Homeಕರ್ನಾಟಕಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

ಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

2020-21ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ಟಿನಲ್ಲಿ ರೂ.500 ಕೋಟಿ ಹಣವನ್ನು ಚಿತ್ರನಗರಿ ನಿರ್ಮಾಣಕ್ಕಾಗಿ ಘೋಷಿಸಲಾಗಿದ್ದು, ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ಸ್ಥಾಪಿಸುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು.

- Advertisement -
- Advertisement -

ಬೆಂಗಳೂರಿನ ಹೆಸರಘಟ್ಟ ಬಳಿ 150 ಎಕರೆ ಪ್ರದೇಶದಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು ಇದರ ಪರ-ವಿರೋಧ ಚರ್ಚೆಗಳು ಆರಂಭವಾಗಿವೆ. ಇದು ದಖ್ಖನ್ ಪ್ರಸ್ಥಭೂಮಿಯ ಹುಲ್ಲುಗಾವಲು ಪ್ರದೇಶವಾಗಿದ್ದು ಜೈವಿಕ ಮತ್ತು ಪಾರಿಸರಿಕಾವಾಗಿ ಅತ್ಯಂತ ಸೂಕ್ಷ್ಮ ಪ್ರದೇಶವಾಗಿದೆ.

2020-21ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ಟಿನಲ್ಲಿ ರೂ.500 ಕೋಟಿ ಹಣವನ್ನು ಚಿತ್ರನಗರಿ ನಿರ್ಮಾಣಕ್ಕಾಗಿ ಘೋಷಿಸಲಾಗಿದ್ದು, ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ಸ್ಥಾಪಿಸುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು.

ಹೆಸರಘಟ್ಟದಲ್ಲಿ ಚಿತ್ರನಗರಿಗಾಗಿ ಮೀಸಲಿಟ್ಟಿರುವ ಸುಮಾರು 347 ಎಕರೆ ಭೂಪ್ರದೇಶವು ಪಶುಸಂಗೋಪನಾ ಇಲಾಖೆಗೆ ಸೇರಿದೆ. ಈ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಚಿತ್ರನಗರಿ ನಿರ್ಮಾಣದಿಂದ ಪರಿಸರ ಮತ್ತು ಜೀವ ವೈವಿಧ್ಯತೆಗೆ ತೊಂದರೆಯುಂಟಾಗುತ್ತದೆ ಎಂದು ಹಲವು ಪರಿಸರವಾದಿಗಳು ಇದನ್ನು ವಿರೋಧಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ 2012 ರಲ್ಲಿಯೇ ಪರಿಸರವಾದಿಗಳು ಪಿಐಎಲ್ ಸಲ್ಲಿಸಿದ್ದರಿಂದ ಅಂದಿನ ರಾಜ್ಯ ಸರ್ಕಾರ ಯಥಾಸ್ಥಿತಿಯನ್ನು ಮುಂದುವರಿಸುವುದಾಗಿ ಹೇಳಿ, ಅಲ್ಲಿ ಚಿತ್ರನಗರಿ ನಿರ್ಮಾಣ ಮಾಡುವ ಪ್ರಸ್ತಾವವನ್ನು ಕೈಬಿಟ್ಟು ಪರ್ಯಾಯ ಸ್ಥಳವನ್ನು ಹುಡುಕುತ್ತಿತ್ತು. ಆದರೆ ಅಂದು ಆಶ್ವಾಸನೆ ಕೊಟ್ಟ ಸರ್ಕಾರ ಈಗ ಮತ್ತೆ ಅದೇ ಕೆಲಸಕ್ಕೆ ಮುಂದಾಗಿದೆ ಎಂದು ಪರಿಸರವಾದಿ ಮಹೇಶ್ ಭಟ್ ಹೇಳುತ್ತಾರೆ.

ಈ ವಿಷಯದ ಕುರಿತು ಮಹೇಶ್ ಭಟ್ ಮೊದಲಿನಿಂದಲೂ ದನಿಯೆತ್ತುತ್ತಿದ್ದಾರೆ. ಅರ್ಕಾವತಿ ನದಿಯ ಜಲಾನಯನ ಪ್ರದೇಶವಾಗಿರುವುದರಿಂದ ಇದನ್ನು ಉಳಿಸಿಕೊಳ್ಳಬೇಕಾದ ತುರ್ತಿದೆ. ಇದರ ಕುರಿತು ಸಾಕಷ್ಟು ಬರಹಗಳನ್ನು ಪ್ರಕಟಿಸುವುದರೊಂದಿಗೆ ಅವರು ಹಲವು ಹೋರಾಟಗಳನ್ನೂ ಮಾಡಿದ್ದಾರೆ.

ವಾಯುಮಾಲಿನ್ಯವನ್ನು ತಡೆಗಟ್ಟಿ ಪರಿಸರವನ್ನು ಉಳಿಸುವುದಾಗಿ ಜಗತ್ತಿನ ಎಲ್ಲಾ ದೇಶಗಳು ಪಣತೊಟ್ಟಿವೆ. ಈಗಾಗಲೆ ಜಾಗತಿಕ ತಾಪಮಾನ ಹೆಚ್ಚಿ ಸಾಕಷ್ಟು ತೊಂದರೆಗಳಾಗುತ್ತಿವೆ. ಮತ್ತೊಂದು ಕಡೆ ಕೊರೊನಾ ಎಂಬ ಸಾಂಕ್ರಾಮಿಕ ಹರಡಲೂ ಸಹ ಈ ರೀತಿಯ ಪರಿಸರನಾಶವೇ ಕಾರಣ ಎಂದು ತಿಳಿದುಬಂದಿದೆ.  ಹೀಗಿರುವಾಗ ಸರ್ಕಾರ ಮತ್ತೆ ಇಂತಹ ಕೆಲಸಕ್ಕೆ ಕೈ ಹಾಕಿರುವುದು ನಿಜವಾಗಲೂ ಖಂಡನೀಯ ಎಂದು ಮಹೇಶ್ ಭಟ್ ಹೇಳುತ್ತಾರೆ.

ಅಷ್ಟೇ ಅಲ್ಲದೇ ಇದು ಬೆಂಗಳೂರಿನ ಸುತ್ತಮುತ್ತ ಇರುವ ಏಕೈಕ ಹಸಿರು ಪ್ರದೇಶವಾಗಿದ್ದು, ಸಾಕಷ್ಟು ಜೀವ ವೈವಿಧ್ಯತೆಯನ್ನು ಹೊಂದಿದೆ. 120ಕ್ಕೂ ಹೆಚ್ಚು ಪಕ್ಷಿ ಪ್ರಭೇದಗಳು, ಸಸ್ತನಿಗಳು ಮತ್ತು ಸರಿಸೃಪಗಳಿವೆ. ಅಳಿವಿನಂಚಿನಲ್ಲಿರುವ ವನ್ಯಜೀವಿಗಳಿಗೆ ಇರುವ ಏಕೈಕ ತಾಣವಿದು. ಜೊತೆಗೆ ನಗರೀಕರಣ ಮತ್ತು ಹವಾಮಾನ ಬದಲಾವಣೆಯ ಪರಿಣಾಮಗಳನ್ನು ತಡೆಗಟ್ಟಲು ಪರಿಸರದ ಉಳಿವಿನಿಂದ ಮಾತ್ರ ಸಾದ್ಯ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಮಹೇಶ್ ಭಟ್ ಇದರ ಕುರಿತು ಸವಿಸ್ತಾರವಾಗಿ ಫೇಸ್ಬುಕ್ ನಲ್ಲಿ ಬರಹವೊಂದನ್ನು ಮತ್ತು ಸರ್ಕಾರದ ಆದೇಶವನ್ನು ಹಂಚಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಮತ್ತೊಬ್ಬ ಪರಿಸರವಾದಿ ಲಿಯೋ ಸಾಲ್ಡಾನಾ ‘ಇಷ್ಟು ಸೂಕ್ಷ್ಮವಾದ ಪರಿಸರ ಪ್ರದೇಶವನ್ನು ಚಿತ್ರನಗರಿಯ ನಿರ್ಮಾಣಕ್ಕೆ ಕೊಡುವುದು ಸರ್ಕಾರದ ಹುಚ್ಚುತನವನ್ನು ತೋರಿಸುತ್ತದೆ’ ಎಂದಿದ್ದಾರೆ.

‘ಸುಮಾರು 100 ವರ್ಷಗಳಿಗೆ ಮೊದಲು ಇಲ್ಲಿ ಕಟ್ಟೆಯೊಂದನ್ನು ಕಟ್ಟಿ ಕೆರೆಯನ್ನು ನಿರ್ಮಿಸಲಾಗಿತ್ತು. ಬೆಂಗಳೂರಿಗೆ ಇದು ನೀರಿನ ಮೂಲವಾಗಿತ್ತು. ಆದರೆ ಈಗ 10 ವರ್ಷಗಳಿಂದ ಅಲ್ಲಿ ನೀರೂ ಸಹ ಇಲ್ಲ. ಹೀಗಿರುವಾಗ ಅಲ್ಲಿ ಚಿತ್ರನಗರಿ ನಿರ್ಮಾಣ ಮಾಡುವುದರಿಂದ ಉಪಯೋಗವಿಲ್ಲ’ ಎಂದಿದ್ದಾರೆ.

ಸರ್ಕಾರದ ಒಡೆತನದಲ್ಲಿಯೇ ಹತ್ತಾರು ಫ್ಯಾಕ್ಟರಿಗಳು ಖಾಲಿಯಾಗಿ ಉಳಿದಿವೆ. ಇಂತಹ ಯಾವುದೋ ಒಂದು ಸ್ಥಳದಲ್ಲಿ ಚಿತ್ರನಗರಿ ನಿರ್ಮಾಣ ಮಾಡಿದರೆ ಒಳ್ಳೆಯದು. ಅದು ಬಿಟ್ಟು ಸದ್ಯ ಬೆಂಗಳೂರನ್ನು ಕಾಪಾಡುತ್ತಿರುವ ಈ ಪ್ರದೇಶವನ್ನೂ ನಿರ್ಮೂಲನೆ ಮಾಡಿದರೆ ಮುಂದೆ ಅತ್ಯಂತ ಅಪಾಯಕಾರಿ ಸನ್ನಿವೇಷಗಳನ್ನು ಎದುರಿಸಬೇಕಾಗುತ್ತದೆ. ನೂರಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಲಿಯೋ ಸಾಲ್ಡಾನಾ ಹೇಳಿದ್ದಾರೆ.

ನಮಗೆ ಚಿತ್ರನಗರಿ ಬೇಕು, ಆದರೆ ಪರಿಸರವನ್ನು ನಾಶಮಾಡಿ ಅದನ್ನು ನಿರ್ಮಿಸುವುದಕ್ಕೆ ನನ್ನ ವಿರೋಧವಿದೆ. ಚಿತ್ರನಗರಿಯೂ ಬೇಕು, ಪರಿಸರವೂ ಉಳಿಯಬೇಕು ಎಂದರೆ ಈ ಪ್ರದೇಶವನ್ನು ಬಿಟ್ಟು ಬೇರೆ ಯಾವುದಾದರೂ ಬಯಲು ಪ್ರದೇಶ ಅಥವಾ ಪರಿಸರದ ದೃಷ್ಟಿಯಿಂದ ಅಷ್ಟಾಗಿ ಸೂಕ್ಷ್ಮವಲ್ಲದ ಸ್ಥಳವನ್ನು ಹುಡುಕಿ ನಿರ್ಮಿಸಿಕೊಳ್ಳಬೇಕು ಎಂದು ಚಿತ್ರನಟ ಚೇತನ್ ಅಹಿಂಸಾ ಅಭಿಪ್ರಾಯ ಪಟ್ಟಿದ್ದಾರೆ.

ಕರ್ನಾಟಕದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ಚಿತ್ರನಗರಿ ನಿರ್ಮಾಣವಾಗಬೇಕೆಂಬುದು ಹಲವು ವರ್ಷಗಳ ಕೂಗು. ಆದರೆ ಇದೇ ಸ್ಥಳದಲ್ಲಿ ಬೇಕು ಎಂದು ನಾವು ಹೇಳುತ್ತಿಲ್ಲ. ಬಹುಪಾಲು ಬೆಂಗಳೂರಿಗೆ ಹತ್ತಿರವಾಗುವಂತೆ ಎಲ್ಲಿಯಾದರೂ ಸರಿ ಆದಷ್ಟು ಬೇಗ ಚಿತ್ರನಗರಿ ನಿರ್ಮಾಣ ಮಾಡಬೇಕೆಂದು ಈ ಮೂಲಕ ಒತ್ತಾಯಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಕನ್ನಟ ಚಿತ್ರರಂಗದ ದೃಷ್ಟಿಕೋನದಿಂದ ನೋಡುವುದಾದರೆ, ಈಗಲೂ ಚಿತ್ರೀಕರಣಕ್ಕಾಗಿ ಹೈದರಾಬಾದಿಗೊ ಅಥವಾ ಮತ್ತೆಲ್ಲಿಗೋ ಹೋಗಬೇಕಾಗಿದೆ. ಇದು ಹೆಚ್ಚು ದುಬಾರಿಯೂ ಆಗಿದೆ. ಈಗಿರುವ ಕಂಠೀರವ ಸ್ಟುಡಿಯೋದಲ್ಲಿ ಕೆಲವು ಕೊರತೆಗಳಿವೆ. ಹಾಗಾಗಿ ಬೆಂಗಳೂರಿನ ಬಳಿ ಚಿತ್ರನಗರಿ ನಿರ್ಮಾಣವಾಗಬೇಕು. ಜೊತೆಗೆ 4-5 ವರ್ಷಗಳಿಗೊಮ್ಮೆ ಅದು ಅಪ್ಡೇಟ್ ಆಗುತ್ತಿರಬೇಕು ಎಂದು ಚೇತನ್ ಹೇಳಿದ್ದಾರೆ.


ಇದನ್ನೂ ಓದಿ: ಪರಿಸರ ದಿನ: ಪರಿಸರ ಮಾಲಿನ್ಯಕ್ಕೆ ಯಾರನ್ನು ದೂಷಿಸಬೇಕು? ನಾವೇನು ಮಾಡಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...