Homeಮುಖಪುಟರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ಇದು ಈಗಿನ ಮಂಡಿ ಮಾರುಕಟ್ಟೆ ವ್ಯವಸ್ತೆಯನ್ನು ಸಂಪೂರ್ಣವಾಗಿ ನಾಶಗೊಳಿಸಿ ರೈತರು ಕನಿಷ್ಠ ಬೆಂಬಲ ಬೆಲೆಗಿಂತಲೂ ಕಡಿಮೆ ಬೆಲೆಗೆ ತಮ್ಮ ಉತ್ಪನ್ನಗಳನ್ನು ಮಾರಬೇಕಾದ ದುಸ್ಥಿತಿಗೆ ತಲುಪುತ್ತಾರೆ ಎಂಬುದು ರೈತರ ಚಿಂತೆಯಾಗಿದೆ.

- Advertisement -
- Advertisement -

ಸೋಮವಾರದಿಂದ ಆರಂಭವಾಗಲಿರುವ ಮಾನ್ಸೂನ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಅಂಗೀಕರಿಸಲು ಸಿದ್ಧವಾಗಿರುವ 3 ಸುಗ್ರಿವಾಜ್ಞೆಗಳ ವಿರುದ್ಧ ಪಂಜಾಬ್, ಉತ್ತರ ಪ್ರದೇಶ ಮತ್ತು ಹರಿಯಾಣದ ರೈತರು ತಿರುಗಿಬಿದ್ದಿದ್ದಾರೆ. ಅಧಿವೇಶನಕ್ಕೂ ಮುನ್ನವೇ ಕೊರೊನಾ ಸಾಂಕ್ರಾಮಿಕದ ನಡುವೆಯೂ ಭಾರೀ ಪ್ರತಿಭಟನೆ ನಡೆಸಿ ತಮ್ಮ ವಿರೋಧ ದಾಖಲಿಸಿದ್ದಾರೆ.

ಅವಶ್ಯಕ ಸಾಮಾಗ್ರಿಗಳ (ತಿದ್ದುಪಡಿ) ಸುಗ್ರಿವಾಜ್ಞೆ, ರೈತರ (ಸಶಕ್ತಿಕರಣ ಹಾಗೂ ರಕ್ಷಣೆ) ಬೆಲೆ ಖಾತರಿ ಒಪ್ಪಂದ ಹಾಗೂ ಕೃಷಿ ಸೇವೆಗಳ ಸುಗ್ರಿವಾಜ್ಞೆ-2020, ರೈತರ ಉತ್ಪನ್ನ ವ್ಯಾಪಾರ ಹಾಗೂ ವಾಣಿಜ್ಯ (ಉತ್ತೇಜನ ಹಾಗೂ ಸೌಕರ್ಯ) ಸುಗ್ರಿವಾಜ್ಞೆಗಳನ್ನು ಕೇಂದ್ರ ಸರ್ಕಾರ ಸಾಂಕ್ರಾಮಿಕ ಕಾಲದಲ್ಲಿ ಜಾರಿಗೊಳಿಸಿದೆ. ಅವುಗಳನ್ನು ಸಂಸತ್ತಿನ ಉಭಯ ಸದನಗಳಲ್ಲಿ ಪರಿಚಯಿಸಿ, ಅನುಮೋದಿಸಲು ಸಿದ್ದತೆ ನಡೆಸಿದೆ. ಆದರೆ ದೇಶಾದ್ಯಂತ ರೈತರು “ಈ ಸುಗ್ರಿವಾಜ್ಞೆಗಳು ಕೃಷಿಯನ್ನು ಕಾರ್ಪೋರೇಟ್ ಕೈಗೆ ಒಪ್ಪಿಸುವ ಹುನ್ನಾರವಾಗಿದ್ದು, ಒಂದು ವೇಳೆ ಅಂಗೀಕಾರಗೊಂಡಲ್ಲಿ ರೈತರು ತಮ್ಮ ಸ್ವಾಯುತ್ತತೆಯನ್ನು ಕಳೆದುಕೊಳ್ಳಲಿದ್ದಾರೆ” ಎಂದು ಆರೋಪಿಸಿದ್ದಾರೆ.

ರೈತರ ಉತ್ಪನ್ನ ವ್ಯಾಪಾರ ಹಾಗೂ ವಾಣಿಜ್ಯ (ಉತ್ತೇಜನ ಹಾಗೂ ಸೌಕರ್ಯ) ಸುಗ್ರಿವಾಜ್ಞೆಯು ರಾಜ್ಯಗಳ ಎಪಿಎಂಸಿ ಕಾಯ್ದೆಗಿಂತಲೂ ಮೇಲುಗೈ ಸಾಧಿಸುತ್ತದೆ. ಆಗ ಯಾವುದೇ ರಾಜ್ಯಗಳಲ್ಲಿ ಬೇಕಾದರೂ ಮುಕ್ತವಾಗಿ ಮಾರಬಹುದಾದ ವ್ಯವಸ್ಥೆಯಿಂದಾಗಿ ಸ್ಥಳೀಯ ಮತ್ತು ಸಣ್ಣ ಪುಟ್ಟ ರೈತರು ತೀವ್ರ ಸಂಕಷ್ಟಕ್ಕೊಳಗಾಗುತ್ತಾರೆ ಎಂಬುದು ರೈತರ ಆತಂಕವಾಗಿದೆ. ಇದು ಈಗಿನ ಮಂಡಿ ಮಾರುಕಟ್ಟೆ ವ್ಯವಸ್ತೆಯನ್ನು ಸಂಪೂರ್ಣವಾಗಿ ನಾಶಗೊಳಿಸಿ ರೈತರೆಲ್ಲರೂ ಕನಿಷ್ಠ ಬೆಂಬಲ ಬೆಲೆಗಿಂತಲೂ ಕಡಿಮೆ ಬೆಲೆಗೆ ತಮ್ಮ ಉತ್ಪನ್ನಗಳನ್ನು ಮಾರಬೇಕಾದ ದುಸ್ಥಿತಿಗೆ ತಲುಪುತ್ತಾರೆ ಎಂಬುದು ರೈತರ ಚಿಂತೆಯಾಗಿದೆ.


ಇದನ್ನೂ ಓದಿ: ತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ!


ಆದರೆ ಕೇಂದ್ರ ಸರ್ಕಾರ ಇದು ರೈತರು ತಮ್ಮ ಬೆಳೆಗಳನ್ನು ಸ್ಪರ್ಧಾತ್ಮಕ ಬೆಲೆಗೆ ಮಾರುವ ಅವಕಾಶ ನೀಡುವುದರಿಂದ ಇದು ರೈತ ಪರ ಎಂದು ಘೋಷಿಸಿದೆ. ಉತ್ಪಾದನೆ, ಸಾಗಾಟ, ಶೇಖರಣೆ ಮತ್ತು ಮಾರುಕಟ್ಟೆ ಸೇರಿದಂತೆ ಎಲ್ಲಾ ವಿಚಾರಗಳಿಗೂ ವಿದೇಶಿ ಹೂಡಿಕೆಯನ್ನು ಆಕರ್ಷಿಸುವ ಮೂಲಕ ಗುತ್ತಿಗೆ ಕೃಷಿಯನ್ನು ಪ್ರೋತ್ಸಾಹಿಸಲಾಗುತ್ತಿದೆ. ಇದು ರೈತರಿಗೆ ವರವಾಗಿ ಪರಿಣಮಿಸಲಿದೆ ಎಂಬುದು ಕೇಂದ್ರದ ವಾದವಾಗಿದೆ.

ರೈತರು ಕೇಂದ್ರ ವಾದವನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದು, ದೊಡ್ಡ ದೊಡ್ಡ ಕಾರ್ಪೋರೇಟ್‌ಗಳಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎಂದು ಕಿಡಿಕಾರಿದ್ದಾರೆ. ಗುರುವಾರದಿಂದ ಪ್ರತಿಭಟನೆ ಆರಂಭಿಸಿರುವ ಅವರು ಯಾವುದೇ ಕಾರಣಕ್ಕೂ ಸುಗ್ರೀವಾಜ್ಞೆ ಅಂಗೀಕಾರವಾಗಬಾರದು ಎಂದು ಪಟ್ಟು ಹಿಡಿದಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ ನೇತೃತ್ವದಲ್ಲಿ ರೈತರು ಹರಿಯಾಣದ ಕುರುಕ್ಷೇತ್ರದಲ್ಲಿ ಹೆದ್ದಾರಿಗಳನ್ನು ಬಂದ್ ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹರಿಯಾಣ ಪೊಲೀಸರು ಲಾಠಿಚಾರ್ಜ್ ಮಾಡಿ ಪ್ರತಿಭಟನೆ ಹತ್ತಿಕ್ಕಿದ್ದಾರೆ. ಹರಿಯಾಣದ ಬಿಜೆಪಿ ಮುಖ್ಯಸ್ಥ ಓಂ ಪ್ರಕಾಶ್ ಧನ್ಕಾರ್‌ರೊಂದಿಗೆ ಹಲವು ಸಂಸದರು ಪ್ರತಿಭಟನಾನಿರತ ರೈತರನ್ನು ಮಾತನಾಡಿಸಿ ಅವರ ಮನವೊಲಿಸುವ ವಿಫಲ ಯತ್ನ ನಡೆಸಿದ್ದಾರೆ.

ಈ ಕುರಿತು ಹರಿಯಾಣದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಭೂಪೇಂದರ್ ಸಿಂಗ್ ಹೂಡಾ ಮಾತನಾಡಿ “ಇದು ರೈತರ ಹಿತಾಸಕ್ತಿಗಳಿಗೆ ವಿರುದ್ಧವಿರುವ ಸುಗ್ರಿವಾಜ್ಞೆಯಾಗಿದೆ. ಕೇಂದ್ರಕ್ಕೆ ನಿಜಕ್ಕೂ ರೈತರ ಬಗ್ಗೆ ಕಾಳಜಿಯಿದ್ದರೆ ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ಯಾವುದೇ ಉತ್ಪನ್ನಗಳನ್ನು ಕೊಳ್ಳುವಂತಿಲ್ಲ ಎಂಬ ಸುಗ್ರಿವಾಜ್ಞೆ ತರಲಿ” ಎಂದು ಆಗ್ರಹಿಸಿದ್ದಾರೆ.

ಈ ಮುಂಚೆಯೇ ಕರ್ನಾಟಕದಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಾಗ ರಾಜ್ಯದ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇನ್ನು ನಾಳೆಯಿಂದ ಅಧಿವೇಶನ ಆರಂಭವಾಗಲಿದ್ದು ದೇಶಾದ್ಯಂತ ರೈತರು ಬೀದಿಗಳಿಯುವ ಸಾಧ್ಯತೆಯಿದೆ.


ಇದನ್ನೂ ಓದಿ: ಸಿದ್ದರಾಮಯ್ಯ ವಿಶೇಷ ಸಂದರ್ಶನ: ನಾನು ಸಿಎಂ ಆಗಿದ್ದಿದ್ದರೆ ಈ ಜನದ್ರೋಹಿ ಸುಗ್ರೀವಾಜ್ಞೆ ತರಲ್ಲ ಅಂತ ಕೇಂದ್ರದ ಮುಖಕ್ಕೆ ಹೇಳ್ತಿದ್ದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...