HomeಮುಖಪುಟNo appeal only Repeal: ರೈತ ಹೋರಾಟದ ಇಂದಿನ ಹ್ಯಾಷ್‌ಟ್ಯಾಗ್!

No appeal only Repeal: ರೈತ ಹೋರಾಟದ ಇಂದಿನ ಹ್ಯಾಷ್‌ಟ್ಯಾಗ್!

ಇಂದು No appeal only Repeal ಎಂದು ಘೋಷಿಸಿರುವ ರೈತರು #FarmersAppealLawsRepeal ಎಂಬ ಹ್ಯಾಷ್‌ಟ್ಯಾಗ್‌ ನೀಡಿದ್ದಾರೆ.

- Advertisement -
- Advertisement -

ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟ 48ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಸುಪ್ರೀಂ ಕೋರ್ಟ್‌‌ನಲ್ಲಿ ಈ ವಿಚಾರದ ತೀರ್ಪು ಪ್ರಕಟವಾಗಲಿದೆ. ಆದರೆ ನಿನ್ನೆಯ ಸುಪ್ರೀಂ ಕೋರ್ಟ್‌‌ನ ಕಾಯ್ದೆಗೆ ತಾತ್ಕಾಲಿಕ ತಡೆ ನೀಡಬೇಕು ಮತ್ತು ಪರಿಹಾರಕ್ಕಾಗಿ ಸಮಿತಿ ರಚಿಸಬೇಕೆಂಬ ಆದೇಶವನ್ನು ರೈತ ಮುಖಂಡರು ತಿರಸ್ಕರಿಸಿದ್ದಾರೆ. No appeal only Repeal ಎಂಬುದಾಗಿ ರೈತರು ಸ್ಪಷ್ಟಪಡಿಸಿದ್ದು, ರೈತ ಹೋರಾಟ ಅದೇ ದಿಟ್ಟತೆಯೊಂದಿಗೆ ಮುಂದುವರೆಯಲಿದೆ ಎಂದು ಘೋಷಿಸಿದ್ದಾರೆ.

ರೈತ ಹೋರಾಟದ ಮುಖವಾಣಿಯಾಗಿರುವ ಕಿಸಾನ್ ಏಕ್ತಾ ಮೋರ್ಚಾ ಟ್ವಿಟ್ಟರ್‌, ಫೇಸ್‌ಬುಕ್‌, ಯೂಟ್ಯೂಬ್‌ಗಳಲ್ಲಿ ಪ್ರತಿದಿನವು ಒಂದೊಂದು ಹೋರಾಟದ ಹ್ಯಾಷ್‌ಟ್ಯಾಗ್‌ಗಳನ್ನು ನೀಡಲಾಗುತ್ತದೆ. ಈ ಹ್ಯಾಷ್‌ಟ್ಯಾಗ್ ಬಳಸಿ ಟ್ವೀಟ್ ಮಾಡಲು ಕರೆ ನೀಡಲಾಗುತ್ತದೆ. ಅದರಂತೆ ಇಂದು No appeal only Repeal ಎಂದು ಘೋಷಿಸಿರುವ ರೈತರು #FarmersAppealLawsRepeal ಎಂಬ ಹ್ಯಾಷ್‌ಟ್ಯಾಗ್‌ ನೀಡಿದ್ದಾರೆ.

ಅಲ್ಲದೆ “ಗೌರವಾನ್ವಿತ ಸುಪ್ರೀಂ ಕೋರ್ಟ್‌ ಕೃಷಿ ಕಾಯ್ದೆಗಳ ಜಾರಿಯನ್ನು ತಡೆಯುವ ಸುಪ್ರೀಂ ಕೋರ್ಟ್‌ ಸಲಹೆಯನ್ನು ಎಲ್ಲ ಸಂಘಟನೆಗಳು ಸ್ವಾಗತ್ತಿಸುತ್ತವೆ. ಆದರೆ ರೈತ ಸಂಘಟನೆಗಳು ಸಾಮೂಹಿಕವಾಗಿ ಹಾಗೂ ವ್ಯಕ್ತಿಗತವಾಗಿ ಸುಪ್ರೀಂ ಕೋರ್ಟ್‌ ನೇಮಿಸಲಿರುವ ಸಮಿತಿಯ ಸಭೆಗಳಲ್ಲಿ ಭಾಗವಹಿಸುವುದಿಲ್ಲ” ಎಂದು ರೈತ ಮುಖಂಡರು ಘೋಷಿಸಿದ್ದಾರೆ.

ರೈತರು ಮತ್ತು ಅವರ ಪ್ರತಿನಿಧಿಗಳಾಗಿ ನಾವು ಸುಪ್ರೀಂ ಕೋರ್ಟ್‌ಗೆ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇವೆ, ಅದರ ಸಲಹೆಯನ್ನು ಒಪ್ಪಿಕೊಳ್ಳದೇ ಇರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತೇವೆ. ನಮ್ಮ ಹೋರಾಟವು ದೇಶದಲ್ಲಿರುವ ಲಕ್ಷಾಂತರ ರೈತರ ಒಳಿತಿಗಾಗಿ ನಡೆಯುತ್ತಿದೆ ಮತ್ತು ಸಾರ್ವಜನಿಕ ಹಿತಾಸಕ್ತಿ ಹೊಂದಿದೆ. ಸರ್ಕಾರವು ಈ ಪ್ರತಿಭಟನೆಯನ್ನು ಪಂಜಾಬ್‌ ರೈತರಿಗಷ್ಟೇ ಸೀಮಿತಗೊಳಿಸುತ್ತಿದ್ದು, ಹರ್ಯಾಣ, ಉತ್ತರ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಮಧ್ಯ ಪ್ರದೇಶ, ಮಹಾರಾಷ್ಟ್ರ ಹಾಗೂ ಇತರೆ ರಾಜ್ಯಗಳಿಂದ ಆಗಮಿಸಿದ ರೈತರು ದೆಹಲಿ ಗಡಿಯಲ್ಲಿ ಸೇರಿದ್ದಾರೆ. ಅಷ್ಟೇ ಅಲ್ಲ ವಿವಿಧ ರಾಜ್ಯಗಳಲ್ಲೂ ಪ್ರತಿಭಟನೆ ನಡೆಯುತ್ತಿದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.


ಇದನ್ನೂ ಓದಿ: ಜನವರಿ 26 ಕ್ಕೆ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿ: ಬೆದರಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...