Homeಮುಖಪುಟ''ರಾಮಚರಿತಮಾನಸ್’ ಮಹಾಕಾವ್ಯ ದ್ವೇಷ ಹರಡುತ್ತದೆ' ಹೇಳಿಕೆಗೆ ಕ್ಷಮೆ ಕೇಳಲ್ಲ: ಸಚಿವ ಚಂದ್ರಶೇಖರ್

”ರಾಮಚರಿತಮಾನಸ್’ ಮಹಾಕಾವ್ಯ ದ್ವೇಷ ಹರಡುತ್ತದೆ’ ಹೇಳಿಕೆಗೆ ಕ್ಷಮೆ ಕೇಳಲ್ಲ: ಸಚಿವ ಚಂದ್ರಶೇಖರ್

- Advertisement -
- Advertisement -

‘ರಾಮಚರಿತಮಾನಸ್’ ಎನ್ನುವ ಹಿಂದೂ ಮಹಾಕಾವ್ಯವು  ದ್ವೇಷವನ್ನು ಹರಡತ್ತದೆ ಎಂದು ಬಿಹಾರ ಶಿಕ್ಷಣ ಸಚಿವ ಚಂದ್ರಶೇಖರ್ ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆಯು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಗುರುವಾರ ಮಾಧ್ಯಮಗಳ ಎದುರು ಮಾತನಾಡಿದ ಅವರು, ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ, ಯಾವುದೇ ಕಾರನಕ್ಕೂ ನಾನು ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿದ್ದಾರೆ.

“ಹಿಂದೂ ವಿರೋಧಿ ಹೇಳಿಕೆ ನೀಡಿರುವ ಸಚಿವ ಚಂದ್ರಶೇಖರ್ ಅವರು ಕ್ಷಮೆಯಾಚಿಸಬೇಕು ಮತ್ತು ಈ ಕೂಡಲೇ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು” ಎಂದು ಪ್ರತಿಪಕ್ಷ ಭಾರತೀಯ ಜನತಾ ಪಕ್ಷ, ಹಿಂದೂ ಸಂಘಟನೆಗಳು ಮತ್ತು ಹಿಂದೂ ಸಂತರು ಒತ್ತಾಯಿಸಿದ್ದಾರೆ. ಆದರೆ ಚಂದ್ರಶೇಖರ್ ಅವರು, “ನಾನು ನನ್ನ ಹೇಳಿಕೆಗೆ ಬದ್ಧನಾಗಿರುತ್ತೇನೆ, ನಾನು ಯಾವುದೇ ತಪ್ಪು ಮಾಡಿಲ್ಲ ಮತ್ತು ಅದಕ್ಕೆ ಕ್ಷಮೆಯಾಚಿಸುವ ಅಗತ್ಯವಿಲ್ಲ” ಎಂದು ಚಂದ್ರಶೇಖರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಹಿರಿಯ ನಾಯಕ ಚಂದ್ರಶೇಖರ್ ಅವರು ಬುಧವಾರ ಪಾಟ್ನಾ ಮೂಲದ ನಳಂದ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ತಮ್ಮ ಭಾಷಣದ ವೇಳೆ ಇಂತಹದ್ದೊಂದು ಹೇಳಿಕೆ ನೀಡುವ ಮೂಲಕ ಕೇಕೆಗಳಿಗೆ ಗುರಿಯಾಗಿದ್ದಾರೆ. ‘ಮನುಸ್ಮೃತಿ’ ಮತ್ತು ಆರ್‌ಎಸ್‌ಎಸ್ ಸಿದ್ಧಾಂತಿ ಎಂಎಸ್ ಗೋಳ್ವಾಲ್ಕರ್ ಅವರ ‘ಬಂಚ್ ಆಫ್ ಥಾಟ್ಸ್’ ಸಾಮಾಜಿಕ ವಿಭಜನೆಯನ್ನು ಸೃಷ್ಟಿಸಿದಂತೆಯೇ ‘ರಾಮಚರಿತ್ಮಾನಸ್’ ನಂತಹ ಧಾರ್ಮಿಕ ಗ್ರಂಥಗಳು ಕೂಡ ದ್ವೇಷವನ್ನು ಹರಡುತ್ತವೆ ಎಂದು ಅವರು ಪ್ರತಿಪಾದಿಸಿದರು.

ಕಾಲೇಜು ಅಧ್ಯಾಪಕರಾಗಿದ್ದ ಚಂದ್ರಶೇಖರ್ ಇದೀಗ ರಾಜಕಾರಣಿಯಾಗಿದ್ದಾರೆ. ತುಳಸಿದಾಸರು ಬರೆದ ‘ರಾಮಚರಿತಮಾನಗಳು’ ಕೃತಿಯಲ್ಲಿ ಕೆಳಜಾತಿಯ ಜನರು ಶಿಕ್ಷಣ ಪಡೆಯುವುದರಿಂದ ವಿಷಕಾರಿಯಾಗುತ್ತಾರೆ ಎಂದು ಹೇಳಿದ್ದಾರೆ. ಮಹಾಕಾವ್ಯದಿಂದ ಒಂದು ದ್ವಿಪದಿಯನ್ನು ಉಲ್ಲೇಖಿಸಿದ್ದು, “ಅದಮ್ ಜಾತಿ ಮೇ ವಿದ್ಯಾ ಪಾಯೇ, ಭಯತು ಯಥಾ ದೂಧ್ ಪಿಲಾಯೇ”. ಇದನ್ನು ಅನುವಾದಿಸಿದರೆ, “ಕೆಳಜಾತಿಯ ಜನರು ಶಿಕ್ಷಣವನ್ನು ಪಡೆದ ನಂತರ ವಿಷಕಾರಿಯಾಗುತ್ತಾರೆ, ಹಾಲನ್ನು ಸೇವಿಸಿದ ಹಾವಿನಂತಾಗುತ್ತಾರೆ” ಎಂದು ಅರ್ಥ ಬರುತ್ತದೆ. ಹಾಗಾಗಿಯೇ ಜನರು ಮನುಸ್ಮೃತಿಯನ್ನು ಸುಟ್ಟುಹಾಕಿದರು ಮತ್ತು ಅಂತಹ ಆಲೋಚನೆಗಳಿರುವ ಗುಂಪನ್ನು ವಿರೋಧಿಸಿದರು ಇದರಲ್ಲಿ ಹೊಸದೇನೂ ಇಲ್ಲ ಎಂದು ಅವರು ಹೇಳಿದರು.

ಸಚಿವ ಚಂದ್ರಶೇಖರ್ ಅವರ ಈ ಹೇಳಿಕೆಗೆ ಹಲವು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಅಷ್ಟೇ ಅಲ್ಲದೇ ಮತ್ತು ಸಾರ್ವಜನಿಕವಾಗಿ ಅವರು ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಸಂಜಯ್ ಜೈಸ್ವಾಲ್ ಅವರು, ಚಂದ್ರಶೇಖರ್ ಅವರು ಆರ್‌ಜೆಡಿಯ ಹಿಂದೂ ವಿರೋಧಿ ಸಂಪ್ರದಾಯವನ್ನು ಪ್ರತಿನಿಧಿಸುತ್ತಾರೆ. ಅವರು ಈ ರೀತಿಯ ಹೇಳಿಕೆ ಮೂಲಕ ತಮ್ಮ ಜ್ಞಾನದ ಕೊರತೆಯನ್ನು ಬಹಿರಂಗಪಡಿಸಿದ್ದಾರೆ. ಅವರು ದ್ವಿಪದಿಯನ್ನು ತಪ್ಪಾಗಿ ಉಲ್ಲೇಖಿಸಿದ್ದಾರೆ. ಅವರ ಹೇಳಿಕೆಯು ಕೋಟ್ಯಂತರ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸಿರುವುದರಿಂದ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ನಾವು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಒತ್ತಾಯಿಸುತ್ತೇವೆ” ಎಂದು ಜೈಸ್ವಾಲ್ ಹೇಳಿದರು.

ಬಿಜೆಪಿಯ ಹಿರಿಯ ನಾಯಕರಾದ ಸಾಮ್ರಾಟ್ ಚೌಧರಿ ಮತ್ತು ನೀರಜ್ ಕುಮಾರ್ ಬಬ್ಲು ಮಾತನಾಡಿ, ಚಂದ್ರಶೇಖರ್ ಮಾನಸಿಕ ಸಮತೋಲನ ಕಳೆದುಕೊಂಡಿರುವ ಕಾರಣ ಅವರಿಗೆ ಮಾನಸಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕಾಗಿದೆ ಎಂದು ಹೇಳಿದ್ದಾರೆ.

ಅಯೋಧ್ಯೆಯ ಹಿಂದೂ ಅರ್ಚಕ ಜಗದ್ಗುರು ಪರಮಹಂಸರು ಮಾತನಾಡಿ, ಸಚಿವರು ಸನಾತನೀಯರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಚಂದ್ರಶೇಖರ್ ಕ್ಷಮೆ ಯಾಚಿಸಬೇಕು ಮತ್ತು ಸಿಎಂ ನಿತೀಶ್ ಕುಮಾರ್ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಪರಮಹಂಸರು ಹೇಳಿದ್ದಾರೆ. ಆದರೆ ಈ ವರೆಗೂ ಆರ್‌ಜೆಡಿ, ಜೆಡಿಯು, ಕಾಂಗ್ರೆಸ್, ಎಡಪಕ್ಷಗಳು ಮತ್ತು ಎಚ್‌ಎಎಂ ಸೇರಿದಂತೆ ಆಡಳಿತಾರೂಢ ಮಹಾಘಟಬಂಧನ್ ನಾಯಕರು ಈ ವಿಷಯದ ಬಗ್ಗೆ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...