Homeಕರ್ನಾಟಕಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

ಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

2020-21ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ಟಿನಲ್ಲಿ ರೂ.500 ಕೋಟಿ ಹಣವನ್ನು ಚಿತ್ರನಗರಿ ನಿರ್ಮಾಣಕ್ಕಾಗಿ ಘೋಷಿಸಲಾಗಿದ್ದು, ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ಸ್ಥಾಪಿಸುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು.

- Advertisement -
- Advertisement -

ಬೆಂಗಳೂರಿನ ಹೆಸರಘಟ್ಟ ಬಳಿ 150 ಎಕರೆ ಪ್ರದೇಶದಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು ಇದರ ಪರ-ವಿರೋಧ ಚರ್ಚೆಗಳು ಆರಂಭವಾಗಿವೆ. ಇದು ದಖ್ಖನ್ ಪ್ರಸ್ಥಭೂಮಿಯ ಹುಲ್ಲುಗಾವಲು ಪ್ರದೇಶವಾಗಿದ್ದು ಜೈವಿಕ ಮತ್ತು ಪಾರಿಸರಿಕಾವಾಗಿ ಅತ್ಯಂತ ಸೂಕ್ಷ್ಮ ಪ್ರದೇಶವಾಗಿದೆ.

2020-21ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ಟಿನಲ್ಲಿ ರೂ.500 ಕೋಟಿ ಹಣವನ್ನು ಚಿತ್ರನಗರಿ ನಿರ್ಮಾಣಕ್ಕಾಗಿ ಘೋಷಿಸಲಾಗಿದ್ದು, ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ಸ್ಥಾಪಿಸುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು.

ಹೆಸರಘಟ್ಟದಲ್ಲಿ ಚಿತ್ರನಗರಿಗಾಗಿ ಮೀಸಲಿಟ್ಟಿರುವ ಸುಮಾರು 347 ಎಕರೆ ಭೂಪ್ರದೇಶವು ಪಶುಸಂಗೋಪನಾ ಇಲಾಖೆಗೆ ಸೇರಿದೆ. ಈ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಚಿತ್ರನಗರಿ ನಿರ್ಮಾಣದಿಂದ ಪರಿಸರ ಮತ್ತು ಜೀವ ವೈವಿಧ್ಯತೆಗೆ ತೊಂದರೆಯುಂಟಾಗುತ್ತದೆ ಎಂದು ಹಲವು ಪರಿಸರವಾದಿಗಳು ಇದನ್ನು ವಿರೋಧಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ 2012 ರಲ್ಲಿಯೇ ಪರಿಸರವಾದಿಗಳು ಪಿಐಎಲ್ ಸಲ್ಲಿಸಿದ್ದರಿಂದ ಅಂದಿನ ರಾಜ್ಯ ಸರ್ಕಾರ ಯಥಾಸ್ಥಿತಿಯನ್ನು ಮುಂದುವರಿಸುವುದಾಗಿ ಹೇಳಿ, ಅಲ್ಲಿ ಚಿತ್ರನಗರಿ ನಿರ್ಮಾಣ ಮಾಡುವ ಪ್ರಸ್ತಾವವನ್ನು ಕೈಬಿಟ್ಟು ಪರ್ಯಾಯ ಸ್ಥಳವನ್ನು ಹುಡುಕುತ್ತಿತ್ತು. ಆದರೆ ಅಂದು ಆಶ್ವಾಸನೆ ಕೊಟ್ಟ ಸರ್ಕಾರ ಈಗ ಮತ್ತೆ ಅದೇ ಕೆಲಸಕ್ಕೆ ಮುಂದಾಗಿದೆ ಎಂದು ಪರಿಸರವಾದಿ ಮಹೇಶ್ ಭಟ್ ಹೇಳುತ್ತಾರೆ.

ಈ ವಿಷಯದ ಕುರಿತು ಮಹೇಶ್ ಭಟ್ ಮೊದಲಿನಿಂದಲೂ ದನಿಯೆತ್ತುತ್ತಿದ್ದಾರೆ. ಅರ್ಕಾವತಿ ನದಿಯ ಜಲಾನಯನ ಪ್ರದೇಶವಾಗಿರುವುದರಿಂದ ಇದನ್ನು ಉಳಿಸಿಕೊಳ್ಳಬೇಕಾದ ತುರ್ತಿದೆ. ಇದರ ಕುರಿತು ಸಾಕಷ್ಟು ಬರಹಗಳನ್ನು ಪ್ರಕಟಿಸುವುದರೊಂದಿಗೆ ಅವರು ಹಲವು ಹೋರಾಟಗಳನ್ನೂ ಮಾಡಿದ್ದಾರೆ.

ವಾಯುಮಾಲಿನ್ಯವನ್ನು ತಡೆಗಟ್ಟಿ ಪರಿಸರವನ್ನು ಉಳಿಸುವುದಾಗಿ ಜಗತ್ತಿನ ಎಲ್ಲಾ ದೇಶಗಳು ಪಣತೊಟ್ಟಿವೆ. ಈಗಾಗಲೆ ಜಾಗತಿಕ ತಾಪಮಾನ ಹೆಚ್ಚಿ ಸಾಕಷ್ಟು ತೊಂದರೆಗಳಾಗುತ್ತಿವೆ. ಮತ್ತೊಂದು ಕಡೆ ಕೊರೊನಾ ಎಂಬ ಸಾಂಕ್ರಾಮಿಕ ಹರಡಲೂ ಸಹ ಈ ರೀತಿಯ ಪರಿಸರನಾಶವೇ ಕಾರಣ ಎಂದು ತಿಳಿದುಬಂದಿದೆ.  ಹೀಗಿರುವಾಗ ಸರ್ಕಾರ ಮತ್ತೆ ಇಂತಹ ಕೆಲಸಕ್ಕೆ ಕೈ ಹಾಕಿರುವುದು ನಿಜವಾಗಲೂ ಖಂಡನೀಯ ಎಂದು ಮಹೇಶ್ ಭಟ್ ಹೇಳುತ್ತಾರೆ.

ಅಷ್ಟೇ ಅಲ್ಲದೇ ಇದು ಬೆಂಗಳೂರಿನ ಸುತ್ತಮುತ್ತ ಇರುವ ಏಕೈಕ ಹಸಿರು ಪ್ರದೇಶವಾಗಿದ್ದು, ಸಾಕಷ್ಟು ಜೀವ ವೈವಿಧ್ಯತೆಯನ್ನು ಹೊಂದಿದೆ. 120ಕ್ಕೂ ಹೆಚ್ಚು ಪಕ್ಷಿ ಪ್ರಭೇದಗಳು, ಸಸ್ತನಿಗಳು ಮತ್ತು ಸರಿಸೃಪಗಳಿವೆ. ಅಳಿವಿನಂಚಿನಲ್ಲಿರುವ ವನ್ಯಜೀವಿಗಳಿಗೆ ಇರುವ ಏಕೈಕ ತಾಣವಿದು. ಜೊತೆಗೆ ನಗರೀಕರಣ ಮತ್ತು ಹವಾಮಾನ ಬದಲಾವಣೆಯ ಪರಿಣಾಮಗಳನ್ನು ತಡೆಗಟ್ಟಲು ಪರಿಸರದ ಉಳಿವಿನಿಂದ ಮಾತ್ರ ಸಾದ್ಯ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಮಹೇಶ್ ಭಟ್ ಇದರ ಕುರಿತು ಸವಿಸ್ತಾರವಾಗಿ ಫೇಸ್ಬುಕ್ ನಲ್ಲಿ ಬರಹವೊಂದನ್ನು ಮತ್ತು ಸರ್ಕಾರದ ಆದೇಶವನ್ನು ಹಂಚಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಮತ್ತೊಬ್ಬ ಪರಿಸರವಾದಿ ಲಿಯೋ ಸಾಲ್ಡಾನಾ ‘ಇಷ್ಟು ಸೂಕ್ಷ್ಮವಾದ ಪರಿಸರ ಪ್ರದೇಶವನ್ನು ಚಿತ್ರನಗರಿಯ ನಿರ್ಮಾಣಕ್ಕೆ ಕೊಡುವುದು ಸರ್ಕಾರದ ಹುಚ್ಚುತನವನ್ನು ತೋರಿಸುತ್ತದೆ’ ಎಂದಿದ್ದಾರೆ.

‘ಸುಮಾರು 100 ವರ್ಷಗಳಿಗೆ ಮೊದಲು ಇಲ್ಲಿ ಕಟ್ಟೆಯೊಂದನ್ನು ಕಟ್ಟಿ ಕೆರೆಯನ್ನು ನಿರ್ಮಿಸಲಾಗಿತ್ತು. ಬೆಂಗಳೂರಿಗೆ ಇದು ನೀರಿನ ಮೂಲವಾಗಿತ್ತು. ಆದರೆ ಈಗ 10 ವರ್ಷಗಳಿಂದ ಅಲ್ಲಿ ನೀರೂ ಸಹ ಇಲ್ಲ. ಹೀಗಿರುವಾಗ ಅಲ್ಲಿ ಚಿತ್ರನಗರಿ ನಿರ್ಮಾಣ ಮಾಡುವುದರಿಂದ ಉಪಯೋಗವಿಲ್ಲ’ ಎಂದಿದ್ದಾರೆ.

ಸರ್ಕಾರದ ಒಡೆತನದಲ್ಲಿಯೇ ಹತ್ತಾರು ಫ್ಯಾಕ್ಟರಿಗಳು ಖಾಲಿಯಾಗಿ ಉಳಿದಿವೆ. ಇಂತಹ ಯಾವುದೋ ಒಂದು ಸ್ಥಳದಲ್ಲಿ ಚಿತ್ರನಗರಿ ನಿರ್ಮಾಣ ಮಾಡಿದರೆ ಒಳ್ಳೆಯದು. ಅದು ಬಿಟ್ಟು ಸದ್ಯ ಬೆಂಗಳೂರನ್ನು ಕಾಪಾಡುತ್ತಿರುವ ಈ ಪ್ರದೇಶವನ್ನೂ ನಿರ್ಮೂಲನೆ ಮಾಡಿದರೆ ಮುಂದೆ ಅತ್ಯಂತ ಅಪಾಯಕಾರಿ ಸನ್ನಿವೇಷಗಳನ್ನು ಎದುರಿಸಬೇಕಾಗುತ್ತದೆ. ನೂರಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಲಿಯೋ ಸಾಲ್ಡಾನಾ ಹೇಳಿದ್ದಾರೆ.

ನಮಗೆ ಚಿತ್ರನಗರಿ ಬೇಕು, ಆದರೆ ಪರಿಸರವನ್ನು ನಾಶಮಾಡಿ ಅದನ್ನು ನಿರ್ಮಿಸುವುದಕ್ಕೆ ನನ್ನ ವಿರೋಧವಿದೆ. ಚಿತ್ರನಗರಿಯೂ ಬೇಕು, ಪರಿಸರವೂ ಉಳಿಯಬೇಕು ಎಂದರೆ ಈ ಪ್ರದೇಶವನ್ನು ಬಿಟ್ಟು ಬೇರೆ ಯಾವುದಾದರೂ ಬಯಲು ಪ್ರದೇಶ ಅಥವಾ ಪರಿಸರದ ದೃಷ್ಟಿಯಿಂದ ಅಷ್ಟಾಗಿ ಸೂಕ್ಷ್ಮವಲ್ಲದ ಸ್ಥಳವನ್ನು ಹುಡುಕಿ ನಿರ್ಮಿಸಿಕೊಳ್ಳಬೇಕು ಎಂದು ಚಿತ್ರನಟ ಚೇತನ್ ಅಹಿಂಸಾ ಅಭಿಪ್ರಾಯ ಪಟ್ಟಿದ್ದಾರೆ.

ಕರ್ನಾಟಕದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ಚಿತ್ರನಗರಿ ನಿರ್ಮಾಣವಾಗಬೇಕೆಂಬುದು ಹಲವು ವರ್ಷಗಳ ಕೂಗು. ಆದರೆ ಇದೇ ಸ್ಥಳದಲ್ಲಿ ಬೇಕು ಎಂದು ನಾವು ಹೇಳುತ್ತಿಲ್ಲ. ಬಹುಪಾಲು ಬೆಂಗಳೂರಿಗೆ ಹತ್ತಿರವಾಗುವಂತೆ ಎಲ್ಲಿಯಾದರೂ ಸರಿ ಆದಷ್ಟು ಬೇಗ ಚಿತ್ರನಗರಿ ನಿರ್ಮಾಣ ಮಾಡಬೇಕೆಂದು ಈ ಮೂಲಕ ಒತ್ತಾಯಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಕನ್ನಟ ಚಿತ್ರರಂಗದ ದೃಷ್ಟಿಕೋನದಿಂದ ನೋಡುವುದಾದರೆ, ಈಗಲೂ ಚಿತ್ರೀಕರಣಕ್ಕಾಗಿ ಹೈದರಾಬಾದಿಗೊ ಅಥವಾ ಮತ್ತೆಲ್ಲಿಗೋ ಹೋಗಬೇಕಾಗಿದೆ. ಇದು ಹೆಚ್ಚು ದುಬಾರಿಯೂ ಆಗಿದೆ. ಈಗಿರುವ ಕಂಠೀರವ ಸ್ಟುಡಿಯೋದಲ್ಲಿ ಕೆಲವು ಕೊರತೆಗಳಿವೆ. ಹಾಗಾಗಿ ಬೆಂಗಳೂರಿನ ಬಳಿ ಚಿತ್ರನಗರಿ ನಿರ್ಮಾಣವಾಗಬೇಕು. ಜೊತೆಗೆ 4-5 ವರ್ಷಗಳಿಗೊಮ್ಮೆ ಅದು ಅಪ್ಡೇಟ್ ಆಗುತ್ತಿರಬೇಕು ಎಂದು ಚೇತನ್ ಹೇಳಿದ್ದಾರೆ.


ಇದನ್ನೂ ಓದಿ: ಪರಿಸರ ದಿನ: ಪರಿಸರ ಮಾಲಿನ್ಯಕ್ಕೆ ಯಾರನ್ನು ದೂಷಿಸಬೇಕು? ನಾವೇನು ಮಾಡಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...