Homeಮುಖಪುಟಧರ್ಮ, ಜಾತಿ ಆಧಾರದಲ್ಲಿ ಚುನಾವಣಾ ಪ್ರಚಾರ ಮಾಡಬೇಡಿ: ಪಕ್ಷಗಳಿಗೆ ಚುನಾವಣಾ ಆಯೋಗ ಸೂಚನೆ

ಧರ್ಮ, ಜಾತಿ ಆಧಾರದಲ್ಲಿ ಚುನಾವಣಾ ಪ್ರಚಾರ ಮಾಡಬೇಡಿ: ಪಕ್ಷಗಳಿಗೆ ಚುನಾವಣಾ ಆಯೋಗ ಸೂಚನೆ

- Advertisement -
- Advertisement -

ಲೋಕಸಭೆ ಚುನಾವಣೆಗೆ ಮುನ್ನ, ಜಾತಿ, ಧರ್ಮ ಮತ್ತು ಭಾಷೆಯ ಆಧಾರದ ಮೇಲೆ ಮತ ಕೇಳುವುದನ್ನು ತಪ್ಪಿಸಬೇಕು ಮತ್ತು ಭಕ್ತ(ಜನರ ನಂಬಿಕೆ)- ದೇವರು ಸಂಬಂಧವನ್ನು ಅವಮಾನಿಸದಂತೆ ಚುನಾವಣಾ ಆಯೋಗವು ಪಕ್ಷಗಳು ಮತ್ತು ಅವರ ರಾಜಕೀಯ ಪಕ್ಷದ ನಾಯಕರಿಗೆ ತಿಳಿಸಿದ್ದಾರೆ.

ಮಾದರಿ ನೀತಿ ಸಂಹಿತೆಯ ಉಲ್ಲಂಘನೆಗಾಗಿ ಪಕ್ಷಗಳು, ಅಭ್ಯರ್ಥಿಗಳು ಮತ್ತು ಸ್ಟಾರ್ ಪ್ರಚಾರಕರಿಗೆ ಕಠಿಣ ಕ್ರಮದ ಎಚ್ಚರಿಕೆಯನ್ನು ಚುನಾವಣಾ ಆಯೋಗವು ನೀಡಿದ್ದು, ದೇವಾಲಯಗಳು, ಚರ್ಚ್‌ಗಳು, ಗುರುದ್ವಾರಗಳು ಅಥವಾ ಯಾವುದೇ ಇತರ ಪೂಜಾ ಸ್ಥಳಗಳನ್ನು  ಚುನಾವಣಾ ಪ್ರಚಾರಕ್ಕಾಗಿ ಬಳಸಬಾರದು ಎಂದು ಹೇಳಿದ್ದಾರೆ.

ಈ ಹಿಂದೆ ನೋಟೀಸ್ ಪಡೆದಿರುವ ಸ್ಟಾರ್ ಪ್ರಚಾರಕರು ಮತ್ತು ಅಭ್ಯರ್ಥಿಗಳು ಮಾದರಿ ಸಂಹಿತೆಯನ್ನು ಮತ್ತೆ  ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಚುನಾವಣಾ ಆಯೋಗವು ಹೇಳಿದೆ. ಈ ತಿಂಗಳ ಕೊನೆಯಲ್ಲಿ ಲೋಕಸಭೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಘೋಷಣೆಯ ನಿರೀಕ್ಷೆಯ ಮಧ್ಯೆಯೇ ಬೆಳವಣಿಗೆ ನಡೆದಿದೆ.

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಈ ಬಗ್ಗೆ ಮಾತನಾಡಿ, ರಾಜಕೀಯ ಪಕ್ಷಗಳು ಗೌರವಯುತವಾಗಿ ರಾಜಕೀಯ ವಿಚಾರಗಳನ್ನು ಪ್ರಸ್ತಾಪಿಸಬೇಕು ಅಥವಾ ಭಾಷಣವನ್ನು ಮಾಡಬೇಕು, ಅದು ವಿಭಜನೆಯ ಬದಲು ಜನರನ್ನು ಸೂಕ್ತರನ್ನು ಆಯ್ಕೆ ಮಾಡಲು ಪ್ರೇರೇಪಿಸುವಂತಿರಬೇಕು, ವೈಯಕ್ತಿಕ ದಾಳಿಯ ಬದಲಿಗೆ ಜನರಿಗೆ ಆಲೋಚನೆ ಮಾಡಲು ಉತ್ತೇಜಿಸುವಂತಿರಬೇಕು ಎಂದು ಹೇಳಿದ್ದಾರೆ.

ಸಾರ್ವಜನಿಕ ಪ್ರಚಾರದಲ್ಲಿ ಸೌಜನ್ಯವನ್ನು ಕಾಪಾಡಿಕೊಳ್ಳಲು ಸ್ಟಾರ್ ಪ್ರಚಾರಕರು ಮತ್ತು ಅಭ್ಯರ್ಥಿಗಳಿಗೆ ಸೂಚಿಸಲಾಗಿದೆ. ವಿಶೇಷವಾಗಿ ಈ ಹಿಂದೆ ನೋಟಿಸ್ ನೀಡದವರಿಗೆ ಎಚ್ಚರಿಕೆಯನ್ನು ನೀಡಲಾಗಿದೆ. ಪ್ರಚಾರ ಮಾಡುವಾಗ ವಿಷಯಾಧಾರಿತವಾಗಿ  ಚುನಾವಣಾ ಚರ್ಚೆ ಮಾಡುವಂತೆ ಪಕ್ಷಗಳನ್ನು ಕೇಳಿದೆ ಮತ್ತು ಪಕ್ಷಗಳು ಮತ್ತು ಅವುಗಳ ನಾಯಕರು ವಾಸ್ತವದ ಆಧಾರವಿಲ್ಲದೆ, ಮತದಾರರನ್ನು ತಪ್ಪುದಾರಿಗೆಳೆಯುವ ಹೇಳಿಕೆಗಳನ್ನು ನೀಡಬಾರದು ಎಂದು ಚುನಾವಣಾ ಆಯೋಗ ಹೇಳಿದೆ. ಪ್ರತಿಸ್ಪರ್ಧಿಗಳನ್ನು ನಿಂದಿಸುವ ಅಥವಾ ಅವಮಾನಿಸುವ ಪೋಸ್ಟ್‌ಗಳು, ಕೆಟ್ಟ ಅಭಿರುಚಿಯ ಅಥವಾ ಘನತೆಗೆ ಧಕ್ಕೆ ತರುವ ಪೋಸ್ಟ್‌ಗಳನ್ನು ಮಾಡಬಾರದು ಅಥವಾ ಹಂಚಿಕೊಳ್ಳಬಾರದು ಎಂದು ಕೂಡ ಚುನಾವಣಾ ಆಯೋಗ ತಿಳಿಸಿದೆ.

ಇದನ್ನು ಓದಿ: ನಿತಿನ್ ಗಡ್ಕರಿ ಕುರಿತ ವಿಡಿಯೋ ಹಂಚಿಕೊಂಡ ಖರ್ಗೆ, ಜೈರಾಮ್ ರಮೇಶ್‌ಗೆ ನೊಟೀಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...