Homeಮುಖಪುಟಧರ್ಮ, ಜಾತಿ ಆಧಾರದಲ್ಲಿ ಚುನಾವಣಾ ಪ್ರಚಾರ ಮಾಡಬೇಡಿ: ಪಕ್ಷಗಳಿಗೆ ಚುನಾವಣಾ ಆಯೋಗ ಸೂಚನೆ

ಧರ್ಮ, ಜಾತಿ ಆಧಾರದಲ್ಲಿ ಚುನಾವಣಾ ಪ್ರಚಾರ ಮಾಡಬೇಡಿ: ಪಕ್ಷಗಳಿಗೆ ಚುನಾವಣಾ ಆಯೋಗ ಸೂಚನೆ

- Advertisement -
- Advertisement -

ಲೋಕಸಭೆ ಚುನಾವಣೆಗೆ ಮುನ್ನ, ಜಾತಿ, ಧರ್ಮ ಮತ್ತು ಭಾಷೆಯ ಆಧಾರದ ಮೇಲೆ ಮತ ಕೇಳುವುದನ್ನು ತಪ್ಪಿಸಬೇಕು ಮತ್ತು ಭಕ್ತ(ಜನರ ನಂಬಿಕೆ)- ದೇವರು ಸಂಬಂಧವನ್ನು ಅವಮಾನಿಸದಂತೆ ಚುನಾವಣಾ ಆಯೋಗವು ಪಕ್ಷಗಳು ಮತ್ತು ಅವರ ರಾಜಕೀಯ ಪಕ್ಷದ ನಾಯಕರಿಗೆ ತಿಳಿಸಿದ್ದಾರೆ.

ಮಾದರಿ ನೀತಿ ಸಂಹಿತೆಯ ಉಲ್ಲಂಘನೆಗಾಗಿ ಪಕ್ಷಗಳು, ಅಭ್ಯರ್ಥಿಗಳು ಮತ್ತು ಸ್ಟಾರ್ ಪ್ರಚಾರಕರಿಗೆ ಕಠಿಣ ಕ್ರಮದ ಎಚ್ಚರಿಕೆಯನ್ನು ಚುನಾವಣಾ ಆಯೋಗವು ನೀಡಿದ್ದು, ದೇವಾಲಯಗಳು, ಚರ್ಚ್‌ಗಳು, ಗುರುದ್ವಾರಗಳು ಅಥವಾ ಯಾವುದೇ ಇತರ ಪೂಜಾ ಸ್ಥಳಗಳನ್ನು  ಚುನಾವಣಾ ಪ್ರಚಾರಕ್ಕಾಗಿ ಬಳಸಬಾರದು ಎಂದು ಹೇಳಿದ್ದಾರೆ.

ಈ ಹಿಂದೆ ನೋಟೀಸ್ ಪಡೆದಿರುವ ಸ್ಟಾರ್ ಪ್ರಚಾರಕರು ಮತ್ತು ಅಭ್ಯರ್ಥಿಗಳು ಮಾದರಿ ಸಂಹಿತೆಯನ್ನು ಮತ್ತೆ  ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಚುನಾವಣಾ ಆಯೋಗವು ಹೇಳಿದೆ. ಈ ತಿಂಗಳ ಕೊನೆಯಲ್ಲಿ ಲೋಕಸಭೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಘೋಷಣೆಯ ನಿರೀಕ್ಷೆಯ ಮಧ್ಯೆಯೇ ಬೆಳವಣಿಗೆ ನಡೆದಿದೆ.

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಈ ಬಗ್ಗೆ ಮಾತನಾಡಿ, ರಾಜಕೀಯ ಪಕ್ಷಗಳು ಗೌರವಯುತವಾಗಿ ರಾಜಕೀಯ ವಿಚಾರಗಳನ್ನು ಪ್ರಸ್ತಾಪಿಸಬೇಕು ಅಥವಾ ಭಾಷಣವನ್ನು ಮಾಡಬೇಕು, ಅದು ವಿಭಜನೆಯ ಬದಲು ಜನರನ್ನು ಸೂಕ್ತರನ್ನು ಆಯ್ಕೆ ಮಾಡಲು ಪ್ರೇರೇಪಿಸುವಂತಿರಬೇಕು, ವೈಯಕ್ತಿಕ ದಾಳಿಯ ಬದಲಿಗೆ ಜನರಿಗೆ ಆಲೋಚನೆ ಮಾಡಲು ಉತ್ತೇಜಿಸುವಂತಿರಬೇಕು ಎಂದು ಹೇಳಿದ್ದಾರೆ.

ಸಾರ್ವಜನಿಕ ಪ್ರಚಾರದಲ್ಲಿ ಸೌಜನ್ಯವನ್ನು ಕಾಪಾಡಿಕೊಳ್ಳಲು ಸ್ಟಾರ್ ಪ್ರಚಾರಕರು ಮತ್ತು ಅಭ್ಯರ್ಥಿಗಳಿಗೆ ಸೂಚಿಸಲಾಗಿದೆ. ವಿಶೇಷವಾಗಿ ಈ ಹಿಂದೆ ನೋಟಿಸ್ ನೀಡದವರಿಗೆ ಎಚ್ಚರಿಕೆಯನ್ನು ನೀಡಲಾಗಿದೆ. ಪ್ರಚಾರ ಮಾಡುವಾಗ ವಿಷಯಾಧಾರಿತವಾಗಿ  ಚುನಾವಣಾ ಚರ್ಚೆ ಮಾಡುವಂತೆ ಪಕ್ಷಗಳನ್ನು ಕೇಳಿದೆ ಮತ್ತು ಪಕ್ಷಗಳು ಮತ್ತು ಅವುಗಳ ನಾಯಕರು ವಾಸ್ತವದ ಆಧಾರವಿಲ್ಲದೆ, ಮತದಾರರನ್ನು ತಪ್ಪುದಾರಿಗೆಳೆಯುವ ಹೇಳಿಕೆಗಳನ್ನು ನೀಡಬಾರದು ಎಂದು ಚುನಾವಣಾ ಆಯೋಗ ಹೇಳಿದೆ. ಪ್ರತಿಸ್ಪರ್ಧಿಗಳನ್ನು ನಿಂದಿಸುವ ಅಥವಾ ಅವಮಾನಿಸುವ ಪೋಸ್ಟ್‌ಗಳು, ಕೆಟ್ಟ ಅಭಿರುಚಿಯ ಅಥವಾ ಘನತೆಗೆ ಧಕ್ಕೆ ತರುವ ಪೋಸ್ಟ್‌ಗಳನ್ನು ಮಾಡಬಾರದು ಅಥವಾ ಹಂಚಿಕೊಳ್ಳಬಾರದು ಎಂದು ಕೂಡ ಚುನಾವಣಾ ಆಯೋಗ ತಿಳಿಸಿದೆ.

ಇದನ್ನು ಓದಿ: ನಿತಿನ್ ಗಡ್ಕರಿ ಕುರಿತ ವಿಡಿಯೋ ಹಂಚಿಕೊಂಡ ಖರ್ಗೆ, ಜೈರಾಮ್ ರಮೇಶ್‌ಗೆ ನೊಟೀಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...