Homeಮುಖಪುಟದ್ವೇಷ ಭಾಷಣದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದ್ವೇಷ ಭಾಷಣದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

- Advertisement -
- Advertisement -

ದ್ವೇಷ ಭಾಷಣ ಪ್ರಕರಣಗಳು ಹೆಚ್ಚಾಗುತ್ತಿವೆ. ಭಾರತದಂತಹ ಜಾತ್ಯತೀತ ರಾಷ್ಟ್ರದಲ್ಲಿ ಧರ್ಮದ ಆಧಾರದ ಮೇಲೆ ದ್ವೇಷದ ಅಪರಾಧಗಳಿಗೆ ಯಾವುದೇ ಅವಕಾಶವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿತು.

“ದ್ವೇಷ ಭಾಷಣದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ದ್ವೇಷ ಭಾಷಣದ ಸಮಸ್ಯೆಯನ್ನು ರಾಜ್ಯಗಳು ಒಪ್ಪಿಕೊಂಡರೆ ಮಾತ್ರ ಪರಿಹಾರವನ್ನು ಕಂಡುಕೊಳ್ಳಬಹುದು. ಅಂತಹ ಯಾವುದೇ ದ್ವೇಷ ಅಪರಾಧಗಳಿಂದ ತನ್ನ ನಾಗರಿಕರನ್ನು ರಕ್ಷಿಸುವುದು ರಾಜ್ಯ ಸರ್ಕಾರದ ಆದ್ಯ ಕರ್ತವ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ಪೀಠವು, ”ದ್ವೇಷ ಭಾಷಣದ ಪ್ರಕರಣಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದಾಗ ಅತ್ಯಂತ ಅಪಾಯಕಾರಿ ವಾತಾವರಣ ಬೆಳೆಯುತ್ತದೆ ಹಾಗಾಗಿ ದ್ವೇಷ ಭಾಷಣದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ” ಎಂದು ಅಭಿಪ್ರಯಪಟ್ಟಿದೆ.

ಮುಸ್ಲಿಂ ವ್ಯಕ್ತಿಯೊಬ್ಬರು, ಜುಲೈ 4, 2021 ಅಲಿಘರ್‌ಗೆ ಹೋಗಲು ಕಾರನ್ನು ಹತ್ತಿದಾಗ ಅಪರಾಧಿಗಳ “ಸ್ಕ್ರೂಡ್ರೈವರ್” ನಿಂದ ಧರ್ಮದ ಹೆಸರಿನಲ್ಲಿ ಹಲ್ಲೆ ಮತ್ತು ನಿಂದನೆ ಮಾಡಲಾಗಿದೆ ಎಂದು ಆರೋಪಿಸಿದ್ದರು. ಆ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ. ಆದರೆ ಈ ಬಗ್ಗೆ ನೋಯ್ಡಾದ ಪೊಲೀಸರು ಈ ಬಗ್ಗೆ ಯಾವುದೇ ದೂರು ದಾಖಲಿಸಿಕೊಂಡಿಲ್ಲ.

ಉತ್ತರ ಪ್ರದೇಶ ಸರ್ಕಾರದ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಕೆ.ಎಂ.ನಟರಾಜ್ ಅವರಿಗೆ ನ್ಯಾಯಪೀಠವು, ”ಇತ್ತೀಚಿನ ದಿನಗಳಲ್ಲಿ ದ್ವೇಷ ಭಾಷಣದ ಪ್ರಕರಣಗಳು ಬೆಳೆಯುತ್ತಿದೆ. ಭಾರತದಂತಹ ಜಾತ್ಯತೀತ ದೇಶದಲ್ಲಿ ಧರ್ಮದ ಹೆಸರಿನಲ್ಲಿ ದ್ವೇಷದ ಅಪರಾಧಗಳಿಗೆ ಅವಕಾಶವಿಲ್ಲ. ಇದನ್ನು ಬೇರುಸಹಿತ ಕಿತ್ತೊಗೆಯಬೇಕು ಮತ್ತು ಅಂತಹ ಯಾವುದೇ ಅಪರಾಧಗಳಿಂದ ತನ್ನ ನಾಗರಿಕರನ್ನು ರಕ್ಷಿಸುವುದು ರಾಜ್ಯದ ಪ್ರಾಥಮಿಕ ಕರ್ತವ್ಯವಾಗಿದೆ” ಎಂದು ಹೇಳಿತು.

”ಒಬ್ಬ ವ್ಯಕ್ತಿ ಪೊಲೀಸರ ಬಳಿ ಬಂದು, ನಾನು ಕ್ಯಾಪ್ ಧರಿಸಿದ್ದನ್ನು ಕಂಡು ನನ್ನ ಗಡ್ಡವನ್ನು ಎಳೆದು ಧರ್ಮದ ಹೆಸರಿನಲ್ಲಿ ನಿಂದಿಸಲಾಗಿದೆ ಮತ್ತು ಇನ್ನೂ ಯಾವುದೇ ದೂರು ದಾಖಲಾಗಿಲ್ಲ ಎಂದು ಹೇಳಿದರೆ ಅದು ಸಮಸ್ಯೆ” ಎಂದು ಪೀಠ ಹೇಳಿದೆ.

ಇದನ್ನೂ ಓದಿ: ದ್ವೇಷ ಭಾಷಣ ಹಿನ್ನೆಲೆ ರಾಮದೇವ್ ವಿರುದ್ಧ ಎಫ್ಐಆರ್

ಅಂತಹ ಅಪರಾಧಿಗಳ ವಿರುದ್ಧ ಅಧಿಕಾರಿಗಳು ಕ್ರಮ ತಗೆದುಕೊಂಡರೆ ಕಾನೂನಿನ ಗೌರವ ಹೆಚ್ಚುತ್ತದೆ. ಇಲ್ಲದಿದ್ದರೆ ಎಲ್ಲರೂ ಕಾನೂನನ್ನು ಕೈಗೆ ತೆಗೆದುಕೊಳ್ಳುತ್ತಾರೆ ಎಂದು ನ್ಯಾಯಮೂರ್ತಿ ಜೋಸೆಫ್ ಹೇಳಿದರು.

ಸಂಜೆ 6 ಗಂಟೆಯವರೆಗೆ ವಿಚಾರಣೆ ನಡೆಸಿದ ಪೀಠ, ”ದ್ವೇಷದ ಅಪರಾಧವಿದೆ ಎಂದು ನೀವು ಒಪ್ಪಿಕೊಳ್ಳುವುದಿಲ್ಲ ಮತ್ತು ಅಂತಹ ಪ್ರಕರಣವನ್ನು ನಿರ್ಲಕ್ಷ ಮಾಡುತ್ತೀರಿ ಅಲ್ವೇ? ನಾವು ಅದಕ್ಕೆ ಏನನ್ನೂ ಹೇಳುವುದಿಲ್ಲ… ನಾವು ನಮ್ಮ ವೇದನೆಯನ್ನು ಮಾತ್ರ ವ್ಯಕ್ತಪಡಿಸುತ್ತಿದ್ದೇವೆ ಅಷ್ಟೆ” ಎಂದು ಹೇಳಿತು.

ಅರ್ಜಿದಾರ ಕಾಜೀಂ ಅಹ್ಮದ್ ಶೇರ್ವಾನಿ ಪರ ವಾದ ಮಂಡಿಸಿದ ಹಿರಿಯ ವಕೀಲ ಹುಝೆಫಾ ಅಹ್ಮದಿ ಅವರು, ”ಎರಡು ವರ್ಷಗಳ ನಂತರ ಪೊಲೀಸರು ಎಫ್‌ಐಆರ್ ದಾಖಲಿಸಿರುವ ಪ್ರಕರಣದ ಡೈರಿಯನ್ನು ಹಾಜರುಪಡಿಸುವಂತೆ ಜನವರಿ 13 ರಂದು ಈ ನ್ಯಾಯಾಲಯವು ರಾಜ್ಯ ಸರ್ಕಾರವನ್ನು ಕೇಳಿತ್ತು ಮತ್ತು ಒಂದನ್ನು ಹೊರತುಪಡಿಸಿ ಉಳಿದೆಲ್ಲವೂ ಜಾಮೀನು ನೀಡಬಹುದಾದ ಅಪರಾಧ ಎನ್ನುವಂತೆ ಪ್ರಕರಣ ದಾಖಲಿಸಿಕೊಂಡಿದೆ” ಎಂದು ಹೇಳಿದರು.

ಪೊಲೀಸ್ ಅಧಿಕಾರಿಗಳ ಎಡವಟ್ಟುಗಳನ್ನು ಒಪ್ಪಿಕೊಂಡಿರುವ ಉತ್ತರ ಪ್ರದೇಶ ಸರ್ಕಾರದ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್, ಎಸಿಪಿ ದರ್ಜೆಯ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು, ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಪೀಠವು, “ನೀವು ಒಂದು ಬಾರಿ ಕಠಿಣ ಕ್ರಮ ಕೈಗೊಂಡು ನೋಡಿ ಆಗ ಅಂತಹ ಜನರು ಕರ್ತವ್ಯ ಲೋಪ ಎಸಗುವುದಿಲ್ಲ. ಆಗ ಮಾತ್ರ ನಾವು ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗೆ ಸರಿಸಮಾನರಾಗುತ್ತೇವೆ. ಹೌದು, ಇಲ್ಲಿ ತಪ್ಪಾಗಿದೆ ಅದನ್ನು ಒಪ್ಪಿಕೊಳ್ಳುವುದರಲ್ಲಿ ತಪ್ಪೇನಿಲ್ಲ” ಎಂದು ಹೇಳಿತು.

ಜುಲೈ 4, 2021 ರಂದು ಘಟನೆ ನಡೆದಾಗ, ಸಂತ್ರಸ್ತರು ನೋಯ್ಡಾದ ಸೆಕ್ಟರ್ 37 ರ ಪೊಲೀಸ್ ಔಟ್‌ಪೋಸ್ಟ್‌ಗೆ ಹೋಗಿದ್ದರು, ಅಲ್ಲಿ ಯಾವುದೇ ಹಿರಿಯ ಪೊಲೀಸ್ ಅಧಿಕಾರಿಗಳಿರಲಿಲ್ಲ ಆದರೆ ಕಾನ್‌ಸ್ಟೆಬಲ್‌ಗಳು ಮಾತ್ರ ಇದ್ದರು. ಹಾಗಾಗಿ ಯಾವುದೇ ದೂರು ದಾಖಲಾಗಿಲ್ಲ ಎಂದು ಕೆಎಂ ನಟರಾಜ್ ಹೇಳಿದರು.

”ನಂತರ ಅವರು ಜಾಮಿಯಾ ನಗರದ ಆಸ್ಪತ್ರೆಗೆ ಹೋಗಿದ್ದಾರೆ. ಅಲ್ಲಿ ದೆಹಲಿ ಪೊಲೀಸರು ವಿಚಾರಿಸಿದಾಗ ದರೋಡೆ, ಹಲ್ಲೆ ಮತ್ತು ಗಾಯಗಳಾಗಿವೆ ಎಂದು ಹೇಳಿಕೆ ನೀಡಿದರು. ಅವರು ದ್ವೇಷದ ಅಪರಾಧ ಅಥವಾ ಮುಸ್ಲಿಂ ಎಂಬ ಕಾರಣಕ್ಕಾಗಿ ಹಲ್ಲೆ ನಡೆಸಲಾಗಿದೆ ಎಂದು ಎಲ್ಲಿಯೂ ಹೇಳಿಲ್ಲ” ಎಂದು ಕೆ.ಎಂ. ನಟರಾಜ್ ಹೇಳಿದರು.

ನ್ಯಾಯಮೂರ್ತಿ ನಾಗರತ್ನ ಅವರು, ”ನೀವು ಒಂದು ಕುಟುಂಬದಲ್ಲಿ ಹುಟ್ಟಿ ಒಂದರಲ್ಲಿ ಬೆಳೆದಿದ್ದೀರಿ. ಯಾವ ಧರ್ಮದಲ್ಲಿ ಹುಟ್ಟಬೇಕು ಎನ್ನುದರ ಬಗ್ಗೆ ನಮಗೆ ಆಯ್ಕೆಗಳಿರಲ್ಲ, ಯಾವುದೇ ಧರ್ಮದಲ್ಲಿ ಹುಟ್ಟಿಬೆಳೆದರೂ ನಾವು ರಾಷ್ಟ್ರವಾಗಿ ನಿಲ್ಲುತ್ತೇವೆ. ಅದು ನಮ್ಮ ರಾಷ್ಟ್ರದ ಸೌಂದರ್ಯ, ಶ್ರೇಷ್ಠತೆ. ಇದನ್ನು ನಾವು ಅರ್ಥಮಾಡಿಕೊಳ್ಳಬೇಕು” ಎಂದು ಕೆ.ಎಂ.ನಟರಾಜ್ ಅವರಿಗೆ ಹೇಳಿದರು.

ಗ್ಯಾಂಗ್ ಸದಸ್ಯರ ವಿರುದ್ಧ ಎಂಟು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಮತ್ತು ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಎಎಸ್‌ಜಿ ಹೇಳಿದರು.

ಗ್ಯಾಂಗ್ ಸದಸ್ಯರ ವಿರುದ್ಧ ಮೊದಲ ಎಫ್‌ಐಆರ್ ಯಾವಾಗ ದಾಖಲಾಗಿದೆ? ಎಷ್ಟು ಜನರನ್ನು ಬಂಧಿಸಲಾಗಿದೆ? ಸಂತ್ರಸ್ತರ ಮೇಲೆ ದಾಳಿ ಮಾಡಿದವರು ಅದೇ ವ್ಯಕ್ತಿಗಳಾ? ಮತ್ತು ಅವರಿಗೆ ಯಾವಾಗ ಜಾಮೀನು ನೀಡಲಾಯಿತು ಎಂದು ಪೀಠವು ಕೇಳಿತು.

ಕೆಎಂ ನಟರಾಜ್ ಅವರು ಎಲ್ಲಾ ಎಫ್‌ಐಆರ್‌ಗಳ ವಿವರಗಳನ್ನು ನೀಡುವ ಅಫಿಡವಿಟ್ ಸಲ್ಲಿಸುವುದಾಗಿ ಹೇಳಿದರು ಆದರೆ ಜೂನ್ 2021 ರಲ್ಲಿ “ಸ್ಕ್ರೂಡ್ರೈವರ್ ಗ್ಯಾಂಗ್” ಸದಸ್ಯರ ವಿರುದ್ಧ ಮೊದಲ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಅವರು ಮುಸ್ಲಿಮರು ಅಥವಾ ಹಿಂದೂಗಳ ಮೇಲೆ ದಾಳಿ ಮಾಡುವಲ್ಲಿ ತಾರತಮ್ಯ ಮಾಡಿಲ್ಲ ಎಂದು ಹೇಳಿದರು.

ಕ್ರಿಮಿನಲ್ ಘಟನೆ ನಡೆದಿರುವುದನ್ನು ಒಪ್ಪಿಕೊಳ್ಳಲು ಎರಡು ವರ್ಷಗಳು ಬೇಕಾಯಿತು ಎಂದು ವಕೀಲ ಅಹ್ಮದಿ ಹೇಳಿದರು ಮತ್ತು ಉತ್ತರ ಪ್ರದೇಶ ಸರ್ಕಾರ ಸಲ್ಲಿಸಿದ ಎರಡು ಅಫಿಡವಿಟ್‌ಗಳಲ್ಲಿ ಯಾವುದೇ ದ್ವೇಷದ ಅಪರಾಧ ನಡೆದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

“ಜುಲೈ 5, 2021 ರಂದು, ಪೋಲೀಸ್ ಗಸ್ತು ನನ್ನ ಮನೆಗೆ ಬಂದಿತ್ತು ಧರ್ಮದ ದೃಷ್ಟಿಯಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಬೇಡ” ಎಂದು ಅವರು ಹೇಳಿದರು, ಸಂತ್ರಸ್ತನ ಗಡ್ಡವನ್ನು ಎಳೆದು ಅಪಹಾಸ್ಯ ಮಾಡಿದರು. ಸುನ್ನತಿ ಮಾಡಿದ್ದಕ್ಕಾಗಿ ಕಾರಿನಲ್ಲಿ ಕುಳಿತು ಗೇಲಿ ಮಾಡಿದರು” ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಲಾಗಿದೆ.

ಕ್ರಿಮಿನಲ್ ಘಟನೆ ನಡೆದಿಲ್ಲ ಎಂದು ಪೊಲೀಸರು ಹೇಳಿಲ್ಲ. ಆದರೆ ಇದು ದ್ವೇಷದ ಅಪರಾಧ ಎಂದು ಅವರು ಎಲ್ಲಿಯೂ ಕಂಡುಬಂದಿಲ್ಲ ಎಂದಿದ್ದಾರೆ. ಈ ಸಂತ್ರಸ್ತರು ಮಾಧ್ಯಮ ಪ್ರಚಾರದ ಲಾಭ ಪಡೆಯಲು ಪ್ರಯತ್ನಿಸಿದ್ದಾರೆ ಮತ್ತು ಹೇಳಿಕೆಗಳನ್ನು ಬದಲಾಯಿಸಿದ್ದಾರೆ ಎಂದು ಕೆಎಂ ನಟರಾಜ್ ಹೇಳಿದರು.

ಪೀಠವು, ಉತ್ತರ ಪ್ರದೇಶ ಸರ್ಕಾರಕ್ಕೆ ವಿವರವಾದ ಅಫಿಡವಿಟ್ ಸಲ್ಲಿಸಲು ಹೇಳಿತು ಮತ್ತು ಮಾರ್ಚ್ 3 ರಂದು ಹೆಚ್ಚಿನ ವಿಚಾರಣೆ ನಡೆಸುವುದಾಗಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...