬಗ್ಗೆ ನಾನು ಇಲ್ಲಿ ಪ್ರತಿಕ್ರಿಯಿಸಲು ಬಯಸುವುದಿಲ್ಲ. ಆದರೆ ಮಮತಾ ಬ್ಯಾನರ್ಜಿ ನನಗೆ ಮತ್ತು ನಮ್ಮ ಪಕ್ಷಕ್ಕೆ ತುಂಬಾ ಹತ್ತಿರವಾಗಿದ್ದಾರೆ. ಕೆಲವೊಮ್ಮೆ ನಮ್ಮ ನಾಯಕರು ಏನಾದರೂ ಹೇಳುತ್ತಾರೆ, ಅವರ ನಾಯಕರು ಕೂಡ ಏನಾದರೊಂದು ಹೇಳುತ್ತಾರೆ, ಈ ಹೇಳಿಕೆಗಳು ಮುಂದುವರಿಯುತ್ತದೆ. ಇದು ಸಹಜ ಎಂದು ಹೇಳಿದ್ದರು.

ತೃಣಮೂಲ ಕಾಂಗ್ರೆಸ್ ಬಂಗಾಳದ 42 ಸ್ಥಾನಗಳಲ್ಲಿ ಗರಿಷ್ಠ ಮೂರು ಲೋಕಸಭಾ ಸ್ಥಾನಗಳನ್ನು ಕಾಂಗ್ರೆಸ್‌ಗೆ ನೀಡಲು ಸಿದ್ಧವಾಗಿತ್ತು ಎಂದು ವರದಿಯಾಗಿದೆ. 2019ರ ಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಲೋಕಸಭಾ ಸ್ಥಾನಗಳನ್ನು ಗೆದ್ದಿದ್ದರೆ, ಟಿಎಂಸಿ 22 ಸ್ಥಾನಗಳನ್ನು ಗೆದ್ದಿತ್ತು.

ಇದನ್ನು ಓದಿ: ಅಸ್ಸಾಂನಲ್ಲಿ ರಾಹುಲ್‌ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...