Homeಮುಖಪುಟ'ಸಂಸತ್ತೇ ಪರಮೋಚ್ಛ': ನ್ಯಾಯಾಂಗದ ಬಗ್ಗೆ ಜಗದೀಪ್ ಧನ್ಕರ್ ಮತ್ತೆ ಅಸಮಾಧಾನ

‘ಸಂಸತ್ತೇ ಪರಮೋಚ್ಛ’: ನ್ಯಾಯಾಂಗದ ಬಗ್ಗೆ ಜಗದೀಪ್ ಧನ್ಕರ್ ಮತ್ತೆ ಅಸಮಾಧಾನ

- Advertisement -
- Advertisement -

“ಸಂಸತ್ತೇ (ಶಾಸಕಾಂಗ) ಪರಮೋಚ್ಛ’ ಮತ್ತು ‘ಚುನಾಯಿತ ಪ್ರತಿನಿಧಿಗಳು’ (ಸಂಸತ್ತಿನ ಸದಸ್ಯರು) ಸಂವಿಧಾನ ಹೇಗಿರುತ್ತದೆ ಎಂಬುದರ ಅಂತಿಮ ನಿರ್ಧಾರ ತೆಗೆದುಕೊಳ್ಳುವವರಾಗಿರುತ್ತಾರೆ ಮತ್ತು ಅದರ ಮೇಲೆ ಯಾವುದೇ ಅಧಿಕಾರವಿರುವುದಿಲ್ಲ” ಎಂದು ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಹೇಳಿದ್ದಾರೆ. ಈ ಮೂಲಕ ನ್ಯಾಯಾಂಗದ ಬಗ್ಗೆ ಮತ್ತೊಮ್ಮೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಂಗಳವಾರ (ಏ.22) ದೆಹಲಿ ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ಮಾತನಾಡಿದ ಧನ್ಕರ್ ಅವರು, “ನ್ಯಾಯಾಂಗದ ಕುರಿತ ತನ್ನ ಹಿಂದಿನ ಹೇಳಿಕೆಗಳನ್ನು ಪರೋಕ್ಷವಾಗಿ ಸಮರ್ಥಿಸಿಕೊಂಡಿದ್ದು,
“ಸಾಂವಿಧಾನಿಕ ಹುದ್ದೆಯಲ್ಲಿರುವವರು ಮಾತನಾಡುವ ಪ್ರತಿಯೊಂದು ಪದವೂ ಅತ್ಯುನ್ನತ ರಾಷ್ಟ್ರೀಯ ಹಿತಾಸಕ್ತಿಯಿಂದ ಮಾರ್ಗದರ್ಶಿಸಲ್ಪಡುತ್ತದೆ” ಎಂದಿದ್ದಾರೆ.

ಸುಪ್ರೀಂ ಕೋರ್ಟ್‌ನ ಎರಡು ವಿರೋಧಾತ್ಮಕ ಹೇಳಿಕೆಗಳನ್ನು ಉಪರಾಷ್ಟ್ರಪತಿ ಉಲ್ಲೇಖಿಸಿದ್ದು, “ಒಂದು ಪ್ರಕರಣದಲ್ಲಿ, ಸುಪ್ರೀಂ ಕೋರ್ಟ್ ಪೀಠಿಕೆ ಸಂವಿಧಾನದ ಭಾಗವಲ್ಲ ಎಂದು ಹೇಳುತ್ತದೆ (ಐಸಿ ಗೋಲಕ್‌ನಾಥ್ ಪ್ರಕರಣ) ಮತ್ತು ಇನ್ನೊಂದು ಪ್ರಕರಣದಲ್ಲಿ ಅದು ಸಂವಿಧಾನದ ಭಾಗವಾಗಿದೆ (ಕೇಶವಾನಂದ ಭಾರತಿ) ಎಂದು ಹೇಳುತ್ತದೆ” ಎಂದಿದ್ದಾರೆ. ಇಂದಿರಾ ಗಾಂಧಿ 1975ರಲ್ಲಿ ತುರ್ತು ಪರಿಸ್ಥಿತಿ ಹೇರಿದಾಗ ನ್ಯಾಯಾಲಯ ವಹಿಸಿದ ಪಾತ್ರವನ್ನು ಪ್ರಶ್ನಿಸಿದ್ದಾರೆ.

“ಪ್ರಜಾಪ್ರಭುತ್ವ ಇತಿಹಾಸದಲ್ಲಿ ಅತ್ಯಂತ ಕರಾಳ ಹಂತವಾದ” ತುರ್ತು ಪರಿಸ್ಥಿತಿ ಹೇರಿಕೆ ಮತ್ತು ಮೂಲಭೂತ ಹಕ್ಕುಗಳ ಅಮಾನತು ಕುರಿತು ಒಂಬತ್ತು ಹೈಕೋರ್ಟ್‌ಗಳು ನೀಡಿದ ತೀರ್ಪುಗಳನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ನಾನು ‘ಕರಾಳ’ ಎಂದೇ ಹೇಳುತ್ತೇನೆ. ಏಕೆಂದರೆ, ದೇಶದ ಅತ್ಯುನ್ನತ ನ್ಯಾಯಾಲಯವು ಒಂಬತ್ತು ಹೈಕೋರ್ಟ್‌ಗಳ ತೀರ್ಪುಗಳನ್ನು ನಿರ್ಲಕ್ಷಿಸಿದೆ. ಪ್ರಜಾಪ್ರಭುತ್ವದಲ್ಲಿ ಮೂಲಭೂತ ಹಕ್ಕುಗಳನ್ನು ಎಂದಿಗೂ ತಡೆಹಿಡಿಯಲಾಗುವುದಿಲ್ಲ”

“ಆದರೆ ಅದು (ಆ ಹಕ್ಕುಗಳ ಅಮಾನತು) ಮಾಡಲಾಯಿತು. ಸುಪ್ರೀಂ ಕೋರ್ಟ್ ತನ್ನನ್ನು ಮೂಲಭೂತ ಹಕ್ಕುಗಳ ಏಕೈಕ ತೀರ್ಪುಗಾರ ಎಂದು ಪರಿಗಣಿಸಿದೆ. ಅದು ಎಷ್ಟು ಸಮಯದವರೆಗೆ ಬೇಕಾದರೂ ಅಮಾನತುಗೊಳಿಸಬಹುದು” ಎಂದು ಜಗದೀಪ್ ಧನ್ಕರ್ ಟೀಕಿಸಿದ್ದಾರೆ.

“ಆದರೆ ತುರ್ತು ಪರಿಸ್ಥಿತಿ ಹೇರಿದ ಪ್ರಧಾನಿಯನ್ನು (ಇಂದಿರಾ ಗಾಂಧಿಯನ್ನು ಉಲ್ಲೇಖಿಸಿ) 1977 ರಲ್ಲಿ ಹೊಣೆಗಾರರನ್ನಾಗಿ ಮಾಡಲಾಯಿತು. ಆಗ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸಾರ್ವತ್ರಿಕ ಚುನಾವಣೆಯಲ್ಲಿ ಸೋತಿತು. ಆದ್ದರಿಂದ, ಸಂವಿಧಾನದ ಬಗ್ಗೆ ಯಾವುದೇ ಸಂದೇಹ ಬೇಡ. ಸಂವಿಧಾನವು ಜನರಿಗಾಗಿ ಮತ್ತು ಅದು ಅದನ್ನು ರಕ್ಷಿಸುವ ‘ಭಂಡಾರ’ ಎಂದು ಧನ್ಕರ್ ಹೇಳಿದ್ದಾರೆ.

‘ಶರಬತ್ ಜಿಹಾದ್’ ಹೇಳಿಕೆ ಆಘಾತಕಾರಿ: ಪತಂಜಲಿಯ ರಾಮದೇವ್‌ಗೆ ದೆಹಲಿ ಹೈಕೋರ್ಟ್ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...