Homeಕರ್ನಾಟಕಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

ಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

2020-21ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ಟಿನಲ್ಲಿ ರೂ.500 ಕೋಟಿ ಹಣವನ್ನು ಚಿತ್ರನಗರಿ ನಿರ್ಮಾಣಕ್ಕಾಗಿ ಘೋಷಿಸಲಾಗಿದ್ದು, ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ಸ್ಥಾಪಿಸುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು.

- Advertisement -
- Advertisement -

ಬೆಂಗಳೂರಿನ ಹೆಸರಘಟ್ಟ ಬಳಿ 150 ಎಕರೆ ಪ್ರದೇಶದಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು ಇದರ ಪರ-ವಿರೋಧ ಚರ್ಚೆಗಳು ಆರಂಭವಾಗಿವೆ. ಇದು ದಖ್ಖನ್ ಪ್ರಸ್ಥಭೂಮಿಯ ಹುಲ್ಲುಗಾವಲು ಪ್ರದೇಶವಾಗಿದ್ದು ಜೈವಿಕ ಮತ್ತು ಪಾರಿಸರಿಕಾವಾಗಿ ಅತ್ಯಂತ ಸೂಕ್ಷ್ಮ ಪ್ರದೇಶವಾಗಿದೆ.

2020-21ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ಟಿನಲ್ಲಿ ರೂ.500 ಕೋಟಿ ಹಣವನ್ನು ಚಿತ್ರನಗರಿ ನಿರ್ಮಾಣಕ್ಕಾಗಿ ಘೋಷಿಸಲಾಗಿದ್ದು, ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ಸ್ಥಾಪಿಸುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು.

ಹೆಸರಘಟ್ಟದಲ್ಲಿ ಚಿತ್ರನಗರಿಗಾಗಿ ಮೀಸಲಿಟ್ಟಿರುವ ಸುಮಾರು 347 ಎಕರೆ ಭೂಪ್ರದೇಶವು ಪಶುಸಂಗೋಪನಾ ಇಲಾಖೆಗೆ ಸೇರಿದೆ. ಈ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಚಿತ್ರನಗರಿ ನಿರ್ಮಾಣದಿಂದ ಪರಿಸರ ಮತ್ತು ಜೀವ ವೈವಿಧ್ಯತೆಗೆ ತೊಂದರೆಯುಂಟಾಗುತ್ತದೆ ಎಂದು ಹಲವು ಪರಿಸರವಾದಿಗಳು ಇದನ್ನು ವಿರೋಧಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ 2012 ರಲ್ಲಿಯೇ ಪರಿಸರವಾದಿಗಳು ಪಿಐಎಲ್ ಸಲ್ಲಿಸಿದ್ದರಿಂದ ಅಂದಿನ ರಾಜ್ಯ ಸರ್ಕಾರ ಯಥಾಸ್ಥಿತಿಯನ್ನು ಮುಂದುವರಿಸುವುದಾಗಿ ಹೇಳಿ, ಅಲ್ಲಿ ಚಿತ್ರನಗರಿ ನಿರ್ಮಾಣ ಮಾಡುವ ಪ್ರಸ್ತಾವವನ್ನು ಕೈಬಿಟ್ಟು ಪರ್ಯಾಯ ಸ್ಥಳವನ್ನು ಹುಡುಕುತ್ತಿತ್ತು. ಆದರೆ ಅಂದು ಆಶ್ವಾಸನೆ ಕೊಟ್ಟ ಸರ್ಕಾರ ಈಗ ಮತ್ತೆ ಅದೇ ಕೆಲಸಕ್ಕೆ ಮುಂದಾಗಿದೆ ಎಂದು ಪರಿಸರವಾದಿ ಮಹೇಶ್ ಭಟ್ ಹೇಳುತ್ತಾರೆ.

ಈ ವಿಷಯದ ಕುರಿತು ಮಹೇಶ್ ಭಟ್ ಮೊದಲಿನಿಂದಲೂ ದನಿಯೆತ್ತುತ್ತಿದ್ದಾರೆ. ಅರ್ಕಾವತಿ ನದಿಯ ಜಲಾನಯನ ಪ್ರದೇಶವಾಗಿರುವುದರಿಂದ ಇದನ್ನು ಉಳಿಸಿಕೊಳ್ಳಬೇಕಾದ ತುರ್ತಿದೆ. ಇದರ ಕುರಿತು ಸಾಕಷ್ಟು ಬರಹಗಳನ್ನು ಪ್ರಕಟಿಸುವುದರೊಂದಿಗೆ ಅವರು ಹಲವು ಹೋರಾಟಗಳನ್ನೂ ಮಾಡಿದ್ದಾರೆ.

ವಾಯುಮಾಲಿನ್ಯವನ್ನು ತಡೆಗಟ್ಟಿ ಪರಿಸರವನ್ನು ಉಳಿಸುವುದಾಗಿ ಜಗತ್ತಿನ ಎಲ್ಲಾ ದೇಶಗಳು ಪಣತೊಟ್ಟಿವೆ. ಈಗಾಗಲೆ ಜಾಗತಿಕ ತಾಪಮಾನ ಹೆಚ್ಚಿ ಸಾಕಷ್ಟು ತೊಂದರೆಗಳಾಗುತ್ತಿವೆ. ಮತ್ತೊಂದು ಕಡೆ ಕೊರೊನಾ ಎಂಬ ಸಾಂಕ್ರಾಮಿಕ ಹರಡಲೂ ಸಹ ಈ ರೀತಿಯ ಪರಿಸರನಾಶವೇ ಕಾರಣ ಎಂದು ತಿಳಿದುಬಂದಿದೆ.  ಹೀಗಿರುವಾಗ ಸರ್ಕಾರ ಮತ್ತೆ ಇಂತಹ ಕೆಲಸಕ್ಕೆ ಕೈ ಹಾಕಿರುವುದು ನಿಜವಾಗಲೂ ಖಂಡನೀಯ ಎಂದು ಮಹೇಶ್ ಭಟ್ ಹೇಳುತ್ತಾರೆ.

ಅಷ್ಟೇ ಅಲ್ಲದೇ ಇದು ಬೆಂಗಳೂರಿನ ಸುತ್ತಮುತ್ತ ಇರುವ ಏಕೈಕ ಹಸಿರು ಪ್ರದೇಶವಾಗಿದ್ದು, ಸಾಕಷ್ಟು ಜೀವ ವೈವಿಧ್ಯತೆಯನ್ನು ಹೊಂದಿದೆ. 120ಕ್ಕೂ ಹೆಚ್ಚು ಪಕ್ಷಿ ಪ್ರಭೇದಗಳು, ಸಸ್ತನಿಗಳು ಮತ್ತು ಸರಿಸೃಪಗಳಿವೆ. ಅಳಿವಿನಂಚಿನಲ್ಲಿರುವ ವನ್ಯಜೀವಿಗಳಿಗೆ ಇರುವ ಏಕೈಕ ತಾಣವಿದು. ಜೊತೆಗೆ ನಗರೀಕರಣ ಮತ್ತು ಹವಾಮಾನ ಬದಲಾವಣೆಯ ಪರಿಣಾಮಗಳನ್ನು ತಡೆಗಟ್ಟಲು ಪರಿಸರದ ಉಳಿವಿನಿಂದ ಮಾತ್ರ ಸಾದ್ಯ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಮಹೇಶ್ ಭಟ್ ಇದರ ಕುರಿತು ಸವಿಸ್ತಾರವಾಗಿ ಫೇಸ್ಬುಕ್ ನಲ್ಲಿ ಬರಹವೊಂದನ್ನು ಮತ್ತು ಸರ್ಕಾರದ ಆದೇಶವನ್ನು ಹಂಚಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಮತ್ತೊಬ್ಬ ಪರಿಸರವಾದಿ ಲಿಯೋ ಸಾಲ್ಡಾನಾ ‘ಇಷ್ಟು ಸೂಕ್ಷ್ಮವಾದ ಪರಿಸರ ಪ್ರದೇಶವನ್ನು ಚಿತ್ರನಗರಿಯ ನಿರ್ಮಾಣಕ್ಕೆ ಕೊಡುವುದು ಸರ್ಕಾರದ ಹುಚ್ಚುತನವನ್ನು ತೋರಿಸುತ್ತದೆ’ ಎಂದಿದ್ದಾರೆ.

‘ಸುಮಾರು 100 ವರ್ಷಗಳಿಗೆ ಮೊದಲು ಇಲ್ಲಿ ಕಟ್ಟೆಯೊಂದನ್ನು ಕಟ್ಟಿ ಕೆರೆಯನ್ನು ನಿರ್ಮಿಸಲಾಗಿತ್ತು. ಬೆಂಗಳೂರಿಗೆ ಇದು ನೀರಿನ ಮೂಲವಾಗಿತ್ತು. ಆದರೆ ಈಗ 10 ವರ್ಷಗಳಿಂದ ಅಲ್ಲಿ ನೀರೂ ಸಹ ಇಲ್ಲ. ಹೀಗಿರುವಾಗ ಅಲ್ಲಿ ಚಿತ್ರನಗರಿ ನಿರ್ಮಾಣ ಮಾಡುವುದರಿಂದ ಉಪಯೋಗವಿಲ್ಲ’ ಎಂದಿದ್ದಾರೆ.

ಸರ್ಕಾರದ ಒಡೆತನದಲ್ಲಿಯೇ ಹತ್ತಾರು ಫ್ಯಾಕ್ಟರಿಗಳು ಖಾಲಿಯಾಗಿ ಉಳಿದಿವೆ. ಇಂತಹ ಯಾವುದೋ ಒಂದು ಸ್ಥಳದಲ್ಲಿ ಚಿತ್ರನಗರಿ ನಿರ್ಮಾಣ ಮಾಡಿದರೆ ಒಳ್ಳೆಯದು. ಅದು ಬಿಟ್ಟು ಸದ್ಯ ಬೆಂಗಳೂರನ್ನು ಕಾಪಾಡುತ್ತಿರುವ ಈ ಪ್ರದೇಶವನ್ನೂ ನಿರ್ಮೂಲನೆ ಮಾಡಿದರೆ ಮುಂದೆ ಅತ್ಯಂತ ಅಪಾಯಕಾರಿ ಸನ್ನಿವೇಷಗಳನ್ನು ಎದುರಿಸಬೇಕಾಗುತ್ತದೆ. ನೂರಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಲಿಯೋ ಸಾಲ್ಡಾನಾ ಹೇಳಿದ್ದಾರೆ.

ನಮಗೆ ಚಿತ್ರನಗರಿ ಬೇಕು, ಆದರೆ ಪರಿಸರವನ್ನು ನಾಶಮಾಡಿ ಅದನ್ನು ನಿರ್ಮಿಸುವುದಕ್ಕೆ ನನ್ನ ವಿರೋಧವಿದೆ. ಚಿತ್ರನಗರಿಯೂ ಬೇಕು, ಪರಿಸರವೂ ಉಳಿಯಬೇಕು ಎಂದರೆ ಈ ಪ್ರದೇಶವನ್ನು ಬಿಟ್ಟು ಬೇರೆ ಯಾವುದಾದರೂ ಬಯಲು ಪ್ರದೇಶ ಅಥವಾ ಪರಿಸರದ ದೃಷ್ಟಿಯಿಂದ ಅಷ್ಟಾಗಿ ಸೂಕ್ಷ್ಮವಲ್ಲದ ಸ್ಥಳವನ್ನು ಹುಡುಕಿ ನಿರ್ಮಿಸಿಕೊಳ್ಳಬೇಕು ಎಂದು ಚಿತ್ರನಟ ಚೇತನ್ ಅಹಿಂಸಾ ಅಭಿಪ್ರಾಯ ಪಟ್ಟಿದ್ದಾರೆ.

ಕರ್ನಾಟಕದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ಚಿತ್ರನಗರಿ ನಿರ್ಮಾಣವಾಗಬೇಕೆಂಬುದು ಹಲವು ವರ್ಷಗಳ ಕೂಗು. ಆದರೆ ಇದೇ ಸ್ಥಳದಲ್ಲಿ ಬೇಕು ಎಂದು ನಾವು ಹೇಳುತ್ತಿಲ್ಲ. ಬಹುಪಾಲು ಬೆಂಗಳೂರಿಗೆ ಹತ್ತಿರವಾಗುವಂತೆ ಎಲ್ಲಿಯಾದರೂ ಸರಿ ಆದಷ್ಟು ಬೇಗ ಚಿತ್ರನಗರಿ ನಿರ್ಮಾಣ ಮಾಡಬೇಕೆಂದು ಈ ಮೂಲಕ ಒತ್ತಾಯಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಕನ್ನಟ ಚಿತ್ರರಂಗದ ದೃಷ್ಟಿಕೋನದಿಂದ ನೋಡುವುದಾದರೆ, ಈಗಲೂ ಚಿತ್ರೀಕರಣಕ್ಕಾಗಿ ಹೈದರಾಬಾದಿಗೊ ಅಥವಾ ಮತ್ತೆಲ್ಲಿಗೋ ಹೋಗಬೇಕಾಗಿದೆ. ಇದು ಹೆಚ್ಚು ದುಬಾರಿಯೂ ಆಗಿದೆ. ಈಗಿರುವ ಕಂಠೀರವ ಸ್ಟುಡಿಯೋದಲ್ಲಿ ಕೆಲವು ಕೊರತೆಗಳಿವೆ. ಹಾಗಾಗಿ ಬೆಂಗಳೂರಿನ ಬಳಿ ಚಿತ್ರನಗರಿ ನಿರ್ಮಾಣವಾಗಬೇಕು. ಜೊತೆಗೆ 4-5 ವರ್ಷಗಳಿಗೊಮ್ಮೆ ಅದು ಅಪ್ಡೇಟ್ ಆಗುತ್ತಿರಬೇಕು ಎಂದು ಚೇತನ್ ಹೇಳಿದ್ದಾರೆ.


ಇದನ್ನೂ ಓದಿ: ಪರಿಸರ ದಿನ: ಪರಿಸರ ಮಾಲಿನ್ಯಕ್ಕೆ ಯಾರನ್ನು ದೂಷಿಸಬೇಕು? ನಾವೇನು ಮಾಡಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...