HomeಮುಖಪುಟINDIA ಮೈತ್ರಿ ಕೂಟದಲ್ಲಿ ಬಿರುಕು: ಬಂಗಾಳದಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧೆ; ಮಮತಾ ಘೋಷಣೆ

INDIA ಮೈತ್ರಿ ಕೂಟದಲ್ಲಿ ಬಿರುಕು: ಬಂಗಾಳದಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧೆ; ಮಮತಾ ಘೋಷಣೆ

- Advertisement -
- Advertisement -

ಲೋಕಸಭೆ ಚುನಾವಣೆಯಲ್ಲಿ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಏಕಾಂಗಿಯಾಗಿ ಹೋರಾಡಲಿದೆ ಎಂದು ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಪ್ರತಿಪಕ್ಷಗಳ INDIA ಮೈತ್ರಿಕೂಟಕ್ಕೆ ಇದು ದೊಡ್ಡ ಹಿನ್ನೆಡೆಯಾಗಿದ್ದು, ಬಂಗಾಳದಲ್ಲಿ ಮೈತ್ರಿ ಬಾಗಿಲು ಮುಚ್ಚಿದೆ ಎಂದು ಹೇಳಲಾಗುತ್ತಿದೆ.

ನಾನು ಕಾಂಗ್ರೆಸ್ ಪಕ್ಷದೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ, ಬಂಗಾಳದಲ್ಲಿ ನಾವು ಏಕಾಂಗಿಯಾಗಿ ಹೋರಾಡುತ್ತೇವೆ ಎಂದು ನಾನು ಯಾವಾಗಲೂ ಹೇಳುತ್ತೇನೆ. ನಮ್ಮದು ಜಾತ್ಯತೀತ ಪಕ್ಷ ಮತ್ತು ಬಂಗಾಳದಲ್ಲಿ ನಾವು ಏಕಾಂಗಿಯಾಗಿ ಬಿಜೆಪಿಯನ್ನು ಸೋಲಿಸುತ್ತೇವೆ. ನಾನು ಅನೇಕ ಪ್ರಸ್ತಾಪಗಳನ್ನು ನೀಡಿದ್ದೇನೆ ಆದರೆ ಅವರು ಅವುಗಳನ್ನು ಮೊದಲಿನಿಂದಲೂ ತಿರಸ್ಕರಿಸಿದರು. ರಾಹುಲ್ ಗಾಂಧಿಯವರ ನ್ಯಾಯ ಯಾತ್ರೆಯು ಬಂಗಾಳದ ಮೂಲಕ ಹಾದುಹೋಗುವ ಬಗ್ಗೆ ತನಗೆ ತಿಳಿಸಲಾಗಿಲ್ಲ ಎಂದು ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ನಾನು ಇಂಡಿಯಾ ಬ್ಲಾಕ್‌ನ ಭಾಗವಾಗಿದ್ದರೂ ಸೌಜನ್ಯಕ್ಕಾಗಿ ಪಶ್ಚಿಮ ಬಂಗಾಳಕ್ಕೆ ಬರುವುದಾಗಿ ಅವರು ನನಗೆ ತಿಳಿಸಿಲ್ಲ, ಹಾಗಾಗಿ ಬಂಗಾಳದ ಮಟ್ಟಿಗೆ ನನಗೆ ಯಾವುದೇ ಸಂಬಂಧವಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಅಖಿಲ ಭಾರತ ಮಟ್ಟದಲ್ಲಿ ಏನು ಮಾಡಬೇಕೆಂದು ನಾವು ನಿರ್ಧರಿಸುತ್ತೇವೆ. ನಮ್ಮದು ಜಾತ್ಯತೀತ ಪಕ್ಷ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಬಂಗಾಳ ರಾಜ್ಯ ಘಟಕದ ಮುಖ್ಯಸ್ಥ ಅಧೀರ್ ರಂಜನ್ ಚೌದರಿ ಅವರು ಬಂಗಾಳದ ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ಮುಂದುವರಿಸಿದ ನಂತರ ತೃಣಮೂಲ ಮತ್ತು ಕಾಂಗ್ರೆಸ್‌ನಲ್ಲಿ ಬಿರುಕು ಕಾಣಿಸಿಕೊಂಡಿತ್ತು.  ಅಧೀರ್ ಚೌಧರಿ ಅವರು 2011ರ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್‌ನ ದಯೆಯಿಂದ ಅಧಿಕಾರಕ್ಕೆ ಬಂದರು. ಈ ಬಾರಿ ಮಮತಾ ಬ್ಯಾನರ್ಜಿ ಕೃಪೆಯಿಂದ ಚುನಾವಣೆ ನಡೆಯುವುದಿಲ್ಲ. ಚುನಾವಣೆಯನ್ನು ಹೇಗೆ ಎದುರಿಸಬೇಕೆಂದು ಕಾಂಗ್ರೆಸ್ ಪಕ್ಷಕ್ಕೆ ತಿಳಿದಿದೆ. ಮಮತಾ ಬ್ಯಾನರ್ಜಿ ಅವಕಾಶವಾದಿ ಎಂದು ಹೇಳಿದ್ದರು.

ಭಾರತ್‌ ಜೋಡೋ ನ್ಯಾಯ ಯಾತ್ರೆ ಹಿನ್ನೆಲೆ ಅಸ್ಸಾಂನಲ್ಲಿರುವ ರಾಹುಲ್ ಗಾಂಧಿ, ಅಧೀರ್‌ ರಂಜನ್‌ ಚೌಧರಿಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ ಡ್ಯಾಮೇಜ್‌ ಕಂಟ್ರೋಲ್‌ಗೆ ಯತ್ನಿಸಿದ್ದರು. ಟಿಎಂಸಿ ಮುಖ್ಯಸ್ಥರೊಂದಿಗೆ ಸೀಟು ಹಂಚಿಕೆ ಕುರಿತು ಮಾತುಕತೆ ನಡೆಯುತ್ತಿದೆ, ಈ ಬಗ್ಗೆ ನಾನು ಇಲ್ಲಿ ಪ್ರತಿಕ್ರಿಯಿಸಲು ಬಯಸುವುದಿಲ್ಲ. ಆದರೆ ಮಮತಾ ಬ್ಯಾನರ್ಜಿ ನನಗೆ ಮತ್ತು ನಮ್ಮ ಪಕ್ಷಕ್ಕೆ ತುಂಬಾ ಹತ್ತಿರವಾಗಿದ್ದಾರೆ. ಕೆಲವೊಮ್ಮೆ ನಮ್ಮ ನಾಯಕರು ಏನಾದರೂ ಹೇಳುತ್ತಾರೆ, ಅವರ ನಾಯಕರು ಕೂಡ ಏನಾದರೊಂದು ಹೇಳುತ್ತಾರೆ, ಈ ಹೇಳಿಕೆಗಳು ಮುಂದುವರಿಯುತ್ತದೆ. ಇದು ಸಹಜ ಎಂದು ಹೇಳಿದ್ದರು.

ತೃಣಮೂಲ ಕಾಂಗ್ರೆಸ್ ಬಂಗಾಳದ 42 ಸ್ಥಾನಗಳಲ್ಲಿ ಗರಿಷ್ಠ ಮೂರು ಲೋಕಸಭಾ ಸ್ಥಾನಗಳನ್ನು ಕಾಂಗ್ರೆಸ್‌ಗೆ ನೀಡಲು ಸಿದ್ಧವಾಗಿತ್ತು ಎಂದು ವರದಿಯಾಗಿದೆ. 2019ರ ಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಲೋಕಸಭಾ ಸ್ಥಾನಗಳನ್ನು ಗೆದ್ದಿದ್ದರೆ, ಟಿಎಂಸಿ 22 ಸ್ಥಾನಗಳನ್ನು ಗೆದ್ದಿತ್ತು.

ಇದನ್ನು ಓದಿ: ಅಸ್ಸಾಂನಲ್ಲಿ ರಾಹುಲ್‌ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...