Homeಕರ್ನಾಟಕಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

ಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

2020-21ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ಟಿನಲ್ಲಿ ರೂ.500 ಕೋಟಿ ಹಣವನ್ನು ಚಿತ್ರನಗರಿ ನಿರ್ಮಾಣಕ್ಕಾಗಿ ಘೋಷಿಸಲಾಗಿದ್ದು, ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ಸ್ಥಾಪಿಸುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು.

- Advertisement -
- Advertisement -

ಬೆಂಗಳೂರಿನ ಹೆಸರಘಟ್ಟ ಬಳಿ 150 ಎಕರೆ ಪ್ರದೇಶದಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು ಇದರ ಪರ-ವಿರೋಧ ಚರ್ಚೆಗಳು ಆರಂಭವಾಗಿವೆ. ಇದು ದಖ್ಖನ್ ಪ್ರಸ್ಥಭೂಮಿಯ ಹುಲ್ಲುಗಾವಲು ಪ್ರದೇಶವಾಗಿದ್ದು ಜೈವಿಕ ಮತ್ತು ಪಾರಿಸರಿಕಾವಾಗಿ ಅತ್ಯಂತ ಸೂಕ್ಷ್ಮ ಪ್ರದೇಶವಾಗಿದೆ.

2020-21ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ಟಿನಲ್ಲಿ ರೂ.500 ಕೋಟಿ ಹಣವನ್ನು ಚಿತ್ರನಗರಿ ನಿರ್ಮಾಣಕ್ಕಾಗಿ ಘೋಷಿಸಲಾಗಿದ್ದು, ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ಸ್ಥಾಪಿಸುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು.

ಹೆಸರಘಟ್ಟದಲ್ಲಿ ಚಿತ್ರನಗರಿಗಾಗಿ ಮೀಸಲಿಟ್ಟಿರುವ ಸುಮಾರು 347 ಎಕರೆ ಭೂಪ್ರದೇಶವು ಪಶುಸಂಗೋಪನಾ ಇಲಾಖೆಗೆ ಸೇರಿದೆ. ಈ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಚಿತ್ರನಗರಿ ನಿರ್ಮಾಣದಿಂದ ಪರಿಸರ ಮತ್ತು ಜೀವ ವೈವಿಧ್ಯತೆಗೆ ತೊಂದರೆಯುಂಟಾಗುತ್ತದೆ ಎಂದು ಹಲವು ಪರಿಸರವಾದಿಗಳು ಇದನ್ನು ವಿರೋಧಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ 2012 ರಲ್ಲಿಯೇ ಪರಿಸರವಾದಿಗಳು ಪಿಐಎಲ್ ಸಲ್ಲಿಸಿದ್ದರಿಂದ ಅಂದಿನ ರಾಜ್ಯ ಸರ್ಕಾರ ಯಥಾಸ್ಥಿತಿಯನ್ನು ಮುಂದುವರಿಸುವುದಾಗಿ ಹೇಳಿ, ಅಲ್ಲಿ ಚಿತ್ರನಗರಿ ನಿರ್ಮಾಣ ಮಾಡುವ ಪ್ರಸ್ತಾವವನ್ನು ಕೈಬಿಟ್ಟು ಪರ್ಯಾಯ ಸ್ಥಳವನ್ನು ಹುಡುಕುತ್ತಿತ್ತು. ಆದರೆ ಅಂದು ಆಶ್ವಾಸನೆ ಕೊಟ್ಟ ಸರ್ಕಾರ ಈಗ ಮತ್ತೆ ಅದೇ ಕೆಲಸಕ್ಕೆ ಮುಂದಾಗಿದೆ ಎಂದು ಪರಿಸರವಾದಿ ಮಹೇಶ್ ಭಟ್ ಹೇಳುತ್ತಾರೆ.

ಈ ವಿಷಯದ ಕುರಿತು ಮಹೇಶ್ ಭಟ್ ಮೊದಲಿನಿಂದಲೂ ದನಿಯೆತ್ತುತ್ತಿದ್ದಾರೆ. ಅರ್ಕಾವತಿ ನದಿಯ ಜಲಾನಯನ ಪ್ರದೇಶವಾಗಿರುವುದರಿಂದ ಇದನ್ನು ಉಳಿಸಿಕೊಳ್ಳಬೇಕಾದ ತುರ್ತಿದೆ. ಇದರ ಕುರಿತು ಸಾಕಷ್ಟು ಬರಹಗಳನ್ನು ಪ್ರಕಟಿಸುವುದರೊಂದಿಗೆ ಅವರು ಹಲವು ಹೋರಾಟಗಳನ್ನೂ ಮಾಡಿದ್ದಾರೆ.

ವಾಯುಮಾಲಿನ್ಯವನ್ನು ತಡೆಗಟ್ಟಿ ಪರಿಸರವನ್ನು ಉಳಿಸುವುದಾಗಿ ಜಗತ್ತಿನ ಎಲ್ಲಾ ದೇಶಗಳು ಪಣತೊಟ್ಟಿವೆ. ಈಗಾಗಲೆ ಜಾಗತಿಕ ತಾಪಮಾನ ಹೆಚ್ಚಿ ಸಾಕಷ್ಟು ತೊಂದರೆಗಳಾಗುತ್ತಿವೆ. ಮತ್ತೊಂದು ಕಡೆ ಕೊರೊನಾ ಎಂಬ ಸಾಂಕ್ರಾಮಿಕ ಹರಡಲೂ ಸಹ ಈ ರೀತಿಯ ಪರಿಸರನಾಶವೇ ಕಾರಣ ಎಂದು ತಿಳಿದುಬಂದಿದೆ.  ಹೀಗಿರುವಾಗ ಸರ್ಕಾರ ಮತ್ತೆ ಇಂತಹ ಕೆಲಸಕ್ಕೆ ಕೈ ಹಾಕಿರುವುದು ನಿಜವಾಗಲೂ ಖಂಡನೀಯ ಎಂದು ಮಹೇಶ್ ಭಟ್ ಹೇಳುತ್ತಾರೆ.

ಅಷ್ಟೇ ಅಲ್ಲದೇ ಇದು ಬೆಂಗಳೂರಿನ ಸುತ್ತಮುತ್ತ ಇರುವ ಏಕೈಕ ಹಸಿರು ಪ್ರದೇಶವಾಗಿದ್ದು, ಸಾಕಷ್ಟು ಜೀವ ವೈವಿಧ್ಯತೆಯನ್ನು ಹೊಂದಿದೆ. 120ಕ್ಕೂ ಹೆಚ್ಚು ಪಕ್ಷಿ ಪ್ರಭೇದಗಳು, ಸಸ್ತನಿಗಳು ಮತ್ತು ಸರಿಸೃಪಗಳಿವೆ. ಅಳಿವಿನಂಚಿನಲ್ಲಿರುವ ವನ್ಯಜೀವಿಗಳಿಗೆ ಇರುವ ಏಕೈಕ ತಾಣವಿದು. ಜೊತೆಗೆ ನಗರೀಕರಣ ಮತ್ತು ಹವಾಮಾನ ಬದಲಾವಣೆಯ ಪರಿಣಾಮಗಳನ್ನು ತಡೆಗಟ್ಟಲು ಪರಿಸರದ ಉಳಿವಿನಿಂದ ಮಾತ್ರ ಸಾದ್ಯ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಮಹೇಶ್ ಭಟ್ ಇದರ ಕುರಿತು ಸವಿಸ್ತಾರವಾಗಿ ಫೇಸ್ಬುಕ್ ನಲ್ಲಿ ಬರಹವೊಂದನ್ನು ಮತ್ತು ಸರ್ಕಾರದ ಆದೇಶವನ್ನು ಹಂಚಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಮತ್ತೊಬ್ಬ ಪರಿಸರವಾದಿ ಲಿಯೋ ಸಾಲ್ಡಾನಾ ‘ಇಷ್ಟು ಸೂಕ್ಷ್ಮವಾದ ಪರಿಸರ ಪ್ರದೇಶವನ್ನು ಚಿತ್ರನಗರಿಯ ನಿರ್ಮಾಣಕ್ಕೆ ಕೊಡುವುದು ಸರ್ಕಾರದ ಹುಚ್ಚುತನವನ್ನು ತೋರಿಸುತ್ತದೆ’ ಎಂದಿದ್ದಾರೆ.

‘ಸುಮಾರು 100 ವರ್ಷಗಳಿಗೆ ಮೊದಲು ಇಲ್ಲಿ ಕಟ್ಟೆಯೊಂದನ್ನು ಕಟ್ಟಿ ಕೆರೆಯನ್ನು ನಿರ್ಮಿಸಲಾಗಿತ್ತು. ಬೆಂಗಳೂರಿಗೆ ಇದು ನೀರಿನ ಮೂಲವಾಗಿತ್ತು. ಆದರೆ ಈಗ 10 ವರ್ಷಗಳಿಂದ ಅಲ್ಲಿ ನೀರೂ ಸಹ ಇಲ್ಲ. ಹೀಗಿರುವಾಗ ಅಲ್ಲಿ ಚಿತ್ರನಗರಿ ನಿರ್ಮಾಣ ಮಾಡುವುದರಿಂದ ಉಪಯೋಗವಿಲ್ಲ’ ಎಂದಿದ್ದಾರೆ.

ಸರ್ಕಾರದ ಒಡೆತನದಲ್ಲಿಯೇ ಹತ್ತಾರು ಫ್ಯಾಕ್ಟರಿಗಳು ಖಾಲಿಯಾಗಿ ಉಳಿದಿವೆ. ಇಂತಹ ಯಾವುದೋ ಒಂದು ಸ್ಥಳದಲ್ಲಿ ಚಿತ್ರನಗರಿ ನಿರ್ಮಾಣ ಮಾಡಿದರೆ ಒಳ್ಳೆಯದು. ಅದು ಬಿಟ್ಟು ಸದ್ಯ ಬೆಂಗಳೂರನ್ನು ಕಾಪಾಡುತ್ತಿರುವ ಈ ಪ್ರದೇಶವನ್ನೂ ನಿರ್ಮೂಲನೆ ಮಾಡಿದರೆ ಮುಂದೆ ಅತ್ಯಂತ ಅಪಾಯಕಾರಿ ಸನ್ನಿವೇಷಗಳನ್ನು ಎದುರಿಸಬೇಕಾಗುತ್ತದೆ. ನೂರಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಲಿಯೋ ಸಾಲ್ಡಾನಾ ಹೇಳಿದ್ದಾರೆ.

ನಮಗೆ ಚಿತ್ರನಗರಿ ಬೇಕು, ಆದರೆ ಪರಿಸರವನ್ನು ನಾಶಮಾಡಿ ಅದನ್ನು ನಿರ್ಮಿಸುವುದಕ್ಕೆ ನನ್ನ ವಿರೋಧವಿದೆ. ಚಿತ್ರನಗರಿಯೂ ಬೇಕು, ಪರಿಸರವೂ ಉಳಿಯಬೇಕು ಎಂದರೆ ಈ ಪ್ರದೇಶವನ್ನು ಬಿಟ್ಟು ಬೇರೆ ಯಾವುದಾದರೂ ಬಯಲು ಪ್ರದೇಶ ಅಥವಾ ಪರಿಸರದ ದೃಷ್ಟಿಯಿಂದ ಅಷ್ಟಾಗಿ ಸೂಕ್ಷ್ಮವಲ್ಲದ ಸ್ಥಳವನ್ನು ಹುಡುಕಿ ನಿರ್ಮಿಸಿಕೊಳ್ಳಬೇಕು ಎಂದು ಚಿತ್ರನಟ ಚೇತನ್ ಅಹಿಂಸಾ ಅಭಿಪ್ರಾಯ ಪಟ್ಟಿದ್ದಾರೆ.

ಕರ್ನಾಟಕದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ಚಿತ್ರನಗರಿ ನಿರ್ಮಾಣವಾಗಬೇಕೆಂಬುದು ಹಲವು ವರ್ಷಗಳ ಕೂಗು. ಆದರೆ ಇದೇ ಸ್ಥಳದಲ್ಲಿ ಬೇಕು ಎಂದು ನಾವು ಹೇಳುತ್ತಿಲ್ಲ. ಬಹುಪಾಲು ಬೆಂಗಳೂರಿಗೆ ಹತ್ತಿರವಾಗುವಂತೆ ಎಲ್ಲಿಯಾದರೂ ಸರಿ ಆದಷ್ಟು ಬೇಗ ಚಿತ್ರನಗರಿ ನಿರ್ಮಾಣ ಮಾಡಬೇಕೆಂದು ಈ ಮೂಲಕ ಒತ್ತಾಯಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಕನ್ನಟ ಚಿತ್ರರಂಗದ ದೃಷ್ಟಿಕೋನದಿಂದ ನೋಡುವುದಾದರೆ, ಈಗಲೂ ಚಿತ್ರೀಕರಣಕ್ಕಾಗಿ ಹೈದರಾಬಾದಿಗೊ ಅಥವಾ ಮತ್ತೆಲ್ಲಿಗೋ ಹೋಗಬೇಕಾಗಿದೆ. ಇದು ಹೆಚ್ಚು ದುಬಾರಿಯೂ ಆಗಿದೆ. ಈಗಿರುವ ಕಂಠೀರವ ಸ್ಟುಡಿಯೋದಲ್ಲಿ ಕೆಲವು ಕೊರತೆಗಳಿವೆ. ಹಾಗಾಗಿ ಬೆಂಗಳೂರಿನ ಬಳಿ ಚಿತ್ರನಗರಿ ನಿರ್ಮಾಣವಾಗಬೇಕು. ಜೊತೆಗೆ 4-5 ವರ್ಷಗಳಿಗೊಮ್ಮೆ ಅದು ಅಪ್ಡೇಟ್ ಆಗುತ್ತಿರಬೇಕು ಎಂದು ಚೇತನ್ ಹೇಳಿದ್ದಾರೆ.


ಇದನ್ನೂ ಓದಿ: ಪರಿಸರ ದಿನ: ಪರಿಸರ ಮಾಲಿನ್ಯಕ್ಕೆ ಯಾರನ್ನು ದೂಷಿಸಬೇಕು? ನಾವೇನು ಮಾಡಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...