Homeಮುಖಪುಟರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ಇದು ಈಗಿನ ಮಂಡಿ ಮಾರುಕಟ್ಟೆ ವ್ಯವಸ್ತೆಯನ್ನು ಸಂಪೂರ್ಣವಾಗಿ ನಾಶಗೊಳಿಸಿ ರೈತರು ಕನಿಷ್ಠ ಬೆಂಬಲ ಬೆಲೆಗಿಂತಲೂ ಕಡಿಮೆ ಬೆಲೆಗೆ ತಮ್ಮ ಉತ್ಪನ್ನಗಳನ್ನು ಮಾರಬೇಕಾದ ದುಸ್ಥಿತಿಗೆ ತಲುಪುತ್ತಾರೆ ಎಂಬುದು ರೈತರ ಚಿಂತೆಯಾಗಿದೆ.

- Advertisement -
- Advertisement -

ಸೋಮವಾರದಿಂದ ಆರಂಭವಾಗಲಿರುವ ಮಾನ್ಸೂನ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಅಂಗೀಕರಿಸಲು ಸಿದ್ಧವಾಗಿರುವ 3 ಸುಗ್ರಿವಾಜ್ಞೆಗಳ ವಿರುದ್ಧ ಪಂಜಾಬ್, ಉತ್ತರ ಪ್ರದೇಶ ಮತ್ತು ಹರಿಯಾಣದ ರೈತರು ತಿರುಗಿಬಿದ್ದಿದ್ದಾರೆ. ಅಧಿವೇಶನಕ್ಕೂ ಮುನ್ನವೇ ಕೊರೊನಾ ಸಾಂಕ್ರಾಮಿಕದ ನಡುವೆಯೂ ಭಾರೀ ಪ್ರತಿಭಟನೆ ನಡೆಸಿ ತಮ್ಮ ವಿರೋಧ ದಾಖಲಿಸಿದ್ದಾರೆ.

ಅವಶ್ಯಕ ಸಾಮಾಗ್ರಿಗಳ (ತಿದ್ದುಪಡಿ) ಸುಗ್ರಿವಾಜ್ಞೆ, ರೈತರ (ಸಶಕ್ತಿಕರಣ ಹಾಗೂ ರಕ್ಷಣೆ) ಬೆಲೆ ಖಾತರಿ ಒಪ್ಪಂದ ಹಾಗೂ ಕೃಷಿ ಸೇವೆಗಳ ಸುಗ್ರಿವಾಜ್ಞೆ-2020, ರೈತರ ಉತ್ಪನ್ನ ವ್ಯಾಪಾರ ಹಾಗೂ ವಾಣಿಜ್ಯ (ಉತ್ತೇಜನ ಹಾಗೂ ಸೌಕರ್ಯ) ಸುಗ್ರಿವಾಜ್ಞೆಗಳನ್ನು ಕೇಂದ್ರ ಸರ್ಕಾರ ಸಾಂಕ್ರಾಮಿಕ ಕಾಲದಲ್ಲಿ ಜಾರಿಗೊಳಿಸಿದೆ. ಅವುಗಳನ್ನು ಸಂಸತ್ತಿನ ಉಭಯ ಸದನಗಳಲ್ಲಿ ಪರಿಚಯಿಸಿ, ಅನುಮೋದಿಸಲು ಸಿದ್ದತೆ ನಡೆಸಿದೆ. ಆದರೆ ದೇಶಾದ್ಯಂತ ರೈತರು “ಈ ಸುಗ್ರಿವಾಜ್ಞೆಗಳು ಕೃಷಿಯನ್ನು ಕಾರ್ಪೋರೇಟ್ ಕೈಗೆ ಒಪ್ಪಿಸುವ ಹುನ್ನಾರವಾಗಿದ್ದು, ಒಂದು ವೇಳೆ ಅಂಗೀಕಾರಗೊಂಡಲ್ಲಿ ರೈತರು ತಮ್ಮ ಸ್ವಾಯುತ್ತತೆಯನ್ನು ಕಳೆದುಕೊಳ್ಳಲಿದ್ದಾರೆ” ಎಂದು ಆರೋಪಿಸಿದ್ದಾರೆ.

ರೈತರ ಉತ್ಪನ್ನ ವ್ಯಾಪಾರ ಹಾಗೂ ವಾಣಿಜ್ಯ (ಉತ್ತೇಜನ ಹಾಗೂ ಸೌಕರ್ಯ) ಸುಗ್ರಿವಾಜ್ಞೆಯು ರಾಜ್ಯಗಳ ಎಪಿಎಂಸಿ ಕಾಯ್ದೆಗಿಂತಲೂ ಮೇಲುಗೈ ಸಾಧಿಸುತ್ತದೆ. ಆಗ ಯಾವುದೇ ರಾಜ್ಯಗಳಲ್ಲಿ ಬೇಕಾದರೂ ಮುಕ್ತವಾಗಿ ಮಾರಬಹುದಾದ ವ್ಯವಸ್ಥೆಯಿಂದಾಗಿ ಸ್ಥಳೀಯ ಮತ್ತು ಸಣ್ಣ ಪುಟ್ಟ ರೈತರು ತೀವ್ರ ಸಂಕಷ್ಟಕ್ಕೊಳಗಾಗುತ್ತಾರೆ ಎಂಬುದು ರೈತರ ಆತಂಕವಾಗಿದೆ. ಇದು ಈಗಿನ ಮಂಡಿ ಮಾರುಕಟ್ಟೆ ವ್ಯವಸ್ತೆಯನ್ನು ಸಂಪೂರ್ಣವಾಗಿ ನಾಶಗೊಳಿಸಿ ರೈತರೆಲ್ಲರೂ ಕನಿಷ್ಠ ಬೆಂಬಲ ಬೆಲೆಗಿಂತಲೂ ಕಡಿಮೆ ಬೆಲೆಗೆ ತಮ್ಮ ಉತ್ಪನ್ನಗಳನ್ನು ಮಾರಬೇಕಾದ ದುಸ್ಥಿತಿಗೆ ತಲುಪುತ್ತಾರೆ ಎಂಬುದು ರೈತರ ಚಿಂತೆಯಾಗಿದೆ.


ಇದನ್ನೂ ಓದಿ: ತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ!


ಆದರೆ ಕೇಂದ್ರ ಸರ್ಕಾರ ಇದು ರೈತರು ತಮ್ಮ ಬೆಳೆಗಳನ್ನು ಸ್ಪರ್ಧಾತ್ಮಕ ಬೆಲೆಗೆ ಮಾರುವ ಅವಕಾಶ ನೀಡುವುದರಿಂದ ಇದು ರೈತ ಪರ ಎಂದು ಘೋಷಿಸಿದೆ. ಉತ್ಪಾದನೆ, ಸಾಗಾಟ, ಶೇಖರಣೆ ಮತ್ತು ಮಾರುಕಟ್ಟೆ ಸೇರಿದಂತೆ ಎಲ್ಲಾ ವಿಚಾರಗಳಿಗೂ ವಿದೇಶಿ ಹೂಡಿಕೆಯನ್ನು ಆಕರ್ಷಿಸುವ ಮೂಲಕ ಗುತ್ತಿಗೆ ಕೃಷಿಯನ್ನು ಪ್ರೋತ್ಸಾಹಿಸಲಾಗುತ್ತಿದೆ. ಇದು ರೈತರಿಗೆ ವರವಾಗಿ ಪರಿಣಮಿಸಲಿದೆ ಎಂಬುದು ಕೇಂದ್ರದ ವಾದವಾಗಿದೆ.

ರೈತರು ಕೇಂದ್ರ ವಾದವನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದು, ದೊಡ್ಡ ದೊಡ್ಡ ಕಾರ್ಪೋರೇಟ್‌ಗಳಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎಂದು ಕಿಡಿಕಾರಿದ್ದಾರೆ. ಗುರುವಾರದಿಂದ ಪ್ರತಿಭಟನೆ ಆರಂಭಿಸಿರುವ ಅವರು ಯಾವುದೇ ಕಾರಣಕ್ಕೂ ಸುಗ್ರೀವಾಜ್ಞೆ ಅಂಗೀಕಾರವಾಗಬಾರದು ಎಂದು ಪಟ್ಟು ಹಿಡಿದಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ ನೇತೃತ್ವದಲ್ಲಿ ರೈತರು ಹರಿಯಾಣದ ಕುರುಕ್ಷೇತ್ರದಲ್ಲಿ ಹೆದ್ದಾರಿಗಳನ್ನು ಬಂದ್ ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹರಿಯಾಣ ಪೊಲೀಸರು ಲಾಠಿಚಾರ್ಜ್ ಮಾಡಿ ಪ್ರತಿಭಟನೆ ಹತ್ತಿಕ್ಕಿದ್ದಾರೆ. ಹರಿಯಾಣದ ಬಿಜೆಪಿ ಮುಖ್ಯಸ್ಥ ಓಂ ಪ್ರಕಾಶ್ ಧನ್ಕಾರ್‌ರೊಂದಿಗೆ ಹಲವು ಸಂಸದರು ಪ್ರತಿಭಟನಾನಿರತ ರೈತರನ್ನು ಮಾತನಾಡಿಸಿ ಅವರ ಮನವೊಲಿಸುವ ವಿಫಲ ಯತ್ನ ನಡೆಸಿದ್ದಾರೆ.

ಈ ಕುರಿತು ಹರಿಯಾಣದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಭೂಪೇಂದರ್ ಸಿಂಗ್ ಹೂಡಾ ಮಾತನಾಡಿ “ಇದು ರೈತರ ಹಿತಾಸಕ್ತಿಗಳಿಗೆ ವಿರುದ್ಧವಿರುವ ಸುಗ್ರಿವಾಜ್ಞೆಯಾಗಿದೆ. ಕೇಂದ್ರಕ್ಕೆ ನಿಜಕ್ಕೂ ರೈತರ ಬಗ್ಗೆ ಕಾಳಜಿಯಿದ್ದರೆ ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ಯಾವುದೇ ಉತ್ಪನ್ನಗಳನ್ನು ಕೊಳ್ಳುವಂತಿಲ್ಲ ಎಂಬ ಸುಗ್ರಿವಾಜ್ಞೆ ತರಲಿ” ಎಂದು ಆಗ್ರಹಿಸಿದ್ದಾರೆ.

ಈ ಮುಂಚೆಯೇ ಕರ್ನಾಟಕದಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಾಗ ರಾಜ್ಯದ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇನ್ನು ನಾಳೆಯಿಂದ ಅಧಿವೇಶನ ಆರಂಭವಾಗಲಿದ್ದು ದೇಶಾದ್ಯಂತ ರೈತರು ಬೀದಿಗಳಿಯುವ ಸಾಧ್ಯತೆಯಿದೆ.


ಇದನ್ನೂ ಓದಿ: ಸಿದ್ದರಾಮಯ್ಯ ವಿಶೇಷ ಸಂದರ್ಶನ: ನಾನು ಸಿಎಂ ಆಗಿದ್ದಿದ್ದರೆ ಈ ಜನದ್ರೋಹಿ ಸುಗ್ರೀವಾಜ್ಞೆ ತರಲ್ಲ ಅಂತ ಕೇಂದ್ರದ ಮುಖಕ್ಕೆ ಹೇಳ್ತಿದ್ದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...