Homeಮುಖಪುಟ''ರಾಮಚರಿತಮಾನಸ್’ ಮಹಾಕಾವ್ಯ ದ್ವೇಷ ಹರಡುತ್ತದೆ' ಹೇಳಿಕೆಗೆ ಕ್ಷಮೆ ಕೇಳಲ್ಲ: ಸಚಿವ ಚಂದ್ರಶೇಖರ್

”ರಾಮಚರಿತಮಾನಸ್’ ಮಹಾಕಾವ್ಯ ದ್ವೇಷ ಹರಡುತ್ತದೆ’ ಹೇಳಿಕೆಗೆ ಕ್ಷಮೆ ಕೇಳಲ್ಲ: ಸಚಿವ ಚಂದ್ರಶೇಖರ್

- Advertisement -
- Advertisement -

‘ರಾಮಚರಿತಮಾನಸ್’ ಎನ್ನುವ ಹಿಂದೂ ಮಹಾಕಾವ್ಯವು  ದ್ವೇಷವನ್ನು ಹರಡತ್ತದೆ ಎಂದು ಬಿಹಾರ ಶಿಕ್ಷಣ ಸಚಿವ ಚಂದ್ರಶೇಖರ್ ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆಯು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಗುರುವಾರ ಮಾಧ್ಯಮಗಳ ಎದುರು ಮಾತನಾಡಿದ ಅವರು, ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ, ಯಾವುದೇ ಕಾರನಕ್ಕೂ ನಾನು ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿದ್ದಾರೆ.

“ಹಿಂದೂ ವಿರೋಧಿ ಹೇಳಿಕೆ ನೀಡಿರುವ ಸಚಿವ ಚಂದ್ರಶೇಖರ್ ಅವರು ಕ್ಷಮೆಯಾಚಿಸಬೇಕು ಮತ್ತು ಈ ಕೂಡಲೇ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು” ಎಂದು ಪ್ರತಿಪಕ್ಷ ಭಾರತೀಯ ಜನತಾ ಪಕ್ಷ, ಹಿಂದೂ ಸಂಘಟನೆಗಳು ಮತ್ತು ಹಿಂದೂ ಸಂತರು ಒತ್ತಾಯಿಸಿದ್ದಾರೆ. ಆದರೆ ಚಂದ್ರಶೇಖರ್ ಅವರು, “ನಾನು ನನ್ನ ಹೇಳಿಕೆಗೆ ಬದ್ಧನಾಗಿರುತ್ತೇನೆ, ನಾನು ಯಾವುದೇ ತಪ್ಪು ಮಾಡಿಲ್ಲ ಮತ್ತು ಅದಕ್ಕೆ ಕ್ಷಮೆಯಾಚಿಸುವ ಅಗತ್ಯವಿಲ್ಲ” ಎಂದು ಚಂದ್ರಶೇಖರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಹಿರಿಯ ನಾಯಕ ಚಂದ್ರಶೇಖರ್ ಅವರು ಬುಧವಾರ ಪಾಟ್ನಾ ಮೂಲದ ನಳಂದ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ತಮ್ಮ ಭಾಷಣದ ವೇಳೆ ಇಂತಹದ್ದೊಂದು ಹೇಳಿಕೆ ನೀಡುವ ಮೂಲಕ ಕೇಕೆಗಳಿಗೆ ಗುರಿಯಾಗಿದ್ದಾರೆ. ‘ಮನುಸ್ಮೃತಿ’ ಮತ್ತು ಆರ್‌ಎಸ್‌ಎಸ್ ಸಿದ್ಧಾಂತಿ ಎಂಎಸ್ ಗೋಳ್ವಾಲ್ಕರ್ ಅವರ ‘ಬಂಚ್ ಆಫ್ ಥಾಟ್ಸ್’ ಸಾಮಾಜಿಕ ವಿಭಜನೆಯನ್ನು ಸೃಷ್ಟಿಸಿದಂತೆಯೇ ‘ರಾಮಚರಿತ್ಮಾನಸ್’ ನಂತಹ ಧಾರ್ಮಿಕ ಗ್ರಂಥಗಳು ಕೂಡ ದ್ವೇಷವನ್ನು ಹರಡುತ್ತವೆ ಎಂದು ಅವರು ಪ್ರತಿಪಾದಿಸಿದರು.

ಕಾಲೇಜು ಅಧ್ಯಾಪಕರಾಗಿದ್ದ ಚಂದ್ರಶೇಖರ್ ಇದೀಗ ರಾಜಕಾರಣಿಯಾಗಿದ್ದಾರೆ. ತುಳಸಿದಾಸರು ಬರೆದ ‘ರಾಮಚರಿತಮಾನಗಳು’ ಕೃತಿಯಲ್ಲಿ ಕೆಳಜಾತಿಯ ಜನರು ಶಿಕ್ಷಣ ಪಡೆಯುವುದರಿಂದ ವಿಷಕಾರಿಯಾಗುತ್ತಾರೆ ಎಂದು ಹೇಳಿದ್ದಾರೆ. ಮಹಾಕಾವ್ಯದಿಂದ ಒಂದು ದ್ವಿಪದಿಯನ್ನು ಉಲ್ಲೇಖಿಸಿದ್ದು, “ಅದಮ್ ಜಾತಿ ಮೇ ವಿದ್ಯಾ ಪಾಯೇ, ಭಯತು ಯಥಾ ದೂಧ್ ಪಿಲಾಯೇ”. ಇದನ್ನು ಅನುವಾದಿಸಿದರೆ, “ಕೆಳಜಾತಿಯ ಜನರು ಶಿಕ್ಷಣವನ್ನು ಪಡೆದ ನಂತರ ವಿಷಕಾರಿಯಾಗುತ್ತಾರೆ, ಹಾಲನ್ನು ಸೇವಿಸಿದ ಹಾವಿನಂತಾಗುತ್ತಾರೆ” ಎಂದು ಅರ್ಥ ಬರುತ್ತದೆ. ಹಾಗಾಗಿಯೇ ಜನರು ಮನುಸ್ಮೃತಿಯನ್ನು ಸುಟ್ಟುಹಾಕಿದರು ಮತ್ತು ಅಂತಹ ಆಲೋಚನೆಗಳಿರುವ ಗುಂಪನ್ನು ವಿರೋಧಿಸಿದರು ಇದರಲ್ಲಿ ಹೊಸದೇನೂ ಇಲ್ಲ ಎಂದು ಅವರು ಹೇಳಿದರು.

ಸಚಿವ ಚಂದ್ರಶೇಖರ್ ಅವರ ಈ ಹೇಳಿಕೆಗೆ ಹಲವು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಅಷ್ಟೇ ಅಲ್ಲದೇ ಮತ್ತು ಸಾರ್ವಜನಿಕವಾಗಿ ಅವರು ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಸಂಜಯ್ ಜೈಸ್ವಾಲ್ ಅವರು, ಚಂದ್ರಶೇಖರ್ ಅವರು ಆರ್‌ಜೆಡಿಯ ಹಿಂದೂ ವಿರೋಧಿ ಸಂಪ್ರದಾಯವನ್ನು ಪ್ರತಿನಿಧಿಸುತ್ತಾರೆ. ಅವರು ಈ ರೀತಿಯ ಹೇಳಿಕೆ ಮೂಲಕ ತಮ್ಮ ಜ್ಞಾನದ ಕೊರತೆಯನ್ನು ಬಹಿರಂಗಪಡಿಸಿದ್ದಾರೆ. ಅವರು ದ್ವಿಪದಿಯನ್ನು ತಪ್ಪಾಗಿ ಉಲ್ಲೇಖಿಸಿದ್ದಾರೆ. ಅವರ ಹೇಳಿಕೆಯು ಕೋಟ್ಯಂತರ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸಿರುವುದರಿಂದ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ನಾವು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಒತ್ತಾಯಿಸುತ್ತೇವೆ” ಎಂದು ಜೈಸ್ವಾಲ್ ಹೇಳಿದರು.

ಬಿಜೆಪಿಯ ಹಿರಿಯ ನಾಯಕರಾದ ಸಾಮ್ರಾಟ್ ಚೌಧರಿ ಮತ್ತು ನೀರಜ್ ಕುಮಾರ್ ಬಬ್ಲು ಮಾತನಾಡಿ, ಚಂದ್ರಶೇಖರ್ ಮಾನಸಿಕ ಸಮತೋಲನ ಕಳೆದುಕೊಂಡಿರುವ ಕಾರಣ ಅವರಿಗೆ ಮಾನಸಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕಾಗಿದೆ ಎಂದು ಹೇಳಿದ್ದಾರೆ.

ಅಯೋಧ್ಯೆಯ ಹಿಂದೂ ಅರ್ಚಕ ಜಗದ್ಗುರು ಪರಮಹಂಸರು ಮಾತನಾಡಿ, ಸಚಿವರು ಸನಾತನೀಯರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಚಂದ್ರಶೇಖರ್ ಕ್ಷಮೆ ಯಾಚಿಸಬೇಕು ಮತ್ತು ಸಿಎಂ ನಿತೀಶ್ ಕುಮಾರ್ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಪರಮಹಂಸರು ಹೇಳಿದ್ದಾರೆ. ಆದರೆ ಈ ವರೆಗೂ ಆರ್‌ಜೆಡಿ, ಜೆಡಿಯು, ಕಾಂಗ್ರೆಸ್, ಎಡಪಕ್ಷಗಳು ಮತ್ತು ಎಚ್‌ಎಎಂ ಸೇರಿದಂತೆ ಆಡಳಿತಾರೂಢ ಮಹಾಘಟಬಂಧನ್ ನಾಯಕರು ಈ ವಿಷಯದ ಬಗ್ಗೆ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...