Homeಮುಖಪುಟಕ್ಷಮೆ ಕೇಳುವುದಿಲ್ಲ, ದಂಡ ಕಟ್ಟುವುದಿಲ್ಲ: ಕಾಮಿಡಿಯನ್ ಕುನಾಲ್ ಕಮ್ರ

ಕ್ಷಮೆ ಕೇಳುವುದಿಲ್ಲ, ದಂಡ ಕಟ್ಟುವುದಿಲ್ಲ: ಕಾಮಿಡಿಯನ್ ಕುನಾಲ್ ಕಮ್ರ

"ನನ್ನ ಟ್ವೀಟ್‌ಗಳನ್ನು ಹಿಂತೆಗೆದುಕೊಳ್ಳುವ ಅಥವಾ ಅವರಲ್ಲಿ ಕ್ಷಮೆಯಾಚಿಸುವ ಉದ್ದೇಶ ನನಗಿಲ್ಲ. ಅವು ತಮ್ಮಷ್ಟಕ್ಕೇ ಹೇಳಬೇಕಾದುದ್ದನ್ನು ಹೇಳುತ್ತವೆ ಎಂದು ನಾನು ನಂಬುತ್ತೇನೆ"

- Advertisement -
- Advertisement -

ಸುಪ್ರೀಂಕೋರ್ಟ್‌ ಕಾರ್ಯವಿಧಾನವನ್ನು ಟೀಕಿಸಿ ಮಾಡಿರುವ ಟ್ವೀಟ್‌ಗಳನ್ನು ಡಿಲೀಟ್ ಮಾಡುವುದಿಲ್ಲ. ನ್ಯಾಯಾಂಗ ನಿಂದನೆ ಪ್ರಕರಣದ ಸಂಬಂಧ ಕ್ಷಮೆ ಯಾಚಿಸುವುದಿಲ್ಲ, ದಂಡ ಕಟ್ಟುವುದಿಲ್ಲ ಎಂದು ಸ್ಟಾಂಡಪ್ ಕಾಮಿಡಿಯನ್ ಕುನಾಲ್ ಕಮ್ರ ಸ್ಪಷ್ಟಪಡಿಸಿದ್ದಾರೆ.

ವಂಚನೆ ಮತ್ತು ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದನ್ನು ಟೀಕಿಸಿ ಕಮ್ರ ಟ್ವೀಟ್ ಮಾಡಿದ್ದರು. ಈ ಸಂದರ್ಭದಲ್ಲಿ ದೇಶದಲ್ಲಿ ನೂರಾರು ಹೋರಾಟಗಾರರು ಹಲವಾರು ವರ್ಷಗಳಿಂದ ರಾಜಕೀಯ ಖೈದಿಗಳಾಗಿ ಜೈಲಿನಲ್ಲಿದ್ದರೂ ಅವರಿಗೆ ಏಕೆ ಜಾಮೀನು ನೀಡಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಖ್ಯಾತ ಸ್ಟಾಂಡಪ್ ಕಾಮಿಡಿಯನ್ ಕುನಾಲ್ ಕಮ್ರ ಸುಪ್ರೀಂ ತೀರ್ಪನ್ನು ಟ್ರೋಲ್ ಮಾಡಿದ್ದರು.

“ನನ್ನ ಟ್ವೀಟ್‌ಗಳನ್ನು ಹಿಂತೆಗೆದುಕೊಳ್ಳುವ ಅಥವಾ ಅವರಲ್ಲಿ ಕ್ಷಮೆಯಾಚಿಸುವ ಉದ್ದೇಶ ನನಗಿಲ್ಲ. ಅವು ತಮ್ಮಷ್ಟಕ್ಕೇ ಹೇಳಬೇಕಾದುದ್ದನ್ನು ಹೇಳುತ್ತವೆ ಎಂದು ನಾನು ನಂಬುತ್ತೇನೆ” ಎಂದು ಮುಂಬೈ ಮೂಲದ ಕುನಾಲ್ ಕಮ್ರ ಟ್ವೀಟ್‌ ಮಾಡಿದ್ದಾರೆ. ಜೊತೆಗೆ “ವಕೀಲರು ಇಲ್ಲ, ಕ್ಷಮಾಪಣೆ ಇಲ್ಲ, ದಂಡ ಕಟ್ಟಲ್ಲ, ಸಮಯ ಹಾಳು ಮಾಡಲ್ಲ” ಎಂದು ತಮ್ಮ ಪತ್ರದೊಂದಿಗೆ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಕುನಾಲ್ ಕಮ್ರ ಟ್ವೀಟ್ ಇಷ್ಟವಾಗದಿದ್ದರೆ, ಓದಬೇಡಿ ಅಷ್ಟೇ: ಟ್ವಿಟ್ಟರ್‌ನಲ್ಲಿ ಮತ್ತಷ್ಟು ಟ್ರೋಲ್!

ಕುನಾಲ್ ಕಮ್ರ ವಿರುದ್ಧ ಎಂಟು ಜನರಿಗೆ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು  ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅನುಮತಿ ನೀಡುವ ಮೂಲಕ, ಕಮ್ರ ತಮಾಷೆಯ ಗೆರೆಯನ್ನು ದಾಟಿದ್ದಾರೆ ಎಂದು ಹೇಳಿದ್ದಾರೆ.

“ಸುಪ್ರೀಂ ಕೋರ್ಟ್ ಮೇಲೆ ಅನ್ಯಾಯವಾಗಿ ಕೆಟ್ಟ ರೀತಿಯಲ್ಲಿ ದಾಳಿ ಮಾಡುವುದು ಶಿಕ್ಷೆಗೆ ಕಾರಣವಾಗುತ್ತದೆ ಎಂದು ಜನರು ಅರ್ಥಮಾಡಿಕೊಳ್ಳುವ ಸಮಯ ಇದು” ಎಂದು ಅಟಾರ್ನಿ ಜನರಲ್ ವೇಣುಗೋಪಾಲ್ ಅವರು  ಕಮ್ರ ಅವರನ್ನು ನ್ಯಾಯಾಲಯಕ್ಕೆ ಕರೆದೊಯ್ಯಲು ತಮ್ಮ ಅನುಮತಿಯನ್ನು ಕೇಳಿದ ವಕೀಲರಿಗೆ ಉತ್ತರಿಸಿದ ಪತ್ರದಲ್ಲಿ ತಿಳಿಸಿದ್ದಾರೆ.

ಈ ವರ್ಷದ ಜನವರಿಯಲ್ಲಿ, ಮುಂಬೈಯಿಂದ ಲಕ್ನೋಗೆ ಇಂಡಿಗೋ ವಿಮಾನದಲ್ಲಿ ಅರ್ನಾಬ್ ಗೋಸ್ವಾಮಿ ಅವರನ್ನು ಪ್ರಶ್ನಿಸಿದ ನಂತರ ಕಮ್ರ ಅವರನ್ನು ಹಲವಾರು ವಿಮಾನಯಾನ ಸಂಸ್ಥೆಗಳು ನಿಷೇಧಿಸಿವೆ.

ಇತ್ತ ಹಲವು ಸಾಮಾಜಿಕ ಹೋರಾಟಗಾರರು, ನೆಟ್ಟಿಗರು “ಕುನಾಲ್ ಕಮ್ರ ಟ್ವೀಟ್ ನಿಮಗೆ ಇಷ್ಟವಾಗದಿದ್ದರೆ ಅದನ್ನು ಓದಬೇಡಿ ಅಷ್ಟೇ” ಅವರ ಮೇಲೆಕೆ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸುತ್ತೀರಿ ಎಂದು ಟ್ವೀಟ್ ಮಾಡುವ ಮೂಲಕ ಪ್ರಶ್ನಿಸುತ್ತಿದ್ದಾರೆ.


ಇದನ್ನೂ ಓದಿ: ಆತನ ಚಾನೆಲ್ ನೋಡುವುದೇ ಇಲ್ಲ: ಅರ್ನಾಬ್‌ಗೆ ಜಾಮೀನು ನೀಡಿದ ನ್ಯಾಯಮೂರ್ತಿ ಹೇಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...