Homeಮುಖಪುಟ'ಸಂಸತ್ತೇ ಪರಮೋಚ್ಛ': ನ್ಯಾಯಾಂಗದ ಬಗ್ಗೆ ಜಗದೀಪ್ ಧನ್ಕರ್ ಮತ್ತೆ ಅಸಮಾಧಾನ

‘ಸಂಸತ್ತೇ ಪರಮೋಚ್ಛ’: ನ್ಯಾಯಾಂಗದ ಬಗ್ಗೆ ಜಗದೀಪ್ ಧನ್ಕರ್ ಮತ್ತೆ ಅಸಮಾಧಾನ

- Advertisement -
- Advertisement -

“ಸಂಸತ್ತೇ (ಶಾಸಕಾಂಗ) ಪರಮೋಚ್ಛ’ ಮತ್ತು ‘ಚುನಾಯಿತ ಪ್ರತಿನಿಧಿಗಳು’ (ಸಂಸತ್ತಿನ ಸದಸ್ಯರು) ಸಂವಿಧಾನ ಹೇಗಿರುತ್ತದೆ ಎಂಬುದರ ಅಂತಿಮ ನಿರ್ಧಾರ ತೆಗೆದುಕೊಳ್ಳುವವರಾಗಿರುತ್ತಾರೆ ಮತ್ತು ಅದರ ಮೇಲೆ ಯಾವುದೇ ಅಧಿಕಾರವಿರುವುದಿಲ್ಲ” ಎಂದು ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಹೇಳಿದ್ದಾರೆ. ಈ ಮೂಲಕ ನ್ಯಾಯಾಂಗದ ಬಗ್ಗೆ ಮತ್ತೊಮ್ಮೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಂಗಳವಾರ (ಏ.22) ದೆಹಲಿ ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ಮಾತನಾಡಿದ ಧನ್ಕರ್ ಅವರು, “ನ್ಯಾಯಾಂಗದ ಕುರಿತ ತನ್ನ ಹಿಂದಿನ ಹೇಳಿಕೆಗಳನ್ನು ಪರೋಕ್ಷವಾಗಿ ಸಮರ್ಥಿಸಿಕೊಂಡಿದ್ದು,
“ಸಾಂವಿಧಾನಿಕ ಹುದ್ದೆಯಲ್ಲಿರುವವರು ಮಾತನಾಡುವ ಪ್ರತಿಯೊಂದು ಪದವೂ ಅತ್ಯುನ್ನತ ರಾಷ್ಟ್ರೀಯ ಹಿತಾಸಕ್ತಿಯಿಂದ ಮಾರ್ಗದರ್ಶಿಸಲ್ಪಡುತ್ತದೆ” ಎಂದಿದ್ದಾರೆ.

ಸುಪ್ರೀಂ ಕೋರ್ಟ್‌ನ ಎರಡು ವಿರೋಧಾತ್ಮಕ ಹೇಳಿಕೆಗಳನ್ನು ಉಪರಾಷ್ಟ್ರಪತಿ ಉಲ್ಲೇಖಿಸಿದ್ದು, “ಒಂದು ಪ್ರಕರಣದಲ್ಲಿ, ಸುಪ್ರೀಂ ಕೋರ್ಟ್ ಪೀಠಿಕೆ ಸಂವಿಧಾನದ ಭಾಗವಲ್ಲ ಎಂದು ಹೇಳುತ್ತದೆ (ಐಸಿ ಗೋಲಕ್‌ನಾಥ್ ಪ್ರಕರಣ) ಮತ್ತು ಇನ್ನೊಂದು ಪ್ರಕರಣದಲ್ಲಿ ಅದು ಸಂವಿಧಾನದ ಭಾಗವಾಗಿದೆ (ಕೇಶವಾನಂದ ಭಾರತಿ) ಎಂದು ಹೇಳುತ್ತದೆ” ಎಂದಿದ್ದಾರೆ. ಇಂದಿರಾ ಗಾಂಧಿ 1975ರಲ್ಲಿ ತುರ್ತು ಪರಿಸ್ಥಿತಿ ಹೇರಿದಾಗ ನ್ಯಾಯಾಲಯ ವಹಿಸಿದ ಪಾತ್ರವನ್ನು ಪ್ರಶ್ನಿಸಿದ್ದಾರೆ.

“ಪ್ರಜಾಪ್ರಭುತ್ವ ಇತಿಹಾಸದಲ್ಲಿ ಅತ್ಯಂತ ಕರಾಳ ಹಂತವಾದ” ತುರ್ತು ಪರಿಸ್ಥಿತಿ ಹೇರಿಕೆ ಮತ್ತು ಮೂಲಭೂತ ಹಕ್ಕುಗಳ ಅಮಾನತು ಕುರಿತು ಒಂಬತ್ತು ಹೈಕೋರ್ಟ್‌ಗಳು ನೀಡಿದ ತೀರ್ಪುಗಳನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ನಾನು ‘ಕರಾಳ’ ಎಂದೇ ಹೇಳುತ್ತೇನೆ. ಏಕೆಂದರೆ, ದೇಶದ ಅತ್ಯುನ್ನತ ನ್ಯಾಯಾಲಯವು ಒಂಬತ್ತು ಹೈಕೋರ್ಟ್‌ಗಳ ತೀರ್ಪುಗಳನ್ನು ನಿರ್ಲಕ್ಷಿಸಿದೆ. ಪ್ರಜಾಪ್ರಭುತ್ವದಲ್ಲಿ ಮೂಲಭೂತ ಹಕ್ಕುಗಳನ್ನು ಎಂದಿಗೂ ತಡೆಹಿಡಿಯಲಾಗುವುದಿಲ್ಲ”

“ಆದರೆ ಅದು (ಆ ಹಕ್ಕುಗಳ ಅಮಾನತು) ಮಾಡಲಾಯಿತು. ಸುಪ್ರೀಂ ಕೋರ್ಟ್ ತನ್ನನ್ನು ಮೂಲಭೂತ ಹಕ್ಕುಗಳ ಏಕೈಕ ತೀರ್ಪುಗಾರ ಎಂದು ಪರಿಗಣಿಸಿದೆ. ಅದು ಎಷ್ಟು ಸಮಯದವರೆಗೆ ಬೇಕಾದರೂ ಅಮಾನತುಗೊಳಿಸಬಹುದು” ಎಂದು ಜಗದೀಪ್ ಧನ್ಕರ್ ಟೀಕಿಸಿದ್ದಾರೆ.

“ಆದರೆ ತುರ್ತು ಪರಿಸ್ಥಿತಿ ಹೇರಿದ ಪ್ರಧಾನಿಯನ್ನು (ಇಂದಿರಾ ಗಾಂಧಿಯನ್ನು ಉಲ್ಲೇಖಿಸಿ) 1977 ರಲ್ಲಿ ಹೊಣೆಗಾರರನ್ನಾಗಿ ಮಾಡಲಾಯಿತು. ಆಗ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸಾರ್ವತ್ರಿಕ ಚುನಾವಣೆಯಲ್ಲಿ ಸೋತಿತು. ಆದ್ದರಿಂದ, ಸಂವಿಧಾನದ ಬಗ್ಗೆ ಯಾವುದೇ ಸಂದೇಹ ಬೇಡ. ಸಂವಿಧಾನವು ಜನರಿಗಾಗಿ ಮತ್ತು ಅದು ಅದನ್ನು ರಕ್ಷಿಸುವ ‘ಭಂಡಾರ’ ಎಂದು ಧನ್ಕರ್ ಹೇಳಿದ್ದಾರೆ.

‘ಶರಬತ್ ಜಿಹಾದ್’ ಹೇಳಿಕೆ ಆಘಾತಕಾರಿ: ಪತಂಜಲಿಯ ರಾಮದೇವ್‌ಗೆ ದೆಹಲಿ ಹೈಕೋರ್ಟ್ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...