Homeಮುಖಪುಟಬಿಬಿಸಿ ಸಾಕ್ಷ್ಯಚಿತ್ರ ಸಂಬಂಧ ನಮ್ಮ ವಿವಿಯಲ್ಲಿ ಯಾವ ಗಲಾಟೆಯೂ ನಡೆದಿಲ್ಲ: ಜಾಮಿಯಾ ಕುಲಪತಿ ಸ್ಪಷ್ಟನೆ

ಬಿಬಿಸಿ ಸಾಕ್ಷ್ಯಚಿತ್ರ ಸಂಬಂಧ ನಮ್ಮ ವಿವಿಯಲ್ಲಿ ಯಾವ ಗಲಾಟೆಯೂ ನಡೆದಿಲ್ಲ: ಜಾಮಿಯಾ ಕುಲಪತಿ ಸ್ಪಷ್ಟನೆ

- Advertisement -
- Advertisement -

ಕ್ಯಾಂಪಸ್‌ನಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವ ವಿಚಾರಕ್ಕೆ ಗಲಾಟೆ ನಡೆದಿರುವ ವರದಿಗಳನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ ಗುರುವಾರ ಮಧ್ಯಾಹ್ನ ತಿರಸ್ಕರಿಸಿದೆ.

ಈ ಬಗ್ಗೆ ವಿಶ್ವವಿದ್ಯಾನಿಲಯದ ಉಪಕುಲಪತಿ ನಜ್ಮಾ ಅಖ್ತರ್ ಅವರು ಸುದ್ದಿ ಸಂಸ್ಥೆ ANI ಜೊತೆ ಮಾತನಾಡಿದ್ದು, “ನಮ್ಮ ವಿಶ್ವವಿದ್ಯಾನಿಲಯದಲ್ಲಿ ಯಾವ ಗಲಾಟೆಯೂ ಆಗಲಿಲ್ಲ, ಗಲಾಟೆ ಮಾಡುವ ಪ್ರಯತ್ನ ಮಾಡಲಾಯಿತು ಆದರೆ ಅದನ್ನು ಸಂಪೂರ್ಣವಾಗಿ ವಿಫಲಗೊಳಿಸಲಾಯಿತು.” “ಏನೇ ಆಗಲಿ, ಬೀದಿಗಳಲ್ಲಿ ನಡೆದ ಸಣ್ಣ ಘಟನೆಯನ್ನು ಗಾಳಿಗೆ ತೂರಲಾಗಿದೆ. ನಮ್ಮ ಕ್ಯಾಂಪಸ್‌ನಲ್ಲಿ ಮುನ್ನೆಚ್ಚರಿಕೆ ಕ್ರಮಗಳು ಚೆನ್ನಾಗಿವೆ” ಎಂದು ಹೇಳಿದ್ದಾರೆ.

ಬುಧವಾರ ದೆಹಲಿಯ ಓಖ್ಲಾ ಪ್ರದೇಶದಲ್ಲಿ ಬಿಬಿಸಿ ಆಕ್ಷ್ಯಚಿತ್ರ ಪ್ರದರ್ಶನ ವಿಚಾರಕ್ಕೆ ವಿಶ್ವವಿದ್ಯಾನಿಲಯದ ಹೊರಗೆ ಗಲಾಟೆ ನಡೆಯಿತು. ಆಗ ಮೊದಲು ನಾಲ್ವರು ಎಸ್‌ಎಫ್‌ಐ ಸದಸ್ಯರನ್ನು ಬಂಧಿಸಲಾಯಿತು. ಆಗೆ ಅಲ್ಲಿ ಹಲವಾರು ವಿದ್ಯಾರ್ಥಿಗಳು ಜಮಾಯಿಸಿದರು. ನಂತರದ ಗೊಂದಲದಲ್ಲಿ ಹತ್ತಾರು ಮಂದಿಯನ್ನು ಪೊಲೀಸರು ಬಂಧಿಸಿದರು. ಹೆಚ್ಚಿನವರನ್ನು ನಂತರ ಬಿಡುಗಡೆ ಮಾಡಲಾಯಿತು ಆದರೆ ಕನಿಷ್ಠ 13 ಜನರು ಇಂದು ಬೆಳಿಗ್ಗೆ ಬಂಧನದಲ್ಲಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ವಿಚಾರಕ್ಕೆ ಜಾಮಿಯಾ ವಿವಿಯಲ್ಲಿ ಗಲಾಟೆ; 12ಕ್ಕೂ ಹೆಚ್ಚು ವಿದ್ಯಾರ್ಥಿಗಳ ಬಂಧನ

ಬಂಧಿತ 13 ಜನರಲ್ಲಿ ಕನಿಷ್ಠ ನಾಲ್ವರು ಜಾಮಿಯಾದ ವಿದ್ಯಾರ್ಥಿಗಳಾಗಿದ್ದು, ಎಸ್‌ಎಫ್‌ಐ ಜಾಮಿಯಾ ಕಾರ್ಯದರ್ಶಿ ಅಜೀಜ್, ಎಸ್‌ಎಫ್‌ಐ ದಕ್ಷಿಣ ದೆಹಲಿ ಉಪಾಧ್ಯಕ್ಷ ನಿವೇದ್ಯ ಮತ್ತು ಎಸ್‌ಎಫ್‌ಐ ಸದಸ್ಯರಾದ ಅಭಿರಾಮ್ ಮತ್ತು ತೇಜಸ್ ಎಂದು ತಿಳಿದುಬಂದಿದೆ.

ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ರದ್ದುಗೊಂಡ ನಂತರ ಕೆಲವು ವಿದ್ಯಾರ್ಥಿಗಳು ಕ್ಯಾಂಪಸ್‌ನ ಹೊರಗೆ ಗಲಾಟೆ ಮಾಡುತ್ತಿದ್ದಾರೆ ಎಂದು ಜಾಮಿಯಾ ಅಧಿಕಾರಿಗಳು ಹೇಳಿದರು. ಆ ನಂತರ ಕ್ರಮ ಕೈಗೊಂಡಿದ್ದೇವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಬುಧವಾರ ಸಂಜೆ 6 ಗಂಟೆಗೆ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಆದರೆ ಅನುಮತಿಯಿಲ್ಲದೆ ಯಾವುದೇ ಪ್ರದರ್ಶನಕ್ಕೆ ಅನುಮತಿಸುವುದಿಲ್ಲ ಎಂದು ಜಾಮಿಯಾ ಆಡಳಿತವು ಹೇಳಿದೆ.

“ವಿದ್ಯಾರ್ಥಿಗಳ ಯಾವುದೇ ಸಭೆ ಅಥವಾ ಯಾವುದೇ ಚಲನಚಿತ್ರದ ಪ್ರದರ್ಶನವನ್ನು ಅನುಮತಿಯಿಲ್ಲದೆ ಕ್ಯಾಂಪಸ್‌ನಲ್ಲಿ ನಡೆಸುವಂತಿಲ್ಲ ಎಂದು ವಿಶ್ವವಿದ್ಯಾಲಯವು ಪುನರುಚ್ಚರಿಸುತ್ತದೆ” ಎನ್ನುವ ಅಧಿಸೂಚನೆಯನ್ನು ಓದಲಾಗಿದೆ.

“ಇಲ್ಲಿನ ಶಾಂತಿಯುತ ಶೈಕ್ಷಣಿಕ ವಾತಾವರಣವನ್ನು ನಾಶಮಾಡಲು ಪಟ್ಟಭದ್ರ ಹಿತಾಸಕ್ತಿ ಹೊಂದಿರುವ ಜನರು/ಸಂಸ್ಥೆಗಳನ್ನು ತಡೆಗಟ್ಟಲು ವಿಶ್ವವಿದ್ಯಾನಿಲಯವು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.”

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿನ ಘಟನೆ ನಂತರ ಜಾಮಿಯಾದಲ್ಲಿ ಕೋಲಾಹಲವು ಸಂಭವಿಸಿದೆ, ಅಲ್ಲಿ ವಿದ್ಯಾರ್ಥಿಗಳು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಸಾಕ್ಷ್ಯಚಿತ್ರವನ್ನು ವೀಕ್ಷಿಸುತ್ತಿದ್ದಾಗ ಕಲ್ಲಿನಿಂದ ದಾಳಿ ನಡೆಸಲಾಗಿತ್ತು.ಜೆಎನ್‌ಯು ಆಡಳಿತ ಕೂಡ ಪ್ರದರ್ಶನಕ್ಕೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದೆ.

ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಸೈದ್ಧಾಂತಿಕ ಮಾರ್ಗದರ್ಶಕರಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಬೆಂಬಲಿತ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ – ತಮ್ಮ ಮೇಲೆ ಕಲ್ಲಿನಿಂದ ದಾಳಿ ನಡೆಸಿದೆ ಎಂದು ಜೆಎನ್‌ಯು ವಿದ್ಯಾರ್ಥಿ ಸಂಘದ ಮುಖ್ಯಸ್ಥೆ ಐಶೆ ಘೋಷ್ ಆರೋಪಿಸಿದ್ದಾರೆ.

ಕೋಲ್ಕತ್ತಾದ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಎಸ್‌ಎಫ್‌ಐ ಘಟಕವು ಶುಕ್ರವಾರ ಸಂಜೆ 4 ಗಂಟೆಗೆ ವಿವಾದಾತ್ಮಕ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಅಧಿಕಾರಿಗಳಿಂದ ಅನುಮತಿ ಕೋರಿದೆ.

ಬಿಬಿಸಿಯ ವಿವಾದಾತ್ಮಕ ಎರಡು ಭಾಗಗಳ ಸಾಕ್ಷ್ಯಚಿತ್ರವು ಹಿಂದೂ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ರೈಲಿಗೆ ಬೆಂಕಿ ಹಚ್ಚಿದ ನಂತರದ ಹಿಂಸಾಚಾರದಲ್ಲಿ 1,000 ಕ್ಕೂ ಹೆಚ್ಚು ಜನರ – ಹೆಚ್ಚಾಗಿ ಮುಸ್ಲಿಮರನ್ನು ಬಲಿತೆಗೆದುಕೊಂಡಾಗ ಭಾರತೀಯ ಮುಸ್ಲಿಮರೊಂದಿಗಿನ ಮೋದಿಯವರ ಸಂಬಂಧ ಮತ್ತು ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ಸಮಯವನ್ನು ಇವುಗಳಲ್ಲಿ ಟೀಕಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...