Homeಮುಖಪುಟ''ರಾಮಚರಿತಮಾನಸ್’ ಮಹಾಕಾವ್ಯ ದ್ವೇಷ ಹರಡುತ್ತದೆ' ಹೇಳಿಕೆಗೆ ಕ್ಷಮೆ ಕೇಳಲ್ಲ: ಸಚಿವ ಚಂದ್ರಶೇಖರ್

”ರಾಮಚರಿತಮಾನಸ್’ ಮಹಾಕಾವ್ಯ ದ್ವೇಷ ಹರಡುತ್ತದೆ’ ಹೇಳಿಕೆಗೆ ಕ್ಷಮೆ ಕೇಳಲ್ಲ: ಸಚಿವ ಚಂದ್ರಶೇಖರ್

- Advertisement -
- Advertisement -

‘ರಾಮಚರಿತಮಾನಸ್’ ಎನ್ನುವ ಹಿಂದೂ ಮಹಾಕಾವ್ಯವು  ದ್ವೇಷವನ್ನು ಹರಡತ್ತದೆ ಎಂದು ಬಿಹಾರ ಶಿಕ್ಷಣ ಸಚಿವ ಚಂದ್ರಶೇಖರ್ ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆಯು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಗುರುವಾರ ಮಾಧ್ಯಮಗಳ ಎದುರು ಮಾತನಾಡಿದ ಅವರು, ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ, ಯಾವುದೇ ಕಾರನಕ್ಕೂ ನಾನು ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿದ್ದಾರೆ.

“ಹಿಂದೂ ವಿರೋಧಿ ಹೇಳಿಕೆ ನೀಡಿರುವ ಸಚಿವ ಚಂದ್ರಶೇಖರ್ ಅವರು ಕ್ಷಮೆಯಾಚಿಸಬೇಕು ಮತ್ತು ಈ ಕೂಡಲೇ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು” ಎಂದು ಪ್ರತಿಪಕ್ಷ ಭಾರತೀಯ ಜನತಾ ಪಕ್ಷ, ಹಿಂದೂ ಸಂಘಟನೆಗಳು ಮತ್ತು ಹಿಂದೂ ಸಂತರು ಒತ್ತಾಯಿಸಿದ್ದಾರೆ. ಆದರೆ ಚಂದ್ರಶೇಖರ್ ಅವರು, “ನಾನು ನನ್ನ ಹೇಳಿಕೆಗೆ ಬದ್ಧನಾಗಿರುತ್ತೇನೆ, ನಾನು ಯಾವುದೇ ತಪ್ಪು ಮಾಡಿಲ್ಲ ಮತ್ತು ಅದಕ್ಕೆ ಕ್ಷಮೆಯಾಚಿಸುವ ಅಗತ್ಯವಿಲ್ಲ” ಎಂದು ಚಂದ್ರಶೇಖರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಹಿರಿಯ ನಾಯಕ ಚಂದ್ರಶೇಖರ್ ಅವರು ಬುಧವಾರ ಪಾಟ್ನಾ ಮೂಲದ ನಳಂದ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ತಮ್ಮ ಭಾಷಣದ ವೇಳೆ ಇಂತಹದ್ದೊಂದು ಹೇಳಿಕೆ ನೀಡುವ ಮೂಲಕ ಕೇಕೆಗಳಿಗೆ ಗುರಿಯಾಗಿದ್ದಾರೆ. ‘ಮನುಸ್ಮೃತಿ’ ಮತ್ತು ಆರ್‌ಎಸ್‌ಎಸ್ ಸಿದ್ಧಾಂತಿ ಎಂಎಸ್ ಗೋಳ್ವಾಲ್ಕರ್ ಅವರ ‘ಬಂಚ್ ಆಫ್ ಥಾಟ್ಸ್’ ಸಾಮಾಜಿಕ ವಿಭಜನೆಯನ್ನು ಸೃಷ್ಟಿಸಿದಂತೆಯೇ ‘ರಾಮಚರಿತ್ಮಾನಸ್’ ನಂತಹ ಧಾರ್ಮಿಕ ಗ್ರಂಥಗಳು ಕೂಡ ದ್ವೇಷವನ್ನು ಹರಡುತ್ತವೆ ಎಂದು ಅವರು ಪ್ರತಿಪಾದಿಸಿದರು.

ಕಾಲೇಜು ಅಧ್ಯಾಪಕರಾಗಿದ್ದ ಚಂದ್ರಶೇಖರ್ ಇದೀಗ ರಾಜಕಾರಣಿಯಾಗಿದ್ದಾರೆ. ತುಳಸಿದಾಸರು ಬರೆದ ‘ರಾಮಚರಿತಮಾನಗಳು’ ಕೃತಿಯಲ್ಲಿ ಕೆಳಜಾತಿಯ ಜನರು ಶಿಕ್ಷಣ ಪಡೆಯುವುದರಿಂದ ವಿಷಕಾರಿಯಾಗುತ್ತಾರೆ ಎಂದು ಹೇಳಿದ್ದಾರೆ. ಮಹಾಕಾವ್ಯದಿಂದ ಒಂದು ದ್ವಿಪದಿಯನ್ನು ಉಲ್ಲೇಖಿಸಿದ್ದು, “ಅದಮ್ ಜಾತಿ ಮೇ ವಿದ್ಯಾ ಪಾಯೇ, ಭಯತು ಯಥಾ ದೂಧ್ ಪಿಲಾಯೇ”. ಇದನ್ನು ಅನುವಾದಿಸಿದರೆ, “ಕೆಳಜಾತಿಯ ಜನರು ಶಿಕ್ಷಣವನ್ನು ಪಡೆದ ನಂತರ ವಿಷಕಾರಿಯಾಗುತ್ತಾರೆ, ಹಾಲನ್ನು ಸೇವಿಸಿದ ಹಾವಿನಂತಾಗುತ್ತಾರೆ” ಎಂದು ಅರ್ಥ ಬರುತ್ತದೆ. ಹಾಗಾಗಿಯೇ ಜನರು ಮನುಸ್ಮೃತಿಯನ್ನು ಸುಟ್ಟುಹಾಕಿದರು ಮತ್ತು ಅಂತಹ ಆಲೋಚನೆಗಳಿರುವ ಗುಂಪನ್ನು ವಿರೋಧಿಸಿದರು ಇದರಲ್ಲಿ ಹೊಸದೇನೂ ಇಲ್ಲ ಎಂದು ಅವರು ಹೇಳಿದರು.

ಸಚಿವ ಚಂದ್ರಶೇಖರ್ ಅವರ ಈ ಹೇಳಿಕೆಗೆ ಹಲವು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಅಷ್ಟೇ ಅಲ್ಲದೇ ಮತ್ತು ಸಾರ್ವಜನಿಕವಾಗಿ ಅವರು ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಸಂಜಯ್ ಜೈಸ್ವಾಲ್ ಅವರು, ಚಂದ್ರಶೇಖರ್ ಅವರು ಆರ್‌ಜೆಡಿಯ ಹಿಂದೂ ವಿರೋಧಿ ಸಂಪ್ರದಾಯವನ್ನು ಪ್ರತಿನಿಧಿಸುತ್ತಾರೆ. ಅವರು ಈ ರೀತಿಯ ಹೇಳಿಕೆ ಮೂಲಕ ತಮ್ಮ ಜ್ಞಾನದ ಕೊರತೆಯನ್ನು ಬಹಿರಂಗಪಡಿಸಿದ್ದಾರೆ. ಅವರು ದ್ವಿಪದಿಯನ್ನು ತಪ್ಪಾಗಿ ಉಲ್ಲೇಖಿಸಿದ್ದಾರೆ. ಅವರ ಹೇಳಿಕೆಯು ಕೋಟ್ಯಂತರ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸಿರುವುದರಿಂದ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ನಾವು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಒತ್ತಾಯಿಸುತ್ತೇವೆ” ಎಂದು ಜೈಸ್ವಾಲ್ ಹೇಳಿದರು.

ಬಿಜೆಪಿಯ ಹಿರಿಯ ನಾಯಕರಾದ ಸಾಮ್ರಾಟ್ ಚೌಧರಿ ಮತ್ತು ನೀರಜ್ ಕುಮಾರ್ ಬಬ್ಲು ಮಾತನಾಡಿ, ಚಂದ್ರಶೇಖರ್ ಮಾನಸಿಕ ಸಮತೋಲನ ಕಳೆದುಕೊಂಡಿರುವ ಕಾರಣ ಅವರಿಗೆ ಮಾನಸಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕಾಗಿದೆ ಎಂದು ಹೇಳಿದ್ದಾರೆ.

ಅಯೋಧ್ಯೆಯ ಹಿಂದೂ ಅರ್ಚಕ ಜಗದ್ಗುರು ಪರಮಹಂಸರು ಮಾತನಾಡಿ, ಸಚಿವರು ಸನಾತನೀಯರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಚಂದ್ರಶೇಖರ್ ಕ್ಷಮೆ ಯಾಚಿಸಬೇಕು ಮತ್ತು ಸಿಎಂ ನಿತೀಶ್ ಕುಮಾರ್ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಪರಮಹಂಸರು ಹೇಳಿದ್ದಾರೆ. ಆದರೆ ಈ ವರೆಗೂ ಆರ್‌ಜೆಡಿ, ಜೆಡಿಯು, ಕಾಂಗ್ರೆಸ್, ಎಡಪಕ್ಷಗಳು ಮತ್ತು ಎಚ್‌ಎಎಂ ಸೇರಿದಂತೆ ಆಡಳಿತಾರೂಢ ಮಹಾಘಟಬಂಧನ್ ನಾಯಕರು ಈ ವಿಷಯದ ಬಗ್ಗೆ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...