Homeಮುಖಪುಟರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ಇದು ಈಗಿನ ಮಂಡಿ ಮಾರುಕಟ್ಟೆ ವ್ಯವಸ್ತೆಯನ್ನು ಸಂಪೂರ್ಣವಾಗಿ ನಾಶಗೊಳಿಸಿ ರೈತರು ಕನಿಷ್ಠ ಬೆಂಬಲ ಬೆಲೆಗಿಂತಲೂ ಕಡಿಮೆ ಬೆಲೆಗೆ ತಮ್ಮ ಉತ್ಪನ್ನಗಳನ್ನು ಮಾರಬೇಕಾದ ದುಸ್ಥಿತಿಗೆ ತಲುಪುತ್ತಾರೆ ಎಂಬುದು ರೈತರ ಚಿಂತೆಯಾಗಿದೆ.

- Advertisement -
- Advertisement -

ಸೋಮವಾರದಿಂದ ಆರಂಭವಾಗಲಿರುವ ಮಾನ್ಸೂನ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಅಂಗೀಕರಿಸಲು ಸಿದ್ಧವಾಗಿರುವ 3 ಸುಗ್ರಿವಾಜ್ಞೆಗಳ ವಿರುದ್ಧ ಪಂಜಾಬ್, ಉತ್ತರ ಪ್ರದೇಶ ಮತ್ತು ಹರಿಯಾಣದ ರೈತರು ತಿರುಗಿಬಿದ್ದಿದ್ದಾರೆ. ಅಧಿವೇಶನಕ್ಕೂ ಮುನ್ನವೇ ಕೊರೊನಾ ಸಾಂಕ್ರಾಮಿಕದ ನಡುವೆಯೂ ಭಾರೀ ಪ್ರತಿಭಟನೆ ನಡೆಸಿ ತಮ್ಮ ವಿರೋಧ ದಾಖಲಿಸಿದ್ದಾರೆ.

ಅವಶ್ಯಕ ಸಾಮಾಗ್ರಿಗಳ (ತಿದ್ದುಪಡಿ) ಸುಗ್ರಿವಾಜ್ಞೆ, ರೈತರ (ಸಶಕ್ತಿಕರಣ ಹಾಗೂ ರಕ್ಷಣೆ) ಬೆಲೆ ಖಾತರಿ ಒಪ್ಪಂದ ಹಾಗೂ ಕೃಷಿ ಸೇವೆಗಳ ಸುಗ್ರಿವಾಜ್ಞೆ-2020, ರೈತರ ಉತ್ಪನ್ನ ವ್ಯಾಪಾರ ಹಾಗೂ ವಾಣಿಜ್ಯ (ಉತ್ತೇಜನ ಹಾಗೂ ಸೌಕರ್ಯ) ಸುಗ್ರಿವಾಜ್ಞೆಗಳನ್ನು ಕೇಂದ್ರ ಸರ್ಕಾರ ಸಾಂಕ್ರಾಮಿಕ ಕಾಲದಲ್ಲಿ ಜಾರಿಗೊಳಿಸಿದೆ. ಅವುಗಳನ್ನು ಸಂಸತ್ತಿನ ಉಭಯ ಸದನಗಳಲ್ಲಿ ಪರಿಚಯಿಸಿ, ಅನುಮೋದಿಸಲು ಸಿದ್ದತೆ ನಡೆಸಿದೆ. ಆದರೆ ದೇಶಾದ್ಯಂತ ರೈತರು “ಈ ಸುಗ್ರಿವಾಜ್ಞೆಗಳು ಕೃಷಿಯನ್ನು ಕಾರ್ಪೋರೇಟ್ ಕೈಗೆ ಒಪ್ಪಿಸುವ ಹುನ್ನಾರವಾಗಿದ್ದು, ಒಂದು ವೇಳೆ ಅಂಗೀಕಾರಗೊಂಡಲ್ಲಿ ರೈತರು ತಮ್ಮ ಸ್ವಾಯುತ್ತತೆಯನ್ನು ಕಳೆದುಕೊಳ್ಳಲಿದ್ದಾರೆ” ಎಂದು ಆರೋಪಿಸಿದ್ದಾರೆ.

ರೈತರ ಉತ್ಪನ್ನ ವ್ಯಾಪಾರ ಹಾಗೂ ವಾಣಿಜ್ಯ (ಉತ್ತೇಜನ ಹಾಗೂ ಸೌಕರ್ಯ) ಸುಗ್ರಿವಾಜ್ಞೆಯು ರಾಜ್ಯಗಳ ಎಪಿಎಂಸಿ ಕಾಯ್ದೆಗಿಂತಲೂ ಮೇಲುಗೈ ಸಾಧಿಸುತ್ತದೆ. ಆಗ ಯಾವುದೇ ರಾಜ್ಯಗಳಲ್ಲಿ ಬೇಕಾದರೂ ಮುಕ್ತವಾಗಿ ಮಾರಬಹುದಾದ ವ್ಯವಸ್ಥೆಯಿಂದಾಗಿ ಸ್ಥಳೀಯ ಮತ್ತು ಸಣ್ಣ ಪುಟ್ಟ ರೈತರು ತೀವ್ರ ಸಂಕಷ್ಟಕ್ಕೊಳಗಾಗುತ್ತಾರೆ ಎಂಬುದು ರೈತರ ಆತಂಕವಾಗಿದೆ. ಇದು ಈಗಿನ ಮಂಡಿ ಮಾರುಕಟ್ಟೆ ವ್ಯವಸ್ತೆಯನ್ನು ಸಂಪೂರ್ಣವಾಗಿ ನಾಶಗೊಳಿಸಿ ರೈತರೆಲ್ಲರೂ ಕನಿಷ್ಠ ಬೆಂಬಲ ಬೆಲೆಗಿಂತಲೂ ಕಡಿಮೆ ಬೆಲೆಗೆ ತಮ್ಮ ಉತ್ಪನ್ನಗಳನ್ನು ಮಾರಬೇಕಾದ ದುಸ್ಥಿತಿಗೆ ತಲುಪುತ್ತಾರೆ ಎಂಬುದು ರೈತರ ಚಿಂತೆಯಾಗಿದೆ.


ಇದನ್ನೂ ಓದಿ: ತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ!


ಆದರೆ ಕೇಂದ್ರ ಸರ್ಕಾರ ಇದು ರೈತರು ತಮ್ಮ ಬೆಳೆಗಳನ್ನು ಸ್ಪರ್ಧಾತ್ಮಕ ಬೆಲೆಗೆ ಮಾರುವ ಅವಕಾಶ ನೀಡುವುದರಿಂದ ಇದು ರೈತ ಪರ ಎಂದು ಘೋಷಿಸಿದೆ. ಉತ್ಪಾದನೆ, ಸಾಗಾಟ, ಶೇಖರಣೆ ಮತ್ತು ಮಾರುಕಟ್ಟೆ ಸೇರಿದಂತೆ ಎಲ್ಲಾ ವಿಚಾರಗಳಿಗೂ ವಿದೇಶಿ ಹೂಡಿಕೆಯನ್ನು ಆಕರ್ಷಿಸುವ ಮೂಲಕ ಗುತ್ತಿಗೆ ಕೃಷಿಯನ್ನು ಪ್ರೋತ್ಸಾಹಿಸಲಾಗುತ್ತಿದೆ. ಇದು ರೈತರಿಗೆ ವರವಾಗಿ ಪರಿಣಮಿಸಲಿದೆ ಎಂಬುದು ಕೇಂದ್ರದ ವಾದವಾಗಿದೆ.

ರೈತರು ಕೇಂದ್ರ ವಾದವನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದು, ದೊಡ್ಡ ದೊಡ್ಡ ಕಾರ್ಪೋರೇಟ್‌ಗಳಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎಂದು ಕಿಡಿಕಾರಿದ್ದಾರೆ. ಗುರುವಾರದಿಂದ ಪ್ರತಿಭಟನೆ ಆರಂಭಿಸಿರುವ ಅವರು ಯಾವುದೇ ಕಾರಣಕ್ಕೂ ಸುಗ್ರೀವಾಜ್ಞೆ ಅಂಗೀಕಾರವಾಗಬಾರದು ಎಂದು ಪಟ್ಟು ಹಿಡಿದಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ ನೇತೃತ್ವದಲ್ಲಿ ರೈತರು ಹರಿಯಾಣದ ಕುರುಕ್ಷೇತ್ರದಲ್ಲಿ ಹೆದ್ದಾರಿಗಳನ್ನು ಬಂದ್ ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹರಿಯಾಣ ಪೊಲೀಸರು ಲಾಠಿಚಾರ್ಜ್ ಮಾಡಿ ಪ್ರತಿಭಟನೆ ಹತ್ತಿಕ್ಕಿದ್ದಾರೆ. ಹರಿಯಾಣದ ಬಿಜೆಪಿ ಮುಖ್ಯಸ್ಥ ಓಂ ಪ್ರಕಾಶ್ ಧನ್ಕಾರ್‌ರೊಂದಿಗೆ ಹಲವು ಸಂಸದರು ಪ್ರತಿಭಟನಾನಿರತ ರೈತರನ್ನು ಮಾತನಾಡಿಸಿ ಅವರ ಮನವೊಲಿಸುವ ವಿಫಲ ಯತ್ನ ನಡೆಸಿದ್ದಾರೆ.

ಈ ಕುರಿತು ಹರಿಯಾಣದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಭೂಪೇಂದರ್ ಸಿಂಗ್ ಹೂಡಾ ಮಾತನಾಡಿ “ಇದು ರೈತರ ಹಿತಾಸಕ್ತಿಗಳಿಗೆ ವಿರುದ್ಧವಿರುವ ಸುಗ್ರಿವಾಜ್ಞೆಯಾಗಿದೆ. ಕೇಂದ್ರಕ್ಕೆ ನಿಜಕ್ಕೂ ರೈತರ ಬಗ್ಗೆ ಕಾಳಜಿಯಿದ್ದರೆ ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ಯಾವುದೇ ಉತ್ಪನ್ನಗಳನ್ನು ಕೊಳ್ಳುವಂತಿಲ್ಲ ಎಂಬ ಸುಗ್ರಿವಾಜ್ಞೆ ತರಲಿ” ಎಂದು ಆಗ್ರಹಿಸಿದ್ದಾರೆ.

ಈ ಮುಂಚೆಯೇ ಕರ್ನಾಟಕದಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಾಗ ರಾಜ್ಯದ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇನ್ನು ನಾಳೆಯಿಂದ ಅಧಿವೇಶನ ಆರಂಭವಾಗಲಿದ್ದು ದೇಶಾದ್ಯಂತ ರೈತರು ಬೀದಿಗಳಿಯುವ ಸಾಧ್ಯತೆಯಿದೆ.


ಇದನ್ನೂ ಓದಿ: ಸಿದ್ದರಾಮಯ್ಯ ವಿಶೇಷ ಸಂದರ್ಶನ: ನಾನು ಸಿಎಂ ಆಗಿದ್ದಿದ್ದರೆ ಈ ಜನದ್ರೋಹಿ ಸುಗ್ರೀವಾಜ್ಞೆ ತರಲ್ಲ ಅಂತ ಕೇಂದ್ರದ ಮುಖಕ್ಕೆ ಹೇಳ್ತಿದ್ದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...