Homeಕರ್ನಾಟಕಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

ಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

2020-21ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ಟಿನಲ್ಲಿ ರೂ.500 ಕೋಟಿ ಹಣವನ್ನು ಚಿತ್ರನಗರಿ ನಿರ್ಮಾಣಕ್ಕಾಗಿ ಘೋಷಿಸಲಾಗಿದ್ದು, ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ಸ್ಥಾಪಿಸುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು.

- Advertisement -
- Advertisement -

ಬೆಂಗಳೂರಿನ ಹೆಸರಘಟ್ಟ ಬಳಿ 150 ಎಕರೆ ಪ್ರದೇಶದಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು ಇದರ ಪರ-ವಿರೋಧ ಚರ್ಚೆಗಳು ಆರಂಭವಾಗಿವೆ. ಇದು ದಖ್ಖನ್ ಪ್ರಸ್ಥಭೂಮಿಯ ಹುಲ್ಲುಗಾವಲು ಪ್ರದೇಶವಾಗಿದ್ದು ಜೈವಿಕ ಮತ್ತು ಪಾರಿಸರಿಕಾವಾಗಿ ಅತ್ಯಂತ ಸೂಕ್ಷ್ಮ ಪ್ರದೇಶವಾಗಿದೆ.

2020-21ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ಟಿನಲ್ಲಿ ರೂ.500 ಕೋಟಿ ಹಣವನ್ನು ಚಿತ್ರನಗರಿ ನಿರ್ಮಾಣಕ್ಕಾಗಿ ಘೋಷಿಸಲಾಗಿದ್ದು, ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ಸ್ಥಾಪಿಸುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು.

ಹೆಸರಘಟ್ಟದಲ್ಲಿ ಚಿತ್ರನಗರಿಗಾಗಿ ಮೀಸಲಿಟ್ಟಿರುವ ಸುಮಾರು 347 ಎಕರೆ ಭೂಪ್ರದೇಶವು ಪಶುಸಂಗೋಪನಾ ಇಲಾಖೆಗೆ ಸೇರಿದೆ. ಈ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಚಿತ್ರನಗರಿ ನಿರ್ಮಾಣದಿಂದ ಪರಿಸರ ಮತ್ತು ಜೀವ ವೈವಿಧ್ಯತೆಗೆ ತೊಂದರೆಯುಂಟಾಗುತ್ತದೆ ಎಂದು ಹಲವು ಪರಿಸರವಾದಿಗಳು ಇದನ್ನು ವಿರೋಧಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ 2012 ರಲ್ಲಿಯೇ ಪರಿಸರವಾದಿಗಳು ಪಿಐಎಲ್ ಸಲ್ಲಿಸಿದ್ದರಿಂದ ಅಂದಿನ ರಾಜ್ಯ ಸರ್ಕಾರ ಯಥಾಸ್ಥಿತಿಯನ್ನು ಮುಂದುವರಿಸುವುದಾಗಿ ಹೇಳಿ, ಅಲ್ಲಿ ಚಿತ್ರನಗರಿ ನಿರ್ಮಾಣ ಮಾಡುವ ಪ್ರಸ್ತಾವವನ್ನು ಕೈಬಿಟ್ಟು ಪರ್ಯಾಯ ಸ್ಥಳವನ್ನು ಹುಡುಕುತ್ತಿತ್ತು. ಆದರೆ ಅಂದು ಆಶ್ವಾಸನೆ ಕೊಟ್ಟ ಸರ್ಕಾರ ಈಗ ಮತ್ತೆ ಅದೇ ಕೆಲಸಕ್ಕೆ ಮುಂದಾಗಿದೆ ಎಂದು ಪರಿಸರವಾದಿ ಮಹೇಶ್ ಭಟ್ ಹೇಳುತ್ತಾರೆ.

ಈ ವಿಷಯದ ಕುರಿತು ಮಹೇಶ್ ಭಟ್ ಮೊದಲಿನಿಂದಲೂ ದನಿಯೆತ್ತುತ್ತಿದ್ದಾರೆ. ಅರ್ಕಾವತಿ ನದಿಯ ಜಲಾನಯನ ಪ್ರದೇಶವಾಗಿರುವುದರಿಂದ ಇದನ್ನು ಉಳಿಸಿಕೊಳ್ಳಬೇಕಾದ ತುರ್ತಿದೆ. ಇದರ ಕುರಿತು ಸಾಕಷ್ಟು ಬರಹಗಳನ್ನು ಪ್ರಕಟಿಸುವುದರೊಂದಿಗೆ ಅವರು ಹಲವು ಹೋರಾಟಗಳನ್ನೂ ಮಾಡಿದ್ದಾರೆ.

ವಾಯುಮಾಲಿನ್ಯವನ್ನು ತಡೆಗಟ್ಟಿ ಪರಿಸರವನ್ನು ಉಳಿಸುವುದಾಗಿ ಜಗತ್ತಿನ ಎಲ್ಲಾ ದೇಶಗಳು ಪಣತೊಟ್ಟಿವೆ. ಈಗಾಗಲೆ ಜಾಗತಿಕ ತಾಪಮಾನ ಹೆಚ್ಚಿ ಸಾಕಷ್ಟು ತೊಂದರೆಗಳಾಗುತ್ತಿವೆ. ಮತ್ತೊಂದು ಕಡೆ ಕೊರೊನಾ ಎಂಬ ಸಾಂಕ್ರಾಮಿಕ ಹರಡಲೂ ಸಹ ಈ ರೀತಿಯ ಪರಿಸರನಾಶವೇ ಕಾರಣ ಎಂದು ತಿಳಿದುಬಂದಿದೆ.  ಹೀಗಿರುವಾಗ ಸರ್ಕಾರ ಮತ್ತೆ ಇಂತಹ ಕೆಲಸಕ್ಕೆ ಕೈ ಹಾಕಿರುವುದು ನಿಜವಾಗಲೂ ಖಂಡನೀಯ ಎಂದು ಮಹೇಶ್ ಭಟ್ ಹೇಳುತ್ತಾರೆ.

ಅಷ್ಟೇ ಅಲ್ಲದೇ ಇದು ಬೆಂಗಳೂರಿನ ಸುತ್ತಮುತ್ತ ಇರುವ ಏಕೈಕ ಹಸಿರು ಪ್ರದೇಶವಾಗಿದ್ದು, ಸಾಕಷ್ಟು ಜೀವ ವೈವಿಧ್ಯತೆಯನ್ನು ಹೊಂದಿದೆ. 120ಕ್ಕೂ ಹೆಚ್ಚು ಪಕ್ಷಿ ಪ್ರಭೇದಗಳು, ಸಸ್ತನಿಗಳು ಮತ್ತು ಸರಿಸೃಪಗಳಿವೆ. ಅಳಿವಿನಂಚಿನಲ್ಲಿರುವ ವನ್ಯಜೀವಿಗಳಿಗೆ ಇರುವ ಏಕೈಕ ತಾಣವಿದು. ಜೊತೆಗೆ ನಗರೀಕರಣ ಮತ್ತು ಹವಾಮಾನ ಬದಲಾವಣೆಯ ಪರಿಣಾಮಗಳನ್ನು ತಡೆಗಟ್ಟಲು ಪರಿಸರದ ಉಳಿವಿನಿಂದ ಮಾತ್ರ ಸಾದ್ಯ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಮಹೇಶ್ ಭಟ್ ಇದರ ಕುರಿತು ಸವಿಸ್ತಾರವಾಗಿ ಫೇಸ್ಬುಕ್ ನಲ್ಲಿ ಬರಹವೊಂದನ್ನು ಮತ್ತು ಸರ್ಕಾರದ ಆದೇಶವನ್ನು ಹಂಚಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಮತ್ತೊಬ್ಬ ಪರಿಸರವಾದಿ ಲಿಯೋ ಸಾಲ್ಡಾನಾ ‘ಇಷ್ಟು ಸೂಕ್ಷ್ಮವಾದ ಪರಿಸರ ಪ್ರದೇಶವನ್ನು ಚಿತ್ರನಗರಿಯ ನಿರ್ಮಾಣಕ್ಕೆ ಕೊಡುವುದು ಸರ್ಕಾರದ ಹುಚ್ಚುತನವನ್ನು ತೋರಿಸುತ್ತದೆ’ ಎಂದಿದ್ದಾರೆ.

‘ಸುಮಾರು 100 ವರ್ಷಗಳಿಗೆ ಮೊದಲು ಇಲ್ಲಿ ಕಟ್ಟೆಯೊಂದನ್ನು ಕಟ್ಟಿ ಕೆರೆಯನ್ನು ನಿರ್ಮಿಸಲಾಗಿತ್ತು. ಬೆಂಗಳೂರಿಗೆ ಇದು ನೀರಿನ ಮೂಲವಾಗಿತ್ತು. ಆದರೆ ಈಗ 10 ವರ್ಷಗಳಿಂದ ಅಲ್ಲಿ ನೀರೂ ಸಹ ಇಲ್ಲ. ಹೀಗಿರುವಾಗ ಅಲ್ಲಿ ಚಿತ್ರನಗರಿ ನಿರ್ಮಾಣ ಮಾಡುವುದರಿಂದ ಉಪಯೋಗವಿಲ್ಲ’ ಎಂದಿದ್ದಾರೆ.

ಸರ್ಕಾರದ ಒಡೆತನದಲ್ಲಿಯೇ ಹತ್ತಾರು ಫ್ಯಾಕ್ಟರಿಗಳು ಖಾಲಿಯಾಗಿ ಉಳಿದಿವೆ. ಇಂತಹ ಯಾವುದೋ ಒಂದು ಸ್ಥಳದಲ್ಲಿ ಚಿತ್ರನಗರಿ ನಿರ್ಮಾಣ ಮಾಡಿದರೆ ಒಳ್ಳೆಯದು. ಅದು ಬಿಟ್ಟು ಸದ್ಯ ಬೆಂಗಳೂರನ್ನು ಕಾಪಾಡುತ್ತಿರುವ ಈ ಪ್ರದೇಶವನ್ನೂ ನಿರ್ಮೂಲನೆ ಮಾಡಿದರೆ ಮುಂದೆ ಅತ್ಯಂತ ಅಪಾಯಕಾರಿ ಸನ್ನಿವೇಷಗಳನ್ನು ಎದುರಿಸಬೇಕಾಗುತ್ತದೆ. ನೂರಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಲಿಯೋ ಸಾಲ್ಡಾನಾ ಹೇಳಿದ್ದಾರೆ.

ನಮಗೆ ಚಿತ್ರನಗರಿ ಬೇಕು, ಆದರೆ ಪರಿಸರವನ್ನು ನಾಶಮಾಡಿ ಅದನ್ನು ನಿರ್ಮಿಸುವುದಕ್ಕೆ ನನ್ನ ವಿರೋಧವಿದೆ. ಚಿತ್ರನಗರಿಯೂ ಬೇಕು, ಪರಿಸರವೂ ಉಳಿಯಬೇಕು ಎಂದರೆ ಈ ಪ್ರದೇಶವನ್ನು ಬಿಟ್ಟು ಬೇರೆ ಯಾವುದಾದರೂ ಬಯಲು ಪ್ರದೇಶ ಅಥವಾ ಪರಿಸರದ ದೃಷ್ಟಿಯಿಂದ ಅಷ್ಟಾಗಿ ಸೂಕ್ಷ್ಮವಲ್ಲದ ಸ್ಥಳವನ್ನು ಹುಡುಕಿ ನಿರ್ಮಿಸಿಕೊಳ್ಳಬೇಕು ಎಂದು ಚಿತ್ರನಟ ಚೇತನ್ ಅಹಿಂಸಾ ಅಭಿಪ್ರಾಯ ಪಟ್ಟಿದ್ದಾರೆ.

ಕರ್ನಾಟಕದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ಚಿತ್ರನಗರಿ ನಿರ್ಮಾಣವಾಗಬೇಕೆಂಬುದು ಹಲವು ವರ್ಷಗಳ ಕೂಗು. ಆದರೆ ಇದೇ ಸ್ಥಳದಲ್ಲಿ ಬೇಕು ಎಂದು ನಾವು ಹೇಳುತ್ತಿಲ್ಲ. ಬಹುಪಾಲು ಬೆಂಗಳೂರಿಗೆ ಹತ್ತಿರವಾಗುವಂತೆ ಎಲ್ಲಿಯಾದರೂ ಸರಿ ಆದಷ್ಟು ಬೇಗ ಚಿತ್ರನಗರಿ ನಿರ್ಮಾಣ ಮಾಡಬೇಕೆಂದು ಈ ಮೂಲಕ ಒತ್ತಾಯಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಕನ್ನಟ ಚಿತ್ರರಂಗದ ದೃಷ್ಟಿಕೋನದಿಂದ ನೋಡುವುದಾದರೆ, ಈಗಲೂ ಚಿತ್ರೀಕರಣಕ್ಕಾಗಿ ಹೈದರಾಬಾದಿಗೊ ಅಥವಾ ಮತ್ತೆಲ್ಲಿಗೋ ಹೋಗಬೇಕಾಗಿದೆ. ಇದು ಹೆಚ್ಚು ದುಬಾರಿಯೂ ಆಗಿದೆ. ಈಗಿರುವ ಕಂಠೀರವ ಸ್ಟುಡಿಯೋದಲ್ಲಿ ಕೆಲವು ಕೊರತೆಗಳಿವೆ. ಹಾಗಾಗಿ ಬೆಂಗಳೂರಿನ ಬಳಿ ಚಿತ್ರನಗರಿ ನಿರ್ಮಾಣವಾಗಬೇಕು. ಜೊತೆಗೆ 4-5 ವರ್ಷಗಳಿಗೊಮ್ಮೆ ಅದು ಅಪ್ಡೇಟ್ ಆಗುತ್ತಿರಬೇಕು ಎಂದು ಚೇತನ್ ಹೇಳಿದ್ದಾರೆ.


ಇದನ್ನೂ ಓದಿ: ಪರಿಸರ ದಿನ: ಪರಿಸರ ಮಾಲಿನ್ಯಕ್ಕೆ ಯಾರನ್ನು ದೂಷಿಸಬೇಕು? ನಾವೇನು ಮಾಡಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...