Homeಮುಖಪುಟದ್ವೇಷ ಭಾಷಣದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದ್ವೇಷ ಭಾಷಣದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

- Advertisement -
- Advertisement -

ದ್ವೇಷ ಭಾಷಣ ಪ್ರಕರಣಗಳು ಹೆಚ್ಚಾಗುತ್ತಿವೆ. ಭಾರತದಂತಹ ಜಾತ್ಯತೀತ ರಾಷ್ಟ್ರದಲ್ಲಿ ಧರ್ಮದ ಆಧಾರದ ಮೇಲೆ ದ್ವೇಷದ ಅಪರಾಧಗಳಿಗೆ ಯಾವುದೇ ಅವಕಾಶವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿತು.

“ದ್ವೇಷ ಭಾಷಣದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ದ್ವೇಷ ಭಾಷಣದ ಸಮಸ್ಯೆಯನ್ನು ರಾಜ್ಯಗಳು ಒಪ್ಪಿಕೊಂಡರೆ ಮಾತ್ರ ಪರಿಹಾರವನ್ನು ಕಂಡುಕೊಳ್ಳಬಹುದು. ಅಂತಹ ಯಾವುದೇ ದ್ವೇಷ ಅಪರಾಧಗಳಿಂದ ತನ್ನ ನಾಗರಿಕರನ್ನು ರಕ್ಷಿಸುವುದು ರಾಜ್ಯ ಸರ್ಕಾರದ ಆದ್ಯ ಕರ್ತವ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ಪೀಠವು, ”ದ್ವೇಷ ಭಾಷಣದ ಪ್ರಕರಣಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದಾಗ ಅತ್ಯಂತ ಅಪಾಯಕಾರಿ ವಾತಾವರಣ ಬೆಳೆಯುತ್ತದೆ ಹಾಗಾಗಿ ದ್ವೇಷ ಭಾಷಣದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ” ಎಂದು ಅಭಿಪ್ರಯಪಟ್ಟಿದೆ.

ಮುಸ್ಲಿಂ ವ್ಯಕ್ತಿಯೊಬ್ಬರು, ಜುಲೈ 4, 2021 ಅಲಿಘರ್‌ಗೆ ಹೋಗಲು ಕಾರನ್ನು ಹತ್ತಿದಾಗ ಅಪರಾಧಿಗಳ “ಸ್ಕ್ರೂಡ್ರೈವರ್” ನಿಂದ ಧರ್ಮದ ಹೆಸರಿನಲ್ಲಿ ಹಲ್ಲೆ ಮತ್ತು ನಿಂದನೆ ಮಾಡಲಾಗಿದೆ ಎಂದು ಆರೋಪಿಸಿದ್ದರು. ಆ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ. ಆದರೆ ಈ ಬಗ್ಗೆ ನೋಯ್ಡಾದ ಪೊಲೀಸರು ಈ ಬಗ್ಗೆ ಯಾವುದೇ ದೂರು ದಾಖಲಿಸಿಕೊಂಡಿಲ್ಲ.

ಉತ್ತರ ಪ್ರದೇಶ ಸರ್ಕಾರದ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಕೆ.ಎಂ.ನಟರಾಜ್ ಅವರಿಗೆ ನ್ಯಾಯಪೀಠವು, ”ಇತ್ತೀಚಿನ ದಿನಗಳಲ್ಲಿ ದ್ವೇಷ ಭಾಷಣದ ಪ್ರಕರಣಗಳು ಬೆಳೆಯುತ್ತಿದೆ. ಭಾರತದಂತಹ ಜಾತ್ಯತೀತ ದೇಶದಲ್ಲಿ ಧರ್ಮದ ಹೆಸರಿನಲ್ಲಿ ದ್ವೇಷದ ಅಪರಾಧಗಳಿಗೆ ಅವಕಾಶವಿಲ್ಲ. ಇದನ್ನು ಬೇರುಸಹಿತ ಕಿತ್ತೊಗೆಯಬೇಕು ಮತ್ತು ಅಂತಹ ಯಾವುದೇ ಅಪರಾಧಗಳಿಂದ ತನ್ನ ನಾಗರಿಕರನ್ನು ರಕ್ಷಿಸುವುದು ರಾಜ್ಯದ ಪ್ರಾಥಮಿಕ ಕರ್ತವ್ಯವಾಗಿದೆ” ಎಂದು ಹೇಳಿತು.

”ಒಬ್ಬ ವ್ಯಕ್ತಿ ಪೊಲೀಸರ ಬಳಿ ಬಂದು, ನಾನು ಕ್ಯಾಪ್ ಧರಿಸಿದ್ದನ್ನು ಕಂಡು ನನ್ನ ಗಡ್ಡವನ್ನು ಎಳೆದು ಧರ್ಮದ ಹೆಸರಿನಲ್ಲಿ ನಿಂದಿಸಲಾಗಿದೆ ಮತ್ತು ಇನ್ನೂ ಯಾವುದೇ ದೂರು ದಾಖಲಾಗಿಲ್ಲ ಎಂದು ಹೇಳಿದರೆ ಅದು ಸಮಸ್ಯೆ” ಎಂದು ಪೀಠ ಹೇಳಿದೆ.

ಇದನ್ನೂ ಓದಿ: ದ್ವೇಷ ಭಾಷಣ ಹಿನ್ನೆಲೆ ರಾಮದೇವ್ ವಿರುದ್ಧ ಎಫ್ಐಆರ್

ಅಂತಹ ಅಪರಾಧಿಗಳ ವಿರುದ್ಧ ಅಧಿಕಾರಿಗಳು ಕ್ರಮ ತಗೆದುಕೊಂಡರೆ ಕಾನೂನಿನ ಗೌರವ ಹೆಚ್ಚುತ್ತದೆ. ಇಲ್ಲದಿದ್ದರೆ ಎಲ್ಲರೂ ಕಾನೂನನ್ನು ಕೈಗೆ ತೆಗೆದುಕೊಳ್ಳುತ್ತಾರೆ ಎಂದು ನ್ಯಾಯಮೂರ್ತಿ ಜೋಸೆಫ್ ಹೇಳಿದರು.

ಸಂಜೆ 6 ಗಂಟೆಯವರೆಗೆ ವಿಚಾರಣೆ ನಡೆಸಿದ ಪೀಠ, ”ದ್ವೇಷದ ಅಪರಾಧವಿದೆ ಎಂದು ನೀವು ಒಪ್ಪಿಕೊಳ್ಳುವುದಿಲ್ಲ ಮತ್ತು ಅಂತಹ ಪ್ರಕರಣವನ್ನು ನಿರ್ಲಕ್ಷ ಮಾಡುತ್ತೀರಿ ಅಲ್ವೇ? ನಾವು ಅದಕ್ಕೆ ಏನನ್ನೂ ಹೇಳುವುದಿಲ್ಲ… ನಾವು ನಮ್ಮ ವೇದನೆಯನ್ನು ಮಾತ್ರ ವ್ಯಕ್ತಪಡಿಸುತ್ತಿದ್ದೇವೆ ಅಷ್ಟೆ” ಎಂದು ಹೇಳಿತು.

ಅರ್ಜಿದಾರ ಕಾಜೀಂ ಅಹ್ಮದ್ ಶೇರ್ವಾನಿ ಪರ ವಾದ ಮಂಡಿಸಿದ ಹಿರಿಯ ವಕೀಲ ಹುಝೆಫಾ ಅಹ್ಮದಿ ಅವರು, ”ಎರಡು ವರ್ಷಗಳ ನಂತರ ಪೊಲೀಸರು ಎಫ್‌ಐಆರ್ ದಾಖಲಿಸಿರುವ ಪ್ರಕರಣದ ಡೈರಿಯನ್ನು ಹಾಜರುಪಡಿಸುವಂತೆ ಜನವರಿ 13 ರಂದು ಈ ನ್ಯಾಯಾಲಯವು ರಾಜ್ಯ ಸರ್ಕಾರವನ್ನು ಕೇಳಿತ್ತು ಮತ್ತು ಒಂದನ್ನು ಹೊರತುಪಡಿಸಿ ಉಳಿದೆಲ್ಲವೂ ಜಾಮೀನು ನೀಡಬಹುದಾದ ಅಪರಾಧ ಎನ್ನುವಂತೆ ಪ್ರಕರಣ ದಾಖಲಿಸಿಕೊಂಡಿದೆ” ಎಂದು ಹೇಳಿದರು.

ಪೊಲೀಸ್ ಅಧಿಕಾರಿಗಳ ಎಡವಟ್ಟುಗಳನ್ನು ಒಪ್ಪಿಕೊಂಡಿರುವ ಉತ್ತರ ಪ್ರದೇಶ ಸರ್ಕಾರದ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್, ಎಸಿಪಿ ದರ್ಜೆಯ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು, ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಪೀಠವು, “ನೀವು ಒಂದು ಬಾರಿ ಕಠಿಣ ಕ್ರಮ ಕೈಗೊಂಡು ನೋಡಿ ಆಗ ಅಂತಹ ಜನರು ಕರ್ತವ್ಯ ಲೋಪ ಎಸಗುವುದಿಲ್ಲ. ಆಗ ಮಾತ್ರ ನಾವು ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗೆ ಸರಿಸಮಾನರಾಗುತ್ತೇವೆ. ಹೌದು, ಇಲ್ಲಿ ತಪ್ಪಾಗಿದೆ ಅದನ್ನು ಒಪ್ಪಿಕೊಳ್ಳುವುದರಲ್ಲಿ ತಪ್ಪೇನಿಲ್ಲ” ಎಂದು ಹೇಳಿತು.

ಜುಲೈ 4, 2021 ರಂದು ಘಟನೆ ನಡೆದಾಗ, ಸಂತ್ರಸ್ತರು ನೋಯ್ಡಾದ ಸೆಕ್ಟರ್ 37 ರ ಪೊಲೀಸ್ ಔಟ್‌ಪೋಸ್ಟ್‌ಗೆ ಹೋಗಿದ್ದರು, ಅಲ್ಲಿ ಯಾವುದೇ ಹಿರಿಯ ಪೊಲೀಸ್ ಅಧಿಕಾರಿಗಳಿರಲಿಲ್ಲ ಆದರೆ ಕಾನ್‌ಸ್ಟೆಬಲ್‌ಗಳು ಮಾತ್ರ ಇದ್ದರು. ಹಾಗಾಗಿ ಯಾವುದೇ ದೂರು ದಾಖಲಾಗಿಲ್ಲ ಎಂದು ಕೆಎಂ ನಟರಾಜ್ ಹೇಳಿದರು.

”ನಂತರ ಅವರು ಜಾಮಿಯಾ ನಗರದ ಆಸ್ಪತ್ರೆಗೆ ಹೋಗಿದ್ದಾರೆ. ಅಲ್ಲಿ ದೆಹಲಿ ಪೊಲೀಸರು ವಿಚಾರಿಸಿದಾಗ ದರೋಡೆ, ಹಲ್ಲೆ ಮತ್ತು ಗಾಯಗಳಾಗಿವೆ ಎಂದು ಹೇಳಿಕೆ ನೀಡಿದರು. ಅವರು ದ್ವೇಷದ ಅಪರಾಧ ಅಥವಾ ಮುಸ್ಲಿಂ ಎಂಬ ಕಾರಣಕ್ಕಾಗಿ ಹಲ್ಲೆ ನಡೆಸಲಾಗಿದೆ ಎಂದು ಎಲ್ಲಿಯೂ ಹೇಳಿಲ್ಲ” ಎಂದು ಕೆ.ಎಂ. ನಟರಾಜ್ ಹೇಳಿದರು.

ನ್ಯಾಯಮೂರ್ತಿ ನಾಗರತ್ನ ಅವರು, ”ನೀವು ಒಂದು ಕುಟುಂಬದಲ್ಲಿ ಹುಟ್ಟಿ ಒಂದರಲ್ಲಿ ಬೆಳೆದಿದ್ದೀರಿ. ಯಾವ ಧರ್ಮದಲ್ಲಿ ಹುಟ್ಟಬೇಕು ಎನ್ನುದರ ಬಗ್ಗೆ ನಮಗೆ ಆಯ್ಕೆಗಳಿರಲ್ಲ, ಯಾವುದೇ ಧರ್ಮದಲ್ಲಿ ಹುಟ್ಟಿಬೆಳೆದರೂ ನಾವು ರಾಷ್ಟ್ರವಾಗಿ ನಿಲ್ಲುತ್ತೇವೆ. ಅದು ನಮ್ಮ ರಾಷ್ಟ್ರದ ಸೌಂದರ್ಯ, ಶ್ರೇಷ್ಠತೆ. ಇದನ್ನು ನಾವು ಅರ್ಥಮಾಡಿಕೊಳ್ಳಬೇಕು” ಎಂದು ಕೆ.ಎಂ.ನಟರಾಜ್ ಅವರಿಗೆ ಹೇಳಿದರು.

ಗ್ಯಾಂಗ್ ಸದಸ್ಯರ ವಿರುದ್ಧ ಎಂಟು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಮತ್ತು ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಎಎಸ್‌ಜಿ ಹೇಳಿದರು.

ಗ್ಯಾಂಗ್ ಸದಸ್ಯರ ವಿರುದ್ಧ ಮೊದಲ ಎಫ್‌ಐಆರ್ ಯಾವಾಗ ದಾಖಲಾಗಿದೆ? ಎಷ್ಟು ಜನರನ್ನು ಬಂಧಿಸಲಾಗಿದೆ? ಸಂತ್ರಸ್ತರ ಮೇಲೆ ದಾಳಿ ಮಾಡಿದವರು ಅದೇ ವ್ಯಕ್ತಿಗಳಾ? ಮತ್ತು ಅವರಿಗೆ ಯಾವಾಗ ಜಾಮೀನು ನೀಡಲಾಯಿತು ಎಂದು ಪೀಠವು ಕೇಳಿತು.

ಕೆಎಂ ನಟರಾಜ್ ಅವರು ಎಲ್ಲಾ ಎಫ್‌ಐಆರ್‌ಗಳ ವಿವರಗಳನ್ನು ನೀಡುವ ಅಫಿಡವಿಟ್ ಸಲ್ಲಿಸುವುದಾಗಿ ಹೇಳಿದರು ಆದರೆ ಜೂನ್ 2021 ರಲ್ಲಿ “ಸ್ಕ್ರೂಡ್ರೈವರ್ ಗ್ಯಾಂಗ್” ಸದಸ್ಯರ ವಿರುದ್ಧ ಮೊದಲ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಅವರು ಮುಸ್ಲಿಮರು ಅಥವಾ ಹಿಂದೂಗಳ ಮೇಲೆ ದಾಳಿ ಮಾಡುವಲ್ಲಿ ತಾರತಮ್ಯ ಮಾಡಿಲ್ಲ ಎಂದು ಹೇಳಿದರು.

ಕ್ರಿಮಿನಲ್ ಘಟನೆ ನಡೆದಿರುವುದನ್ನು ಒಪ್ಪಿಕೊಳ್ಳಲು ಎರಡು ವರ್ಷಗಳು ಬೇಕಾಯಿತು ಎಂದು ವಕೀಲ ಅಹ್ಮದಿ ಹೇಳಿದರು ಮತ್ತು ಉತ್ತರ ಪ್ರದೇಶ ಸರ್ಕಾರ ಸಲ್ಲಿಸಿದ ಎರಡು ಅಫಿಡವಿಟ್‌ಗಳಲ್ಲಿ ಯಾವುದೇ ದ್ವೇಷದ ಅಪರಾಧ ನಡೆದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

“ಜುಲೈ 5, 2021 ರಂದು, ಪೋಲೀಸ್ ಗಸ್ತು ನನ್ನ ಮನೆಗೆ ಬಂದಿತ್ತು ಧರ್ಮದ ದೃಷ್ಟಿಯಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಬೇಡ” ಎಂದು ಅವರು ಹೇಳಿದರು, ಸಂತ್ರಸ್ತನ ಗಡ್ಡವನ್ನು ಎಳೆದು ಅಪಹಾಸ್ಯ ಮಾಡಿದರು. ಸುನ್ನತಿ ಮಾಡಿದ್ದಕ್ಕಾಗಿ ಕಾರಿನಲ್ಲಿ ಕುಳಿತು ಗೇಲಿ ಮಾಡಿದರು” ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಲಾಗಿದೆ.

ಕ್ರಿಮಿನಲ್ ಘಟನೆ ನಡೆದಿಲ್ಲ ಎಂದು ಪೊಲೀಸರು ಹೇಳಿಲ್ಲ. ಆದರೆ ಇದು ದ್ವೇಷದ ಅಪರಾಧ ಎಂದು ಅವರು ಎಲ್ಲಿಯೂ ಕಂಡುಬಂದಿಲ್ಲ ಎಂದಿದ್ದಾರೆ. ಈ ಸಂತ್ರಸ್ತರು ಮಾಧ್ಯಮ ಪ್ರಚಾರದ ಲಾಭ ಪಡೆಯಲು ಪ್ರಯತ್ನಿಸಿದ್ದಾರೆ ಮತ್ತು ಹೇಳಿಕೆಗಳನ್ನು ಬದಲಾಯಿಸಿದ್ದಾರೆ ಎಂದು ಕೆಎಂ ನಟರಾಜ್ ಹೇಳಿದರು.

ಪೀಠವು, ಉತ್ತರ ಪ್ರದೇಶ ಸರ್ಕಾರಕ್ಕೆ ವಿವರವಾದ ಅಫಿಡವಿಟ್ ಸಲ್ಲಿಸಲು ಹೇಳಿತು ಮತ್ತು ಮಾರ್ಚ್ 3 ರಂದು ಹೆಚ್ಚಿನ ವಿಚಾರಣೆ ನಡೆಸುವುದಾಗಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...