Homeಕರ್ನಾಟಕSSLC ಪರೀಕ್ಷೆಗಳು: ವೇಳಾಪಟ್ಟಿಯಲ್ಲಿ ಬದಲಾವಣೆಯಿಲ್ಲ ಎಂದ ಶಿಕ್ಷಣ ಸಚಿವ ಸುರೇಶ್ ಕುಮಾರ್

SSLC ಪರೀಕ್ಷೆಗಳು: ವೇಳಾಪಟ್ಟಿಯಲ್ಲಿ ಬದಲಾವಣೆಯಿಲ್ಲ ಎಂದ ಶಿಕ್ಷಣ ಸಚಿವ ಸುರೇಶ್ ಕುಮಾರ್

- Advertisement -
- Advertisement -

ಕೊರೋನಾ ಸಾಂಕ್ರಾಮಿಕದ ಕಾರಣದಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರಾಜ್ಯ ಸರ್ಕಾರ ರದ್ದುಪಡಿಸಿತ್ತು. ಅದೇ ಸಂದರ್ಭದಲ್ಲಿ SSLC ಪರೀಕ್ಷೆಗಳನ್ನು ರದ್ದು ಮಾಡಬೇಕೆಂಬ ಕೂಗು ಕೇಳಿಬಂದಿತ್ತು. ಪರಿಸ್ಥಿತಿಯನ್ನು ನೋಡಿ ನಿರ್ಧಾರ ಕೈಗೊಳ್ಳಲಾಗುವದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಂದು ತಿಳಿಸಿದ್ದರು. ಶಿಕ್ಷಣ ಇಲಾಖೆ ಜುಲೈ 19 ಮತ್ತು 22 ರಂದು ಎರಡು ದಿನಗಳಲ್ಲಿ ಪರೀಕ್ಷೆಗಳನ್ನು ನಡೆಸುವುದಾಗಿ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್‌ ಅವರು SSLC ಪರೀಕ್ಷೆಯ ಕುರಿತಾಗಿನ ಎಲ್ಲಾ ಅನುಮಾನಗಳಿಗೆ ತೆರೆ ಎಳೆದಿದ್ದಾರೆ. 2021 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರದ್ದು ಮಾಡುವ, ಮುಂದೂಡುವುದಿಲ್ಲ. ನಿಗಧಿಯಂತೆ ಪರೀಕ್ಷೆ ನಡೆಯಲಿದೆ ಎಂದು ಸರೇಶ್ ಕುಮಾರ್ ತಿಳಿಸಿದ್ದಾರೆ.

ನಿಗದಿತ ವೇಳಾಪಟ್ಟಿಯಂತೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಯ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ಪರೀಕ್ಷಾ ವಿಧಾನದಲ್ಲಿಯೂ ಬದಲಾವಣೆಗಳಿಲ್ಲ. ಈ ಹಿಂದೆ ಹೇಳಿದ ರೀತಿಯಲ್ಲಿಯೇ SSLC ಪರೀಕ್ಷೆಗಳನ್ನು ನಡೆಸಲಾಗುವುದು. ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಯಾವುದೇ ಆತಂಕಬೇಡ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಎಸ್​ಎಸ್​ಎಲ್​ಸಿ ಜುಲೈ 19 ಮತ್ತು 22 ರಂದು ಎರಡು ದಿನಗಳಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲು ತೀರ್ಮಾನಿಸಿರುವ ಶಿಕ್ಷಣ ಇಲಾಖೆ ಇಂದು ಮಹತ್ವದ ಸಭೆ ನಡೆಸಿ ನಿರ್ಧಾರ ಕೈಗೊಂಡಿದೆ. ಜುಲೈ ತಿಂಗಳ ಮೂರನೇ ವಾರದಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ಎಸ್​ಎಸ್​ಎಲ್​ಸಿ ಪರೀಕ್ಷೆಯ ಅಧಿಕೃತ ವೇಳಾಪಟ್ಟಿಯನ್ನು ಇಂದು (ಜೂನ್ 28) ನಡೆದ ಸಭೆಯಲ್ಲಿ ಅಂತಿಮಗೊಳಿಸಲಾಗಿದ್ದು, ಜುಲೈ 19 ರಂದು ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆ ಬೆಳಗ್ಗೆ 10.30ರಿಂದ 1.30ರ ತನಕ ಹಾಗೂ ಭಾಷಾ ವಿಷಯಗಳ ಪರೀಕ್ಷೆ 22ರಂದು ಬೆಳಗ್ಗೆ 10.30ರಿಂದ 1.30ರ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಿಸಿದ್ದಾರೆ.

ಸುರಕ್ಷಿತ ವಾತಾವರಣದಲ್ಲಿ ಎಸ್‌ಎಸ್‌ಎಲ್​ಸಿ ಪರೀಕ್ಷೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಜಿಲ್ಲಾಧಿಕಾರಿಗಳು, ಸಿಇಒ, ಎಸ್​ಪಿ, ಡಿಎಚ್‌ಒಗಳು ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಮತ್ತು ರಾಜ್ಯದ ಆರೋಗ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಪಾಲ್ಗೊಂಡಿದ್ದರು.


ಇದನ್ನೂ ಓದಿ : ಜಮ್ಮು ಸೇನಾನೆಲೆಯ ಬಳಿ ಕಾಣಿಸಿಕೊಂಡ ಡ್ರೋಣ್‌ಗಳು: ಸೇನೆಯಿಂದ ಫೈರಿಂಗ್

ಸೂಕ್ತ ಸುರಕ್ಷತಾ ಕ್ರಮಗಳ ಅಳವಡಿಕೆ 
ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಆಶಾ ಕಾರ್ಯಕರ್ತೆಯರು ಮತ್ತು ಪ್ಯಾರಾ ಮೆಡಿಕಲ್ ಸಿಬ್ಬಂದಿಯನ್ನು ನೇಮಿಸಲಾಗುವುದು. ಒಂದು ಕೊಠಡಿಯಲ್ಲಿ ಕೇವಲ 12 ಬೆಂಚುಗಳಿಗೆ ಮಾತ್ರ ಅವಕಾಶವನ್ನು ನೀಡಲಾಗಿದ್ದು ಪ್ರತಿ ಬೆಂಚ್‌ಗೆ ಒಬ್ಬ ವಿದ್ಯಾರ್ಥಿಗೆ ಮಾತ್ರ ಅವಕಾಶ ನೀಡಲಾಗುವುದು. ಕೊರೋನಾ ಸೋಂಕಿತ ವಿದ್ಯಾರ್ಥಿಗಳು ಬಯಸಿದರೆ ಅವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ. 8,76,581 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಯನ್ನು ಬರೆಯಲಿದ್ದು 73,066 ಸೆಂಟರ್‌ಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಆರೋಗ್ಯ ಇಲಾಕೆ SOP ಬಿಡುಗಡೆ ಮಾಡಿದ್ದು ಆರೋಗ್ಯ ಇಲಾಖೆಯ ಮಾರ್ಗಸೂಚಿಗಳ ಅನುಸಾರವೇ ಪರೀಕ್ಷೆ ನಡೆಯಲಿದೆ ಎಂದು ಸಚಿವರು ಹೇಳಿದ್ದಾರೆ.

ಪ್ರಶ್ನೆ ಪತ್ರಿಕೆ ಅತ್ಯಂತ ಸುಲಭವಾಗಿರಲಿದ್ದು ಸಂಪೂರ್ಣ ಬಹುಆಯ್ಕೆ ಪ್ರಶ್ನೆಗಳನ್ನೇ ಒಳಗೊಂಡಿರಲಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಶಿಕ್ಷಕರು ಮತ್ತು ಸಿಬ್ಬಂದಿಗೆ ವ್ಯಾಕ್ಸಿನ್ ತೆಗೆದುಕೊಳ್ಳುವುದು ಕಡ್ಡಾಯವಾಗಿದೆ. ಪರೀಕ್ಷಾ ವಲಯದಲ್ಲಿ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವುದು ಖಡ್ಡಾಯವಾಗಿರಲಿದ್ದು ನಿಯಮ ಉಲ್ಲಂಘನೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳ ಪೋಷಕರು ಬೆಳಿಗ್ಗೆ 8 ಗಂಟೆ ವೇಳೆಗೆ ಪರೀಕ್ಷಾ ಕೇಂದ್ರಗಳಿಗೆ ಬರಬಹುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...