Homeಮುಖಪುಟದ್ವೇಷ ಭಾಷಣದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದ್ವೇಷ ಭಾಷಣದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

- Advertisement -
- Advertisement -

ದ್ವೇಷ ಭಾಷಣ ಪ್ರಕರಣಗಳು ಹೆಚ್ಚಾಗುತ್ತಿವೆ. ಭಾರತದಂತಹ ಜಾತ್ಯತೀತ ರಾಷ್ಟ್ರದಲ್ಲಿ ಧರ್ಮದ ಆಧಾರದ ಮೇಲೆ ದ್ವೇಷದ ಅಪರಾಧಗಳಿಗೆ ಯಾವುದೇ ಅವಕಾಶವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿತು.

“ದ್ವೇಷ ಭಾಷಣದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ದ್ವೇಷ ಭಾಷಣದ ಸಮಸ್ಯೆಯನ್ನು ರಾಜ್ಯಗಳು ಒಪ್ಪಿಕೊಂಡರೆ ಮಾತ್ರ ಪರಿಹಾರವನ್ನು ಕಂಡುಕೊಳ್ಳಬಹುದು. ಅಂತಹ ಯಾವುದೇ ದ್ವೇಷ ಅಪರಾಧಗಳಿಂದ ತನ್ನ ನಾಗರಿಕರನ್ನು ರಕ್ಷಿಸುವುದು ರಾಜ್ಯ ಸರ್ಕಾರದ ಆದ್ಯ ಕರ್ತವ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ಪೀಠವು, ”ದ್ವೇಷ ಭಾಷಣದ ಪ್ರಕರಣಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದಾಗ ಅತ್ಯಂತ ಅಪಾಯಕಾರಿ ವಾತಾವರಣ ಬೆಳೆಯುತ್ತದೆ ಹಾಗಾಗಿ ದ್ವೇಷ ಭಾಷಣದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ” ಎಂದು ಅಭಿಪ್ರಯಪಟ್ಟಿದೆ.

ಮುಸ್ಲಿಂ ವ್ಯಕ್ತಿಯೊಬ್ಬರು, ಜುಲೈ 4, 2021 ಅಲಿಘರ್‌ಗೆ ಹೋಗಲು ಕಾರನ್ನು ಹತ್ತಿದಾಗ ಅಪರಾಧಿಗಳ “ಸ್ಕ್ರೂಡ್ರೈವರ್” ನಿಂದ ಧರ್ಮದ ಹೆಸರಿನಲ್ಲಿ ಹಲ್ಲೆ ಮತ್ತು ನಿಂದನೆ ಮಾಡಲಾಗಿದೆ ಎಂದು ಆರೋಪಿಸಿದ್ದರು. ಆ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ. ಆದರೆ ಈ ಬಗ್ಗೆ ನೋಯ್ಡಾದ ಪೊಲೀಸರು ಈ ಬಗ್ಗೆ ಯಾವುದೇ ದೂರು ದಾಖಲಿಸಿಕೊಂಡಿಲ್ಲ.

ಉತ್ತರ ಪ್ರದೇಶ ಸರ್ಕಾರದ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಕೆ.ಎಂ.ನಟರಾಜ್ ಅವರಿಗೆ ನ್ಯಾಯಪೀಠವು, ”ಇತ್ತೀಚಿನ ದಿನಗಳಲ್ಲಿ ದ್ವೇಷ ಭಾಷಣದ ಪ್ರಕರಣಗಳು ಬೆಳೆಯುತ್ತಿದೆ. ಭಾರತದಂತಹ ಜಾತ್ಯತೀತ ದೇಶದಲ್ಲಿ ಧರ್ಮದ ಹೆಸರಿನಲ್ಲಿ ದ್ವೇಷದ ಅಪರಾಧಗಳಿಗೆ ಅವಕಾಶವಿಲ್ಲ. ಇದನ್ನು ಬೇರುಸಹಿತ ಕಿತ್ತೊಗೆಯಬೇಕು ಮತ್ತು ಅಂತಹ ಯಾವುದೇ ಅಪರಾಧಗಳಿಂದ ತನ್ನ ನಾಗರಿಕರನ್ನು ರಕ್ಷಿಸುವುದು ರಾಜ್ಯದ ಪ್ರಾಥಮಿಕ ಕರ್ತವ್ಯವಾಗಿದೆ” ಎಂದು ಹೇಳಿತು.

”ಒಬ್ಬ ವ್ಯಕ್ತಿ ಪೊಲೀಸರ ಬಳಿ ಬಂದು, ನಾನು ಕ್ಯಾಪ್ ಧರಿಸಿದ್ದನ್ನು ಕಂಡು ನನ್ನ ಗಡ್ಡವನ್ನು ಎಳೆದು ಧರ್ಮದ ಹೆಸರಿನಲ್ಲಿ ನಿಂದಿಸಲಾಗಿದೆ ಮತ್ತು ಇನ್ನೂ ಯಾವುದೇ ದೂರು ದಾಖಲಾಗಿಲ್ಲ ಎಂದು ಹೇಳಿದರೆ ಅದು ಸಮಸ್ಯೆ” ಎಂದು ಪೀಠ ಹೇಳಿದೆ.

ಇದನ್ನೂ ಓದಿ: ದ್ವೇಷ ಭಾಷಣ ಹಿನ್ನೆಲೆ ರಾಮದೇವ್ ವಿರುದ್ಧ ಎಫ್ಐಆರ್

ಅಂತಹ ಅಪರಾಧಿಗಳ ವಿರುದ್ಧ ಅಧಿಕಾರಿಗಳು ಕ್ರಮ ತಗೆದುಕೊಂಡರೆ ಕಾನೂನಿನ ಗೌರವ ಹೆಚ್ಚುತ್ತದೆ. ಇಲ್ಲದಿದ್ದರೆ ಎಲ್ಲರೂ ಕಾನೂನನ್ನು ಕೈಗೆ ತೆಗೆದುಕೊಳ್ಳುತ್ತಾರೆ ಎಂದು ನ್ಯಾಯಮೂರ್ತಿ ಜೋಸೆಫ್ ಹೇಳಿದರು.

ಸಂಜೆ 6 ಗಂಟೆಯವರೆಗೆ ವಿಚಾರಣೆ ನಡೆಸಿದ ಪೀಠ, ”ದ್ವೇಷದ ಅಪರಾಧವಿದೆ ಎಂದು ನೀವು ಒಪ್ಪಿಕೊಳ್ಳುವುದಿಲ್ಲ ಮತ್ತು ಅಂತಹ ಪ್ರಕರಣವನ್ನು ನಿರ್ಲಕ್ಷ ಮಾಡುತ್ತೀರಿ ಅಲ್ವೇ? ನಾವು ಅದಕ್ಕೆ ಏನನ್ನೂ ಹೇಳುವುದಿಲ್ಲ… ನಾವು ನಮ್ಮ ವೇದನೆಯನ್ನು ಮಾತ್ರ ವ್ಯಕ್ತಪಡಿಸುತ್ತಿದ್ದೇವೆ ಅಷ್ಟೆ” ಎಂದು ಹೇಳಿತು.

ಅರ್ಜಿದಾರ ಕಾಜೀಂ ಅಹ್ಮದ್ ಶೇರ್ವಾನಿ ಪರ ವಾದ ಮಂಡಿಸಿದ ಹಿರಿಯ ವಕೀಲ ಹುಝೆಫಾ ಅಹ್ಮದಿ ಅವರು, ”ಎರಡು ವರ್ಷಗಳ ನಂತರ ಪೊಲೀಸರು ಎಫ್‌ಐಆರ್ ದಾಖಲಿಸಿರುವ ಪ್ರಕರಣದ ಡೈರಿಯನ್ನು ಹಾಜರುಪಡಿಸುವಂತೆ ಜನವರಿ 13 ರಂದು ಈ ನ್ಯಾಯಾಲಯವು ರಾಜ್ಯ ಸರ್ಕಾರವನ್ನು ಕೇಳಿತ್ತು ಮತ್ತು ಒಂದನ್ನು ಹೊರತುಪಡಿಸಿ ಉಳಿದೆಲ್ಲವೂ ಜಾಮೀನು ನೀಡಬಹುದಾದ ಅಪರಾಧ ಎನ್ನುವಂತೆ ಪ್ರಕರಣ ದಾಖಲಿಸಿಕೊಂಡಿದೆ” ಎಂದು ಹೇಳಿದರು.

ಪೊಲೀಸ್ ಅಧಿಕಾರಿಗಳ ಎಡವಟ್ಟುಗಳನ್ನು ಒಪ್ಪಿಕೊಂಡಿರುವ ಉತ್ತರ ಪ್ರದೇಶ ಸರ್ಕಾರದ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್, ಎಸಿಪಿ ದರ್ಜೆಯ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು, ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಪೀಠವು, “ನೀವು ಒಂದು ಬಾರಿ ಕಠಿಣ ಕ್ರಮ ಕೈಗೊಂಡು ನೋಡಿ ಆಗ ಅಂತಹ ಜನರು ಕರ್ತವ್ಯ ಲೋಪ ಎಸಗುವುದಿಲ್ಲ. ಆಗ ಮಾತ್ರ ನಾವು ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗೆ ಸರಿಸಮಾನರಾಗುತ್ತೇವೆ. ಹೌದು, ಇಲ್ಲಿ ತಪ್ಪಾಗಿದೆ ಅದನ್ನು ಒಪ್ಪಿಕೊಳ್ಳುವುದರಲ್ಲಿ ತಪ್ಪೇನಿಲ್ಲ” ಎಂದು ಹೇಳಿತು.

ಜುಲೈ 4, 2021 ರಂದು ಘಟನೆ ನಡೆದಾಗ, ಸಂತ್ರಸ್ತರು ನೋಯ್ಡಾದ ಸೆಕ್ಟರ್ 37 ರ ಪೊಲೀಸ್ ಔಟ್‌ಪೋಸ್ಟ್‌ಗೆ ಹೋಗಿದ್ದರು, ಅಲ್ಲಿ ಯಾವುದೇ ಹಿರಿಯ ಪೊಲೀಸ್ ಅಧಿಕಾರಿಗಳಿರಲಿಲ್ಲ ಆದರೆ ಕಾನ್‌ಸ್ಟೆಬಲ್‌ಗಳು ಮಾತ್ರ ಇದ್ದರು. ಹಾಗಾಗಿ ಯಾವುದೇ ದೂರು ದಾಖಲಾಗಿಲ್ಲ ಎಂದು ಕೆಎಂ ನಟರಾಜ್ ಹೇಳಿದರು.

”ನಂತರ ಅವರು ಜಾಮಿಯಾ ನಗರದ ಆಸ್ಪತ್ರೆಗೆ ಹೋಗಿದ್ದಾರೆ. ಅಲ್ಲಿ ದೆಹಲಿ ಪೊಲೀಸರು ವಿಚಾರಿಸಿದಾಗ ದರೋಡೆ, ಹಲ್ಲೆ ಮತ್ತು ಗಾಯಗಳಾಗಿವೆ ಎಂದು ಹೇಳಿಕೆ ನೀಡಿದರು. ಅವರು ದ್ವೇಷದ ಅಪರಾಧ ಅಥವಾ ಮುಸ್ಲಿಂ ಎಂಬ ಕಾರಣಕ್ಕಾಗಿ ಹಲ್ಲೆ ನಡೆಸಲಾಗಿದೆ ಎಂದು ಎಲ್ಲಿಯೂ ಹೇಳಿಲ್ಲ” ಎಂದು ಕೆ.ಎಂ. ನಟರಾಜ್ ಹೇಳಿದರು.

ನ್ಯಾಯಮೂರ್ತಿ ನಾಗರತ್ನ ಅವರು, ”ನೀವು ಒಂದು ಕುಟುಂಬದಲ್ಲಿ ಹುಟ್ಟಿ ಒಂದರಲ್ಲಿ ಬೆಳೆದಿದ್ದೀರಿ. ಯಾವ ಧರ್ಮದಲ್ಲಿ ಹುಟ್ಟಬೇಕು ಎನ್ನುದರ ಬಗ್ಗೆ ನಮಗೆ ಆಯ್ಕೆಗಳಿರಲ್ಲ, ಯಾವುದೇ ಧರ್ಮದಲ್ಲಿ ಹುಟ್ಟಿಬೆಳೆದರೂ ನಾವು ರಾಷ್ಟ್ರವಾಗಿ ನಿಲ್ಲುತ್ತೇವೆ. ಅದು ನಮ್ಮ ರಾಷ್ಟ್ರದ ಸೌಂದರ್ಯ, ಶ್ರೇಷ್ಠತೆ. ಇದನ್ನು ನಾವು ಅರ್ಥಮಾಡಿಕೊಳ್ಳಬೇಕು” ಎಂದು ಕೆ.ಎಂ.ನಟರಾಜ್ ಅವರಿಗೆ ಹೇಳಿದರು.

ಗ್ಯಾಂಗ್ ಸದಸ್ಯರ ವಿರುದ್ಧ ಎಂಟು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಮತ್ತು ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಎಎಸ್‌ಜಿ ಹೇಳಿದರು.

ಗ್ಯಾಂಗ್ ಸದಸ್ಯರ ವಿರುದ್ಧ ಮೊದಲ ಎಫ್‌ಐಆರ್ ಯಾವಾಗ ದಾಖಲಾಗಿದೆ? ಎಷ್ಟು ಜನರನ್ನು ಬಂಧಿಸಲಾಗಿದೆ? ಸಂತ್ರಸ್ತರ ಮೇಲೆ ದಾಳಿ ಮಾಡಿದವರು ಅದೇ ವ್ಯಕ್ತಿಗಳಾ? ಮತ್ತು ಅವರಿಗೆ ಯಾವಾಗ ಜಾಮೀನು ನೀಡಲಾಯಿತು ಎಂದು ಪೀಠವು ಕೇಳಿತು.

ಕೆಎಂ ನಟರಾಜ್ ಅವರು ಎಲ್ಲಾ ಎಫ್‌ಐಆರ್‌ಗಳ ವಿವರಗಳನ್ನು ನೀಡುವ ಅಫಿಡವಿಟ್ ಸಲ್ಲಿಸುವುದಾಗಿ ಹೇಳಿದರು ಆದರೆ ಜೂನ್ 2021 ರಲ್ಲಿ “ಸ್ಕ್ರೂಡ್ರೈವರ್ ಗ್ಯಾಂಗ್” ಸದಸ್ಯರ ವಿರುದ್ಧ ಮೊದಲ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಅವರು ಮುಸ್ಲಿಮರು ಅಥವಾ ಹಿಂದೂಗಳ ಮೇಲೆ ದಾಳಿ ಮಾಡುವಲ್ಲಿ ತಾರತಮ್ಯ ಮಾಡಿಲ್ಲ ಎಂದು ಹೇಳಿದರು.

ಕ್ರಿಮಿನಲ್ ಘಟನೆ ನಡೆದಿರುವುದನ್ನು ಒಪ್ಪಿಕೊಳ್ಳಲು ಎರಡು ವರ್ಷಗಳು ಬೇಕಾಯಿತು ಎಂದು ವಕೀಲ ಅಹ್ಮದಿ ಹೇಳಿದರು ಮತ್ತು ಉತ್ತರ ಪ್ರದೇಶ ಸರ್ಕಾರ ಸಲ್ಲಿಸಿದ ಎರಡು ಅಫಿಡವಿಟ್‌ಗಳಲ್ಲಿ ಯಾವುದೇ ದ್ವೇಷದ ಅಪರಾಧ ನಡೆದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

“ಜುಲೈ 5, 2021 ರಂದು, ಪೋಲೀಸ್ ಗಸ್ತು ನನ್ನ ಮನೆಗೆ ಬಂದಿತ್ತು ಧರ್ಮದ ದೃಷ್ಟಿಯಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಬೇಡ” ಎಂದು ಅವರು ಹೇಳಿದರು, ಸಂತ್ರಸ್ತನ ಗಡ್ಡವನ್ನು ಎಳೆದು ಅಪಹಾಸ್ಯ ಮಾಡಿದರು. ಸುನ್ನತಿ ಮಾಡಿದ್ದಕ್ಕಾಗಿ ಕಾರಿನಲ್ಲಿ ಕುಳಿತು ಗೇಲಿ ಮಾಡಿದರು” ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಲಾಗಿದೆ.

ಕ್ರಿಮಿನಲ್ ಘಟನೆ ನಡೆದಿಲ್ಲ ಎಂದು ಪೊಲೀಸರು ಹೇಳಿಲ್ಲ. ಆದರೆ ಇದು ದ್ವೇಷದ ಅಪರಾಧ ಎಂದು ಅವರು ಎಲ್ಲಿಯೂ ಕಂಡುಬಂದಿಲ್ಲ ಎಂದಿದ್ದಾರೆ. ಈ ಸಂತ್ರಸ್ತರು ಮಾಧ್ಯಮ ಪ್ರಚಾರದ ಲಾಭ ಪಡೆಯಲು ಪ್ರಯತ್ನಿಸಿದ್ದಾರೆ ಮತ್ತು ಹೇಳಿಕೆಗಳನ್ನು ಬದಲಾಯಿಸಿದ್ದಾರೆ ಎಂದು ಕೆಎಂ ನಟರಾಜ್ ಹೇಳಿದರು.

ಪೀಠವು, ಉತ್ತರ ಪ್ರದೇಶ ಸರ್ಕಾರಕ್ಕೆ ವಿವರವಾದ ಅಫಿಡವಿಟ್ ಸಲ್ಲಿಸಲು ಹೇಳಿತು ಮತ್ತು ಮಾರ್ಚ್ 3 ರಂದು ಹೆಚ್ಚಿನ ವಿಚಾರಣೆ ನಡೆಸುವುದಾಗಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...