Homeಮುಖಪುಟಗೋವಾದಲ್ಲಿ ಟಿಎಂಸಿಯೊಂದಿಗೆ ಮೈತ್ರಿ ಇಲ್ಲ: ಕಾಂಗ್ರೆಸ್

ಗೋವಾದಲ್ಲಿ ಟಿಎಂಸಿಯೊಂದಿಗೆ ಮೈತ್ರಿ ಇಲ್ಲ: ಕಾಂಗ್ರೆಸ್

ಪಕ್ಷಕ್ಕೆ ಸೇರಲು ನಿರೀಕ್ಷಿತ ಅಭ್ಯರ್ಥಿಗಳಿಗೆ ಟಿಎಂಸಿ 10 ರಿಂದ 20 ಕೋಟಿ ರೂಪಾಯಿಗಳವರೆಗೆ ನೀಡುತ್ತಿದೆ ಎಂದು ದಿನೇಶ್ ಗುಂಡೂರಾವ್‌ ಆರೋಪಿಸಿದ್ದಾರೆ

- Advertisement -
- Advertisement -

ತನ್ನ ಪಕ್ಷಕ್ಕೆ ಸೇರಲು ನಿರೀಕ್ಷಿತ ಅಭ್ಯರ್ಥಿಗಳಿಗೆ ತೃಣಮೂಲ ಕಾಂಗ್ರೆಸ್ ಪಕ್ಷವು 10 ರಿಂದ 20 ಕೋಟಿ ರೂಪಾಯಿಗಳವರೆಗೆ ನೀಡುತ್ತಿದೆ ಎಂದು ಕಾಂಗ್ರೆಸ್‌ ಪಕ್ಷದ ಗೋವಾ ಉಸ್ತುವಾರಿ ದಿನೇಶ್ ಗುಂಡೂರಾವ್ ಶನಿವಾರ ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ಅನ್ನು ದುರ್ಬಲಗೊಳಿಸಲು ಮತ್ತು ಆಡಳಿತಾರೂಢ ಬಿಜೆಪಿಗೆ ಸಹಾಯ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗೋವಾ: 4 ವರ್ಷದಲ್ಲಿ 50% ಶಾಸಕರು ಪಕ್ಷಾಂತರ!

“ಗೋವಾಕ್ಕೆ ಅವರ ಪಕ್ಷ ಏನು ಕೊಡುಗೆ ನೀಡಿದೆ. ಇಂದು ಅವರು ಕೋಟಿ-ಕೋಟಿ ರೂಪಾಯಿಗಳೊಂದಿಗೆ ಬರುತ್ತಿದ್ದಾರೆ. ಬನ್ನಿ ಅಭ್ಯರ್ಥಿಯಾಗಿ ನಾವು ನಿಮಗೆ 10 ರಿಂದ 20 ಕೋಟಿ ರೂ. ನೀಡುತ್ತೇವೆ ಎಂದು ಜನರಿಗೆ ಆಫರ್ ನೀಡುತ್ತಿದ್ದಾರೆ. ಈ ಹಣ ಎಲ್ಲಿಂದ ಮತ್ತು ಯಾವುದಕ್ಕೆ ಬರುತ್ತಿದೆ? ಅವರು ಅದನ್ನು ಮಾಡುವ ಉದ್ದೇಶವೇನು?” ಎಂದು ದಿನೇಶ್ ಗುಂಡೂರಾವ್ ಪಣಜಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಇವರ ಅಜೆಂಡಾ ಅತ್ಯಂತ ಸ್ಪಷ್ಟವಾಗಿದ್ದು, ಪರೋಕ್ಷವಾಗಿ ಅವರು ಬಿಜೆಪಿಗೆ ಸಹಾಯ ಮಾಡಲು ಬಯಸುತ್ತಿದ್ದಾರೆ. ನಾವು ಟಿಎಂಸಿ ಮೈತ್ರಿಯನ್ನು ಒಪ್ಪಿಕೊಳ್ಳುವ ಪ್ರಶ್ನೆಯೇ ಇಲ್ಲ. ಯಾಕೆಂದರೆ ಅವರು ಕಾಂಗ್ರೆಸ್ ಅನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆಯೆ ಹೊರತು ಬಿಜೆಪಿಯನ್ನು ಅಲ್ಲ. ಇದು ಅವರ ಅಜೆಂಡಾ, ಆದ್ದರಿಂದ ನಾವು ಅವರ ಮೈತ್ರಿಯನ್ನು ಒಪ್ಪಿಕೊಳ್ಳುವುದು ಹೇಗೆ?” ಎಂದು ದಿನೇಶ್‌ ಗುಂಡೂರಾವ್ ಕೂಡ ಹೇಳಿದ್ದಾರೆ.

ಇದನ್ನೂ ಓದಿ:ಗೋವಾ ಚುನಾವಣೆ: ಟಿಎಂಸಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಪ್ರತಿ ತಿಂಗಳು 5 ಸಾವಿರ ರೂ ಭರವಸೆ

ಮಮತಾ ಬ್ಯಾನರ್ಜಿ ಮತ್ತು ಅವರ ಪಕ್ಷವು ಬಿಜೆಪಿ ವಿರುದ್ಧ ಮಹಾಘಟಬಂಧನ್‌ಗೆ ತಯಾರಾಗುತ್ತಿಲ್ಲ, ಆದರೆ ಬಿಜೆಪಿ ವಿರೋಧಿ ಪಕ್ಷಗಳನ್ನು ಒಡೆಯಲು ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದ್ದಾರೆ.

“ಅವರು ಮಹಾಘಟಬಂಧನ್ ಅನ್ನು ಮುರಿಯುತ್ತಿದ್ದಾರೆ. ಆದರೆ ಇಂದು ದೇಶಾದ್ಯಂತ ಬಿಜೆಪಿ ವಿರುದ್ಧ ಹೋರಾಡಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ ವಿರುದ್ಧ ಹೋರಾಡುವ ಹೆಸರಿನಲ್ಲಿ ಅವರು ಕಾಂಗ್ರೆಸ್ ಅನ್ನು ದುರ್ಬಲಗೊಳಿಸಲು, ಕಾಂಗ್ರೆಸ್ ಅನ್ನು ನಾಶಮಾಡಲು ಬಯಸುತ್ತಿದ್ದಾರೆ” ಎಂದು ಗುಂಡೂರಾವ್ ಹೇಳಿದ್ದಾರೆ.

ಅವರು ಕಾಂಗ್ರೆಸ್ ಪಕ್ಷದ ನಾಯಕರ ಮೇಲೆ ದಾಳಿ ಮಾಡುತ್ತಿದ್ದಾರೆ, ಬಿಜೆಪಿ ವಿರೋಧಿ ನಾಯಕರ ಮೇಲೆ ದಾಳಿ ಮಾಡುತ್ತಿದ್ದಾರೆ, ಆದರೆ ಅವರೇಕೆ ಬಿಜೆಪಿ ನಾಯಕರ ಮೇಲೆ ದಾಳಿ ಮಾಡುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಲೈಂಗಿಕ ದೌರ್ಜನ್ಯ ಆರೋಪ: ಗೋವಾ ಬಿಜೆಪಿ ಸಚಿವ ಮಿಲಿಂದ್ ನಾಯಕ್ ರಾಜೀನಾಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....