Homeಕರ್ನಾಟಕಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

ಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

2020-21ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ಟಿನಲ್ಲಿ ರೂ.500 ಕೋಟಿ ಹಣವನ್ನು ಚಿತ್ರನಗರಿ ನಿರ್ಮಾಣಕ್ಕಾಗಿ ಘೋಷಿಸಲಾಗಿದ್ದು, ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ಸ್ಥಾಪಿಸುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು.

- Advertisement -
- Advertisement -

ಬೆಂಗಳೂರಿನ ಹೆಸರಘಟ್ಟ ಬಳಿ 150 ಎಕರೆ ಪ್ರದೇಶದಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು ಇದರ ಪರ-ವಿರೋಧ ಚರ್ಚೆಗಳು ಆರಂಭವಾಗಿವೆ. ಇದು ದಖ್ಖನ್ ಪ್ರಸ್ಥಭೂಮಿಯ ಹುಲ್ಲುಗಾವಲು ಪ್ರದೇಶವಾಗಿದ್ದು ಜೈವಿಕ ಮತ್ತು ಪಾರಿಸರಿಕಾವಾಗಿ ಅತ್ಯಂತ ಸೂಕ್ಷ್ಮ ಪ್ರದೇಶವಾಗಿದೆ.

2020-21ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ಟಿನಲ್ಲಿ ರೂ.500 ಕೋಟಿ ಹಣವನ್ನು ಚಿತ್ರನಗರಿ ನಿರ್ಮಾಣಕ್ಕಾಗಿ ಘೋಷಿಸಲಾಗಿದ್ದು, ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ಸ್ಥಾಪಿಸುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು.

ಹೆಸರಘಟ್ಟದಲ್ಲಿ ಚಿತ್ರನಗರಿಗಾಗಿ ಮೀಸಲಿಟ್ಟಿರುವ ಸುಮಾರು 347 ಎಕರೆ ಭೂಪ್ರದೇಶವು ಪಶುಸಂಗೋಪನಾ ಇಲಾಖೆಗೆ ಸೇರಿದೆ. ಈ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಚಿತ್ರನಗರಿ ನಿರ್ಮಾಣದಿಂದ ಪರಿಸರ ಮತ್ತು ಜೀವ ವೈವಿಧ್ಯತೆಗೆ ತೊಂದರೆಯುಂಟಾಗುತ್ತದೆ ಎಂದು ಹಲವು ಪರಿಸರವಾದಿಗಳು ಇದನ್ನು ವಿರೋಧಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ 2012 ರಲ್ಲಿಯೇ ಪರಿಸರವಾದಿಗಳು ಪಿಐಎಲ್ ಸಲ್ಲಿಸಿದ್ದರಿಂದ ಅಂದಿನ ರಾಜ್ಯ ಸರ್ಕಾರ ಯಥಾಸ್ಥಿತಿಯನ್ನು ಮುಂದುವರಿಸುವುದಾಗಿ ಹೇಳಿ, ಅಲ್ಲಿ ಚಿತ್ರನಗರಿ ನಿರ್ಮಾಣ ಮಾಡುವ ಪ್ರಸ್ತಾವವನ್ನು ಕೈಬಿಟ್ಟು ಪರ್ಯಾಯ ಸ್ಥಳವನ್ನು ಹುಡುಕುತ್ತಿತ್ತು. ಆದರೆ ಅಂದು ಆಶ್ವಾಸನೆ ಕೊಟ್ಟ ಸರ್ಕಾರ ಈಗ ಮತ್ತೆ ಅದೇ ಕೆಲಸಕ್ಕೆ ಮುಂದಾಗಿದೆ ಎಂದು ಪರಿಸರವಾದಿ ಮಹೇಶ್ ಭಟ್ ಹೇಳುತ್ತಾರೆ.

ಈ ವಿಷಯದ ಕುರಿತು ಮಹೇಶ್ ಭಟ್ ಮೊದಲಿನಿಂದಲೂ ದನಿಯೆತ್ತುತ್ತಿದ್ದಾರೆ. ಅರ್ಕಾವತಿ ನದಿಯ ಜಲಾನಯನ ಪ್ರದೇಶವಾಗಿರುವುದರಿಂದ ಇದನ್ನು ಉಳಿಸಿಕೊಳ್ಳಬೇಕಾದ ತುರ್ತಿದೆ. ಇದರ ಕುರಿತು ಸಾಕಷ್ಟು ಬರಹಗಳನ್ನು ಪ್ರಕಟಿಸುವುದರೊಂದಿಗೆ ಅವರು ಹಲವು ಹೋರಾಟಗಳನ್ನೂ ಮಾಡಿದ್ದಾರೆ.

ವಾಯುಮಾಲಿನ್ಯವನ್ನು ತಡೆಗಟ್ಟಿ ಪರಿಸರವನ್ನು ಉಳಿಸುವುದಾಗಿ ಜಗತ್ತಿನ ಎಲ್ಲಾ ದೇಶಗಳು ಪಣತೊಟ್ಟಿವೆ. ಈಗಾಗಲೆ ಜಾಗತಿಕ ತಾಪಮಾನ ಹೆಚ್ಚಿ ಸಾಕಷ್ಟು ತೊಂದರೆಗಳಾಗುತ್ತಿವೆ. ಮತ್ತೊಂದು ಕಡೆ ಕೊರೊನಾ ಎಂಬ ಸಾಂಕ್ರಾಮಿಕ ಹರಡಲೂ ಸಹ ಈ ರೀತಿಯ ಪರಿಸರನಾಶವೇ ಕಾರಣ ಎಂದು ತಿಳಿದುಬಂದಿದೆ.  ಹೀಗಿರುವಾಗ ಸರ್ಕಾರ ಮತ್ತೆ ಇಂತಹ ಕೆಲಸಕ್ಕೆ ಕೈ ಹಾಕಿರುವುದು ನಿಜವಾಗಲೂ ಖಂಡನೀಯ ಎಂದು ಮಹೇಶ್ ಭಟ್ ಹೇಳುತ್ತಾರೆ.

ಅಷ್ಟೇ ಅಲ್ಲದೇ ಇದು ಬೆಂಗಳೂರಿನ ಸುತ್ತಮುತ್ತ ಇರುವ ಏಕೈಕ ಹಸಿರು ಪ್ರದೇಶವಾಗಿದ್ದು, ಸಾಕಷ್ಟು ಜೀವ ವೈವಿಧ್ಯತೆಯನ್ನು ಹೊಂದಿದೆ. 120ಕ್ಕೂ ಹೆಚ್ಚು ಪಕ್ಷಿ ಪ್ರಭೇದಗಳು, ಸಸ್ತನಿಗಳು ಮತ್ತು ಸರಿಸೃಪಗಳಿವೆ. ಅಳಿವಿನಂಚಿನಲ್ಲಿರುವ ವನ್ಯಜೀವಿಗಳಿಗೆ ಇರುವ ಏಕೈಕ ತಾಣವಿದು. ಜೊತೆಗೆ ನಗರೀಕರಣ ಮತ್ತು ಹವಾಮಾನ ಬದಲಾವಣೆಯ ಪರಿಣಾಮಗಳನ್ನು ತಡೆಗಟ್ಟಲು ಪರಿಸರದ ಉಳಿವಿನಿಂದ ಮಾತ್ರ ಸಾದ್ಯ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಮಹೇಶ್ ಭಟ್ ಇದರ ಕುರಿತು ಸವಿಸ್ತಾರವಾಗಿ ಫೇಸ್ಬುಕ್ ನಲ್ಲಿ ಬರಹವೊಂದನ್ನು ಮತ್ತು ಸರ್ಕಾರದ ಆದೇಶವನ್ನು ಹಂಚಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಮತ್ತೊಬ್ಬ ಪರಿಸರವಾದಿ ಲಿಯೋ ಸಾಲ್ಡಾನಾ ‘ಇಷ್ಟು ಸೂಕ್ಷ್ಮವಾದ ಪರಿಸರ ಪ್ರದೇಶವನ್ನು ಚಿತ್ರನಗರಿಯ ನಿರ್ಮಾಣಕ್ಕೆ ಕೊಡುವುದು ಸರ್ಕಾರದ ಹುಚ್ಚುತನವನ್ನು ತೋರಿಸುತ್ತದೆ’ ಎಂದಿದ್ದಾರೆ.

‘ಸುಮಾರು 100 ವರ್ಷಗಳಿಗೆ ಮೊದಲು ಇಲ್ಲಿ ಕಟ್ಟೆಯೊಂದನ್ನು ಕಟ್ಟಿ ಕೆರೆಯನ್ನು ನಿರ್ಮಿಸಲಾಗಿತ್ತು. ಬೆಂಗಳೂರಿಗೆ ಇದು ನೀರಿನ ಮೂಲವಾಗಿತ್ತು. ಆದರೆ ಈಗ 10 ವರ್ಷಗಳಿಂದ ಅಲ್ಲಿ ನೀರೂ ಸಹ ಇಲ್ಲ. ಹೀಗಿರುವಾಗ ಅಲ್ಲಿ ಚಿತ್ರನಗರಿ ನಿರ್ಮಾಣ ಮಾಡುವುದರಿಂದ ಉಪಯೋಗವಿಲ್ಲ’ ಎಂದಿದ್ದಾರೆ.

ಸರ್ಕಾರದ ಒಡೆತನದಲ್ಲಿಯೇ ಹತ್ತಾರು ಫ್ಯಾಕ್ಟರಿಗಳು ಖಾಲಿಯಾಗಿ ಉಳಿದಿವೆ. ಇಂತಹ ಯಾವುದೋ ಒಂದು ಸ್ಥಳದಲ್ಲಿ ಚಿತ್ರನಗರಿ ನಿರ್ಮಾಣ ಮಾಡಿದರೆ ಒಳ್ಳೆಯದು. ಅದು ಬಿಟ್ಟು ಸದ್ಯ ಬೆಂಗಳೂರನ್ನು ಕಾಪಾಡುತ್ತಿರುವ ಈ ಪ್ರದೇಶವನ್ನೂ ನಿರ್ಮೂಲನೆ ಮಾಡಿದರೆ ಮುಂದೆ ಅತ್ಯಂತ ಅಪಾಯಕಾರಿ ಸನ್ನಿವೇಷಗಳನ್ನು ಎದುರಿಸಬೇಕಾಗುತ್ತದೆ. ನೂರಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಲಿಯೋ ಸಾಲ್ಡಾನಾ ಹೇಳಿದ್ದಾರೆ.

ನಮಗೆ ಚಿತ್ರನಗರಿ ಬೇಕು, ಆದರೆ ಪರಿಸರವನ್ನು ನಾಶಮಾಡಿ ಅದನ್ನು ನಿರ್ಮಿಸುವುದಕ್ಕೆ ನನ್ನ ವಿರೋಧವಿದೆ. ಚಿತ್ರನಗರಿಯೂ ಬೇಕು, ಪರಿಸರವೂ ಉಳಿಯಬೇಕು ಎಂದರೆ ಈ ಪ್ರದೇಶವನ್ನು ಬಿಟ್ಟು ಬೇರೆ ಯಾವುದಾದರೂ ಬಯಲು ಪ್ರದೇಶ ಅಥವಾ ಪರಿಸರದ ದೃಷ್ಟಿಯಿಂದ ಅಷ್ಟಾಗಿ ಸೂಕ್ಷ್ಮವಲ್ಲದ ಸ್ಥಳವನ್ನು ಹುಡುಕಿ ನಿರ್ಮಿಸಿಕೊಳ್ಳಬೇಕು ಎಂದು ಚಿತ್ರನಟ ಚೇತನ್ ಅಹಿಂಸಾ ಅಭಿಪ್ರಾಯ ಪಟ್ಟಿದ್ದಾರೆ.

ಕರ್ನಾಟಕದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ಚಿತ್ರನಗರಿ ನಿರ್ಮಾಣವಾಗಬೇಕೆಂಬುದು ಹಲವು ವರ್ಷಗಳ ಕೂಗು. ಆದರೆ ಇದೇ ಸ್ಥಳದಲ್ಲಿ ಬೇಕು ಎಂದು ನಾವು ಹೇಳುತ್ತಿಲ್ಲ. ಬಹುಪಾಲು ಬೆಂಗಳೂರಿಗೆ ಹತ್ತಿರವಾಗುವಂತೆ ಎಲ್ಲಿಯಾದರೂ ಸರಿ ಆದಷ್ಟು ಬೇಗ ಚಿತ್ರನಗರಿ ನಿರ್ಮಾಣ ಮಾಡಬೇಕೆಂದು ಈ ಮೂಲಕ ಒತ್ತಾಯಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಕನ್ನಟ ಚಿತ್ರರಂಗದ ದೃಷ್ಟಿಕೋನದಿಂದ ನೋಡುವುದಾದರೆ, ಈಗಲೂ ಚಿತ್ರೀಕರಣಕ್ಕಾಗಿ ಹೈದರಾಬಾದಿಗೊ ಅಥವಾ ಮತ್ತೆಲ್ಲಿಗೋ ಹೋಗಬೇಕಾಗಿದೆ. ಇದು ಹೆಚ್ಚು ದುಬಾರಿಯೂ ಆಗಿದೆ. ಈಗಿರುವ ಕಂಠೀರವ ಸ್ಟುಡಿಯೋದಲ್ಲಿ ಕೆಲವು ಕೊರತೆಗಳಿವೆ. ಹಾಗಾಗಿ ಬೆಂಗಳೂರಿನ ಬಳಿ ಚಿತ್ರನಗರಿ ನಿರ್ಮಾಣವಾಗಬೇಕು. ಜೊತೆಗೆ 4-5 ವರ್ಷಗಳಿಗೊಮ್ಮೆ ಅದು ಅಪ್ಡೇಟ್ ಆಗುತ್ತಿರಬೇಕು ಎಂದು ಚೇತನ್ ಹೇಳಿದ್ದಾರೆ.


ಇದನ್ನೂ ಓದಿ: ಪರಿಸರ ದಿನ: ಪರಿಸರ ಮಾಲಿನ್ಯಕ್ಕೆ ಯಾರನ್ನು ದೂಷಿಸಬೇಕು? ನಾವೇನು ಮಾಡಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...