Homeಮುಖಪುಟರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ಇದು ಈಗಿನ ಮಂಡಿ ಮಾರುಕಟ್ಟೆ ವ್ಯವಸ್ತೆಯನ್ನು ಸಂಪೂರ್ಣವಾಗಿ ನಾಶಗೊಳಿಸಿ ರೈತರು ಕನಿಷ್ಠ ಬೆಂಬಲ ಬೆಲೆಗಿಂತಲೂ ಕಡಿಮೆ ಬೆಲೆಗೆ ತಮ್ಮ ಉತ್ಪನ್ನಗಳನ್ನು ಮಾರಬೇಕಾದ ದುಸ್ಥಿತಿಗೆ ತಲುಪುತ್ತಾರೆ ಎಂಬುದು ರೈತರ ಚಿಂತೆಯಾಗಿದೆ.

- Advertisement -
- Advertisement -

ಸೋಮವಾರದಿಂದ ಆರಂಭವಾಗಲಿರುವ ಮಾನ್ಸೂನ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಅಂಗೀಕರಿಸಲು ಸಿದ್ಧವಾಗಿರುವ 3 ಸುಗ್ರಿವಾಜ್ಞೆಗಳ ವಿರುದ್ಧ ಪಂಜಾಬ್, ಉತ್ತರ ಪ್ರದೇಶ ಮತ್ತು ಹರಿಯಾಣದ ರೈತರು ತಿರುಗಿಬಿದ್ದಿದ್ದಾರೆ. ಅಧಿವೇಶನಕ್ಕೂ ಮುನ್ನವೇ ಕೊರೊನಾ ಸಾಂಕ್ರಾಮಿಕದ ನಡುವೆಯೂ ಭಾರೀ ಪ್ರತಿಭಟನೆ ನಡೆಸಿ ತಮ್ಮ ವಿರೋಧ ದಾಖಲಿಸಿದ್ದಾರೆ.

ಅವಶ್ಯಕ ಸಾಮಾಗ್ರಿಗಳ (ತಿದ್ದುಪಡಿ) ಸುಗ್ರಿವಾಜ್ಞೆ, ರೈತರ (ಸಶಕ್ತಿಕರಣ ಹಾಗೂ ರಕ್ಷಣೆ) ಬೆಲೆ ಖಾತರಿ ಒಪ್ಪಂದ ಹಾಗೂ ಕೃಷಿ ಸೇವೆಗಳ ಸುಗ್ರಿವಾಜ್ಞೆ-2020, ರೈತರ ಉತ್ಪನ್ನ ವ್ಯಾಪಾರ ಹಾಗೂ ವಾಣಿಜ್ಯ (ಉತ್ತೇಜನ ಹಾಗೂ ಸೌಕರ್ಯ) ಸುಗ್ರಿವಾಜ್ಞೆಗಳನ್ನು ಕೇಂದ್ರ ಸರ್ಕಾರ ಸಾಂಕ್ರಾಮಿಕ ಕಾಲದಲ್ಲಿ ಜಾರಿಗೊಳಿಸಿದೆ. ಅವುಗಳನ್ನು ಸಂಸತ್ತಿನ ಉಭಯ ಸದನಗಳಲ್ಲಿ ಪರಿಚಯಿಸಿ, ಅನುಮೋದಿಸಲು ಸಿದ್ದತೆ ನಡೆಸಿದೆ. ಆದರೆ ದೇಶಾದ್ಯಂತ ರೈತರು “ಈ ಸುಗ್ರಿವಾಜ್ಞೆಗಳು ಕೃಷಿಯನ್ನು ಕಾರ್ಪೋರೇಟ್ ಕೈಗೆ ಒಪ್ಪಿಸುವ ಹುನ್ನಾರವಾಗಿದ್ದು, ಒಂದು ವೇಳೆ ಅಂಗೀಕಾರಗೊಂಡಲ್ಲಿ ರೈತರು ತಮ್ಮ ಸ್ವಾಯುತ್ತತೆಯನ್ನು ಕಳೆದುಕೊಳ್ಳಲಿದ್ದಾರೆ” ಎಂದು ಆರೋಪಿಸಿದ್ದಾರೆ.

ರೈತರ ಉತ್ಪನ್ನ ವ್ಯಾಪಾರ ಹಾಗೂ ವಾಣಿಜ್ಯ (ಉತ್ತೇಜನ ಹಾಗೂ ಸೌಕರ್ಯ) ಸುಗ್ರಿವಾಜ್ಞೆಯು ರಾಜ್ಯಗಳ ಎಪಿಎಂಸಿ ಕಾಯ್ದೆಗಿಂತಲೂ ಮೇಲುಗೈ ಸಾಧಿಸುತ್ತದೆ. ಆಗ ಯಾವುದೇ ರಾಜ್ಯಗಳಲ್ಲಿ ಬೇಕಾದರೂ ಮುಕ್ತವಾಗಿ ಮಾರಬಹುದಾದ ವ್ಯವಸ್ಥೆಯಿಂದಾಗಿ ಸ್ಥಳೀಯ ಮತ್ತು ಸಣ್ಣ ಪುಟ್ಟ ರೈತರು ತೀವ್ರ ಸಂಕಷ್ಟಕ್ಕೊಳಗಾಗುತ್ತಾರೆ ಎಂಬುದು ರೈತರ ಆತಂಕವಾಗಿದೆ. ಇದು ಈಗಿನ ಮಂಡಿ ಮಾರುಕಟ್ಟೆ ವ್ಯವಸ್ತೆಯನ್ನು ಸಂಪೂರ್ಣವಾಗಿ ನಾಶಗೊಳಿಸಿ ರೈತರೆಲ್ಲರೂ ಕನಿಷ್ಠ ಬೆಂಬಲ ಬೆಲೆಗಿಂತಲೂ ಕಡಿಮೆ ಬೆಲೆಗೆ ತಮ್ಮ ಉತ್ಪನ್ನಗಳನ್ನು ಮಾರಬೇಕಾದ ದುಸ್ಥಿತಿಗೆ ತಲುಪುತ್ತಾರೆ ಎಂಬುದು ರೈತರ ಚಿಂತೆಯಾಗಿದೆ.


ಇದನ್ನೂ ಓದಿ: ತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ!


ಆದರೆ ಕೇಂದ್ರ ಸರ್ಕಾರ ಇದು ರೈತರು ತಮ್ಮ ಬೆಳೆಗಳನ್ನು ಸ್ಪರ್ಧಾತ್ಮಕ ಬೆಲೆಗೆ ಮಾರುವ ಅವಕಾಶ ನೀಡುವುದರಿಂದ ಇದು ರೈತ ಪರ ಎಂದು ಘೋಷಿಸಿದೆ. ಉತ್ಪಾದನೆ, ಸಾಗಾಟ, ಶೇಖರಣೆ ಮತ್ತು ಮಾರುಕಟ್ಟೆ ಸೇರಿದಂತೆ ಎಲ್ಲಾ ವಿಚಾರಗಳಿಗೂ ವಿದೇಶಿ ಹೂಡಿಕೆಯನ್ನು ಆಕರ್ಷಿಸುವ ಮೂಲಕ ಗುತ್ತಿಗೆ ಕೃಷಿಯನ್ನು ಪ್ರೋತ್ಸಾಹಿಸಲಾಗುತ್ತಿದೆ. ಇದು ರೈತರಿಗೆ ವರವಾಗಿ ಪರಿಣಮಿಸಲಿದೆ ಎಂಬುದು ಕೇಂದ್ರದ ವಾದವಾಗಿದೆ.

ರೈತರು ಕೇಂದ್ರ ವಾದವನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದು, ದೊಡ್ಡ ದೊಡ್ಡ ಕಾರ್ಪೋರೇಟ್‌ಗಳಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎಂದು ಕಿಡಿಕಾರಿದ್ದಾರೆ. ಗುರುವಾರದಿಂದ ಪ್ರತಿಭಟನೆ ಆರಂಭಿಸಿರುವ ಅವರು ಯಾವುದೇ ಕಾರಣಕ್ಕೂ ಸುಗ್ರೀವಾಜ್ಞೆ ಅಂಗೀಕಾರವಾಗಬಾರದು ಎಂದು ಪಟ್ಟು ಹಿಡಿದಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ ನೇತೃತ್ವದಲ್ಲಿ ರೈತರು ಹರಿಯಾಣದ ಕುರುಕ್ಷೇತ್ರದಲ್ಲಿ ಹೆದ್ದಾರಿಗಳನ್ನು ಬಂದ್ ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹರಿಯಾಣ ಪೊಲೀಸರು ಲಾಠಿಚಾರ್ಜ್ ಮಾಡಿ ಪ್ರತಿಭಟನೆ ಹತ್ತಿಕ್ಕಿದ್ದಾರೆ. ಹರಿಯಾಣದ ಬಿಜೆಪಿ ಮುಖ್ಯಸ್ಥ ಓಂ ಪ್ರಕಾಶ್ ಧನ್ಕಾರ್‌ರೊಂದಿಗೆ ಹಲವು ಸಂಸದರು ಪ್ರತಿಭಟನಾನಿರತ ರೈತರನ್ನು ಮಾತನಾಡಿಸಿ ಅವರ ಮನವೊಲಿಸುವ ವಿಫಲ ಯತ್ನ ನಡೆಸಿದ್ದಾರೆ.

ಈ ಕುರಿತು ಹರಿಯಾಣದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಭೂಪೇಂದರ್ ಸಿಂಗ್ ಹೂಡಾ ಮಾತನಾಡಿ “ಇದು ರೈತರ ಹಿತಾಸಕ್ತಿಗಳಿಗೆ ವಿರುದ್ಧವಿರುವ ಸುಗ್ರಿವಾಜ್ಞೆಯಾಗಿದೆ. ಕೇಂದ್ರಕ್ಕೆ ನಿಜಕ್ಕೂ ರೈತರ ಬಗ್ಗೆ ಕಾಳಜಿಯಿದ್ದರೆ ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ಯಾವುದೇ ಉತ್ಪನ್ನಗಳನ್ನು ಕೊಳ್ಳುವಂತಿಲ್ಲ ಎಂಬ ಸುಗ್ರಿವಾಜ್ಞೆ ತರಲಿ” ಎಂದು ಆಗ್ರಹಿಸಿದ್ದಾರೆ.

ಈ ಮುಂಚೆಯೇ ಕರ್ನಾಟಕದಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಾಗ ರಾಜ್ಯದ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇನ್ನು ನಾಳೆಯಿಂದ ಅಧಿವೇಶನ ಆರಂಭವಾಗಲಿದ್ದು ದೇಶಾದ್ಯಂತ ರೈತರು ಬೀದಿಗಳಿಯುವ ಸಾಧ್ಯತೆಯಿದೆ.


ಇದನ್ನೂ ಓದಿ: ಸಿದ್ದರಾಮಯ್ಯ ವಿಶೇಷ ಸಂದರ್ಶನ: ನಾನು ಸಿಎಂ ಆಗಿದ್ದಿದ್ದರೆ ಈ ಜನದ್ರೋಹಿ ಸುಗ್ರೀವಾಜ್ಞೆ ತರಲ್ಲ ಅಂತ ಕೇಂದ್ರದ ಮುಖಕ್ಕೆ ಹೇಳ್ತಿದ್ದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...