Homeಮುಖಪುಟಧರ್ಮ, ಜಾತಿ ಆಧಾರದಲ್ಲಿ ಚುನಾವಣಾ ಪ್ರಚಾರ ಮಾಡಬೇಡಿ: ಪಕ್ಷಗಳಿಗೆ ಚುನಾವಣಾ ಆಯೋಗ ಸೂಚನೆ

ಧರ್ಮ, ಜಾತಿ ಆಧಾರದಲ್ಲಿ ಚುನಾವಣಾ ಪ್ರಚಾರ ಮಾಡಬೇಡಿ: ಪಕ್ಷಗಳಿಗೆ ಚುನಾವಣಾ ಆಯೋಗ ಸೂಚನೆ

- Advertisement -
- Advertisement -

ಲೋಕಸಭೆ ಚುನಾವಣೆಗೆ ಮುನ್ನ, ಜಾತಿ, ಧರ್ಮ ಮತ್ತು ಭಾಷೆಯ ಆಧಾರದ ಮೇಲೆ ಮತ ಕೇಳುವುದನ್ನು ತಪ್ಪಿಸಬೇಕು ಮತ್ತು ಭಕ್ತ(ಜನರ ನಂಬಿಕೆ)- ದೇವರು ಸಂಬಂಧವನ್ನು ಅವಮಾನಿಸದಂತೆ ಚುನಾವಣಾ ಆಯೋಗವು ಪಕ್ಷಗಳು ಮತ್ತು ಅವರ ರಾಜಕೀಯ ಪಕ್ಷದ ನಾಯಕರಿಗೆ ತಿಳಿಸಿದ್ದಾರೆ.

ಮಾದರಿ ನೀತಿ ಸಂಹಿತೆಯ ಉಲ್ಲಂಘನೆಗಾಗಿ ಪಕ್ಷಗಳು, ಅಭ್ಯರ್ಥಿಗಳು ಮತ್ತು ಸ್ಟಾರ್ ಪ್ರಚಾರಕರಿಗೆ ಕಠಿಣ ಕ್ರಮದ ಎಚ್ಚರಿಕೆಯನ್ನು ಚುನಾವಣಾ ಆಯೋಗವು ನೀಡಿದ್ದು, ದೇವಾಲಯಗಳು, ಚರ್ಚ್‌ಗಳು, ಗುರುದ್ವಾರಗಳು ಅಥವಾ ಯಾವುದೇ ಇತರ ಪೂಜಾ ಸ್ಥಳಗಳನ್ನು  ಚುನಾವಣಾ ಪ್ರಚಾರಕ್ಕಾಗಿ ಬಳಸಬಾರದು ಎಂದು ಹೇಳಿದ್ದಾರೆ.

ಈ ಹಿಂದೆ ನೋಟೀಸ್ ಪಡೆದಿರುವ ಸ್ಟಾರ್ ಪ್ರಚಾರಕರು ಮತ್ತು ಅಭ್ಯರ್ಥಿಗಳು ಮಾದರಿ ಸಂಹಿತೆಯನ್ನು ಮತ್ತೆ  ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಚುನಾವಣಾ ಆಯೋಗವು ಹೇಳಿದೆ. ಈ ತಿಂಗಳ ಕೊನೆಯಲ್ಲಿ ಲೋಕಸಭೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಘೋಷಣೆಯ ನಿರೀಕ್ಷೆಯ ಮಧ್ಯೆಯೇ ಬೆಳವಣಿಗೆ ನಡೆದಿದೆ.

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಈ ಬಗ್ಗೆ ಮಾತನಾಡಿ, ರಾಜಕೀಯ ಪಕ್ಷಗಳು ಗೌರವಯುತವಾಗಿ ರಾಜಕೀಯ ವಿಚಾರಗಳನ್ನು ಪ್ರಸ್ತಾಪಿಸಬೇಕು ಅಥವಾ ಭಾಷಣವನ್ನು ಮಾಡಬೇಕು, ಅದು ವಿಭಜನೆಯ ಬದಲು ಜನರನ್ನು ಸೂಕ್ತರನ್ನು ಆಯ್ಕೆ ಮಾಡಲು ಪ್ರೇರೇಪಿಸುವಂತಿರಬೇಕು, ವೈಯಕ್ತಿಕ ದಾಳಿಯ ಬದಲಿಗೆ ಜನರಿಗೆ ಆಲೋಚನೆ ಮಾಡಲು ಉತ್ತೇಜಿಸುವಂತಿರಬೇಕು ಎಂದು ಹೇಳಿದ್ದಾರೆ.

ಸಾರ್ವಜನಿಕ ಪ್ರಚಾರದಲ್ಲಿ ಸೌಜನ್ಯವನ್ನು ಕಾಪಾಡಿಕೊಳ್ಳಲು ಸ್ಟಾರ್ ಪ್ರಚಾರಕರು ಮತ್ತು ಅಭ್ಯರ್ಥಿಗಳಿಗೆ ಸೂಚಿಸಲಾಗಿದೆ. ವಿಶೇಷವಾಗಿ ಈ ಹಿಂದೆ ನೋಟಿಸ್ ನೀಡದವರಿಗೆ ಎಚ್ಚರಿಕೆಯನ್ನು ನೀಡಲಾಗಿದೆ. ಪ್ರಚಾರ ಮಾಡುವಾಗ ವಿಷಯಾಧಾರಿತವಾಗಿ  ಚುನಾವಣಾ ಚರ್ಚೆ ಮಾಡುವಂತೆ ಪಕ್ಷಗಳನ್ನು ಕೇಳಿದೆ ಮತ್ತು ಪಕ್ಷಗಳು ಮತ್ತು ಅವುಗಳ ನಾಯಕರು ವಾಸ್ತವದ ಆಧಾರವಿಲ್ಲದೆ, ಮತದಾರರನ್ನು ತಪ್ಪುದಾರಿಗೆಳೆಯುವ ಹೇಳಿಕೆಗಳನ್ನು ನೀಡಬಾರದು ಎಂದು ಚುನಾವಣಾ ಆಯೋಗ ಹೇಳಿದೆ. ಪ್ರತಿಸ್ಪರ್ಧಿಗಳನ್ನು ನಿಂದಿಸುವ ಅಥವಾ ಅವಮಾನಿಸುವ ಪೋಸ್ಟ್‌ಗಳು, ಕೆಟ್ಟ ಅಭಿರುಚಿಯ ಅಥವಾ ಘನತೆಗೆ ಧಕ್ಕೆ ತರುವ ಪೋಸ್ಟ್‌ಗಳನ್ನು ಮಾಡಬಾರದು ಅಥವಾ ಹಂಚಿಕೊಳ್ಳಬಾರದು ಎಂದು ಕೂಡ ಚುನಾವಣಾ ಆಯೋಗ ತಿಳಿಸಿದೆ.

ಇದನ್ನು ಓದಿ: ನಿತಿನ್ ಗಡ್ಕರಿ ಕುರಿತ ವಿಡಿಯೋ ಹಂಚಿಕೊಂಡ ಖರ್ಗೆ, ಜೈರಾಮ್ ರಮೇಶ್‌ಗೆ ನೊಟೀಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...