Homeಮುಖಪುಟಪೊಲೀಸರ ಮೇಲಿಲ್ಲ ವಿಶ್ವಾಸ: ಸ್ವ-ಸುರಕ್ಷತಾ ವ್ಯವಸ್ಥೆ ಮೊರೆ ಹೋದ ರೈತರು

ಪೊಲೀಸರ ಮೇಲಿಲ್ಲ ವಿಶ್ವಾಸ: ಸ್ವ-ಸುರಕ್ಷತಾ ವ್ಯವಸ್ಥೆ ಮೊರೆ ಹೋದ ರೈತರು

- Advertisement -
- Advertisement -

ಶನಿವಾರ ಸಾಯಂಕಾಲ 4.30ರ ಸಮಯ. ‘ಮತ್ತೆ ದಾಂಧಲೆಕೋರರ ದಂಡು ದೊಡ್ಡ ಸಂಖ್ಯೆಯಲ್ಲಿ ಹೊರಗೆ ಜಮಾವಣೆ ಆಗುತ್ತಿದೆ’ ಎಂಬ ಸಣ್ಣ ಅನುಮಾನದ ಸಂದೇಶ ಬಂದ ನಿಮಿಷಗಳಲ್ಲಿ ಲಾಠಿಗಳನ್ನು ಹಿಡಿದ ಹತ್ತಾರು ರೈತ ಸ್ವಯಂಸೇವಕರು ಬ್ಯಾರಿಕೇಡ್ ಬಳಿ ಹಾಜರಾಗಿದ್ದರು.

ಇದು ಬಿಕೆಯು ನಡೆಸಿತ್ತಿರುವ ಪ್ರತಿಭಟನಾ ಸ್ಥಳದಲ್ಲಿ ಕಂಡು ಬಂದ ಹೊಸ ಬೆಳವಣಿಗೆ. ಶುಕ್ರವಾರ ಸಿಂಘು ಗಡಿಯ ದೆಹಲಿ ಭಾಗದ ಒಂದು ಜಾಗದಲ್ಲಿ ಬಿಜೆಪಿ ಕಾರ್ಯಕರ್ತರ ಗುಂಪೊಂದು ದಾಂಧಲೆ ನಡೆಸಲು ಯತ್ನಿಸಿದ ನಂತರ, ಪೊಲೀಸರ ಮೇಲೆ ವಿಶ್ವಾಸ ಕಳೆದುಕೊಂಡಿರುವ ರೈತರು ತಮ್ಮದೇ ಸುರಕ್ಷತಾ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ.
ಬಿಜೆಪಿ-ಆರ್‌ಎಸ್‌ಎಸ್ ಗೂಂಡಾಗಳು ತಮ್ಮ ಹೋರಾಟ ನಾಶ ಮಾಡಲು ಹವಣಿಸುತ್ತಿದ್ದಾರೆ ಎಂಬ ಭಾವನೆ ರೈತರಲ್ಲಿದೆ.

ಸಿಂಘು ಗಡಿಯ ಒಂದು ಭಾಗದಲ್ಲಿ ಸಣ್ಣ ಹಿಂಸಾಚಾರದ ನಂತರ, ಯಾವುದೇ ಅಹಿತಕರ ಘಟನೆಯನ್ನು ತಡೆಗಟ್ಟಲು ಮತ್ತು “ರಾಜಕೀಯ ಏಜೆಂಟರಿಗೆ” ಮತ್ತೆ ಹಿಂಸಾಚಾರವನ್ನು ಪ್ರಚೋದಿಸಲು ಅವಕಾಶ ಸಿಗದಂತೆ ನೋಡಿಕೊಳ್ಳಲು ರೈತರು “ಆಂತರಿಕ ಭದ್ರತೆ” ಯನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ.

‘ಸ್ಥಳೀಯರ’ ಹೆಸರಿನಲ್ಲಿ ಶುಕ್ರವಾರ ಮೂರು ಹಂತಗಳ ಪೊಲೀಸ್ ಭದ್ರತಾ ಬ್ಯಾರಿಕೇಡ್‌ಗಳನ್ನು ದಾಟಿ ಬಂದು ದುಷ್ಕರ್ಮಿಗಳು ದಾಂಧಲೆ ಮಾಡಿದ ನಂತರ ರೈತರಿಗೆ ಪೊಲೀಸರ ಬಗ್ಗೆ ವಿಶ್ವಾಸವೇ ಹೋಗಿದೆ. ಬಿಜೆಪಿಯ ಆಜ್ಞೆಯ ಮೇರೆಗೆ ದಾಂಧಲೆ ನಡೆದಿದೆ ಎಂದು ರೈತರು ಆರೋಪಿಸುತ್ತಿದ್ದಾರೆ.

‘ನೌಜವಾನ್ ಭಾರತ್ ಸಭಾ ಅಧ್ಯಕ್ಷ ರೂಪಿಂದರ್ ಸಿಂಗ್, “ನಾವು ಮುಖ್ಯ ವೇದಿಕೆಯ ಬಳಿ ಭದ್ರತಾ ಕೊಠಡಿಯನ್ನು ಸ್ಥಾಪಿಸಿದ್ದೇವೆ, ಎಲ್ಲಾ ಸಮಯದಲ್ಲೂ 10 ಜನರು ಅಲ್ಲಿರುತ್ತಾರೆ. ನಾವು ಸ್ವಯಂಸೇವಕರ ಮೂಲಕ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ. ಹೆಚ್ಚಿನ ತಪಾಸಣೆಯ ನಂತರ ಕಡಿಮೆ ಜನರಿಗೆ ವೇದಿಕೆಯ ಬಳಿ ಅವಕಾಶ ನೀಡಲಾಗುತ್ತಿದೆ. ಎಂತಹ ಸಮಯದಲ್ಲೂ ಅಹಿತಕರ ಪರಿಸ್ಥಿತಿ ಸಮಯದಲ್ಲೂ ಪರಿಸ್ಥಿತಿ ನಿಯಂತ್ರಿಸಲು ಯುವ ಘಟಕಗಳಿಗೆ ಸ್ಟ್ಯಾಂಡ್‌ಬೈನಲ್ಲಿ ಉಳಿಯುವಂತೆ ತಿಳಿಸಲಾಗಿದೆ. ನಮ್ಮ ಮೇಲೆ ಪ್ರತಿಭಟನೆ ನಡೆಸಲು ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಅವಕಾಶ ನೀಡುವುದಿಲ್ಲ’ ಎಂದರು.

ಶನಿವಾರ, ಹೆಚ್ಚಿನ ಸ್ವಯಂಸೇವಕರು ಉದ್ದನೆಯ ಕಟ್ಟಿಗೆ ಮತ್ತು ಬಿದಿರಿನ ಕೋಲುಗಳೊಂದಿಗೆ ತಿರುಗಾಡುತ್ತಿದ್ದರು.. ರೈತರ ಪ್ರಕಾರ, ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ, ರಾತ್ರಿ 8 ರಿಂದ ಬೆಳಿಗ್ಗೆ 8 ರವರೆಗೆ ಎರಡು ಪಾಳಿಯಲ್ಲಿ ಸ್ವಯಂಸೇವಕರು, ಕೆಲಸ ಮಾಡುತ್ತಿದ್ದಾರೆ. ರಾತ್ರಿ ವೇಳೆಯೂ ಪಹರೆ ಕಾಯುತ್ತಾರೆ. ಪ್ರಮುಖ ಪ್ರವೇಶ-ನಿರ್ಗಮನ ಸ್ಥಳಗಳಲ್ಲಿ ಬೀಡುಬಿಟ್ಟಿದ್ದಾರೆ. ಪರಿಶೀಲನೆ ನಡೆಸಲು ಕನಿಷ್ಠ ಐದು ಮಂದಿ ಪ್ರತಿಭಟನೆಯ ಮುಖ್ಯ ಪ್ರವೇಶ ಕೇಂದ್ರದಲ್ಲಿ ನಿಲ್ಲುತ್ತಾರೆ. ವೇದಿಕೆ ಸಮಿತಿಯು ಭಾಷಣಗಳನ್ನು ನಿರ್ವಹಿಸುತ್ತಿದ್ದರೆ, 25 ಜನರ ಹೆಚ್ಚುವರಿ ತಂಡವು ಹತ್ತಿರದಲ್ಲೇ ಜಾಗರೂಕತೆಯನ್ನು ಕಾಯ್ದುಕೊಳ್ಳುತ್ತದೆ.

ಮುಖ್ಯ ವೇದಿಕೆ ಪಕ್ಕದಲ್ಲಿರುವ ಮತ್ತೊಂದು ಟ್ರಾಲಿಯಲ್ಲಿ 10-15 ಸ್ವಯಂಸೇವಕರು ಇದ್ದಾರೆ, ಅವರನ್ನು ಯಾವಾಗಲಾದರೂ ಸಹಾಯಕ್ಕಾಗಿ ಕರೆಯಬಹುದು. ಪ್ರತಿಭಟನಾ ಸ್ಥಳದೊಳಗೆ, ಮೂರು ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. “ಬೆದರಿಕೆ” ಸಂಭವಿಸಿದಾಗ ಸ್ವಯಂಸೇವಕರನ್ನು ತಕ್ಷಣವೇ ಎಚ್ಚರಿಸಲು ಎಲ್ಲ ಪ್ರತಿಭಟನಾಕಾರರಿಗೆ ಸಂದೇಶವನ್ನು ಕಳುಹಿಸಲಾಗಿದೆ.
‘ಕನಿಷ್ಠ 1,500 ಜನರು 24 ತಾಸು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ನಾವು ಮೊದಲ ದಿನದಿಂದ ಶಾಂತಿಯುತವಾಗಿದ್ದೇವೆ. ಆದರೂ ಎಷ್ಟೋ ದುಷ್ಟ ಜನರು ಪ್ರತಿಭಟನಾ ಸ್ಥಳ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈಗ ನಮ್ಮನ್ನು ರಕ್ಷಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ… ” ಎಂದು ರೂಪಿಂದರ್ ಹೇಳಿದರು.

‘ಶುಕ್ರವಾರದ ಘಟನೆಯ ನಂತರ ಹೆಚ್ಚಿನ ಜಾಗರೂಕತೆ ಅಗತ್ಯ ಎನಿಸಿದೆ’ ಎಂದು ಪಂಜಾಬ್‌ನ ಮೊಗಾ ಜಿಲ್ಲೆಯ ಅಮರ್‌ಜೀತ್ ಸಿಂಗ್ ಹೇಳಿದರು. ರೈತರಿಗೆ ಪೊಲೀಸ್ ಪಡೆಗಳ ಬಗ್ಗೆ ಅಪನಂಬಿಕೆ ಇದೆ. “ನಿನ್ನೆ, ಪೊಲೀಸರು ನಿಂತು ಏನಾಯಿತು ಎಂದು ವೀಕ್ಷಿಸಿದರು. ನಾವು ಅವರನ್ನು ಮತ್ತು ಅವರ ಬ್ಯಾರಿಕೇಡ್‌ಗಳನ್ನು ಅವಲಂಬಿಸಲಾಗುವುದಿಲ್ಲ. ವದಂತಿಗಳಿಗೆ ಯಾರೂ ಬಲಿಯಾಗಬಾರದು ಮತ್ತು ಆತ್ಮರಕ್ಷಣೆಗಾಗಿ ಹೊರತುಪಡಿಸಿ ಅನಗತ್ಯವಾಗಿ ಕ್ರಿಯೆಗೆ ಇಳಿಯಬಾರದು ಎಂದು ಎಲ್ಲರಿಗೂ ಸ್ಪಷ್ಟಪಡಿಸಲಾಗಿದೆ. ನಮ್ಮ ಪ್ರತಿಭಟನೆಯನ್ನು ಹಿಂಸಾತ್ಮಕವಾಗಿ ಚಿತ್ರಿಸಬೇಕೆಂದು ನಾವು ಬಯಸುವುದಿಲ್ಲ” ಎಂದು ಹರಿಯಾಣದ ಅಂಬಾಲಾದ ಸುರಿಂದರ್ ಸಿಂಗ್ ಹೇಳಿದರು, ಅವರು ಮೊದಲಿನಿಂದಲೂ ಪ್ರತಿಭಟನೆಯಲ್ಲಿದ್ದಾರೆ.

ಹರಿಯಾಣದ ಕೈತಾಲ್‌ನ ಜ್ವಾರ್ಮಾಲ್, “ನಾವು ನಮ್ಮ ಪ್ರತಿಭಟನಾ ಸ್ಥಳವನ್ನು ಸುರಕ್ಷಿತವಾಗಿಡಲು ಬಯಸುತ್ತೇವೆ; ನಾವು ಯಾವುದೇ ಹಿಂಸಾಚಾರವನ್ನು ಬಯಸುವುದಿಲ್ಲ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರು ಒಳನುಸುಳುತ್ತಿದ್ದಾರೆ ಮತ್ತು ಜನರನ್ನು ಕೆರಳಿಸುತ್ತಿದ್ದಾರೆ. ಇದನ್ನು ತಡೆಯುತ್ತೇವೆ” ಎಂದರು. ರೈತರ ವೇಷದಲ್ಲಿ ಬಿಜೆಪಿ-ಆರ್‌ಎಸ್‌ಎಸ್‌ಗಳು ಸೇರಿಕೊಂಡು ರೈತರ ತಲೆ ಕೆಡಿಸುವ ಯತ್ನ ಮಾಡುತ್ತಿದ್ದಾರೆ ಎಂಬ ಸಂದೇಹದ ಕಾರಣ ಒಳಬರುವವರನ್ನು ಯಾರು ಎಂದು ಖಚಿತಪಡಿಸಿಕೊಂಡೇ ಒಳಕ್ಕೆ ಬಿಡಲಾಗುತ್ತಿದೆ.

ವೇದಿಕೆಯಿಂದ ಮಾತನಾಡಿದ ಬಿಕೆಯು ನಾಯಕ ಗುರ್ನಮ್ ಸಿಂಗ್ ಚಾದುನಿ ಶುಕ್ರವಾರದ ದಾಳಿಯ ಬಗ್ಗೆ ಸರ್ಕಾರಕ್ಕೆ “ಎಚ್ಚರಿಕೆ” ಕಳುಹಿಸಿದ್ದಾರೆ. “ಅವರು ಈ ಗೂಂಡಾಗಿರಿ ಬಿಡಬೇಕೆಂದು ನಾನು ಈ ಸರ್ಕಾರವನ್ನು ಎಚ್ಚರಿಸಲು ಬಯಸುತ್ತೇನೆ. ಇಲ್ಲಿಗೆ ಬಂದು ದಂಗಾ (ಗಲಭೆ) ಮಾಡುವವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ”ಎಂದರು.

ರೈತರನ್ನು ಉದ್ದೇಶಿಸಿ ಮಾತನಾಡಿದ ಅವರು, ದಬ್ಬಾಳಿಕೆ ನಡೆದರೂ ಈಗ ಹಿಂತಿರುಗುವುದಿಲ್ಲ. “ಪೊಲೀಸರು ನಮ್ಮ ಮೇಲೆ ಮುಗಿಬಿದ್ದರೆ, ಅದು ರಾತ್ರಿ ಅಥವಾ ಬೆಳಿಗ್ಗೆ ಆಗಿರಲಿ, ನಾವು ಬಿಡುವುದಿಲ್ಲ, ನಾವು ಇಲ್ಲೇ ಸಾಯುತ್ತೇವೆ” ಎಂದು ಅವರು ಹೇಳಿದರು. ರೈತರು ಪ್ರತಿಭಟನೆಯನ್ನು ಶಾಂತಿಯುತವಾಗಿ ಮುಂದುವರಿಸಬೇಕು ಎಂದು ಪುನರುಚ್ಚರಿಸಿದರು.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್


ಇದನ್ನೂ ಓದಿ: ಸರ್ಕಾರದೊಂದಿಗೆ ಮಾತುಕತೆಯ ಬಾಗಿಲು ಮುಚ್ಚುವ ಪ್ರಶ್ನೆಯೇ ಇಲ್ಲ: ಸಂಯುಕ್ತ ಕಿಸಾನ್ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...