Homeಮುಖಪುಟ''ರಾಮಚರಿತಮಾನಸ್’ ಮಹಾಕಾವ್ಯ ದ್ವೇಷ ಹರಡುತ್ತದೆ' ಹೇಳಿಕೆಗೆ ಕ್ಷಮೆ ಕೇಳಲ್ಲ: ಸಚಿವ ಚಂದ್ರಶೇಖರ್

”ರಾಮಚರಿತಮಾನಸ್’ ಮಹಾಕಾವ್ಯ ದ್ವೇಷ ಹರಡುತ್ತದೆ’ ಹೇಳಿಕೆಗೆ ಕ್ಷಮೆ ಕೇಳಲ್ಲ: ಸಚಿವ ಚಂದ್ರಶೇಖರ್

- Advertisement -
- Advertisement -

‘ರಾಮಚರಿತಮಾನಸ್’ ಎನ್ನುವ ಹಿಂದೂ ಮಹಾಕಾವ್ಯವು  ದ್ವೇಷವನ್ನು ಹರಡತ್ತದೆ ಎಂದು ಬಿಹಾರ ಶಿಕ್ಷಣ ಸಚಿವ ಚಂದ್ರಶೇಖರ್ ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆಯು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಗುರುವಾರ ಮಾಧ್ಯಮಗಳ ಎದುರು ಮಾತನಾಡಿದ ಅವರು, ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ, ಯಾವುದೇ ಕಾರನಕ್ಕೂ ನಾನು ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿದ್ದಾರೆ.

“ಹಿಂದೂ ವಿರೋಧಿ ಹೇಳಿಕೆ ನೀಡಿರುವ ಸಚಿವ ಚಂದ್ರಶೇಖರ್ ಅವರು ಕ್ಷಮೆಯಾಚಿಸಬೇಕು ಮತ್ತು ಈ ಕೂಡಲೇ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು” ಎಂದು ಪ್ರತಿಪಕ್ಷ ಭಾರತೀಯ ಜನತಾ ಪಕ್ಷ, ಹಿಂದೂ ಸಂಘಟನೆಗಳು ಮತ್ತು ಹಿಂದೂ ಸಂತರು ಒತ್ತಾಯಿಸಿದ್ದಾರೆ. ಆದರೆ ಚಂದ್ರಶೇಖರ್ ಅವರು, “ನಾನು ನನ್ನ ಹೇಳಿಕೆಗೆ ಬದ್ಧನಾಗಿರುತ್ತೇನೆ, ನಾನು ಯಾವುದೇ ತಪ್ಪು ಮಾಡಿಲ್ಲ ಮತ್ತು ಅದಕ್ಕೆ ಕ್ಷಮೆಯಾಚಿಸುವ ಅಗತ್ಯವಿಲ್ಲ” ಎಂದು ಚಂದ್ರಶೇಖರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಹಿರಿಯ ನಾಯಕ ಚಂದ್ರಶೇಖರ್ ಅವರು ಬುಧವಾರ ಪಾಟ್ನಾ ಮೂಲದ ನಳಂದ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ತಮ್ಮ ಭಾಷಣದ ವೇಳೆ ಇಂತಹದ್ದೊಂದು ಹೇಳಿಕೆ ನೀಡುವ ಮೂಲಕ ಕೇಕೆಗಳಿಗೆ ಗುರಿಯಾಗಿದ್ದಾರೆ. ‘ಮನುಸ್ಮೃತಿ’ ಮತ್ತು ಆರ್‌ಎಸ್‌ಎಸ್ ಸಿದ್ಧಾಂತಿ ಎಂಎಸ್ ಗೋಳ್ವಾಲ್ಕರ್ ಅವರ ‘ಬಂಚ್ ಆಫ್ ಥಾಟ್ಸ್’ ಸಾಮಾಜಿಕ ವಿಭಜನೆಯನ್ನು ಸೃಷ್ಟಿಸಿದಂತೆಯೇ ‘ರಾಮಚರಿತ್ಮಾನಸ್’ ನಂತಹ ಧಾರ್ಮಿಕ ಗ್ರಂಥಗಳು ಕೂಡ ದ್ವೇಷವನ್ನು ಹರಡುತ್ತವೆ ಎಂದು ಅವರು ಪ್ರತಿಪಾದಿಸಿದರು.

ಕಾಲೇಜು ಅಧ್ಯಾಪಕರಾಗಿದ್ದ ಚಂದ್ರಶೇಖರ್ ಇದೀಗ ರಾಜಕಾರಣಿಯಾಗಿದ್ದಾರೆ. ತುಳಸಿದಾಸರು ಬರೆದ ‘ರಾಮಚರಿತಮಾನಗಳು’ ಕೃತಿಯಲ್ಲಿ ಕೆಳಜಾತಿಯ ಜನರು ಶಿಕ್ಷಣ ಪಡೆಯುವುದರಿಂದ ವಿಷಕಾರಿಯಾಗುತ್ತಾರೆ ಎಂದು ಹೇಳಿದ್ದಾರೆ. ಮಹಾಕಾವ್ಯದಿಂದ ಒಂದು ದ್ವಿಪದಿಯನ್ನು ಉಲ್ಲೇಖಿಸಿದ್ದು, “ಅದಮ್ ಜಾತಿ ಮೇ ವಿದ್ಯಾ ಪಾಯೇ, ಭಯತು ಯಥಾ ದೂಧ್ ಪಿಲಾಯೇ”. ಇದನ್ನು ಅನುವಾದಿಸಿದರೆ, “ಕೆಳಜಾತಿಯ ಜನರು ಶಿಕ್ಷಣವನ್ನು ಪಡೆದ ನಂತರ ವಿಷಕಾರಿಯಾಗುತ್ತಾರೆ, ಹಾಲನ್ನು ಸೇವಿಸಿದ ಹಾವಿನಂತಾಗುತ್ತಾರೆ” ಎಂದು ಅರ್ಥ ಬರುತ್ತದೆ. ಹಾಗಾಗಿಯೇ ಜನರು ಮನುಸ್ಮೃತಿಯನ್ನು ಸುಟ್ಟುಹಾಕಿದರು ಮತ್ತು ಅಂತಹ ಆಲೋಚನೆಗಳಿರುವ ಗುಂಪನ್ನು ವಿರೋಧಿಸಿದರು ಇದರಲ್ಲಿ ಹೊಸದೇನೂ ಇಲ್ಲ ಎಂದು ಅವರು ಹೇಳಿದರು.

ಸಚಿವ ಚಂದ್ರಶೇಖರ್ ಅವರ ಈ ಹೇಳಿಕೆಗೆ ಹಲವು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಅಷ್ಟೇ ಅಲ್ಲದೇ ಮತ್ತು ಸಾರ್ವಜನಿಕವಾಗಿ ಅವರು ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಸಂಜಯ್ ಜೈಸ್ವಾಲ್ ಅವರು, ಚಂದ್ರಶೇಖರ್ ಅವರು ಆರ್‌ಜೆಡಿಯ ಹಿಂದೂ ವಿರೋಧಿ ಸಂಪ್ರದಾಯವನ್ನು ಪ್ರತಿನಿಧಿಸುತ್ತಾರೆ. ಅವರು ಈ ರೀತಿಯ ಹೇಳಿಕೆ ಮೂಲಕ ತಮ್ಮ ಜ್ಞಾನದ ಕೊರತೆಯನ್ನು ಬಹಿರಂಗಪಡಿಸಿದ್ದಾರೆ. ಅವರು ದ್ವಿಪದಿಯನ್ನು ತಪ್ಪಾಗಿ ಉಲ್ಲೇಖಿಸಿದ್ದಾರೆ. ಅವರ ಹೇಳಿಕೆಯು ಕೋಟ್ಯಂತರ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸಿರುವುದರಿಂದ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ನಾವು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಒತ್ತಾಯಿಸುತ್ತೇವೆ” ಎಂದು ಜೈಸ್ವಾಲ್ ಹೇಳಿದರು.

ಬಿಜೆಪಿಯ ಹಿರಿಯ ನಾಯಕರಾದ ಸಾಮ್ರಾಟ್ ಚೌಧರಿ ಮತ್ತು ನೀರಜ್ ಕುಮಾರ್ ಬಬ್ಲು ಮಾತನಾಡಿ, ಚಂದ್ರಶೇಖರ್ ಮಾನಸಿಕ ಸಮತೋಲನ ಕಳೆದುಕೊಂಡಿರುವ ಕಾರಣ ಅವರಿಗೆ ಮಾನಸಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕಾಗಿದೆ ಎಂದು ಹೇಳಿದ್ದಾರೆ.

ಅಯೋಧ್ಯೆಯ ಹಿಂದೂ ಅರ್ಚಕ ಜಗದ್ಗುರು ಪರಮಹಂಸರು ಮಾತನಾಡಿ, ಸಚಿವರು ಸನಾತನೀಯರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಚಂದ್ರಶೇಖರ್ ಕ್ಷಮೆ ಯಾಚಿಸಬೇಕು ಮತ್ತು ಸಿಎಂ ನಿತೀಶ್ ಕುಮಾರ್ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಪರಮಹಂಸರು ಹೇಳಿದ್ದಾರೆ. ಆದರೆ ಈ ವರೆಗೂ ಆರ್‌ಜೆಡಿ, ಜೆಡಿಯು, ಕಾಂಗ್ರೆಸ್, ಎಡಪಕ್ಷಗಳು ಮತ್ತು ಎಚ್‌ಎಎಂ ಸೇರಿದಂತೆ ಆಡಳಿತಾರೂಢ ಮಹಾಘಟಬಂಧನ್ ನಾಯಕರು ಈ ವಿಷಯದ ಬಗ್ಗೆ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಧಾರವಾಡ ಅಖಾಡ: ಕೇಸರಿ ಕೋಟೆಯಲ್ಲೇ ಸಂಘೀ ಸೇನಾಧಿಪತಿ ಪ್ರಹ್ಲಾದ್ ಜೋಶಿಗೆ ನಡುಕ!!

0
ಪೇಡಾ ನಗರಿ, ಸಾಂಸ್ಕೃತಿಕ ರಾಜಧಾನಿ, ಕರ್ನಾಟಕದ ಆಕ್ಸ್‌ಫರ್ಡ್ ಎಂದೆಲ್ಲ ಗುರುತಿಸಲ್ಪಡುವ ಧಾರವಾಡ ನಗರ ಕೇಂದ್ರವಾಗಿರುವ ಧಾರವಾಡ ಲೋಕಸಭಾ ಕ್ಷೇತ್ರ ಮಲೆನಾಡು, ಅರೆಮಲೆನಾಡು ಮತ್ತು ಬಯಲುನಾಡುಗಳ ವಿಭಿನ್ನ ನೈಸರ್ಗಿಕ ಗುಣ-ಧರ್ಮದ ಸೀಮೆ. ಖಡಕ್ ಜವಾರಿ...