Homeಮುಖಪುಟಬಿಜೆಪಿಗೆ ಮತ ಹಾಕದವರಿಗೆ ನೀರಿಲ್ಲ: ಮಧ್ಯಪ್ರದೇಶದಲ್ಲಿ ಆಘಾತಕಾರಿ ಬೆಳವಣಿಗೆ

ಬಿಜೆಪಿಗೆ ಮತ ಹಾಕದವರಿಗೆ ನೀರಿಲ್ಲ: ಮಧ್ಯಪ್ರದೇಶದಲ್ಲಿ ಆಘಾತಕಾರಿ ಬೆಳವಣಿಗೆ

- Advertisement -
- Advertisement -

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ನ.17ರಂದು ಶಾಂತಿಯುತವಾಗಿ ಮತದಾನ ನಡೆದಿದೆ. ಆದರೆ ಇದಾದ ಕೇವಲ 2 ದಿನಗಳಲ್ಲೇ ಮಧ್ಯಪ್ರದೇಶದ ಅಶೋಕನಗರ ಜಿಲ್ಲೆಯಲ್ಲಿ ಆಘಾತಕಾರಿ ಬೆಳವಣಿಗೆ ಕಂಡು ಬಂದಿದ್ದು, ಸರಕಾರಿ ಬೋರ್‌ವೆಲ್‌ನಿಂದ ನೀರು ತೆಗೆಯಬೇಕಿದ್ದರೆ ಬಿಜೆಪಿಗೆ ಮತ ಹಾಕಿದ್ದೇವೆ ಎಂದು ಪ್ರಮಾಣ ವಚನ ಮಾಡುವಂತೆ ಮಹಿಳೆಯರಿಗೆ ಸೂಚಿಸಲಾಗಿದೆ.

ಬಿಜೆಪಿಯ ಸಚಿವ ಬ್ರಿಜೇಂದ್ರ ಸಿಂಗ್ ಯಾದವ್ ಪ್ರತಿನಿಧಿಸುವ ಮುಂಗಾವಲಿ ವಿಧಾನಸಭಾ ಕ್ಷೇತ್ರದ ನಯಖೇಡಾ ಗ್ರಾಮದಲ್ಲಿ ಘಟನೆ ನಡೆದಿದೆ.

ಇದು ಸರ್ಕಾರಿ ಬೋರ್‌ವೆಲ್, ನಾನು ಗ್ರಾಮದಲ್ಲಿ 4 ಕೊಳವೆಬಾವಿಯನ್ನು ಮಾಡಿಸಿ ಎಲ್ಲರಿಗೂ ನೀರು ಒದಗಿಸಲು ವ್ಯವಸ್ಥೆ ಮಾಡಿದ್ದೇನೆ. ಚುನಾವಣೆ ನಂತರ ಇಂತಹ ಘಟನೆ ಏಕೆ ನಡೆಯುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ ಎಂದು ಸಚಿವ ಬ್ರಿಜೇಂದ್ರ ಸಿಂಗ್ ಯಾದವ್ ಹೇಳಿದ್ದಾರೆ.

ಶ್ಯಾಮ್ ಬಾಯಿ ಎಂಬವರು ಈ ಕುರಿತು ಪ್ರತಿಕ್ರಿಯಿಸಿದ್ದು, ಅವರು ಗ್ರಾಮಸ್ಥರಲ್ಲಿ ಬಿಜೆಪಿಗೆ ಮತ ಹಾಕಿದ್ದಾರೋ ಇಲ್ಲವೋ ಎಂದು ಕೇಳುತ್ತಾರೆ. ನಾವು ಇಲ್ಲ ಎಂದರೆ  ಮೋಟಾರ್ ಸ್ವಿಚ್ ಆಫ್ ಮಾಡಿ ನಮ್ಮನ್ನು ಕಳುಹಿಸುತ್ತಾರೆ ಎಂದು ಆರೋಪಿಸಿದ್ದಾರೆ.

ಮತ್ತೋರ್ವ ಯುವತಿ ಈ ಬಗ್ಗೆ ಮಾತನಾಡಿದ್ದು, ಮತದಾನದ ನಂತರ ಅವರು ಬೋರ್‌ವೆಲ್‌ ರನ್ನಿಂಗ್‌ನ್ನು ಸಂಪೂರ್ಣವಾಗಿ ನಿಲ್ಲಿಸಿದ್ದಾರೆ. ರಾತ್ರಿ ವೇಳೆಯಲ್ಲಿ ನಮಗೆ ತಿಳಿಯದ ಸಮಯದಲ್ಲಿ ಸ್ವಿಚ್ ಆನ್‌ ಮಾಡುತ್ತಾರೆ ಎಂದು ಆರೋಪಿಸಿದ್ದಾರೆ.

ಇತರ ಗ್ರಾಮಸ್ಥರು ಕೂಡ ಇದೇ ರೀತಿಯ ದೂರುಗಳನ್ನು ನೀಡಿದ್ದಾರೆ. ಕಮಲ ಚಿಹ್ನೆಗೆ ಮತ ಹಾಕದಿದ್ದರೆ ನೀರು ಕೊಡುವುದಿಲ್ಲ ಎಂದು ಹೇಳಲಾಗಿದೆ ಎಂದು ಆರೋಪಿಸಿದ್ದಾರೆ.

ಘಟನೆ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಸರ್ಕಾರದ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಪಕ್ಷದ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್‌ ಮಾಡಿದ್ದು, ಬಿಜೆಪಿಯ ಕ್ರೌರ್ಯದ ಪರಮಾವಧಿ ನೋಡಿ, ಮತ ಹಾಕದವರನ್ನು ನೀರಿಲ್ಲದೆ ಕೊಲ್ಲಲು ಮುಂದಾಗಿದ್ದಾರೆ. 18ವರೆ ವರ್ಷಗಳ ನಂತರ ದುಷ್ಕೃತ್ಯಗಳ ಎಲ್ಲಾ ಮಿತಿಗಳನ್ನು ದಾಟಿದ ಬಿಜೆಪಿಗೆ ಇನ್ನೂ ಸಮಾಧಾನವಾಗಿಲ್ಲ. ಭ್ರಷ್ಟಾಚಾರ, ದುರಾಡಳಿತ ಮತ್ತು ದೌರ್ಜನ್ಯಗಳಿಗೆ ಮಧ್ಯಪ್ರದೇಶದ ಜನರು ತಮ್ಮ ಉತ್ತರವನ್ನು ನೀಡಿದ್ದಾರೆ ಎಂದು ಹೇಳಿದ್ದಾರೆ.

ಮಧ್ಯಪ್ರದೇಶ ವಿಧಾನಸಭೆಗೆ ನ.17ರಂದು ಮತಾದಾನ ನಡೆದಿದೆ. ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಡಿ.3ರಂದು ಪ್ರಕಟವಾಗಲಿದೆ.

ಇದನ್ನು ಓದಿ: ಕಿರುಕುಳ ನೀಡುವ ಉದ್ದೇಶದಿಂದ ನನ್ನ ವರ್ಗಾವಣೆ ಮಾಡಲಾಗಿತ್ತು: ಜಸ್ಟಿಸ್‌ ದಿವಾಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...