Homeಕರ್ನಾಟಕಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

ಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

2020-21ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ಟಿನಲ್ಲಿ ರೂ.500 ಕೋಟಿ ಹಣವನ್ನು ಚಿತ್ರನಗರಿ ನಿರ್ಮಾಣಕ್ಕಾಗಿ ಘೋಷಿಸಲಾಗಿದ್ದು, ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ಸ್ಥಾಪಿಸುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು.

- Advertisement -
- Advertisement -

ಬೆಂಗಳೂರಿನ ಹೆಸರಘಟ್ಟ ಬಳಿ 150 ಎಕರೆ ಪ್ರದೇಶದಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು ಇದರ ಪರ-ವಿರೋಧ ಚರ್ಚೆಗಳು ಆರಂಭವಾಗಿವೆ. ಇದು ದಖ್ಖನ್ ಪ್ರಸ್ಥಭೂಮಿಯ ಹುಲ್ಲುಗಾವಲು ಪ್ರದೇಶವಾಗಿದ್ದು ಜೈವಿಕ ಮತ್ತು ಪಾರಿಸರಿಕಾವಾಗಿ ಅತ್ಯಂತ ಸೂಕ್ಷ್ಮ ಪ್ರದೇಶವಾಗಿದೆ.

2020-21ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ಟಿನಲ್ಲಿ ರೂ.500 ಕೋಟಿ ಹಣವನ್ನು ಚಿತ್ರನಗರಿ ನಿರ್ಮಾಣಕ್ಕಾಗಿ ಘೋಷಿಸಲಾಗಿದ್ದು, ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ಸ್ಥಾಪಿಸುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು.

ಹೆಸರಘಟ್ಟದಲ್ಲಿ ಚಿತ್ರನಗರಿಗಾಗಿ ಮೀಸಲಿಟ್ಟಿರುವ ಸುಮಾರು 347 ಎಕರೆ ಭೂಪ್ರದೇಶವು ಪಶುಸಂಗೋಪನಾ ಇಲಾಖೆಗೆ ಸೇರಿದೆ. ಈ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಚಿತ್ರನಗರಿ ನಿರ್ಮಾಣದಿಂದ ಪರಿಸರ ಮತ್ತು ಜೀವ ವೈವಿಧ್ಯತೆಗೆ ತೊಂದರೆಯುಂಟಾಗುತ್ತದೆ ಎಂದು ಹಲವು ಪರಿಸರವಾದಿಗಳು ಇದನ್ನು ವಿರೋಧಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ 2012 ರಲ್ಲಿಯೇ ಪರಿಸರವಾದಿಗಳು ಪಿಐಎಲ್ ಸಲ್ಲಿಸಿದ್ದರಿಂದ ಅಂದಿನ ರಾಜ್ಯ ಸರ್ಕಾರ ಯಥಾಸ್ಥಿತಿಯನ್ನು ಮುಂದುವರಿಸುವುದಾಗಿ ಹೇಳಿ, ಅಲ್ಲಿ ಚಿತ್ರನಗರಿ ನಿರ್ಮಾಣ ಮಾಡುವ ಪ್ರಸ್ತಾವವನ್ನು ಕೈಬಿಟ್ಟು ಪರ್ಯಾಯ ಸ್ಥಳವನ್ನು ಹುಡುಕುತ್ತಿತ್ತು. ಆದರೆ ಅಂದು ಆಶ್ವಾಸನೆ ಕೊಟ್ಟ ಸರ್ಕಾರ ಈಗ ಮತ್ತೆ ಅದೇ ಕೆಲಸಕ್ಕೆ ಮುಂದಾಗಿದೆ ಎಂದು ಪರಿಸರವಾದಿ ಮಹೇಶ್ ಭಟ್ ಹೇಳುತ್ತಾರೆ.

ಈ ವಿಷಯದ ಕುರಿತು ಮಹೇಶ್ ಭಟ್ ಮೊದಲಿನಿಂದಲೂ ದನಿಯೆತ್ತುತ್ತಿದ್ದಾರೆ. ಅರ್ಕಾವತಿ ನದಿಯ ಜಲಾನಯನ ಪ್ರದೇಶವಾಗಿರುವುದರಿಂದ ಇದನ್ನು ಉಳಿಸಿಕೊಳ್ಳಬೇಕಾದ ತುರ್ತಿದೆ. ಇದರ ಕುರಿತು ಸಾಕಷ್ಟು ಬರಹಗಳನ್ನು ಪ್ರಕಟಿಸುವುದರೊಂದಿಗೆ ಅವರು ಹಲವು ಹೋರಾಟಗಳನ್ನೂ ಮಾಡಿದ್ದಾರೆ.

ವಾಯುಮಾಲಿನ್ಯವನ್ನು ತಡೆಗಟ್ಟಿ ಪರಿಸರವನ್ನು ಉಳಿಸುವುದಾಗಿ ಜಗತ್ತಿನ ಎಲ್ಲಾ ದೇಶಗಳು ಪಣತೊಟ್ಟಿವೆ. ಈಗಾಗಲೆ ಜಾಗತಿಕ ತಾಪಮಾನ ಹೆಚ್ಚಿ ಸಾಕಷ್ಟು ತೊಂದರೆಗಳಾಗುತ್ತಿವೆ. ಮತ್ತೊಂದು ಕಡೆ ಕೊರೊನಾ ಎಂಬ ಸಾಂಕ್ರಾಮಿಕ ಹರಡಲೂ ಸಹ ಈ ರೀತಿಯ ಪರಿಸರನಾಶವೇ ಕಾರಣ ಎಂದು ತಿಳಿದುಬಂದಿದೆ.  ಹೀಗಿರುವಾಗ ಸರ್ಕಾರ ಮತ್ತೆ ಇಂತಹ ಕೆಲಸಕ್ಕೆ ಕೈ ಹಾಕಿರುವುದು ನಿಜವಾಗಲೂ ಖಂಡನೀಯ ಎಂದು ಮಹೇಶ್ ಭಟ್ ಹೇಳುತ್ತಾರೆ.

ಅಷ್ಟೇ ಅಲ್ಲದೇ ಇದು ಬೆಂಗಳೂರಿನ ಸುತ್ತಮುತ್ತ ಇರುವ ಏಕೈಕ ಹಸಿರು ಪ್ರದೇಶವಾಗಿದ್ದು, ಸಾಕಷ್ಟು ಜೀವ ವೈವಿಧ್ಯತೆಯನ್ನು ಹೊಂದಿದೆ. 120ಕ್ಕೂ ಹೆಚ್ಚು ಪಕ್ಷಿ ಪ್ರಭೇದಗಳು, ಸಸ್ತನಿಗಳು ಮತ್ತು ಸರಿಸೃಪಗಳಿವೆ. ಅಳಿವಿನಂಚಿನಲ್ಲಿರುವ ವನ್ಯಜೀವಿಗಳಿಗೆ ಇರುವ ಏಕೈಕ ತಾಣವಿದು. ಜೊತೆಗೆ ನಗರೀಕರಣ ಮತ್ತು ಹವಾಮಾನ ಬದಲಾವಣೆಯ ಪರಿಣಾಮಗಳನ್ನು ತಡೆಗಟ್ಟಲು ಪರಿಸರದ ಉಳಿವಿನಿಂದ ಮಾತ್ರ ಸಾದ್ಯ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಮಹೇಶ್ ಭಟ್ ಇದರ ಕುರಿತು ಸವಿಸ್ತಾರವಾಗಿ ಫೇಸ್ಬುಕ್ ನಲ್ಲಿ ಬರಹವೊಂದನ್ನು ಮತ್ತು ಸರ್ಕಾರದ ಆದೇಶವನ್ನು ಹಂಚಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಮತ್ತೊಬ್ಬ ಪರಿಸರವಾದಿ ಲಿಯೋ ಸಾಲ್ಡಾನಾ ‘ಇಷ್ಟು ಸೂಕ್ಷ್ಮವಾದ ಪರಿಸರ ಪ್ರದೇಶವನ್ನು ಚಿತ್ರನಗರಿಯ ನಿರ್ಮಾಣಕ್ಕೆ ಕೊಡುವುದು ಸರ್ಕಾರದ ಹುಚ್ಚುತನವನ್ನು ತೋರಿಸುತ್ತದೆ’ ಎಂದಿದ್ದಾರೆ.

‘ಸುಮಾರು 100 ವರ್ಷಗಳಿಗೆ ಮೊದಲು ಇಲ್ಲಿ ಕಟ್ಟೆಯೊಂದನ್ನು ಕಟ್ಟಿ ಕೆರೆಯನ್ನು ನಿರ್ಮಿಸಲಾಗಿತ್ತು. ಬೆಂಗಳೂರಿಗೆ ಇದು ನೀರಿನ ಮೂಲವಾಗಿತ್ತು. ಆದರೆ ಈಗ 10 ವರ್ಷಗಳಿಂದ ಅಲ್ಲಿ ನೀರೂ ಸಹ ಇಲ್ಲ. ಹೀಗಿರುವಾಗ ಅಲ್ಲಿ ಚಿತ್ರನಗರಿ ನಿರ್ಮಾಣ ಮಾಡುವುದರಿಂದ ಉಪಯೋಗವಿಲ್ಲ’ ಎಂದಿದ್ದಾರೆ.

ಸರ್ಕಾರದ ಒಡೆತನದಲ್ಲಿಯೇ ಹತ್ತಾರು ಫ್ಯಾಕ್ಟರಿಗಳು ಖಾಲಿಯಾಗಿ ಉಳಿದಿವೆ. ಇಂತಹ ಯಾವುದೋ ಒಂದು ಸ್ಥಳದಲ್ಲಿ ಚಿತ್ರನಗರಿ ನಿರ್ಮಾಣ ಮಾಡಿದರೆ ಒಳ್ಳೆಯದು. ಅದು ಬಿಟ್ಟು ಸದ್ಯ ಬೆಂಗಳೂರನ್ನು ಕಾಪಾಡುತ್ತಿರುವ ಈ ಪ್ರದೇಶವನ್ನೂ ನಿರ್ಮೂಲನೆ ಮಾಡಿದರೆ ಮುಂದೆ ಅತ್ಯಂತ ಅಪಾಯಕಾರಿ ಸನ್ನಿವೇಷಗಳನ್ನು ಎದುರಿಸಬೇಕಾಗುತ್ತದೆ. ನೂರಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಲಿಯೋ ಸಾಲ್ಡಾನಾ ಹೇಳಿದ್ದಾರೆ.

ನಮಗೆ ಚಿತ್ರನಗರಿ ಬೇಕು, ಆದರೆ ಪರಿಸರವನ್ನು ನಾಶಮಾಡಿ ಅದನ್ನು ನಿರ್ಮಿಸುವುದಕ್ಕೆ ನನ್ನ ವಿರೋಧವಿದೆ. ಚಿತ್ರನಗರಿಯೂ ಬೇಕು, ಪರಿಸರವೂ ಉಳಿಯಬೇಕು ಎಂದರೆ ಈ ಪ್ರದೇಶವನ್ನು ಬಿಟ್ಟು ಬೇರೆ ಯಾವುದಾದರೂ ಬಯಲು ಪ್ರದೇಶ ಅಥವಾ ಪರಿಸರದ ದೃಷ್ಟಿಯಿಂದ ಅಷ್ಟಾಗಿ ಸೂಕ್ಷ್ಮವಲ್ಲದ ಸ್ಥಳವನ್ನು ಹುಡುಕಿ ನಿರ್ಮಿಸಿಕೊಳ್ಳಬೇಕು ಎಂದು ಚಿತ್ರನಟ ಚೇತನ್ ಅಹಿಂಸಾ ಅಭಿಪ್ರಾಯ ಪಟ್ಟಿದ್ದಾರೆ.

ಕರ್ನಾಟಕದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ಚಿತ್ರನಗರಿ ನಿರ್ಮಾಣವಾಗಬೇಕೆಂಬುದು ಹಲವು ವರ್ಷಗಳ ಕೂಗು. ಆದರೆ ಇದೇ ಸ್ಥಳದಲ್ಲಿ ಬೇಕು ಎಂದು ನಾವು ಹೇಳುತ್ತಿಲ್ಲ. ಬಹುಪಾಲು ಬೆಂಗಳೂರಿಗೆ ಹತ್ತಿರವಾಗುವಂತೆ ಎಲ್ಲಿಯಾದರೂ ಸರಿ ಆದಷ್ಟು ಬೇಗ ಚಿತ್ರನಗರಿ ನಿರ್ಮಾಣ ಮಾಡಬೇಕೆಂದು ಈ ಮೂಲಕ ಒತ್ತಾಯಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಕನ್ನಟ ಚಿತ್ರರಂಗದ ದೃಷ್ಟಿಕೋನದಿಂದ ನೋಡುವುದಾದರೆ, ಈಗಲೂ ಚಿತ್ರೀಕರಣಕ್ಕಾಗಿ ಹೈದರಾಬಾದಿಗೊ ಅಥವಾ ಮತ್ತೆಲ್ಲಿಗೋ ಹೋಗಬೇಕಾಗಿದೆ. ಇದು ಹೆಚ್ಚು ದುಬಾರಿಯೂ ಆಗಿದೆ. ಈಗಿರುವ ಕಂಠೀರವ ಸ್ಟುಡಿಯೋದಲ್ಲಿ ಕೆಲವು ಕೊರತೆಗಳಿವೆ. ಹಾಗಾಗಿ ಬೆಂಗಳೂರಿನ ಬಳಿ ಚಿತ್ರನಗರಿ ನಿರ್ಮಾಣವಾಗಬೇಕು. ಜೊತೆಗೆ 4-5 ವರ್ಷಗಳಿಗೊಮ್ಮೆ ಅದು ಅಪ್ಡೇಟ್ ಆಗುತ್ತಿರಬೇಕು ಎಂದು ಚೇತನ್ ಹೇಳಿದ್ದಾರೆ.


ಇದನ್ನೂ ಓದಿ: ಪರಿಸರ ದಿನ: ಪರಿಸರ ಮಾಲಿನ್ಯಕ್ಕೆ ಯಾರನ್ನು ದೂಷಿಸಬೇಕು? ನಾವೇನು ಮಾಡಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...