Homeಮುಖಪುಟರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ಇದು ಈಗಿನ ಮಂಡಿ ಮಾರುಕಟ್ಟೆ ವ್ಯವಸ್ತೆಯನ್ನು ಸಂಪೂರ್ಣವಾಗಿ ನಾಶಗೊಳಿಸಿ ರೈತರು ಕನಿಷ್ಠ ಬೆಂಬಲ ಬೆಲೆಗಿಂತಲೂ ಕಡಿಮೆ ಬೆಲೆಗೆ ತಮ್ಮ ಉತ್ಪನ್ನಗಳನ್ನು ಮಾರಬೇಕಾದ ದುಸ್ಥಿತಿಗೆ ತಲುಪುತ್ತಾರೆ ಎಂಬುದು ರೈತರ ಚಿಂತೆಯಾಗಿದೆ.

- Advertisement -
- Advertisement -

ಸೋಮವಾರದಿಂದ ಆರಂಭವಾಗಲಿರುವ ಮಾನ್ಸೂನ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಅಂಗೀಕರಿಸಲು ಸಿದ್ಧವಾಗಿರುವ 3 ಸುಗ್ರಿವಾಜ್ಞೆಗಳ ವಿರುದ್ಧ ಪಂಜಾಬ್, ಉತ್ತರ ಪ್ರದೇಶ ಮತ್ತು ಹರಿಯಾಣದ ರೈತರು ತಿರುಗಿಬಿದ್ದಿದ್ದಾರೆ. ಅಧಿವೇಶನಕ್ಕೂ ಮುನ್ನವೇ ಕೊರೊನಾ ಸಾಂಕ್ರಾಮಿಕದ ನಡುವೆಯೂ ಭಾರೀ ಪ್ರತಿಭಟನೆ ನಡೆಸಿ ತಮ್ಮ ವಿರೋಧ ದಾಖಲಿಸಿದ್ದಾರೆ.

ಅವಶ್ಯಕ ಸಾಮಾಗ್ರಿಗಳ (ತಿದ್ದುಪಡಿ) ಸುಗ್ರಿವಾಜ್ಞೆ, ರೈತರ (ಸಶಕ್ತಿಕರಣ ಹಾಗೂ ರಕ್ಷಣೆ) ಬೆಲೆ ಖಾತರಿ ಒಪ್ಪಂದ ಹಾಗೂ ಕೃಷಿ ಸೇವೆಗಳ ಸುಗ್ರಿವಾಜ್ಞೆ-2020, ರೈತರ ಉತ್ಪನ್ನ ವ್ಯಾಪಾರ ಹಾಗೂ ವಾಣಿಜ್ಯ (ಉತ್ತೇಜನ ಹಾಗೂ ಸೌಕರ್ಯ) ಸುಗ್ರಿವಾಜ್ಞೆಗಳನ್ನು ಕೇಂದ್ರ ಸರ್ಕಾರ ಸಾಂಕ್ರಾಮಿಕ ಕಾಲದಲ್ಲಿ ಜಾರಿಗೊಳಿಸಿದೆ. ಅವುಗಳನ್ನು ಸಂಸತ್ತಿನ ಉಭಯ ಸದನಗಳಲ್ಲಿ ಪರಿಚಯಿಸಿ, ಅನುಮೋದಿಸಲು ಸಿದ್ದತೆ ನಡೆಸಿದೆ. ಆದರೆ ದೇಶಾದ್ಯಂತ ರೈತರು “ಈ ಸುಗ್ರಿವಾಜ್ಞೆಗಳು ಕೃಷಿಯನ್ನು ಕಾರ್ಪೋರೇಟ್ ಕೈಗೆ ಒಪ್ಪಿಸುವ ಹುನ್ನಾರವಾಗಿದ್ದು, ಒಂದು ವೇಳೆ ಅಂಗೀಕಾರಗೊಂಡಲ್ಲಿ ರೈತರು ತಮ್ಮ ಸ್ವಾಯುತ್ತತೆಯನ್ನು ಕಳೆದುಕೊಳ್ಳಲಿದ್ದಾರೆ” ಎಂದು ಆರೋಪಿಸಿದ್ದಾರೆ.

ರೈತರ ಉತ್ಪನ್ನ ವ್ಯಾಪಾರ ಹಾಗೂ ವಾಣಿಜ್ಯ (ಉತ್ತೇಜನ ಹಾಗೂ ಸೌಕರ್ಯ) ಸುಗ್ರಿವಾಜ್ಞೆಯು ರಾಜ್ಯಗಳ ಎಪಿಎಂಸಿ ಕಾಯ್ದೆಗಿಂತಲೂ ಮೇಲುಗೈ ಸಾಧಿಸುತ್ತದೆ. ಆಗ ಯಾವುದೇ ರಾಜ್ಯಗಳಲ್ಲಿ ಬೇಕಾದರೂ ಮುಕ್ತವಾಗಿ ಮಾರಬಹುದಾದ ವ್ಯವಸ್ಥೆಯಿಂದಾಗಿ ಸ್ಥಳೀಯ ಮತ್ತು ಸಣ್ಣ ಪುಟ್ಟ ರೈತರು ತೀವ್ರ ಸಂಕಷ್ಟಕ್ಕೊಳಗಾಗುತ್ತಾರೆ ಎಂಬುದು ರೈತರ ಆತಂಕವಾಗಿದೆ. ಇದು ಈಗಿನ ಮಂಡಿ ಮಾರುಕಟ್ಟೆ ವ್ಯವಸ್ತೆಯನ್ನು ಸಂಪೂರ್ಣವಾಗಿ ನಾಶಗೊಳಿಸಿ ರೈತರೆಲ್ಲರೂ ಕನಿಷ್ಠ ಬೆಂಬಲ ಬೆಲೆಗಿಂತಲೂ ಕಡಿಮೆ ಬೆಲೆಗೆ ತಮ್ಮ ಉತ್ಪನ್ನಗಳನ್ನು ಮಾರಬೇಕಾದ ದುಸ್ಥಿತಿಗೆ ತಲುಪುತ್ತಾರೆ ಎಂಬುದು ರೈತರ ಚಿಂತೆಯಾಗಿದೆ.


ಇದನ್ನೂ ಓದಿ: ತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ!


ಆದರೆ ಕೇಂದ್ರ ಸರ್ಕಾರ ಇದು ರೈತರು ತಮ್ಮ ಬೆಳೆಗಳನ್ನು ಸ್ಪರ್ಧಾತ್ಮಕ ಬೆಲೆಗೆ ಮಾರುವ ಅವಕಾಶ ನೀಡುವುದರಿಂದ ಇದು ರೈತ ಪರ ಎಂದು ಘೋಷಿಸಿದೆ. ಉತ್ಪಾದನೆ, ಸಾಗಾಟ, ಶೇಖರಣೆ ಮತ್ತು ಮಾರುಕಟ್ಟೆ ಸೇರಿದಂತೆ ಎಲ್ಲಾ ವಿಚಾರಗಳಿಗೂ ವಿದೇಶಿ ಹೂಡಿಕೆಯನ್ನು ಆಕರ್ಷಿಸುವ ಮೂಲಕ ಗುತ್ತಿಗೆ ಕೃಷಿಯನ್ನು ಪ್ರೋತ್ಸಾಹಿಸಲಾಗುತ್ತಿದೆ. ಇದು ರೈತರಿಗೆ ವರವಾಗಿ ಪರಿಣಮಿಸಲಿದೆ ಎಂಬುದು ಕೇಂದ್ರದ ವಾದವಾಗಿದೆ.

ರೈತರು ಕೇಂದ್ರ ವಾದವನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದು, ದೊಡ್ಡ ದೊಡ್ಡ ಕಾರ್ಪೋರೇಟ್‌ಗಳಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎಂದು ಕಿಡಿಕಾರಿದ್ದಾರೆ. ಗುರುವಾರದಿಂದ ಪ್ರತಿಭಟನೆ ಆರಂಭಿಸಿರುವ ಅವರು ಯಾವುದೇ ಕಾರಣಕ್ಕೂ ಸುಗ್ರೀವಾಜ್ಞೆ ಅಂಗೀಕಾರವಾಗಬಾರದು ಎಂದು ಪಟ್ಟು ಹಿಡಿದಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ ನೇತೃತ್ವದಲ್ಲಿ ರೈತರು ಹರಿಯಾಣದ ಕುರುಕ್ಷೇತ್ರದಲ್ಲಿ ಹೆದ್ದಾರಿಗಳನ್ನು ಬಂದ್ ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹರಿಯಾಣ ಪೊಲೀಸರು ಲಾಠಿಚಾರ್ಜ್ ಮಾಡಿ ಪ್ರತಿಭಟನೆ ಹತ್ತಿಕ್ಕಿದ್ದಾರೆ. ಹರಿಯಾಣದ ಬಿಜೆಪಿ ಮುಖ್ಯಸ್ಥ ಓಂ ಪ್ರಕಾಶ್ ಧನ್ಕಾರ್‌ರೊಂದಿಗೆ ಹಲವು ಸಂಸದರು ಪ್ರತಿಭಟನಾನಿರತ ರೈತರನ್ನು ಮಾತನಾಡಿಸಿ ಅವರ ಮನವೊಲಿಸುವ ವಿಫಲ ಯತ್ನ ನಡೆಸಿದ್ದಾರೆ.

ಈ ಕುರಿತು ಹರಿಯಾಣದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಭೂಪೇಂದರ್ ಸಿಂಗ್ ಹೂಡಾ ಮಾತನಾಡಿ “ಇದು ರೈತರ ಹಿತಾಸಕ್ತಿಗಳಿಗೆ ವಿರುದ್ಧವಿರುವ ಸುಗ್ರಿವಾಜ್ಞೆಯಾಗಿದೆ. ಕೇಂದ್ರಕ್ಕೆ ನಿಜಕ್ಕೂ ರೈತರ ಬಗ್ಗೆ ಕಾಳಜಿಯಿದ್ದರೆ ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ಯಾವುದೇ ಉತ್ಪನ್ನಗಳನ್ನು ಕೊಳ್ಳುವಂತಿಲ್ಲ ಎಂಬ ಸುಗ್ರಿವಾಜ್ಞೆ ತರಲಿ” ಎಂದು ಆಗ್ರಹಿಸಿದ್ದಾರೆ.

ಈ ಮುಂಚೆಯೇ ಕರ್ನಾಟಕದಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಾಗ ರಾಜ್ಯದ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇನ್ನು ನಾಳೆಯಿಂದ ಅಧಿವೇಶನ ಆರಂಭವಾಗಲಿದ್ದು ದೇಶಾದ್ಯಂತ ರೈತರು ಬೀದಿಗಳಿಯುವ ಸಾಧ್ಯತೆಯಿದೆ.


ಇದನ್ನೂ ಓದಿ: ಸಿದ್ದರಾಮಯ್ಯ ವಿಶೇಷ ಸಂದರ್ಶನ: ನಾನು ಸಿಎಂ ಆಗಿದ್ದಿದ್ದರೆ ಈ ಜನದ್ರೋಹಿ ಸುಗ್ರೀವಾಜ್ಞೆ ತರಲ್ಲ ಅಂತ ಕೇಂದ್ರದ ಮುಖಕ್ಕೆ ಹೇಳ್ತಿದ್ದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...