Homeಮುಖಪುಟಯುಪಿ ವಿಧಾನಸಭಾ ಚುನಾವಣೆಯಲ್ಲಿ ಮಾಯಾವತಿ, ಕಾಂಗ್ರೆಸ್ ಜೊತೆ ಮೈತ್ರಿಯಿಲ್ಲ: ಅಖಿಲೇಶ್ ಯಾದವ್‌

ಯುಪಿ ವಿಧಾನಸಭಾ ಚುನಾವಣೆಯಲ್ಲಿ ಮಾಯಾವತಿ, ಕಾಂಗ್ರೆಸ್ ಜೊತೆ ಮೈತ್ರಿಯಿಲ್ಲ: ಅಖಿಲೇಶ್ ಯಾದವ್‌

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವು ಕಾಂಗ್ರೆಸ್ ಮತ್ತು ಮಾಯಾವತಿ ಅವರ ಬಿಎಸ್‌ಪಿ ಜೊತೆ ಯಾವುದೇ ಮೈತ್ರಿಕೂಟ ಮಾಡಿಕೊಳ್ಳುವುದಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್‌ ಸ್ಪಷ್ಟಪಡಿಸಿದ್ದಾರೆ.

ಮಾಯಾವತಿ ಮತ್ತು ಕಾಂಗ್ರೆಸ್ ಅವರ ಮೈತ್ರಿಕೂಟದೊಂದಿಗೆ ಚುನಾವಣೆ ಗೆಲ್ಲಲ್ಲು ವಿಫಲವಾದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ತಮ್ಮ ಪಕ್ಷವು ಸಮಾನ ಮನಸ್ಸಿನ ಸಣ್ಣ, ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿಗಳು ಬಿಜೆಪಿಯ ಸೋಲಿನ ಮುನ್ಸೂಚನೆ ನೀಡಿದರು ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಭಿವೃದ್ಧಿಯನ್ನು ನಿರ್ಬಂಧಿಸಿದ್ದಾರೆ. ಅವರು ತಮ್ಮ ಆಳ್ವಿಕೆಯಲ್ಲಿ ಭ್ರಷ್ಟಾಚಾರ ಮತ್ತು ದಬ್ಬಾಳಿಕೆಯನ್ನು ಪ್ರೋತ್ಸಾಹಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಆದರಿಂದ ಜನರು ಈಗ ಬದಲಾವಣೆಯನ್ನು ಬಯಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

“ದೊಡ್ಡ ಪಕ್ಷಗಳೊಂದಿಗಿನ ನನ್ನ ಅನುಭವವು ಉತ್ತಮವಾಗಿಲ್ಲ, ನಾನು ಅವರೊಂದಿಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ. ಬಿಜೆಪಿಯನ್ನು ಸೋಲಿಸಲು ಬಯಸುವವರು, ಸಮಾಜವಾದಿ ಪಕ್ಷಕ್ಕೆ ಸಹಾಯ ಮಾಡುವಂತೆ ನಾನು ಅವರಿಗೆ ಮನವಿ ಮಾಡುತ್ತೇನೆ”  ಎಂದು ಎನ್‌ಡಿಟಿವಿಯ ವಿಶೇಷ ಸಂದರ್ಶನದಲ್ಲಿ ಅಖಿಲೇಶ್ ಯಾದವ್ ಸ್ಪಷ್ಟಪಡಿಸಿದ್ದಾರೆ.

ಮಾಯಾವತಿಯವರ ಬಹುಜನ ಸಮಾಜ ಪಕ್ಷದೊಂದಿಗಿನ 2019 ರ ಮೈತ್ರಿ ವಿಫಲವಾದ ನಂತರ “ಬುವಾ-ಭತಿಜಾ” ಜೋಡಿ ಪುನರಾವರ್ತಿತವಾಗುವುದನ್ನು ಅಖಿಲೇಶ್ ಯಾದವ್ ತಳ್ಳಿ ಹಾಕಿದ್ದಾರೆ. ಇದರ ಜೊತೆಗೆ ಬಿಎಸ್‌ಪಿಯ ಕೆಲವು ನಾಯಕರು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬುದನ್ನು ಒಪ್ಪಿಕೊಂಡಿದ್ದಾರೆ.

ಇನ್ನು ಕಾಂಗ್ರೆಸ್ ಬಗ್ಗೆ ಮಾತನಾಡಿರುವ ಅಖಿಲೇಶ್ ಯಾದವ್, ಬಿಜೆಪಿಯನ್ನು ಸೋಲಿಸಲು ಯುಪಿಯಲ್ಲಿ ಕಾಂಗ್ರೆಸ್ ಪಕ್ಷವು ತುಂಬಾ ದುರ್ಬಲವಾಗಿದೆ ಎಂದು ಹೇಳಿದ್ದಾರೆ. “ನಾವು ಕಾಂಗ್ರೆಸ್‌ನೊಂದಿಗೆ 2017 ರಲ್ಲಿ ಉತ್ತಮ ಅನುಭವವನ್ನು ಹೊಂದಿಲ್ಲ. ನಾವು ಅವರಿಗೆ 100 ಕ್ಕೂ ಹೆಚ್ಚು ಸ್ಥಾನಗಳನ್ನು ನೀಡಿದ್ದೇವು ಆದರೆ ನಮಗೆ ಗೆಲ್ಲಲು ಸಾಧ್ಯವಾಗಲಿಲ್ಲ. ರಾಜ್ಯದಲ್ಲಿ ಜನರು ಕಾಂಗ್ರೆಸ್ ಅನ್ನು ತಿರಸ್ಕರಿಸಿದ್ದಾರೆ” ಎಂದು  ಯಾದವ್ ಹೇಳಿದ್ದಾರೆ.

2024 ರ ರಾಷ್ಟ್ರೀಯ ಚುನಾವಣೆಗೆ ಮುಂಚಿತವಾಗಿ ಬರುತ್ತಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವು ಯುಪಿಯ 403 ಸ್ಥಾನಗಳಲ್ಲಿ 350 ಸ್ಥಾನಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಿದ್ದಾರೆ.

“ಮುಂಬರುವ ಯುಪಿ ಚುನಾವಣೆಯಲ್ಲಿ ಬಿಜೆಪಿಗೆ ಖಂಡಿತ ಸೋಲುಂಟಾಗಲಿದೆ. ಬಿಜೆಪಿ ತಮ್ಮ ನಾಯಕತ್ವದಲ್ಲಿ ರಾಜ್ಯದಲ್ಲಿ ನಡೆದ ಅತಿದೊಡ್ಡ ಪರೀಕ್ಷೆಯಲ್ಲಿ ಜನರನ್ನು ಸೋಲಿಸಿದ್ದಾರೆ. ರಾಜ್ಯದ ಜನರನ್ನು ಸರ್ಕಾರ ಕೈಬಿಟ್ಟಿದೆ” ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಹೇಳಿದ್ದಾರೆ.


ಇದನ್ನೂ ಓದಿ: ಯುಪಿ ವಿಧಾನಸಭಾ ಚುನಾವಣೆ-ಆದಿತ್ಯನಾಥ್‌ ಮುಖ್ಯಮಂತ್ರಿ ಅಭ್ಯರ್ಥಿ‌: ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...